ದೇಶ-ವಿದೇಶ

ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ| ಪೆಹಲ್ಗಾಮ್ ದಾಳಿಗೆ ನಮೋ ಕೆಂಡಾಮಂಡಲ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಇಲ್ಲಿಯವರೆಗೂ ಯೋಧರು ಹಾಗೂ ಸರ್ಕಾರಿ ಉದ್ಯೋಗಿಗಳ ಮೇಲೆ ಭಯೋತ್ಪಾದಕರು ದಾಳಿ ಮಾಡುತ್ತಿದ್ದರು. ಈ ಬಾರಿ ಪ್ರವಾಸಿಗರ ಮೇಲೆ ಟೆರರಿಸ್ಟ್‌ ದಾಳಿ ನಡೆದಿದ್ದು, ಇದರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ರಾವ್‌ ಸಾವು ಕಂಡಿದ್ದಾರೆ. ಘಟನೆಯಲ್ಲಿ 20ಕ್ಕೂ ಅಧಿಕ ಪ್ರವಾಸಿಗರು ಹಾಗೂ ಸ್ಥಳೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಬಹುದು ಎನ್ನುವ ಸೂಚನೆಗಳೂ ಸಿಕ್ಕಿವೆ. ಈ ನಡುವೆ ಸೌದಿ ಅರೇಬಿಯಾ […]

ಯಾರನ್ನೂ ಸುಮ್ಮನೆ ಬಿಡೋ ಮಾತೇ ಇಲ್ಲ| ಪೆಹಲ್ಗಾಮ್ ದಾಳಿಗೆ ನಮೋ ಕೆಂಡಾಮಂಡಲ Read More »

ಪಹಲ್ಗಾಮ್ ಉಗ್ರ ದಾಳಿ ಪ್ರಕರಣ| ಮೃತರ ಸಂಖ್ಯೆ 27ಕ್ಕೆ ಏರಿಕೆ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪಹಲ್ಗಮ್‌ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ ಇವರ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತವಾಗಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ್ದ 27ಕ್ಕೂ ಹೆಚ್ಚು ಪ್ರವಾಸಿಗರು ಸಾಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಪಹಲ್ಗಾಮ್ ಉಗ್ರ ದಾಳಿ ಪ್ರಕರಣ| ಮೃತರ ಸಂಖ್ಯೆ 27ಕ್ಕೆ ಏರಿಕೆ Read More »

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ | ಪಹಲ್ಗಾಮ್ ದಾಳಿ ನಡೆಸಿರೋರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ – ಅಮಿತ್ ಶಾ ಕಿಡಿ

ಸಮಗ್ರ ನ್ಯೂಸ್: ಜಮ್ಮು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರವಾಣಿಯಲ್ಲಿ ಕರೆ ಮಾಡಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಇಂದು ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ 12 ಜನರಿಗೆ ಗಾಯಗಳಾಗಿದ್ದು, ಓರ್ವ ಪ್ರವಾಸಿಗ ಮೃತಪಟ್ಟಿದ್ದಾರೆ. ಮೃತರಾದ ವ್ಯಕ್ತಿ ಶಿವಮೊಗ್ಗದವರು ಎಂದು ತಿಳಿದುಬಂದಿದೆ. ಕಾಶ್ಮೀರದ ಸೌಂದರ್ಯ ಸವಿಯಲು ತೆರಳಿದವರಿಗೆ ಈ ದಿನ ಅವರ ಜೀವನದ ಅತ್ಯಂತ ಕೆಟ್ಟ ದಿನವಾಗಿ ಪರಿವರ್ತನೆಯಾಗಿದೆ. ಈ ಘಟನೆಯ ಬಗ್ಗೆ

‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು’ | ಪಹಲ್ಗಾಮ್ ದಾಳಿ ನಡೆಸಿರೋರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ – ಅಮಿತ್ ಶಾ ಕಿಡಿ Read More »

ಲಕ್ಷ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ದರ| ಬಂಗಾರ ಕೊಳ್ಳುವ ಆಸೆ ಬಿಟ್ಬಿಡಿ…

ಸಮಗ್ರ ನ್ಯೂಸ್: ಚೀನಿವಾರ ಪೇಟೆಯಲ್ಲಿ ಇಂದು ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. 10 ಗ್ರಾಂ ಚಿನ್ನದ ದರ ಬರೋಬ್ಬರಿ 1 ಲಕ್ಷ ರೂ. ತಲುಪುವ ಮೂಲಕ ಐತಿಹಾಸಿಕ ದಾಖಲೆ ಬರೆದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ತೆರಿಗೆ ಸಮರ ಬಂಗಾರದ ಬೆಲೆಯನ್ನು ಹಿಂದೆಂದಿಗಿಂತಲೂ ಹೆಚ್ಚಿನ ಮೌಲ್ಯ ದಾಖಲಿಸುವಂತೆ ಮಾಡಿದೆ. ಹೂಡಿಕೆದಾರರು ಬಂಗಾರದ ಮೇಲೆ ಅಪಾರ ಒಲವು ತೋರುತ್ತಿರುವುದೇ ಈ ದಾಖಲೆಯ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಇದರೊಟ್ಟಿಗೆ ಅಕ್ಷಯ ತೃತೀಯ, ಮದುವೆ ಸೇರಿದಂತೆ ಶುಭಸಮಾರಂಬಗಳಿಗೆ ಬಂಗಾರ ಖರೀದಿ

ಲಕ್ಷ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ದರ| ಬಂಗಾರ ಕೊಳ್ಳುವ ಆಸೆ ಬಿಟ್ಬಿಡಿ… Read More »

