ದೇಶ-ವಿದೇಶ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ […]

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್|

ಸಮಗ್ರ ನ್ಯೂಸ್: ಉದ್ಯಮ ಕ್ಷೇತ್ರದ ದೈತ್ಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಮೇಲೆ ಕಣ್ಣು ಹಾಕಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್ ಕಣ್ಣಿಗೆ ಬಿದ್ದಿದ್ದು,ಬಹುಕೋಟಿ ಆಫರ್ ಕೂಡಾ ಮಾಡಿದೆ. ಆದರೆ ಪುತ್ತೂರಿನ ಕಂಪನಿ ಮಾತ್ರ ಅಂಬಾನಿಯ ಆಫರ್ ಆನ್ನು ನಯವಾಗಿ ತಿರಸ್ಕರಿಸಿದ್ದು, ಕಂಪನಿ ಬೆಳೆಸುವ ಉದ್ದೇಶ ವ್ಯಕ್ತಪಡಿಸಿದೆ. ಮಾರಾಟ ಮಾಡುವ ಉದ್ದೇಶ ಖಂಡಿತಾ ಇಲ್ಲವೆಂದು ನೇರವಾಗಿ

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್| Read More »

ಬ್ರಿಟನ್ ಪ್ರಧಾನಿಯಾಗಿ ಲಿಝ್ ಟ್ರೂಸ್ ಆಯ್ಕೆ| ರಿಷಿ ಸುನಕ್ ಗೆ ಸೋಲು

ಸಮಗ್ರ ನ್ಯೂಸ್: ಬ್ರಿಟನ್ ನ ಪ್ರಧಾನಿ ಹುದ್ದೆಗೆ ಮಾಜಿ ಸಚಿವರಾದ ರಿಷಿ ಸುನಾಕ್ ಮತ್ತು ಲಿಝ್ ಟ್ರೂಸ್ ಮಧ್ಯೆ ಕಳೆದ ಕೆಲ ದಿನಗಳಿಂದ ನಡೆದ ತುರುಸಿನ ಪೈಪೋಟಿ ಅಂತ್ಯಗೊಂಡಿದ್ದು, ಲಿಝ್ ಟ್ರೂಸ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಮೂಲದ ರಿಷಿ ಸುನಕ್ ಅವರಿಗೆ ಹಿನ್ನಡೆಯಾಗಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಹುದ್ದೆಗೆ ಕನ್ಸರ್ವೇಟಿವ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ದೇಶದಾದ್ಯಂತ ಸುಮಾರು 2 ಲಕ್ಷ ಕನ್ಸರ್ವೇಟಿವ್ ಪಕ್ಷದ ಸದಸ್ಯರು ಅಂಚೆಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು

ಬ್ರಿಟನ್ ಪ್ರಧಾನಿಯಾಗಿ ಲಿಝ್ ಟ್ರೂಸ್ ಆಯ್ಕೆ| ರಿಷಿ ಸುನಕ್ ಗೆ ಸೋಲು Read More »

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು

ಸಮಗ್ರ ನ್ಯೂಸ್ : ತಮ್ಮ ಮಗುವಿಗೆ ದಂಪತಿಗಳು ಭಾರತೀಯ ಖಾದ್ಯಗಳಲ್ಲಿ ಒಂದಾದ ಪಕೋಡ ಎಂಬ ಹೆಸರಿಟ್ಟು ಅಚ್ಚರಿ ಮೂಡಿಸಿದ್ದಾರೆ. ಇಂಥದೊಂದು ಘಟನೆ ಯುಕೆಯಲ್ಲಿ ನಡೆದಿದೆ. ಐರ್ಲೆಂಡ್ ನ ಪ್ರಖ್ಯಾತ ರೆಸ್ಟೋರೆಂಟ್ ನ್ಯೂ ಟೌನ್ ಅಬ್ಬೆ ಈ ವಿಚಾರವನ್ನು ಸೋಷಿಯಲ್‌ ಮಿಡಿಯಾ ದಲ್ಲಿ ಹಂಚಿಕೊಂಡಿದ್ದು, ಈ ರೆಸ್ಟೋರೆಂಟ್ ಗೆ ನಿತ್ಯವೂ ಭೇಟಿ ನೀಡುತ್ತಿದ್ದ ದಂಪತಿ ಅಲ್ಲಿನ ನೆಚ್ಚಿನ ಖಾದ್ಯ ಪಕೋಡ ಹೆಸರನ್ನೇ ತಮ್ಮ ಮಗುವಿಗೆ ಇಟ್ಟಿದ್ದಾರೆ. ಇವರು ಭೇಟಿ ನೀಡಿದಾಗೆಲ್ಲ ಪಕೋಡ ಹೆಸರಿನಿಂದ ಕರೆಯಲಾಗುವ ಖಾದ್ಯಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರಂತೆ.

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು Read More »

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲು ಬರುವುದು ವಿಳಂಬವಾದಲ್ಲಿ ಪ್ರಯಾಣಿಕರಿಗೆ  IRCTC ಯಿಂದ ಹಲವು ಸೌಲಭ್ಯ

ನವದೆಹಲಿ : ರೈಲು ಪ್ರಯಾಣದ ವೇಳೆ ರೈಲು ಬರುವುದು ವಿಳಂಬವಾದಲ್ಲಿ IRCTCಯಿಂದ ಕೆಲವು ಸೌಲಭ್ಯ ಪಡೆದುಕೊಳ್ಳಲು ನಿಮಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿ ನೀಡಿದ್ದು, ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ರೈಲು ತಡವಾದರೆ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಕೆಲವು ಸೇವೆಗಳನ್ನು ಉಚಿತವಾಗಿ ನೀಡುತ್ತದೆ. ನಿಮ್ಮ ರೈಲು ನಿಗದಿತ ಸಮಯಕ್ಕಿಂತ ತಡವಾದರೆ IRCTC ನಿಮಗೆ ಆಹಾರ ಮತ್ತು ತಂಪು ಪಾನೀಯವನ್ನು ನೀಡುತ್ತದೆ . IRCTCಯಿಂದ ಈ ಆಹಾರವನ್ನು ನಿಮಗೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ.

