ದೇಶ-ವಿದೇಶ

‘ರಾಷ್ಟ್ರೀಯ ಧರ್ಮಗ್ರಂಥ’ವಾಗಿ ‘ಶ್ರೀಮದ್ ಭಗವದ್ಗೀತೆ’! ಶೀಘ್ರದಲ್ಲೇ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಷ್ಟ್ರಗೀತೆ, ರಾಷ್ಟ್ರಗೀತೆ, ರಾಷ್ಟ್ರ ಧ್ವಜದಂತೆಯೇ ಶೀಘ್ರದಲ್ಲೇ ರಾಷ್ಟ್ರ ಗ್ರಂಥ ಬರಲಿದೆ. ಭಾರತ ಸರ್ಕಾರವು ಶ್ರೀಮದ್ ಭಗವದ್ಗೀತೆಯನ್ನ ರಾಷ್ಟ್ರೀಯ ಗ್ರಂಥವೆಂದು ಘೋಷಿಸಬಹುದು. ಇದನ್ನು ಜಾರಿಗೆ ತರುವ ಪ್ರಯತ್ನವನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ. ಇದಕ್ಕಾಗಿ, ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನ ತೆಗೆದುಕೊಳ್ಳುತ್ತಿದೆ. ಗಮನಾರ್ಹವಾಗಿ, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರವು ಈ ಅಭ್ಯಾಸ ನಡೆಸಿದೆ. ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಜುಲೈ 5ರಂದು ಕೇಂದ್ರ […]

‘ರಾಷ್ಟ್ರೀಯ ಧರ್ಮಗ್ರಂಥ’ವಾಗಿ ‘ಶ್ರೀಮದ್ ಭಗವದ್ಗೀತೆ’! ಶೀಘ್ರದಲ್ಲೇ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ Read More »

25 ಲಕ್ಷ ರೂ. ಗೆ ಹುಲಿ ಮರಿಗಳ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ

ಸಮಗ್ರ ನ್ಯೂಸ್:  ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ವ್ಯಾಟ್ಸಾಪ್ ಮೂಲಕ 25 ಲಕ್ಷ ರೂ.ಗೆ ಹುಲಿ ಮರಿಗಳನ್ನು ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸರ್ಪನಮೇಡುವಿನ ವಾಸಿ ಪಥಿಬನ್ ಎಂದು ಗುರುತಿಸಲಾಗಿದ್ದು, ಈತ ತಿರುಪತಿಯಲ್ಲಿ ಕಾನೂನು ಅಧ್ಯಯನ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಟ್ಸಪ್ ಮೂಲಕ ಬುಕ್ಕಿಂಗ್ ಮಾಡಿದ 10 ದಿನಗಳ ನಂತರ ಮರಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದ. ಈ ವಿಷಯ ತಿಳಿಯುತ್ತಿದ್ದಂತೆ  ಅಬಕಾರಿಗಳ ತಂಡ ಆತನ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಹುಲಿಮರಿಗಳು ಇರುವುದು

25 ಲಕ್ಷ ರೂ. ಗೆ ಹುಲಿ ಮರಿಗಳ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ Read More »

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಬಾಲಿವುಡ್ ಖ್ಯಾತ ನಟಿ ರಿಚಾ ಚಡ್ಡಾ ಮತ್ತು ನಟ ಅಲಿ ಫಜಲ್

ಸಮಗ್ರ ನ್ಯೂಸ್:  ಬಾಲಿವುಡ್ ನ ಖ್ಯಾತ ನಟಿ ರಿಚಾ ಚಡ್ಡಾ ಹಾಗೂ ನಟ ಅಲಿ ಫಜಲ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಜೋಡಿಗಳ ವಿವಾಹಕ್ಕೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. 2020ರಲ್ಲಿ ರಿಚಾ ಚಡ್ಡಾ ಮತ್ತು ಅಲಿ ಫಜಲ್ ತಾವಿಬ್ಬರು ಮದುವೆ ಆಗುವುದಾಗಿ ಅಧಿಕೃತವಾಗಿ ಮಾಹಿತಿ ತಿಳಿಸಿದ್ದರು. ಆದರೆ ಕೊರೊನಾ ಕಾರಣದಿಂದ ಮದುವೆಯನ್ನು ಮುಂದೂಡಲಾಗಿತ್ತು. ಇದೀಗ ಸೂಕ್ತ ಸಮಯ ಬಂದಿದ್ದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ಸೆಪ್ಟೆಂಬರ್ ಕೊನೆಯಲ್ಲಿ ರಿಚಾ ಹಾಗೂ ಅಲಿ ದಾಂಪತ್ಯ ಜೀವನಕ್ಕೆ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಬಾಲಿವುಡ್ ಖ್ಯಾತ ನಟಿ ರಿಚಾ ಚಡ್ಡಾ ಮತ್ತು ನಟ ಅಲಿ ಫಜಲ್ Read More »

