ದೇಶ-ವಿದೇಶ

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಯ ನ್ಯಾಯಾಲಯಕ್ಕೆ ಭಾರತ ಮೂಲದ ಅಮೆರಿಕದ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನಾಮನಿರ್ದೇಶನ ಮಾಡಿದ್ದಾರೆ. ಶ್ವೇತಭವನದ ವರದಿಯ ಪ್ರಕಾರ, ಅಧ್ಯಕ್ಷ ಬೈಡನ್ ಅವರು ಇನ್ನಿತರ ನ್ಯಾಯಾಧೀಶರ ನೇಮಕವನ್ನೂ ಮಾಡಿದ್ದಾರೆ. ಆದರೆ ಈ ಮಾಹಿತಿಯನ್ನು ಸೆನೆಟ್ ಇನ್ನೂ ಬಹಿರಂಗಪಡಿಸಿಲ್ಲ. ಇದು ದೃಢಪಟ್ಟಲ್ಲಿ. ಸುಬ್ರಮಣಿಯನ್ ಅವರು ಅಮೆರಿಕದ ಜಿಲ್ಲಾ ನ್ಯಾಯಾಧೀಶರಾಗಿ ನೇಮಕವಾಗುವ ದಕ್ಷಿಣ ಏಷ್ಯಾ ರಾಷ್ಟ್ರದ ಮೊದಲ ವ್ಯಕ್ತಿಯಾಗಲಿದ್ದಾರೆ. ಸುಬ್ರಮಣಿಯನ್ ಅವರು 2001 ರಲ್ಲಿ ಕೇಸ್ ವೆಸ್ಟರ್ನ್ ರಿಸರ್ವ್ […]

ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಭಾರತ ಮೂಲದ ಅರುಣ್ ಸುಬ್ರಮಣಿಯನ್ ನಾಮನಿರ್ದೇಶನ Read More »

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬರೆದ ಚೆಕ್ಕನ್ನು ಅಮಾನ್ಯ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ. ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆ(Account)ಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಕ್ಕಾಗಿ, ಜಿಲ್ಲಾ ಗ್ರಾಹಕರ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ Read More »

1.43 ಕೋಟಿ ರೂ. ಮೌಲ್ಯದ ಕರೆನ್ಸಿಗಳಿಂದ ತಯಾರಾದ ಗಣೇಶ ಮಂಟಪ; ಸೋಶಿಯಲ್ ಮೀಡಿಯಾ ದಲ್ಲಿ ವೈರಲ್

ಸಮಗ್ರ ನ್ಯೂಸ್ : ವಾರಂಗಲ್‌ನಲ್ಲಿ ಗಣೇಶ ಮಂಟಪವನ್ನು ನೋಟುಗಳಿಂದ ಅಲಂಕರಿಸಿದ್ದಾರೆ.ಗಣೇಶ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ವಾರಂಗಲ್ ನಗರದ ವಿನಾಯಕ ಟ್ರಸ್ಟ್ ಭವನದ ಆಶ್ರಯದಲ್ಲಿ ನಡೆದ ಗಣೇಶ ನವರಾತ್ರಿ ಆಚರಣೆ ವಿಶೇಷ. ಇಲ್ಲಿನ ಗಣೇಶ ಮಂಟಪವನ್ನು ಭಕ್ತರು ಬಣ್ಣ ಬಣ್ಣದ ನೋಟುಗಳಿಂದ ಅಲಂಕರಿಸಿದ್ದಾರೆ.  ಒಂದು ಕೋಟಿ ನಲವತ್ಮೂರು ಲಕ್ಷ ರೂಪಾಯಿಗಳ ಕರೆನ್ಸಿ ನೋಟುಗಳಿಂದ ವಿಶೇಷವಾಗಿ ಅಲಂಕರಿಸಿದ್ದರು. ವಿನಾಯಕ ಟ್ರಸ್ಟ್ ಭವನದ 108 ಸದಸ್ಯರು ಗಣಪತಿಯನ್ನು ಲಕ್ಷ್ಮಿ ಗಣಪತಿಯನ್ನಾಗಿ ಬದಲಾಯಿಸಿದರು. ಸ್ವಾಮಿ ಅವರ ಅಲಂಕಾರಕ್ಕೆ ಬೇಕಾದ ಹಣವನ್ನು ಸಂಗ್ರಹಿಸಿ ವಿನಾಯಕ

