ದೇಶ-ವಿದೇಶ

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!!

ಸಮಗ್ರ ವಿಶೇಷ: ಭಾರತವನ್ನು ಸುಮಾರು 200 ವರ್ಷಗಳ ಕಾಲ ಆಳಿದ್ದ ಈಸ್ಟ್ ಇಂಡಿಯಾ ಕಂಪನಿ ಈಗ ಯಾರ ವಶದಲ್ಲಿದೆ ಎಂಬುದು ಹಲವರಿಗೆ ಕುತೂಹಲ ಮೂಡಿಸುವ ವಿಚಾರ. ಬ್ರಿಟಿಷ್ ಸಾಮ್ರಾಜ್ಯದ ಪತನದ ನಂತರ ಈ ವಿಶ್ವವನ್ನೇ ಆಳಿದ ವ್ಯಾಪಾರ ಕಂಪನಿಗೆ ಏನಾಯಿತು? ಅದರ ಪ್ರಸ್ತುತ ಮಾಲೀಕರು ಯಾರು? ಇಲ್ಲಿದೆ ಈ ಕುತೂಹಲಕಾರಿ ಇತಿಹಾಸ ಮತ್ತು ವರ್ತಮಾನದ ಮಾಹಿತಿ. ಈಸ್ಟ್ ಇಂಡಿಯಾ ಕಂಪನಿಯನ್ನು 1600ರ ಡಿಸೆಂಬರ್ 31 ರಂದು ಇಂಗ್ಲೆಂಡ್‌ನಲ್ಲಿ ಬ್ರಿಟಿಷ್ ಸಾಮ್ರಾಜ್ಞಿಯ ವಿಶೇಷ ಸನ್ನದಿನೊಂದಿಗೆ ವ್ಯಾಪಾರ ಕಂಪನಿಯಾಗಿ ಸ್ಥಾಪಿಸಲಾಯಿತು. […]

ಎರಡು ಶತಮಾನ ಭಾರತವನ್ನಾಳಿದ್ದ ಈಸ್ಟ್ ಇಂಡಿಯಾ ಕಂಪನಿಗೆ ಈಗ ಭಾರತೀಯನೇ ಮಾಲೀಕ!! Read More »

ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ| ಪ್ರಯಾಣಿಕರೆಲ್ಲ ದುರ್ಮರಣ

ಸಮಗ್ರ ನ್ಯೂಸ್: ಅಹ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದು ಜಾಸ್ತಿ ದಿನ ಕಳೆದಿಲ್ಲ, ಆಗಲೇ ಅದೇ ರೀತಿಯ ಮತ್ತೊಂದು ವಿಮಾನ ದುರಂತ ಲಂಡನ್‌ನಲ್ಲಿ ನಡೆದಿದ್ದು, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ. ಲಂಡನ್ ಸೌಥೆಂಡ್‌ವಿಮಾನ ನಿಲ್ದಾಣದಿಂದ ಟೇಕಾಫ್ ಆದ ವಿಮಾನವೂ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ. ಈ ದೃಶ್ಯಗಳು ಕ್ಯಾಮರಾಗಳಲ್ಲಿ ಸೆರೆ ಆಗಿದ್ದು ವೈರಲ್ ಆಗುತ್ತಿದೆ. ಬೀಚ್‌ಕ್ರಾಫ್ಟ್ ಬಿ200 ಎಂಬ ಪ್ರಯಾಣಿಕ ವಿಮಾನವೂ ಪತನಗೊಂಡಿದ್ದು, ಈಸಿ ಜೆಟ್ ಕಂಪನಿಗೆ ಸೇರಿದ

ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ| ಪ್ರಯಾಣಿಕರೆಲ್ಲ ದುರ್ಮರಣ Read More »

ಸರ್ಕಾರಿ‌ ಶಾಲಾ ಮಕ್ಕಳಿಗೆ ಉಚಿತ ‌ಬಸ್ | ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ

ಸರ್ಕಾರಿ‌ ಶಾಲಾ ಮಕ್ಕಳಿಗೆ ಉಚಿತ ‌ಬಸ್ | ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ Read More »

ನಾಳೆ ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳ ಕರೆ| ಏನಿರುತ್ತೆ? ಏನಿರಲ್ಲ?

