ದೇಶ-ವಿದೇಶ

ಮಹಾರಾಣಿಗೆ ಮಹಾವಿದಾಯ| ಮಣ್ಣಲ್ಲಿ ಮಣ್ಣಾದ ಕ್ವೀನ್ ಎಲಿಜಬೆತ್ II

ಸಮಗ್ರ ನ್ಯೂಸ್: ಕಣ್ಣೀರಿನೊಂದಿಗೆ ಬ್ರಿಟನ್ ಮಹಾರಾಣಿ ಎಲಿಜಬೆತ್ II ರ ಅಂತ್ಯಕ್ರೀಯೆ ಸೋಮವಾರ ನಡೆಯಿತು. ಇಡೀ ಬ್ರಿಟನ್‌ನಲ್ಲಿ ಸೋಮವಾರ ನೀರವತೆ ಆವರಿಸಿತ್ತು, ವೆಸ್ಟ್‌ಮಿನ್‌ಸ್ಟರ್‌ ಅಬೇಯ ರಸ್ತೆಯ ಇಕ್ಕೆಲಗಳಲ್ಲೂ ಲಕ್ಷಾಂತರ ಮಂದಿ ನೆರೆದಿದ್ದರು. ಬರೋಬ್ಬರಿ 70 ವರ್ಷಗಳ ಕಾಲ ಬ್ರಿಟನ್‌ ಅನ್ನು ಆಳಿದ್ದ ರಾಣಿ 2ನೇ ಎಲಿಜಬೆತ್‌ ಅವರ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದ್ದಂತೆ “ಗಾಡ್‌ ಸೇವ್‌ ದಿ ಕಿಂಗ್‌’ ಎಂಬ ಉದ್ಘೋಷ ಮೊಳಗಿತ್ತು, ಎಲ್ಲರ ಕಣ್ಣಂಚಲ್ಲೂ ನೀರು ಜಿನುಗುತ್ತಿತ್ತು. ಸೆ. 8ರಂದು ನಿಧನ ಹೊಂದಿದ ಬ್ರಿಟನ್‌ ರಾಣಿ […]

ಮಹಾರಾಣಿಗೆ ಮಹಾವಿದಾಯ| ಮಣ್ಣಲ್ಲಿ ಮಣ್ಣಾದ ಕ್ವೀನ್ ಎಲಿಜಬೆತ್ II Read More »

ದೇಶ ಬಿಡಲು ನಿರ್ಧರಿಸಿದ ಯುವಕನಿಗೆ ಖುಲಾಯಿಸಿತು ಅದೃಷ್ಟ| ಈ ಆಟೋ‌ಡ್ರೈವರ್ ಈಗ ಕೋಟ್ಯಾಧಿಪತಿ!!

ಸಮಗ್ರ ನ್ಯೂಸ್: ಅದೃಷ್ಟ, ಹಣೆಬರಹಗಳನ್ನು ನಂಬಬಾರದು ಮೈ ಬಗ್ಗಿಸಿ ದುಡಿಯಬೇಕು. ಅದೃಷ್ಟಗಳೆಲ್ಲಾ ಸುಳ್ಳು ಕಷ್ಟಪಟ್ಟು ದುಡಿದರೆ ಇಷ್ಟಪಟ್ಟಂತೆ ಬದುಕಬಹುದು ಎಂಬೆಲ್ಲಾ ಸ್ಪೂರ್ತಿದಾಯಕ ಹಾಗೂ ಜೀವನವನ್ನು ಹುರಿದುಂಬಿಸುವ ಸಾಕಷ್ಟು ಮಾತುಗಳನ್ನು ಕೇಳಿದ್ದೇವೆ. ಈ ಮಾತುಗಳು ಸತ್ಯವೂ ಹೌದು. ಆದರೆ ಕೇರಳದಲ್ಲಿ ಅದೃಷ್ಟವೊಂದು ವ್ಯಕ್ತಿಯ ಬದುಕನ್ನೇ ಬದಲಿಸಿದೆ. ಕೆಲಸ ಅರಸಿ ದೇಶ ಬಿಟ್ಟು ಹೋಗಲು ಬಯಸಿದ್ದ ಯುವಕನ್ನು ಅದೃಷ್ಟವೊಂದು ತಡೆದು ನಿಲ್ಲಿಸಿದ್ದು, ಈಗ ಆತ ಕೋಟ್ಯಾಧಿಪತಿ ಇದಕ್ಕೆ ಕಾರಣವಾಗಿದ್ದು ಒಂದು ಲಾಟರಿ. ಮಲೇಷ್ಯಾಗೆ ಅಡುಗೆಯವನಾಗಿ ಕೆಲಸಕ್ಕೆ ಹೋಗಲು ನಿರ್ಧರಿಸಿದ್ದ ಕೇರಳದ