ನವೀಕೃತ ‘ಸೆಂಟ್ರಲ್ ವಿಸ್ತಾ’ ಇಂದು ಉದ್ಘಾಟನೆ| ಕರ್ತವ್ಯ ಪಥಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನವೀಕೃತ ಸೆಂಟ್ರಲ್ ವಿಸ್ತಾದ ಕೆಲವು ಭಾಗ, ಕರ್ತವ್ಯ ಪಥ ಹಾಗೂ ಇಂಡಿಯಾ ಗೇಟ್ ಸನಿಹ ಪ್ರತಿಸ್ಠಾಪಿಸಲಾಗಿರುವ ನೇತಾಜಿ ಸಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ನವೀಕೃತ ಸೆಂಟ್ರಲ್ ವಿಸ್ತಾ ಬಹುತೇಕ ಸಿದ್ಧವಾಗಿದ್ದು, ಮೋದಿ ವಿಜಯ್ ಚೌಕ್ ನಿಂದ ಇಂಡಿಯಾ ಗೇಟ್ ವರೆಗಿನ ಭಾಗವನ್ನು ಇಂದು ಉದ್ಘಾಟಿಸಲಿದ್ದಾರೆ. ಈ ನವೀಕೃತ ಸೆಂಟ್ರಲ್ ವಿಸ್ತಾದಲ್ಲಿ ರಾಜ್ಯವಾರು ಆಹಾರ ಮಳಿಗೆಗಳು, ಕೆಂಪು ಗ್ರಾನೈಟ್ ಪಾದಚಾರಿ ಮಾರ್ಗಗಳು, ಸುತ್ತಲೂ ಹಸಿರು ಉದ್ಯಾನವನಗಳು ಪ್ರಮುಖ

ನವೀಕೃತ ‘ಸೆಂಟ್ರಲ್ ವಿಸ್ತಾ’ ಇಂದು ಉದ್ಘಾಟನೆ| ಕರ್ತವ್ಯ ಪಥಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ Read More »

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಯ ನ್ಯಾಯಾಲಯಕ್ಕೆ ಭಾರತ ಮೂಲದ ಅಮೆರಿಕದ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಶ್ವೇತಭವನದ ವರದಿಯ ಪ್ರಕಾರ, ಅಧ್ಯಕ್ಷ ಬೈಡನ್ ಅವರು ಇನ್ನಿತರ ನ್ಯಾಯಾಧೀಶರ ನೇಮಕವನ್ನೂ ಮಾಡಿದ್ದಾರೆ. ಆದರೆ ಈ ಮಾಹಿತಿಯನ್ನು ಸೆನೆಟ್ ಇನ್ನೂ ಬಹಿರಂಗಪಡಿಸಿಲ್ಲ. ಇದು ದೃಢಪಟ್ಟಲ್ಲಿ. ಸುಬ್ರಮಣಿಯನ್ ಅವರು ಅಮೆರಿಕದ ಜಿಲ್ಲಾ ನ್ಯಾಯಾಧೀಶರಾಗಿ ನೇಮಕವಾಗುವ ದಕ್ಷಿಣ ಏಷ್ಯಾ ರಾಷ್ಟ್ರದ ಮೊದಲ ವ್ಯಕ್ತಿಯಾಗಲಿದ್ದಾರೆ. ಸುಬ್ರಮಣಿಯನ್ ಅವರು 2001 ರಲ್ಲಿ ಕೇಸ್ ವೆಸ್ಟರ್ನ್ ರಿಸರ್ವ್

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ Read More »

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬರೆದ ಚೆಕ್ಕನ್ನು ಅಮಾನ್ಯ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ. ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆ(Account)ಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಕ್ಕಾಗಿ, ಜಿಲ್ಲಾ ಗ್ರಾಹಕರ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ Read More »