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲು ಬರುವುದು ವಿಳಂಬವಾದಲ್ಲಿ ಪ್ರಯಾಣಿಕರಿಗೆ  IRCTC ಯಿಂದ ಹಲವು ಸೌಲಭ್ಯ Read More »

ಆರ್ಥಿಕತೆಯಲ್ಲಿ ಅತಿ ದೊಡ್ಡ ಹೆಜ್ಜೆ ಇರಿಸಿದ ಇಂಡಿಯಾ| ವಿಶ್ವದ 5ನೇ ಸ್ಥಾನಕ್ಕೆ ಭಾರತದ ಆರ್ಥಿಕತೆ

ಸಮಗ್ರ ನ್ಯೂಸ್: ಯುನೈಟೆಡ್ ಕಿಂಗ್ಡಮ್ ಹಿಂದಿಕ್ಕಿದ ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರಹೊಮ್ಮಿದೆ. 2021ರ ಹಣಕಾಸು ವರ್ಷದ ಕೊನೆಯ ಮೂರು ತೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. ಈಗಾಗಲೇ ಕೋವಿಡ್ ನೀಡಿದ ಹೊಡೆತದಿಂದ ಪಾರಾಗಲು ಹೆಣಗಾಡುತ್ತಿರುವ ಇಂಗ್ಲೆಂಡ್ಗೆ ಈ ವರದಿ ಮತ್ತಷ್ಟು ಹೊಡೆತ ನೀಡಿದೆ. ಡಾಲರ್ ವಿನಿಮಯ ದರವನ್ನು ಲೆಕ್ಕ ಹಾಕಿದಾಗ ಭಾರತೀಯ ಆರ್ಥಿಕತೆಯ

ಆರ್ಥಿಕತೆಯಲ್ಲಿ ಅತಿ ದೊಡ್ಡ ಹೆಜ್ಜೆ ಇರಿಸಿದ ಇಂಡಿಯಾ| ವಿಶ್ವದ 5ನೇ ಸ್ಥಾನಕ್ಕೆ ಭಾರತದ ಆರ್ಥಿಕತೆ Read More »

ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ

ಕೇಪ್‌ ಕ್ಯಾನವೆರಲ್‌: ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (NASA) ಮಹತ್ವಾಕಾಂಕ್ಷೆ ಯೋಜನೆಗೆ ಶನಿವಾರ ಮತ್ತೊಮ್ಮೆ ಅಡ್ಡಿ ಎದುರಾಯಿತು. ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ. ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್‌ ಅನ್ನು ಉಡಾವಣೆ ಮಾಡಲಾಯಿತು.

ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ Read More »

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವನೆ ಮಾಡಲು ಹಣ ಸಿಗಲಿಲ್ಲ ಎಂಬ ಕೋಪದಲ್ಲಿ ವ್ಯಕ್ತಿ ತನ್ನ ಒಂದು ವರ್ಷದ ಮಗಳನ್ನು ಬಾವಿಗೆ ಎಸೆದು ಕೊಲೆ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಹತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಖೇಮಚಂದ್ ಎಂಬಾತನೇ ಈ ಕೃತ್ಯ ಎಸೆದ ಪಾಪಿ ತಂದೆ. ಆರೋಪಿ ಖೇಮಚಂದ್ ಮದ್ಯ ಕುಡಿಯಲು ಹಣಬೇಕೆಂದು ತನ್ನ ಹೆಂಡತಿಯಲ್ಲಿ ಕೇಳಿದನು. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದರಿಂದ ಇಬ್ಬರ ನಡುವೆ ಜಗಳವಾಗಿತ್ತು. ಇದೇ ಸಿಟ್ಟಿನಲ್ಲಿ ಖೇಮಚಂದ್ ತನ್ನ ಒಂದು ವರ್ಷದ

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ Read More »

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ

ಸಮಗ್ರ ನ್ಯೂಸ್ : ಸದಾ ಹಾಟ್ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಇದೀಗ ಲಂಗಾ ದಾವಣಿಯಲ್ಲಿ ಕಾಣಿಸುಕೊಂಡು ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ. ಸಿನೆಮಾಗಳ ಶೂಟಿಂಗ್ ಗೆ ಬ್ರೇಕ್ ಹಾಕಿ ತಿರುಪತಿ ತಿರುಮಲಕ್ಕೆ ಭೇಟಿ ನೀಡಿದ ಜಾನ್ವಿ ಕಪೂರ್ ಪಕ್ಕಾ ತೆಲುಗು ಹುಡುಗಿಯಂತೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಭಾರತದ ಮೊದಲ ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಚಿತ್ರೀಕರಣ ಬ್ರೇಕ್ ನೀಡಿ,ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ,

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ Read More »

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ

ಸಮಗ್ರ ನ್ಯೂಸ್:  ಶನಿವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನೇಪಾಳಿ ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವರದಿ ಪ್ರಕಾರ, 60 ನೇಪಾಳದ ವಲಸೆ ಕಾರ್ಮಿಕರನ್ನು ಹೊತ್ತ ಸ್ಲೀಪರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂಗುಪುರ ಗ್ರಾಮದಲ್ಲಿ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ಬಸ್ಸಿನ ಚಾಲಕ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ವೇಳೆ

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ Read More »