ದೇಶ-ವಿದೇಶ

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಂಜಿನಿಯರ್ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಭುವನೇಶ್ವರದಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಪ್ರೇಮ ವೈಫಲ್ಯದ ಬಗ್ಗೆ ಬರೆಯಲಾಗಿದೆ‌. ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಸ್ವತಃ ಉಸಿರು ಕಟ್ಟಿಸಿಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಘಟನೆ ಬಗ್ಗೆ ಈಕೆಯ ಪ್ರಿಯಕರ‌ ಸೌಮ್ಯಜಿತ್ ಮೇಲೆ‌ ಕುಟುಂಬಸ್ಥರು ದೂರು‌ ದಾಖಲಿಸಿದ್ದಾರೆ. ಶ್ವೇತಾ ಭುವನೇಶ್ವರದ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದರು. ಸೌಮ್ಯಜಿತ್ ನನ್ನು ಪ್ರೀತಿಸುತ್ತಿದ್ದು, ಆತ ಇದನ್ನೇ‌ ಬಂಡವಾಳವಾಗಿ ಬಳಸಿ ಆಕೆಯ ಖಾಸಗಿ ಚಿತ್ರ ತೆಗೆದು ಹಣಕ್ಕಾಗಿ […]

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »

50 ಅಡಿ ಕೆಳಗೆ ಕುಸಿದ ಮನೆ; ಮನೆ ಸದಸ್ಯರು ಪಾರು

ಸಮಗ್ರ ನ್ಯೂಸ್ : ಮನೆಯೊಂದು 50 ಅಡಿ ಕೆಳಗೆ ಕುಸಿದಿರುವ ಘಟನೆಯೊಂದು ಚಂದ್ರಾಪುರದ ಘುಗೂಸ್ ಪ್ರದೇಶದಲ್ಲಿ ನಡೆದಿದೆ. ಕುಟುಂಬ ಸದಸ್ಯರು ಮನೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಒಂದು ಸಣ್ಣ ಹೊಂಡ ಬಿದ್ದಿತು. ಬಳಿಕ ವೇಗವಾಗಿ ಮಣ್ಣು ಕುಸಿಯಲಾರಂಭಿಸಿತು. ಏನೋ ಅನಾಹುತ ಸಂಭವಿಸಲಿದೆ ಎಂದು ತಿಳಿದ ಮನೆಯ ಸದಸ್ಯರು ಹೊರ ಬಂದಿದ್ದು, ಕ್ಷಣಾರ್ಧದಲ್ಲಿ ಮನೆ ನೆಲಕ್ಕುರುಳಿದೆ. ಈ ಪ್ರದೇಶದಲ್ಲಿ ಬ್ರಿಟಿಷರ ಕಾಲದಲ್ಲಿ ಕಲ್ಲಿದ್ದಲು ಗಣಿ ಇತ್ತು ಎನ್ನಲಾಗುತ್ತಿದೆ. ಇದೀಗ ಒಂದು ಮನೆ ನೆಲಕ್ಕುರುಳಿರುವುದರಿಂದ ಈ ಭಾಗದ ನಾಗರಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇನ್ನೂ ಕೆಲವರನ್ನು

50 ಅಡಿ ಕೆಳಗೆ ಕುಸಿದ ಮನೆ; ಮನೆ ಸದಸ್ಯರು ಪಾರು Read More »

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಇಂದು(ಆ.27) ನ್ಯಾಯಮೂರ್ತಿ ಯು.ಯು ಲಲಿತ್ ಅವರು ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉದಯ್ ಉಮೇಶ್ ಲಲಿತ್ ಅವರ ಇಡೀ ಕುಟುಂಬವೇ ವಕೀಲರು ಮತ್ತು ನ್ಯಾಯಮೂರ್ತಿಗಳ ಕುಟುಂಬವಾಗಿದೆ. ಮಹಾರಾಷ್ಟ್ರದ ಯುಯು ಲಲಿತ್ ಅವರ ಕುಟುಂಬಕ್ಕೆ 102 ವರ್ಷ. ಅವರ ಅಜ್ಜ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುಂಚೆಯೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ಇಂದು ನ್ಯಾಯಮೂರ್ತಿ ಯುಯು ಲಲಿತ್ ಸಿಜೆಐ ಆಗಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು ಲಲಿತ್ ಪ್ರಮಾಣವಚನ ಸ್ವೀಕಾರ Read More »