1.43 ಕೋಟಿ ರೂ. ಮೌಲ್ಯದ ಕರೆನ್ಸಿಗಳಿಂದ ತಯಾರಾದ ಗಣೇಶ ಮಂಟಪ; ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ Read More »

ರಾಜೀವ್ ಗಾಂಧಿ ಅವರ ಸ್ಮಾರಕದಲ್ಲಿ ಸಸಿ ನೆಟ್ಟು ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ

ಚೆನ್ನೈ: ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು. ಜೋಡೋ ಭಾರತ್‌ ಯಾತ್ರೆ ಚಾಲನೆ ಹಿನ್ನೆಲೆ ನಿನ್ನೆ ರಾತ್ರಿ ಇಲ್ಲಿಗೆ ಆಗಮಿಸಿದ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮೊದಲು ರಾಜೀವ ಗಾಂಧಿ ಸ್ಮಾರಕ ಸ್ಥಳದಲ್ಲಿ ರಾಹುಲ್ ಸಸಿ ನೆಟ್ಟರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ತಮಿಳುನಾಡು ಕಾಂಗ್ರೆಸ್ ಕಮಿಟಿ ಮುಖ್ಯಸ್ಥ ಕೆ.ಎಸ್.ಅಳಗಿರಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಜೊತೆಗಿದ್ದರು. ಮೇ 21, 1991 ರಂದು

ರಾಜೀವ್ ಗಾಂಧಿ ಅವರ ಸ್ಮಾರಕದಲ್ಲಿ ಸಸಿ ನೆಟ್ಟು ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ Read More »

ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ

ಸಮಗ್ರ ನ್ಯೂಸ್: ಮೂರೂವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿದ ಘಟನೆಯೊಂದು ಪಂಜಾಬ್ ನಲ್ಲಿ ನಡೆದಿದೆ. ಪತಿಯೊಂದಿಗೆ ಭಿನ್ನಾಭಿಪ್ರಾಯಗಳಿದ್ದ ಕಾರಣ ಮಹಿಳೆ ತವರಿನಲ್ಲಿ ಕಳೆದ ಎರಡು ವರ್ಷಗಳಿಂದ ವಾಸ್ತವ್ಯವಿದ್ದಳು. ಕೌಟುಂಬಿಕ ಕಲಹದಿಂದಾಗಿ ಆಕೆ ಖಿನ್ನತೆಗೊಳಗಾಗಿದ್ದಳು. ಇದೀಗ ಮಗು ಒಂದೇ ಸಮ ಅಳುತ್ತಿದ್ದುದನ್ನು ನೋಡಿ ಹತಾಶೆಯಿಂದ ಬೆಂಕಿ ಹಚ್ಚಿದ್ದಾಳೆ. ಇದೀಗ ಮಗು ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ತಾಯಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೂರುವರೆ ವರ್ಷದ ಮಗುವಿಗೆ ಬೆಂಕಿ ಹಚ್ಚಿ ಅಮಾನವೀಯ ಕೃತ್ಯ ಎಸಗಿದ ತಾಯಿ Read More »

ಇಂದು(ಸೆ.7) NEET ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶ ಇಂದು(ಸೆ.7) ಪ್ರಕಟವಾಗಲಿದೆ ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಇದಕ್ಕಾಗಿ neet.nta.nic.in ಗೆ ಭೇಟಿ ನೀಡಬೇಕಾಗುತ್ತದೆ. ತಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. ಜುಲೈ 17ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆಯಲು 18 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ. ತಾತ್ಕಾಲಿಕ ಕೀ ಉತ್ತರಗಳನ್ನು

ಇಂದು(ಸೆ.7) NEET ಫಲಿತಾಂಶ ಪ್ರಕಟ Read More »

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್|

ಸಮಗ್ರ ನ್ಯೂಸ್: ಉದ್ಯಮ ಕ್ಷೇತ್ರದ ದೈತ್ಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಮೇಲೆ ಕಣ್ಣು ಹಾಕಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್ ಕಣ್ಣಿಗೆ ಬಿದ್ದಿದ್ದು,ಬಹುಕೋಟಿ ಆಫರ್ ಕೂಡಾ ಮಾಡಿದೆ. ಆದರೆ ಪುತ್ತೂರಿನ ಕಂಪನಿ ಮಾತ್ರ ಅಂಬಾನಿಯ ಆಫರ್ ಆನ್ನು ನಯವಾಗಿ ತಿರಸ್ಕರಿಸಿದ್ದು, ಕಂಪನಿ ಬೆಳೆಸುವ ಉದ್ದೇಶ ವ್ಯಕ್ತಪಡಿಸಿದೆ. ಮಾರಾಟ ಮಾಡುವ ಉದ್ದೇಶ ಖಂಡಿತಾ ಇಲ್ಲವೆಂದು ನೇರವಾಗಿ

