ದೇಶ-ವಿದೇಶ

ಬ್ರಿಟನ್ ಪ್ರಧಾನಿಯಾಗಿ ಲಿಝ್ ಟ್ರೂಸ್ ಆಯ್ಕೆ| ರಿಷಿ ಸುನಕ್ ಗೆ ಸೋಲು

ಸಮಗ್ರ ನ್ಯೂಸ್: ಬ್ರಿಟನ್ ನ ಪ್ರಧಾನಿ ಹುದ್ದೆಗೆ ಮಾಜಿ ಸಚಿವರಾದ ರಿಷಿ ಸುನಾಕ್ ಮತ್ತು ಲಿಝ್ ಟ್ರೂಸ್ ಮಧ್ಯೆ ಕಳೆದ ಕೆಲ ದಿನಗಳಿಂದ ನಡೆದ ತುರುಸಿನ ಪೈಪೋಟಿ ಅಂತ್ಯಗೊಂಡಿದ್ದು, ಲಿಝ್ ಟ್ರೂಸ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಮೂಲದ ರಿಷಿ ಸುನಕ್ ಅವರಿಗೆ ಹಿನ್ನಡೆಯಾಗಿದೆ. ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾಗಿರುವ ಪ್ರಧಾನಿ ಹುದ್ದೆಗೆ ಕನ್ಸರ್ವೇಟಿವ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ದೇಶದಾದ್ಯಂತ ಸುಮಾರು 2 ಲಕ್ಷ ಕನ್ಸರ್ವೇಟಿವ್ ಪಕ್ಷದ ಸದಸ್ಯರು ಅಂಚೆಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು

ಬ್ರಿಟನ್ ಪ್ರಧಾನಿಯಾಗಿ ಲಿಝ್ ಟ್ರೂಸ್ ಆಯ್ಕೆ| ರಿಷಿ ಸುನಕ್ ಗೆ ಸೋಲು Read More »

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು

ಸಮಗ್ರ ನ್ಯೂಸ್ : ತಮ್ಮ ಮಗುವಿಗೆ ದಂಪತಿಗಳು ಭಾರತೀಯ ಖಾದ್ಯಗಳಲ್ಲಿ ಒಂದಾದ ಪಕೋಡ ಎಂಬ ಹೆಸರಿಟ್ಟು ಅಚ್ಚರಿ ಮೂಡಿಸಿದ್ದಾರೆ. ಇಂಥದೊಂದು ಘಟನೆ ಯುಕೆಯಲ್ಲಿ ನಡೆದಿದೆ. ಐರ್ಲೆಂಡ್ ನ ಪ್ರಖ್ಯಾತ ರೆಸ್ಟೋರೆಂಟ್ ನ್ಯೂ ಟೌನ್ ಅಬ್ಬೆ ಈ ವಿಚಾರವನ್ನು ಸೋಷಿಯಲ್‌ ಮಿಡಿಯಾ ದಲ್ಲಿ ಹಂಚಿಕೊಂಡಿದ್ದು, ಈ ರೆಸ್ಟೋರೆಂಟ್ ಗೆ ನಿತ್ಯವೂ ಭೇಟಿ ನೀಡುತ್ತಿದ್ದ ದಂಪತಿ ಅಲ್ಲಿನ ನೆಚ್ಚಿನ ಖಾದ್ಯ ಪಕೋಡ ಹೆಸರನ್ನೇ ತಮ್ಮ ಮಗುವಿಗೆ ಇಟ್ಟಿದ್ದಾರೆ. ಇವರು ಭೇಟಿ ನೀಡಿದಾಗೆಲ್ಲ ಪಕೋಡ ಹೆಸರಿನಿಂದ ಕರೆಯಲಾಗುವ ಖಾದ್ಯಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದರಂತೆ.