ಸಮಗ್ರ ನ್ಯೂಸ್: ದೇಶದಾದ್ಯಂತ ‘ಭಾರತ್ ಬಂದ್’ ಜಾರಿಯಾಗಲಿದೆ. 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಈ ಮುಷ್ಕರಕ್ಕೆ ಕರೆ ನೀಡಿದೆ. 25 ಕೋಟಿಗೂ ಹೆಚ್ಚು ಕಾರ್ಮಿಕರು ಭಾಗವಹಿಸುವ ಈ ಪ್ರತಿಭಟನೆ, ಕೇಂದ್ರ ಸರ್ಕಾರದ ‘ಕಾರ್ಮಿಕ-ರೈತ ವಿರೋಧಿ’ ನೀತಿಗಳ ವಿರುದ್ಧ ನಡೆಸಲಾಗುತ್ತಿದೆ.  ಬಂದ್‌ನಿಂದ ಬ್ಯಾಂಕಿಂಗ್, ಸಾರಿಗೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ಸಾಧ್ಯತೆಯಿದೆ. ಈ ಮುಷ್ಕರದಿಂದಾಗಿ ಬ್ಯಾಂಕ್‌ಗಳು ಮುಚ್ಚಲ್ಪಡಬಹುದು, ಚೆಕ್ ಕ್ಲಿಯರೆನ್ಸ್, ಗ್ರಾಹಕ ಸೇವೆಗಳು, ಮತ್ತು ಇತರ ಹಣಕಾಸು ಚಟುವಟಿಕೆಗಳು ಸ್ಥಗಿತಗೊಳ್ಳಬಹುದು. ಅಂಚೆ ಕಚೇರಿಗಳು, ಕಲ್ಲಿದ್ದಲು ಗಣಿಗಾರಿಕೆ

ನಾಳೆ ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳ ಕರೆ| ಏನಿರುತ್ತೆ? ಏನಿರಲ್ಲ? Read More »

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಚ್ಚಿಬೀಳಿಸುವ ವರದಿಯೊಂದನ್ನು ಆರೋಗ್ಯ ಇಲಾಖೆ ರಿಲೀಸ್‌ ಮಾಡಿದ್ದು, ಒಂದಲ್ಲ ಎರಡಲ್ಲ ಬರೊಬ್ಬರಿ ನಾಲ್ಕು ಸಾವಿರ ಮಕ್ಕಳು ದೃಷ್ಟಿ ದೋಷ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಇದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಅಂದತ್ವ ನಿವಾರಣ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಭಯಾನಕ ಮಾಹಿತಿ ಪತ್ತೆಯಾಗಿದೆ. ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 4 ಸಾವಿರ ಮಕ್ಕಳು ದೃಷ್ಟಿ ದೋಷದ ಸಮಸ್ಯೆ ಇದ್ದು, ಸುಮಾರು 4398 ಮಕ್ಕಳಿಗೆ ಗಂಭೀರ ದೃಷ್ಟಿ ದೋಷದ

ಮಕ್ಕಳ ಕೈಗೆ ಮೊಬೈಲ್ ಕೊಡುತ್ತೀರಾ? ಹಾಗಾದ್ರೆ ಈ ವರದಿ ಓದ್ಲೇಬೇಕು| ದ.ಕ ಜಿಲ್ಲೆಯಲ್ಲಿನ ರಿಪೋರ್ಟ್ ತೀರಾ ಶಾಕಿಂಗ್!! Read More »