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ

ಸಮಗ್ರ ನ್ಯೂಸ್: ಇ-ಬೈಕ್ ಪ್ರಾಜೆಕ್ಟ್‌ನ ಮುಖ್ಯ ಪರಿಕಲ್ಪನೆಯಲ್ಲಿ ಡ್ಯುಯಲ್ ಮೋಟಾರ್ ಅನ್ನು ಬಳಸಿಕೊಂಡು ಎಲೆಕ್ಟ್ರಿಕ್ ಬೈಕ್‌ನ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದಕ್ಕಾಗಿ ಮಂಗಳೂರಿನ ಕೆಪಿಟಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಡ್ಯುಯಲ್ ಮೋಟಾರ್ ಇ ಬೈಕ್ ಅನ್ನು ಆವಿಷ್ಕಾರ ಮಾಡಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಹಬ್-ಮೋಟಾರ್ ಮತ್ತು ಮಿಡ್-ಡ್ರೈವ್ ಮೋಟರ್ ಹಬ್ ಮೋಟಾರ್ 30 % ಶಕ್ತಿಯನ್ನು ಹೊಂದಿದೆ ಆದರೆ ಮಧ್ಯದಲ್ಲಿ – ಡ್ರೈವ್ ಮೋಟಾರ್ 70% ಶಕ್ತಿ ಸಾಮರ್ಥ್ಯವನ್ನು ಹೊಂದಿದೆ. ಎರಡೂ ಮೋಟಾರುಗಳನ್ನು ನಿಯಂತ್ರಕಗಳಿಂದ ನಿರ್ವಹಿಸಲಾಗುತ್ತದೆ. ಡ್ಯುಯಲ್ ಮೋಟಾರ್

ಮಂಗಳೂರು: ಕೆಪಿಟಿ ವಿದ್ಯಾರ್ಥಿಗಳಿಂದ ಡ್ಯುಯಲ್ ಮೋಟಾರ್ ಇ ಬೈಕ್ ಆವಿಷ್ಕಾರ Read More »

ಮೂರು ಅಂತಸ್ತಿನ‌ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ,5ಮಂದಿ ಸಾವು, 7ಮಂದಿಗೆ ಗಾಯ

ಸಮಗ್ರ ನ್ಯೂಸ್: ಒಂದೇ ಕುಟುಂಬದ ಸದಸ್ಯರು ವಾಸಿಸುತ್ತಿದ್ದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 5ಮಂದಿ ಸಜೀವ ದಹನವಾಗಿರುವ ಘಟನೆಯೊಂದು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯನ್ನು ಹತೋಟಿಗೆ

ಮೂರು ಅಂತಸ್ತಿನ‌ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ,5ಮಂದಿ ಸಾವು, 7ಮಂದಿಗೆ ಗಾಯ Read More »

ಬಿದ್ದು ಗಂಭೀರ ಗಾಯಗೊಂಡಿದ್ದ16 ತಿಂಗಳ ಮಗು ಮೃತ್ಯು; ಸಾವಿನಲ್ಲೂ ಮಗುವಿನ ಅಂಗಾಂಗ ದಾನ

ಸಮಗ್ರ ನ್ಯೂಸ್: ಮಗುವೊಂದು ಬಿದ್ದು ಮೆದುಳು ನಿಷ್ಕ್ರಿಯಗೊಂಡ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಹೀಗಾಗಿ ಮಗುವಿನ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಖಾಸಗಿ ಗುತ್ತಿಗೆದಾರ ಉಪಿಂದರ್‍ ಎಂಬವರ 16 ತಿಂಗಳ ಮಗು ರಿಶಾಂತ್, ಪುಟ್ಟ ಪುಟ್ಟ ಹೆಜ್ಜೆ ಇಡುತ್ತಿದ್ದ ವೇಳೆ ಆಗಸ್ಟ್ 17ರಂದು ಬಿದ್ದು ಗಂಭೀರ ಗಾಯಗೊಂಡಿದ್ದನು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗುವಿನ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ತಿಳಿಸಿದರು. ಮಗುವಿನ ಅಂಗಾಂಗ ದಾನ ಮಾಡಿದರೆ ಹಲವರ ಜೀವಕ್ಕೆ ಬೆಳಕಾಗುತ್ತದೆ ಎಂದು

ಬಿದ್ದು ಗಂಭೀರ ಗಾಯಗೊಂಡಿದ್ದ16 ತಿಂಗಳ ಮಗು ಮೃತ್ಯು; ಸಾವಿನಲ್ಲೂ ಮಗುವಿನ ಅಂಗಾಂಗ ದಾನ Read More »

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ

ಸಮಗ್ರ ನ್ಯೂಸ್: ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ಹಳಿ ಮೇಲೆ

ಕರಾವಳಿಯಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು| ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನ Read More »