ದೇಶ ಬಿಡಲು ನಿರ್ಧರಿಸಿದ ಯುವಕನಿಗೆ ಖುಲಾಯಿಸಿತು ಅದೃಷ್ಟ| ಈ ಆಟೋ‌ಡ್ರೈವರ್ ಈಗ ಕೋಟ್ಯಾಧಿಪತಿ!! Read More »

ದೇವಸ್ಥಾನದಲ್ಲಿ ನಡೆಯಿತು ‘ಪ್ಯಾಷನ್ ಶೋ’| ಭಜರಂಗದಳದಿಂದ ದೂರು ದಾಖಲು

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ‘ಫ್ಯಾಷನ್ ಶೋ’ ಆಯೋಜಿಸಿದ್ದನ್ನು ಭಜರಂಗ ದಳದ ಕಾರ್ಯಕರ್ತರು ಆಕ್ಷೇಪಿಸಿರುವ ಘಟನೆ ಛತ್ತೀಸ್ ಗಢ ರಾಜ್ಯದ ರಾಯ್ಪುರದ ಬಾಲಾಜಿ ದೇವಸ್ಥಾನದಲ್ಲಿ ‌ನಡೆದಿದೆ. ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ತಂದ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಭಜರಂಗ ದಳ ಹೇಳಿದೆ. ಟೆಲಿಬಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಸಾಲಸರ್ ದೇವಸ್ಥಾನದಲ್ಲಿ ಭಾನುವಾರ ಎಫ್‌ಡಿಸಿಎ ಹೆಸರಿನ ಕಂಪನಿಯು ‘ಫ್ಯಾಷನ್ ಶೋ’ ಆಯೋಜಿಸಿದೆ. ಆರಿಫ್ ಮತ್ತು ಮನೀಶ್ ಸೋನಿ ಎಂಬುವವರೇ ಈ ‘ಫ್ಯಾಶನ್ ಶೋ’ದ ಆಯೋಜಕರು ಎಂದು ವರದಿಯಾಗಿದೆ. ಧಾರ್ಮಿಕ

ದೇವಸ್ಥಾನದಲ್ಲಿ ನಡೆಯಿತು ‘ಪ್ಯಾಷನ್ ಶೋ’| ಭಜರಂಗದಳದಿಂದ ದೂರು ದಾಖಲು Read More »

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ರೈಲ್ವೆ ಮಾರ್ಗ, ರಸ್ತೆ ಸಾರಿಗೆ ಸೇರಿ ಮೂರು ವಿಚಾರಗಳಲ್ಲಿ ಕರ್ನಾಟಕ ಸರ್ಕಾರವನ್ನು ಮನವೊಲಿಸಲು ಬಂದಿದ್ದ ನೆರೆ ರಾಜ್ಯ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ಎಲ್ಲ ಮೂರು ಪ್ರಸ್ತಾವನೆಗಳನ್ನೂ ಕರ್ನಾಟಕ ಸರ್ಕಾರ ತಿರಸ್ಕರಿಸಿದೆ. ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿದೆ. ಪ್ರಸ್ತಾವಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ.

ಕೇರಳದ ಪ್ರಸ್ತಾವನೆಗೆ ಕರ್ನಾಟಕ ಎಳ್ಳುನೀರು| ಕಾಂಞಂಗಾಡ್- ಕಾಣಿಯೂರು ರೈಲು ಮಾರ್ಗ‌ ಅಸಾಧ್ಯವೆಂದ ಸಿಎಂ ಬೊಮ್ಮಾಯಿ Read More »