ಪ್ರತೀ ಭಾರತೀಯನ ಮೇಲಿದೆ 4.80 ಲಕ್ಷ ಸಾಲದ ಹೊರೆ – RBI

ಸಮಗ್ರ ನ್ಯೂಸ್: ಎರಡು ವರ್ಷಗಳ ಹಿಂದೆ ಪ್ರತಿಯೊಬ್ಬ ಭಾರತೀಯನ ಮೇಲಿದ್ದ 3.9 ಲಕ್ಷ ರೂಪಾಯಿನಷ್ಟು ಸಾಲವಿತ್ತು. ಈ ಸಾಲ ಇದೀಗ ಈ ವರ್ಷದ ಮಾರ್ಚ್ ವೇಳೆಗೆ ಶೇ. 23ರಷ್ಟು ಹೆಚ್ಚಾಗಿದ್ದು, 4.8 ಲಕ್ಷ ರೂ ತಲುಪಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬಿಡುಗಡೆಗೊಳಿಸಿದ ವಿತ್ತೀಯ ಸ್ಥಿರತೆ ವರದಿ ತಿಳಿಸಿದೆ. ಇನ್ನು ಈ ವರದಿ ಪ್ರಕಾರ ಎರಡು ವರ್ಷಗಳಲ್ಲಿ ಪ್ರತಿ ಭಾರತೀಯನ ಮೇಲಿದ್ದ ಸಾಲದ ಹೊರೆ 90,000 ರೂ ಹೆಚ್ಚಾಗಿದ್ದು, ಹೋಮ್‌ ಲೋನ್‌, ಪರ್ಸನಲ್‌ ಲೋನ್‌, ಕ್ರೆಡಿಟ್‌

ಪ್ರತೀ ಭಾರತೀಯನ ಮೇಲಿದೆ 4.80 ಲಕ್ಷ ಸಾಲದ ಹೊರೆ – RBI Read More »

ತೆಲಂಗಾಣ: ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ| ಸಾವಿನ ಸಂಖ್ಯೆ 34ಕ್ಕೆ ಏರಿಕೆ

ಸಮಗ್ರ ನ್ಯೂಸ್: ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಂಗಳವಾರ ಸಾವನ್ನಪ್ಪಿದವರ ಸಂಖ್ಯೆ 34 ಕ್ಕೆ ಏರಿದೆ. ಆರಂಭದಲ್ಲಿ 12 ಜನ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆಗೆದುಹಾಕುವಾಗ ಹಲವಾರು ಶವಗಳು ಅವಶೇಷಗಳ ಅಡಿಯಲ್ಲಿ ಪತ್ತೆಯಾಗಿವೆ. 31 ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಮತ್ತು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಸ್ಫೋಟದ ಪರಿಣಾಮವಾಗಿ ಕೈಗಾರಿಕಾ ಶೆಡ್ ಸಂಪೂರ್ಣವಾಗಿ ನಾಶವಾಗಿದೆ. ಸ್ಫೋಟದ ತೀವ್ರತೆಗೆ ಕೆಲವು ಕಾರ್ಮಿಕರು ಗಾಳಿಯಲ್ಲಿ ಮೇಲಕ್ಕೆ ಎಸೆಯಲ್ಪಟ್ಟು ಸುಮಾರು 100 ಮೀಟರ್ ದೂರದಲ್ಲಿ ಕೆಳಗೆ ಬಿದ್ದಿದ್ದಾರೆ. ಸ್ಫೋಟದ ಕಾರಣವನ್ನು

ತೆಲಂಗಾಣ: ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ| ಸಾವಿನ ಸಂಖ್ಯೆ 34ಕ್ಕೆ ಏರಿಕೆ Read More »

ತೆಲಂಗಾಣ: ರಾಸಾಯನಿಕ ಘಟಕದಲ್ಲಿ ಸೋರಿಕೆ| ಕನಿಷ್ಠ 10 ಮಂದಿ ಸಾವು; ಹಲವರು ಅಸ್ವಸ್ಥ

ಸಮಗ್ರ ನ್ಯೂಸ್: ತೆಲಂಗಾಣದ ಪಾಶಮೈಲರಾಮ್‌ನಲ್ಲಿರುವ ಸಿಗಾಚಿ ರಾಸಾಯನಿಕ ಕೇಂದ್ರದಲ್ಲಿ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 10 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯಲ್ಲಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ. 11 ಅಗ್ನಿಶಾಮಕ ದಳದ ವಾಹನಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣ: ರಾಸಾಯನಿಕ ಘಟಕದಲ್ಲಿ ಸೋರಿಕೆ| ಕನಿಷ್ಠ 10 ಮಂದಿ ಸಾವು; ಹಲವರು ಅಸ್ವಸ್ಥ Read More »