ವಾಟ್ಸ್‌ಆಯಪ್‌ ನಲ್ಲಿ ಈಗ ಮತ್ತೊಂದು ಹೊಸ ಫೀಚರ್ ! ಚಾಟ್ ಮಾಡಲು ಈಗ ಹೊಸ ವೈಶಿಷ್ಟ್ಯ

ವಾಟ್ಸ್‌ಆಯಪ್‌ ಈಗ ಮತ್ತೊಂದು ಹೊಸ ಫೀಚರ್‌ ಪರಿಚಯಿಸಲು ಮುಂದಾಗಿದೆ.ಅದೇನೆಂದರೆ, ಇನ್ನು ಮುಂದೆ ಬಳಕೆದಾರರು ತಮ್ಮ ಸ್ನೇಹಿತರು ಹಾಗೂ ಸಂಪರ್ಕಿತರ ಸ್ಟೇಟಸ್‌ಗಳನ್ನು ನೇರವಾಗಿ ಚಾಟ್‌ ಲಿಸ್ಟ್‌ನಲ್ಲೇ ನೋಡಬಹುದು! ವಾಟ್ಸ್​ಆಯಪ್​ನ ಚಾಟ್ ಲೀಸ್ಟ್​ನಲ್ಲಿರುವ ಹೊಸ ವೈಶಿಷ್ಟ್ಯವು ಇನ್​ಸ್ಟಾಗ್ರಾಂನಲ್ಲಿನ ಸ್ಟೇಟಸ್​ಗಳಿಗೆ ಹೋಲುತ್ತದೆ.ಪ್ರಸ್ತುತ ನೀವು ನಿಮ್ಮ ಸ್ನೇಹಿತರ ವಾಟ್ಸ್‌ಆಯಪ್‌ ಸ್ಟೇಟಸ್‌ ನೋಡಬೇಕೆಂದರೆ, “ಸ್ಟೇಟಸ್‌’ ಎಂಬ ಪ್ರತ್ಯೇಕ ವಿಭಾಗಕ್ಕೆ ಹೋಗಿ ವೀಕ್ಷಿಸಬೇಕಾಗುತ್ತದೆ. ಆದರೆ, ಇನ್ನು ಮುಂದೆ ಸ್ನೇಹಿತರ ಪ್ರೊಫೈಲ್‌ ಫೋಟೋವನ್ನು ಕ್ಲಿಕ್‌ ಮಾಡಿದರೆ ಸಾಕು, ಅವರ “ಸ್ಟೇಟಸ್‌’ ಕಾಣಿಸಿಕೊಳ್ಳುತ್ತದೆ. ಸದ್ಯಕ್ಕೆ ಆಂಡ್ರಾಯ್ಡ ಪ್ಲಾಟ್‌ಫಾರಂನಲ್ಲಿ ಈ

ವಾಟ್ಸ್‌ಆಯಪ್‌ ನಲ್ಲಿ ಈಗ ಮತ್ತೊಂದು ಹೊಸ ಫೀಚರ್ ! ಚಾಟ್ ಮಾಡಲು ಈಗ ಹೊಸ ವೈಶಿಷ್ಟ್ಯ Read More »

8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ

ಸಮಗ್ರ ನ್ಯೂಸ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಮಂಗಳವಾರ ತನ್ನ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆಯೊಂದು ನಡೆದಿದ್ದು, ಇದೀಗ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ ಜಿಲ್ಲಾ ಪೊಲೀಸ್ ಲೈನ್‌ನಲ್ಲಿ ನಿಯೋಜಿತರಾಗಿರುವ ಎಸ್‌ಪಿಒ ಮೋಹನ್ ಲಾಲ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಮೃತ ಮಹಿಳೆಯನ್ನು ಆಶಾದೇವಿ (32) ಎಂದು ಗುರುತಿಸಲಾಗಿದೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಸಹ ಇದ್ದು, ಬಿಲ್ಲವರ್ ಪ್ರದೇಶದ ಧರಾಲ್ಟಾ ಗ್ರಾಮದ ನಿವಾಸಿಯಾಗಿದ್ದಾರೆ.

8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ Read More »

ಆಮೆರಿಕದಲ್ಲಿ ಗಿನ್ನಿಸ್ ದಾಖಲೆ ಪುಟ ಸೇರಿದ  ಭಗವದ್ಗೀತೆ ಪಠಣ

ಸಮಗ್ರ ನ್ಯೂಸ್ : ಧರ್ಮಗ್ರಂಥ ಭಗವದ್ಗೀತೆಯ ಎಲ್ಲ 700 ಶ್ಲೋಕಗಳನ್ನು ಕಂಠಪಾಠ ಮಾಡಿ, ಅದನ್ನು 2,200ಕ್ಕೂ ಹೆಚ್ಚು ಜನರು ಸಾಮೂಹಿಕವಾಗಿ ಹೇಳುವ ಜಾಗತಿಕ ಕಾರ್ಯಕ್ರಮ ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್‌ನಲ್ಲಿ ಜರುಗಿತು. ಈ ಗೀತೆ ಗಾಯನ ಗಿನ್ನೆಸ್ ದಾಖಲೆ ಪುಟ ಸೇರಿದೆ. ಮೈಸೂರಿನ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಇತ್ತೀಚೆಗೆ ಈ ಅಭೂತಪೂರ್ವ ಕಾರ್ಯಕ್ರಮ ನಡೆದಿದೆ. ಜಗತ್ತಿನ 30ಕ್ಕೂ ಅಧಿಕ ದೇಶಗಳ ಜನರು ಈ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಆಮೆರಿಕದಲ್ಲಿ ಗಿನ್ನಿಸ್ ದಾಖಲೆ ಪುಟ ಸೇರಿದ  ಭಗವದ್ಗೀತೆ ಪಠಣ Read More »