ವಿಶ್ವದ ಮೊದಲ ಹಾರುವ ಬೈಕ್ ಪ್ರದರ್ಶನ; ವಿಡಿಯೋ ವೈರಲ್

ಸಮಗ್ರ ನ್ಯೂಸ್ : ವಿಶ್ವದ ಮೊದಲ ಹಾರುವ ಬೈಕ್ ತಯಾರಾಗಿ ಹೊಸ ಮಾಡೆಲ್ ಬೈಕ್‌ ಬಂದಿದೆ. ಈ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ಜಪಾನ್‌ ಮೂಲದ ಸ್ಟಾಟಪ್‌ ಕಂಪನಿ ಏರ್‌ವಿನ್ಸ್ ಟೆಕ್ನಾಲಜೀಸ್ ಅಮೆರಿಕದ ಡೆಟ್ರಾಯಿಟ್‌ನಲ್ಲಿ ನಡೆಯುತ್ತಿರುವ ಆಟೋ ಶೋನಲ್ಲಿ ಈ ಬೈಕನ್ನು ಪ್ರದರ್ಶನ ಮಾಡಿದೆ. ಇದು ಸಂಪೂರ್ಣವಾಗಿ ಬ್ಯಾಟರಿ ಚಾಲಿತವಾಗಿದ್ದು, ವ್ಯಕ್ತಿಯೊಬ್ಬರು ಕುಳಿತುಕೊಂಡು ಹಾರಾಟ ಮಾಡಬಹುದು. ಈ ಬೈಕ್ 40 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಬಲ್ಲದು ಅಂತ ತಯಾರಿಸಿದ ಕಂಪನಿ ಹೇಳಿಕೊಂಡಿದೆ. ಹಾರುವ ಬೈಕ್ ಗಂಟೆಗೆ 60

ವಿಶ್ವದ ಮೊದಲ ಹಾರುವ ಬೈಕ್ ಪ್ರದರ್ಶನ; ವಿಡಿಯೋ ವೈರಲ್ Read More »

ಚೀತಾ ಪ್ರಾಜೆಕ್ಟ್ ನಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಡಾ. ಸನತ್ ಕೃಷ್ಣ|

ಸಮಗ್ರ ನ್ಯೂಸ್: ನಮೀಬಿಯಾದಿಂದ ಚೀತಾಗಳನ್ನು ಭಾರತಕ್ಕೆ ತಂದ ನಿಯೋಗದಲ್ಲಿದ್ದ ಪಶುವೈದ್ಯ ಡಾ.ಸನತ್‌ ಕೃಷ್ಣ ಮುಳಿಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯದವರು. ಅವರು ನವದೆಹಲಿಯ ನ್ಯಾಷನಲ್‌ ಝೂವಾಲಾಜಿಕಲ್‌ ಪಾರ್ಕ್‌ನಲ್ಲಿ ಸಹಾಯಕ ಪಶುವೈದ್ಯಕೀಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭಾರತಕ್ಕೆ ಚೀತಾಗಳನ್ನು ತಂದ ಬಗ್ಗೆ ಖುಷಿ ಹಂಚಿಕೊಂಡ ಡಾ.ಸನತ್‌ಕೃಷ್ಣ ಮುಳಿಯ ಅವರ ಸಂಬಂಧಿ, ಗುತ್ತಿಗಾರು ಗ್ರಾಮದ ಕೇಶವ ಭಟ್‌ ಮುಳಿಯ, ‘ಇದು ದೇಶಕ್ಕೆ ಹೆಮ್ಮಯ ಕ್ಷಣ. ಅಂತೆಯೇ ಈ ಚೀತಾಗಳನ್ನು ಕರೆತಂದ ತಂಡದಲ್ಲಿದ್ದ ಪಶುವೈದ್ಯರು ನಮ್ಮ ರಾಜ್ಯದವರು ಎಂಬುದು

ಚೀತಾ ಪ್ರಾಜೆಕ್ಟ್ ನಲ್ಲಿ ಪುತ್ತೂರಿನ ಮುಳಿಯದ ಪಶುವೈದ್ಯ ಡಾ. ಸನತ್ ಕೃಷ್ಣ| Read More »

ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕ ಸಿಬ್ಬಂದಿಯನ್ನು ನೇಮಿಸಿ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಸಮಗ್ರ ನ್ಯೂಸ್: ಬ್ಯಾಂಕ್‌ಗಳಿಗೆ ಸ್ಥಳೀಯ ಭಾಷೆ ಮಾತನಾಡಬಲ್ಲ ಸಿಬ್ಬಂದಿಯನ್ನು ನೇಮಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ್ದಾರೆ. ನೀವು ವ್ಯಾಪಾರ ಮಾಡಲು ಅಲ್ಲಿದ್ದೀರಿ. ನಾಗರಿಕರಲ್ಲಿ ಕೆಲವು ಮೌಲ್ಯ ವ್ಯವಸ್ಥೆಯನ್ನು ಬೆಳೆಸಲು ಅಲ್ಲ ಎಂದು ಮುಂಬೈನಲ್ಲಿ ನಡೆದ ಭಾರತೀಯ ಬ್ಯಾಂಕ್‌ಗಳ ಸಂಘದ 75ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪ್ರಾದೇಶಿಕ ಭಾಷೆಯಲ್ಲಿ ಮಾತನಾಡದ ಸಿಬ್ಬಂದಿಯನ್ನು ನೀವು ನಿಮ್ಮ ಬ್ಯಾಂಕ್ ಶಾಖೆಯಲ್ಲಿ ಹೊಂದಿದ್ದು ಅಲ್ಲಿ ನೀವು ಹಿಂದಿ ಮಾತನಾಡುವುದಿಲ್ಲ, ಬಹುಶಃ ನೀವು ಭಾರತೀಯರಲ್ಲ ಎಂದು

ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕ ಸಿಬ್ಬಂದಿಯನ್ನು ನೇಮಿಸಿ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ Read More »

ಭಾರೀ ಭೂಕುಸಿತದಲ್ಲಿ 13 ಸಾವು, 10 ಮಂದಿ‌ ಕಣ್ಮರೆ

ಸಮಗ್ರ ನ್ಯೂಸ್: ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ, 10 ಮಂದಿ ಕಾಣೆಯಾಗಿದ್ದಾರೆ ಮತ್ತು 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶಿಸಿದ್ದಾರೆ.

ಭಾರೀ ಭೂಕುಸಿತದಲ್ಲಿ 13 ಸಾವು, 10 ಮಂದಿ‌ ಕಣ್ಮರೆ Read More »

ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂದಿಳಿದ 8 ಚಿರತೆಗಳು

ಸಮಗ್ರ ನ್ಯೂಸ್ : ಭಾರತ ಕಾಡುಗಳಿಂದ ಕಣ್ಮರೆಯಾಗಿದ್ದ ಚಿರತೆಗಳು ಸುಮಾರು 70 ವರ್ಷಗಳ ಬಳಿಕ ಮತ್ತೆ ಬಂದಿದೆ. ಇದೀಗ ನಮೀಬಿಯಾ ದೇಶದಿಂದ ಎಂಟು ಚಿರತೆಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂದಿದೆ. ನಮೀಬಿಯಾದಿಂದ ಎಂಟು ಚಿರತೆಗಳನ್ನು ಹೊತ್ತ ವಿಶೇಷ ಚಾರ್ಟರ್ಡ್‌ ಕಾರ್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ ನಲ್ಲಿರುವ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಇಂದು ಬೆಳಗ್ಗೆ ಬಂದು ಇಳಿದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಮಧ್ಯಪ್ರದೇಶ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳನ್ನು ಬಿಡುಗಡೆ ಮಾಡಲಿದ್ದಾರೆ.

ವಿಶೇಷ ವಿಮಾನದಲ್ಲಿ ಭಾರತಕ್ಕೆ ಬಂದಿಳಿದ 8 ಚಿರತೆಗಳು Read More »

‘ನಮೋ’ಗೆ ವಿಶಿಷ್ಟವಾಗಿ ಬರ್ತ್ ಡೇ ಶುಭಾಶಯ ತಿಳಿಸಿದ ಪುಟಿನ್

ಸಮಗ್ರ ನ್ಯೂಸ್: ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ನಡೆದ ಎಸ್ ಸಿಒ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಸಂಪ್ರದಾಯದಲ್ಲಿ, ಜನ್ಮದಿನಗಳಿಗೆ ಮುಂಚಿತವಾಗಿ ಶುಭಾಶಯಗಳನ್ನು ನೀಡಲಾಗುವುದಿಲ್ಲ ಎಂದು ಹೇಳಿದರು. ಆದ್ದರಿಂದ ನಾನು ಈ ಸಮಯದಲ್ಲಿ ನಿಮ್ಮನ್ನು ಅಭಿನಂದಿಸುತ್ತಿಲ್ಲ, ಆದರೆ ನನ್ನ ಶುಭ ಹಾರೈಕೆಗಳು ಯಾವಾಗಲೂ ನಿಮ್ಮೊಂದಿಗೆ ಇರುತ್ತವೆ ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತವೆ. ನಿಮ್ಮ ನಾಯಕತ್ವದಲ್ಲಿ

‘ನಮೋ’ಗೆ ವಿಶಿಷ್ಟವಾಗಿ ಬರ್ತ್ ಡೇ ಶುಭಾಶಯ ತಿಳಿಸಿದ ಪುಟಿನ್ Read More »