‘ಬಿಂದು’ ಮೇಲೆ ಕಣ್ಣುಹಾಕಿದ ಅಂಬಾನಿ| ಎಸ್ ಜಿ ಗ್ರೂಪ್ ಗೆ ಬಹುಕೋಟಿ ಆಫರ್ ನೀಡಿದ ರಿಲಯನ್ಸ್| Read More »

ಬ್ರಿಟನ್ ಪ್ರಧಾನಿಯಾಗಿ ಲಿಝ್ ಟ್ರೂಸ್ ಆಯ್ಕೆ| ರಿಷಿ ಸುನಕ್ ಗೆ ಸೋಲು

ಸಮಗ್ರ ನ್ಯೂಸ್: ಬ್ರಿಟನ್ ನ ಪ್ರಧಾನಿ ಹುದ್ದೆಗೆ ಮಾಜಿ ಸಚಿವರಾದ ರಿಷಿ ಸುನಾಕ್ ಮತ್ತು ಲಿಝ್ ಟ್ರೂಸ್ ಮಧ್ಯೆ ಕಳೆದ ಕೆಲ ದಿನಗಳಿಂದ ನಡೆದ ತುರುಸಿನ ಪೈಪೋಟಿ ಅಂತ್ಯಗೊಂಡಿದ್ದು, ಲಿಝ್ ಟ್ರೂಸ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಮೂಲದ ರಿಷಿ ಸುನಕ್ ಅವರಿಗೆ ಹಿನ್ನಡೆಯಾಗಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಹುದ್ದೆಗೆ ಕನ್ಸರ್ವೇಟಿವ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ದೇಶದಾದ್ಯಂತ ಸುಮಾರು 2 ಲಕ್ಷ ಕನ್ಸರ್ವೇಟಿವ್ ಪಕ್ಷದ ಸದಸ್ಯರು ಅಂಚೆಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು

ಬ್ರಿಟನ್ ಪ್ರಧಾನಿಯಾಗಿ ಲಿಝ್ ಟ್ರೂಸ್ ಆಯ್ಕೆ| ರಿಷಿ ಸುನಕ್ ಗೆ ಸೋಲು Read More »

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು

ಸಮಗ್ರ ನ್ಯೂಸ್ : ತಮ್ಮ ಮಗುವಿಗೆ ದಂಪತಿಗಳು ಭಾರತೀಯ ಖಾದ್ಯಗಳಲ್ಲಿ ಒಂದಾದ ಪಕೋಡ ಎಂಬ ಹೆಸರಿಟ್ಟು ಅಚ್ಚರಿ ಮೂಡಿಸಿದ್ದಾರೆ. ಇಂಥದೊಂದು ಘಟನೆ ಯುಕೆಯಲ್ಲಿ ನಡೆದಿದೆ. ಐರ್ಲೆಂಡ್ ನ ಪ್ರಖ್ಯಾತ ರೆಸ್ಟೋರೆಂಟ್ ನ್ಯೂ ಟೌನ್ ಅಬ್ಬೆ ಈ ವಿಚಾರವನ್ನು ಸೋಷಿಯಲ್‌ ಮಿಡಿಯಾ ದಲ್ಲಿ ಹಂಚಿಕೊಂಡಿದ್ದು, ಈ ರೆಸ್ಟೋರೆಂಟ್ ಗೆ ನಿತ್ಯವೂ ಭೇಟಿ ನೀಡುತ್ತಿದ್ದ ದಂಪತಿ ಅಲ್ಲಿನ ನೆಚ್ಚಿನ ಖಾದ್ಯ ಪಕೋಡ ಹೆಸರನ್ನೇ ತಮ್ಮ ಮಗುವಿಗೆ ಇಟ್ಟಿದ್ದಾರೆ. ಇವರು ಭೇಟಿ ನೀಡಿದಾಗೆಲ್ಲ ಪಕೋಡ ಹೆಸರಿನಿಂದ ಕರೆಯಲಾಗುವ ಖಾದ್ಯಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರಂತೆ.

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು Read More »