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪಹಲ್ಗಾಮ್ ನಲ್ಲಿ ನಡೆದಿದೆ. ಕಾಲ್ನಡಿಗೆ ಮೂಲಕ ಪಹಲ್ಗಾಮ್ ಪ್ರದೇಶಕ್ಕೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನೆ ಸಮವಸ್ತ್ರದಲ್ಲಿ ಬಂದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ೧೨ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿ ಬೆನ್ನಲ್ಲೇ ಪಹಲ್ಗಾಮ್ ಪ್ರದೆಶವನ್ನು ಸೇನೆ ಸುತ್ತುವರೆದಿದ್ದು, ಉಗ್ರರ

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ Read More »

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ

ಸಮಗ್ರ ನ್ಯೂಸ್‌: ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾವು ಪರಿಚಯಿಸಿದ್ದು, ಇದರಿಂದಾಗಿ ಬರೀ ಒಂದು ನಿಮಿಷದಲ್ಲಿಯೇ ಎರಡು ಗಂಟೆ ಅವಧಿಯ ಸಿನಿಮಾವನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಚೀನಾ ಹಾಗೂ ಹುವೈ ಯುನಿಕಾರ್ನ್ ಜೊತೆ ಜಂಟಿಯಾಗಿ 10ಜಿ 10ಜಿ ಬ್ರಾಡ್‌ಬ್ಯಾಂಡ್‌ ನೆಟ್ವರ್ಕ್ ಅನ್ನು ಚೀನಾದ ಹೆಬ್ಬೆ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಿದೆ.ಭಾರತ ಸೇರಿ ಇತರೆ ದೇಶಗಳು 100 ಎಂಬಿಪಿಎಸ್ ವೇಗದಲ್ಲಿರುವಾಗ, ಚೀನಾ ಕಂಪನಿಗಳು ಇದರಿಂದ 10 ಪಟ್ಟು ವೇಗವನ್ನು ಹೊಂದಿರುವ ಬ್ರಾಡ್‌ಬ್ಯಾಂಡ್ ನೆಟ್ವರ್ಕ್ ಅನ್ನು ಜಾರಿಗೊಳಿಸಿದೆ. 2

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ Read More »

ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ , ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ಅವರು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವ್ಯಾಟಿಕನ್ ನ್ಯೂಸ್ ಟ್ವಿಟ್ಟರ್‌ ಪೇಜ್ ಈ ವಿಚಾರವನ್ನು ಖಚಿತಪಡಿಸಿದೆ. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರ, ಏಪ್ರಿಲ್ 21, 2025 ರಂದು ತಮ್ಮ 88 ನೇ

ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ Read More »

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000

ಸಮಗ್ರ ನ್ಯೂಸ್: ಚಿನ್ನದ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ದೆಹಲಿಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 98,100 ರೂ. ತಲುಪಿದೆ. ಕೇವಲ ಒಂದೇ ದಿನದಲ್ಲಿ, ಬುಧವಾರ 10 ಗ್ರಾಂಗೆ 1,650 ರೂ. ಏರಿಕೆಯಾಗಿದ್ದು, ಮಂಗಳವಾರ ಇದ್ದ 96,450 ರೂ.ನಿಂದ ಈ ಗಮನಾರ್ಹ ಜಿಗಿತ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಗಗನಕ್ಕೇರಿದೆ. ಬುಧವಾರ 1 ಕೆಜಿ ಬೆಳ್ಳಿಯ ಬೆಲೆ 99,400 ರೂ. ತಲುಪಿದ್ದು, ಒಂದೇ ದಿನದಲ್ಲಿ 1,900 ರೂ. ಏರಿಕೆ ಕಂಡಿದೆ. ಮಾರುಕಟ್ಟೆ

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000 Read More »

ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ

ಸಮಗ್ರ ನ್ಯೂಸ್: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ಕಾಯ್ದೆಯ ನಿಯಮವನ್ನು ಪ್ರಶ್ನಿಸಿತು. “ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್‌ಗೆ ರೂಪಿಸಲಾಗಿರುವ ನಿಯಮಗಳ

ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ Read More »

ಮದುವೆಯ ಬಳಿಕ‌ ಒಪ್ಪಿಗೆಯ ದೈಹಿಕ ಸಂಬಂಧ ಅಪರಾಧವಲ್ಲ| ಕೊಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಮದುವೆಯ ನಂತರ ಪರಸ್ಪರ ಒಪ್ಪಿಗೆಯ ದೈಹಿಕ ಸಂಬಂಧವು ಅಪರಾಧವಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿವಾಹಿತ ದಂಪತಿಗಳ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್ ಒಂದು ದೊಡ್ಡ ಹೇಳಿಕೆ ನೀಡಿದೆ. ಮದುವೆಯ ಸುಳ್ಳು ಭರವಸೆ ನೀಡಿ ತನ್ನ ಪ್ರೇಮಿ ತನ್ನ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಮಹಿಳೆಯೊಬ್ಬಳು ಆರೋಪ ಮಾಡಿದ್ದಾಳೆ. ಇಬ್ಬರೂ ಈಗಾಗಲೇ ವಿವಾಹಿತರಾಗಿದ್ದರು ಮತ್ತು ಎರಡು ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದರು. ಮಹಿಳೆಯ ಪತಿಗೆ ಈ ಸಂಬಂಧದ ಬಗ್ಗೆ ತಿಳಿದಾಗ, ಅವನು ಅವಳೊಂದಿಗೆ ವಾಸಿಸಲು

ಮದುವೆಯ ಬಳಿಕ‌ ಒಪ್ಪಿಗೆಯ ದೈಹಿಕ ಸಂಬಂಧ ಅಪರಾಧವಲ್ಲ| ಕೊಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು Read More »