1.43 ಕೋಟಿ ರೂ. ಮೌಲ್ಯದ ಕರೆನ್ಸಿಗಳಿಂದ ತಯಾರಾದ ಗಣೇಶ ಮಂಟಪ; ಸೋಶಿಯಲ್ ಮೀಡಿಯಾ ದಲ್ಲಿ ವೈರಲ್

ಸಮಗ್ರ ನ್ಯೂಸ್ : ವಾರಂಗಲ್‌ನಲ್ಲಿ ಗಣೇಶ ಮಂಟಪವನ್ನು ನೋಟುಗಳಿಂದ ಅಲಂಕರಿಸಿದ್ದಾರೆ.ಗಣೇಶ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ವಾರಂಗಲ್ ನಗರದ ವಿನಾಯಕ ಟ್ರಸ್ಟ್ ಭವನದ ಆಶ್ರಯದಲ್ಲಿ ನಡೆದ ಗಣೇಶ ನವರಾತ್ರಿ ಆಚರಣೆ ವಿಶೇಷ. ಇಲ್ಲಿನ ಗಣೇಶ ಮಂಟಪವನ್ನು ಭಕ್ತರು ಬಣ್ಣ ಬಣ್ಣದ ನೋಟುಗಳಿಂದ ಅಲಂಕರಿಸಿದ್ದಾರೆ.  ಒಂದು ಕೋಟಿ ನಲವತ್ಮೂರು ಲಕ್ಷ ರೂಪಾಯಿಗಳ ಕರೆನ್ಸಿ ನೋಟುಗಳಿಂದ ವಿಶೇಷವಾಗಿ ಅಲಂಕರಿಸಿದ್ದರು. ವಿನಾಯಕ ಟ್ರಸ್ಟ್ ಭವನದ 108 ಸದಸ್ಯರು ಗಣಪತಿಯನ್ನು ಲಕ್ಷ್ಮಿ ಗಣಪತಿಯನ್ನಾಗಿ ಬದಲಾಯಿಸಿದರು. ಸ್ವಾಮಿ ಅವರ ಅಲಂಕಾರಕ್ಕೆ ಬೇಕಾದ ಹಣವನ್ನು ಸಂಗ್ರಹಿಸಿ ವಿನಾಯಕ

1.43 ಕೋಟಿ ರೂ. ಮೌಲ್ಯದ ಕರೆನ್ಸಿಗಳಿಂದ ತಯಾರಾದ ಗಣೇಶ ಮಂಟಪ; ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ Read More »

ರಾಜೀವ್ ಗಾಂಧಿ ಅವರ ಸ್ಮಾರಕದಲ್ಲಿ ಸಸಿ ನೆಟ್ಟು ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಚೆನ್ನೈ: ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು. ಜೋಡೋ ಭಾರತ್‌ ಯಾತ್ರೆ ಚಾಲನೆ ಹಿನ್ನೆಲೆ ನಿನ್ನೆ ರಾತ್ರಿ ಇಲ್ಲಿಗೆ ಆಗಮಿಸಿದ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮೊದಲು ರಾಜೀವ ಗಾಂಧಿ ಸ್ಮಾರಕ ಸ್ಥಳದಲ್ಲಿ ರಾಹುಲ್ ಸಸಿ ನೆಟ್ಟರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮಿಳುನಾಡು ಕಾಂಗ್ರೆಸ್ ಕಮಿಟಿ ಮುಖ್ಯಸ್ಥ ಕೆ.ಎಸ್.ಅಳಗಿರಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಜೊತೆಗಿದ್ದರು. ಮೇ 21, 1991 ರಂದು

ರಾಜೀವ್ ಗಾಂಧಿ ಅವರ ಸ್ಮಾರಕದಲ್ಲಿ ಸಸಿ ನೆಟ್ಟು ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ Read More »

ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ

ಸಮಗ್ರ ನ್ಯೂಸ್: ಮೂರೂವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿದ ಘಟನೆಯೊಂದು ಪಂಜಾಬ್ ನಲ್ಲಿ ನಡೆದಿದೆ. ಪತಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದ ಕಾರಣ ಮಹಿಳೆ ತವರಿನಲ್ಲಿ ಕಳೆದ ಎರಡು ವರ್ಷಗಳಿಂದ ವಾಸ್ತವ್ಯವಿದ್ದಳು. ಕೌಟುಂಬಿಕ ಕಲಹದಿಂದಾಗಿ ಆಕೆ ಖಿನ್ನತೆಗೊಳಗಾಗಿದ್ದಳು. ಇದೀಗ ಮಗು ಒಂದೇ ಸಮ ಅಳುತ್ತಿದ್ದುದನ್ನು ನೋಡಿ ಹತಾಶೆಯಿಂದ ಬೆಂಕಿ ಹಚ್ಚಿದ್ದಾಳೆ. ಇದೀಗ ಮಗು ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ತಾಯಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ Read More »

ಇಂದು(ಸೆ.7) NEET ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶ ಇಂದು(ಸೆ.7) ಪ್ರಕಟವಾಗಲಿದೆ ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಇದಕ್ಕಾಗಿ neet.nta.nic.in ಗೆ ಭೇಟಿ ನೀಡಬೇಕಾಗುತ್ತದೆ. ತಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. ಜುಲೈ 17ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆಯಲು 18 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ. ತಾತ್ಕಾಲಿಕ ಕೀ ಉತ್ತರಗಳನ್ನು

ಇಂದು(ಸೆ.7) NEET ಫಲಿತಾಂಶ ಪ್ರಕಟ Read More »