ಅಮೆರಿಕ ವೀಸಾ ಅರ್ಜಿ ಸಲ್ಲಿಕೆ/ ಸಾಮಾಜಿಕ ಜಾಲತಾಣಗಳ ಮಾಹಿತಿ ಕಡ್ಡಾಯ

ಸಮಗ್ರ ನ್ಯೂಸ್‌: ಅಮೆರಿಕ ವೀಸಾ ಅರ್ಜಿ ಸಲ್ಲಿಕೆ ವೇಳೆ ಐದು ವರ್ಷಗಳಲ್ಲಿ ಬಳಸಿದ ಸಾಮಾಜಿಕ ಜಾಲತಾಣಗಳ ಯೂಸರ್‌ ನೇಮ್‌ ಅನ್ನು ಇನ್ನು ಮುಂದೆ ಡಿಎಸ್‌-160 ಫಾರ್ಮ್‌ನಲ್ಲಿ ಬಹಿರಂಗಪಡಿಸುವುದು ಕಡ್ಡಾಯ. ಒಂದು ವೇಳೆ ಈ ರೀತಿ ಮಾಡದೇ ಹೋದರೆ ವೀಸಾ ನಿರಾಕರಿಸುವ ಮತ್ತು ಭವಿಷ್ಯದಲ್ಲಿ ವೀಸಾ ಸಿಗದೆ ಹೋಗುವ ಸಾಧ್ಯತೆ ಇದೆ ಎಂದು ದೆಹಲಿಯಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಎಚ್ಚರಿಸಿದೆ. ಪ್ರತಿ ವೀಸಾಗಳ ಕುರಿತು ತೆಗೆದುಕೊಳ್ಳುವ ನಿರ್ಧಾರವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನಿರ್ಧಾರವಾಗಿರುತ್ತದೆ. ವೀಸಾಗಾಗಿ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ

ಅಮೆರಿಕ ವೀಸಾ ಅರ್ಜಿ ಸಲ್ಲಿಕೆ/ ಸಾಮಾಜಿಕ ಜಾಲತಾಣಗಳ ಮಾಹಿತಿ ಕಡ್ಡಾಯ Read More »

ನಭಕ್ಕೆ‌ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು

ಸಮಗ್ರ ನ್ಯೂಸ್: ಭಾರತದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳುಳ್ಳ ತಂಡದ ಐತಿಹಾಸಿಕ ಆಕ್ಸಿಯಂ-4 ಬಾಹ್ಯಾಕಾಶ ಯಾನ ಬುಧವಾರ ಮಧ್ಯಾಹ್ನ ಆರಂಭವಾಗಿದೆ.ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಮಧ್ಯಾಹ್ನ 12:01 ಗಂಟೆಗೆ ಸ್ಪೇಸ್‌ಎಕ್ಸ್‌ನ ಫಾಲ್ಕನ್‌ 9ರಾಕೆಟ್ ನಭಕ್ಕೆ ಚಿಮ್ಮಿದೆ. 28 ಗಂಟೆಗಳ ಪ್ರಯಾಣದ ನಂತರ ಶುಭಾಂಶು ಅಂತಾರಾಷ್ಟ್ರೀಯ ಬಾಹ್ಯಾಕಾಶದಲ್ಲಿ 14 ದಿನಗಳ ಕಾಲ ತಂಗಲಿದೆ. ಈ ಅವಧಿಯಲ್ಲಿ ವಿವಿಧ ಪ್ರಯೋಗಗಳನ್ನು ಗಗನಯಾತ್ರಿಗಳು ಕೈಗೊಳ್ಳಲಿದ್ದಾರೆ. ಮೇ 29ರಂದೇ ನಡೆಯಬೇಕಿದ್ದ ಈ ಗಗನಯಾನ ಯೋಜನೆಯು ಈಗಾಗಲೇ 5 ಬಾರಿ

ನಭಕ್ಕೆ‌ ಶುಭಪ್ರಯಾಣಗೈದ ಶುಭಾಂಶು ಶುಕ್ಲಾ ಸಹಿತ ನಾಲ್ವರು ಗಗನಯಾತ್ರಿಗಳು Read More »