ಪ್ರಿಯವಾದ ಖಾದ್ಯ ಪಕೋಡ ಅದೇ ಮಗುವಿಗೆ ಹೆಸರಿಟ್ಟ ಯುಕೆ ದಂಪತಿಗಳು Read More »

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲು ಬರುವುದು ವಿಳಂಬವಾದಲ್ಲಿ ಪ್ರಯಾಣಿಕರಿಗೆ  IRCTC ಯಿಂದ ಹಲವು ಸೌಲಭ್ಯ

ನವದೆಹಲಿ : ರೈಲು ಪ್ರಯಾಣದ ವೇಳೆ ರೈಲು ಬರುವುದು ವಿಳಂಬವಾದಲ್ಲಿ IRCTCಯಿಂದ ಕೆಲವು ಸೌಲಭ್ಯ ಪಡೆದುಕೊಳ್ಳಲು ನಿಮಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿ ನೀಡಿದ್ದು, ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದೆ. ರೈಲು ತಡವಾದರೆ ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಕೆಲವು ಸೇವೆಗಳನ್ನು ಉಚಿತವಾಗಿ ನೀಡುತ್ತದೆ. ನಿಮ್ಮ ರೈಲು ನಿಗದಿತ ಸಮಯಕ್ಕಿಂತ ತಡವಾದರೆ IRCTC ನಿಮಗೆ ಆಹಾರ ಮತ್ತು ತಂಪು ಪಾನೀಯವನ್ನು ನೀಡುತ್ತದೆ . IRCTCಯಿಂದ ಈ ಆಹಾರವನ್ನು ನಿಮಗೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ.

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲು ಬರುವುದು ವಿಳಂಬವಾದಲ್ಲಿ ಪ್ರಯಾಣಿಕರಿಗೆ  IRCTC ಯಿಂದ ಹಲವು ಸೌಲಭ್ಯ Read More »

ಆರ್ಥಿಕತೆಯಲ್ಲಿ ಅತಿ ದೊಡ್ಡ ಹೆಜ್ಜೆ ಇರಿಸಿದ ಇಂಡಿಯಾ| ವಿಶ್ವದ 5ನೇ ಸ್ಥಾನಕ್ಕೆ ಭಾರತದ ಆರ್ಥಿಕತೆ

ಸಮಗ್ರ ನ್ಯೂಸ್: ಯುನೈಟೆಡ್ ಕಿಂಗ್ಡಮ್ ಹಿಂದಿಕ್ಕಿದ ಭಾರತ ವಿಶ್ವದ 5ನೇ ದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರಹೊಮ್ಮಿದೆ. 2021ರ ಹಣಕಾಸು ವರ್ಷದ ಕೊನೆಯ ಮೂರು ತೈಮಾಸಿಕದ ಜಿಡಿಪಿ ಬೆಳವಣಿಗೆಯಿಂದಾಗಿ ಭಾರತ ಯುಕೆಯನ್ನು ಹಿಂದಿಕ್ಕಿ ಐದನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿದ ದೇಶವಾಗಿ ಹೊರ ಹೊಮ್ಮಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಹೇಳಿದೆ. ಈಗಾಗಲೇ ಕೋವಿಡ್ ನೀಡಿದ ಹೊಡೆತದಿಂದ ಪಾರಾಗಲು ಹೆಣಗಾಡುತ್ತಿರುವ ಇಂಗ್ಲೆಂಡ್ಗೆ ಈ ವರದಿ ಮತ್ತಷ್ಟು ಹೊಡೆತ ನೀಡಿದೆ. ಡಾಲರ್ ವಿನಿಮಯ ದರವನ್ನು ಲೆಕ್ಕ ಹಾಕಿದಾಗ ಭಾರತೀಯ ಆರ್ಥಿಕತೆಯ

ಆರ್ಥಿಕತೆಯಲ್ಲಿ ಅತಿ ದೊಡ್ಡ ಹೆಜ್ಜೆ ಇರಿಸಿದ ಇಂಡಿಯಾ| ವಿಶ್ವದ 5ನೇ ಸ್ಥಾನಕ್ಕೆ ಭಾರತದ ಆರ್ಥಿಕತೆ Read More »

ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ

ಕೇಪ್‌ ಕ್ಯಾನವೆರಲ್‌: ಚಂದಿರನ ಅಂಗಳಕ್ಕೆ ಮನುಷ್ಯನನ್ನು ಕಳುಹಿಸಿ ಮತ್ತೊಮ್ಮೆ ಇತಿಹಾಸ ಸೃಷ್ಟಿಸುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (NASA) ಮಹತ್ವಾಕಾಂಕ್ಷೆ ಯೋಜನೆಗೆ ಶನಿವಾರ ಮತ್ತೊಮ್ಮೆ ಅಡ್ಡಿ ಎದುರಾಯಿತು. ಉಡಾವಣೆಗೆ ಸಜ್ಜಾಗಿದ್ದ 322 ಅಡಿ ಉದ್ದದ ರಾಕೆಟ್‌ನಲ್ಲಿ ಇಂಧನ ಸೋರಿಕೆಯಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಿಜ್ಞಾನಿಗಳ ತಂಡ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು. ಇಂಧನ ಸೋರಿಕೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ನಾಸಾ ತಿಳಿಸಿದೆ. ಎಂಜಿನಿಯರ್‌ಗಳು ದೋಷವನ್ನು ಸರಿಪಡಿಸಿದ ನಂತರ, ಎರಡು ಗಂಟೆ ತಡವಾಗಿ ರಾಕೆಟ್‌ ಅನ್ನು ಉಡಾವಣೆ ಮಾಡಲಾಯಿತು.

ರಾಕೆಟ್‌ನಲ್ಲಿ ಇಂಧನ ಸೋರಿಕೆ| ಎರಡು ಗಂಟೆ ತಡವಾಗಿ ಉಡಾವಣೆ Read More »

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ

ಸಮಗ್ರ ನ್ಯೂಸ್: ಮದ್ಯ ಸೇವನೆ ಮಾಡಲು ಹಣ ಸಿಗಲಿಲ್ಲ ಎಂಬ ಕೋಪದಲ್ಲಿ ವ್ಯಕ್ತಿ ತನ್ನ ಒಂದು ವರ್ಷದ ಮಗಳನ್ನು ಬಾವಿಗೆ ಎಸೆದು ಕೊಲೆ ಮಾಡಿದ ಘಟನೆಯೊಂದು ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಹತಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಖೇಮಚಂದ್ ಎಂಬಾತನೇ ಈ ಕೃತ್ಯ ಎಸೆದ ಪಾಪಿ ತಂದೆ. ಆರೋಪಿ ಖೇಮಚಂದ್ ಮದ್ಯ ಕುಡಿಯಲು ಹಣಬೇಕೆಂದು ತನ್ನ ಹೆಂಡತಿಯಲ್ಲಿ ಕೇಳಿದನು. ಆದರೆ, ಆಕೆ ಹಣವನ್ನು ನೀಡಲು ನಿರಾಕರಿಸಿದ್ದರಿಂದ ಇಬ್ಬರ ನಡುವೆ ಜಗಳವಾಗಿತ್ತು. ಇದೇ ಸಿಟ್ಟಿನಲ್ಲಿ ಖೇಮಚಂದ್ ತನ್ನ ಒಂದು ವರ್ಷದ

ಮದ್ಯ ಸೇವನೆಗೆ ಹಣ ಕೊಡಲಿಲ್ಲವೆಂದು ಒಂದು ವರ್ಷದ ಮಗುವನ್ನು ಬಾವಿಗೆ ಎಸೆದ ಪಾಪಿ ತಂದೆ Read More »

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ

ಸಮಗ್ರ ನ್ಯೂಸ್ : ಸದಾ ಹಾಟ್ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಇದೀಗ ಲಂಗಾ ದಾವಣಿಯಲ್ಲಿ ಕಾಣಿಸುಕೊಂಡು ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ. ಸಿನೆಮಾಗಳ ಶೂಟಿಂಗ್ ಗೆ ಬ್ರೇಕ್ ಹಾಕಿ ತಿರುಪತಿ ತಿರುಮಲಕ್ಕೆ ಭೇಟಿ ನೀಡಿದ ಜಾನ್ವಿ ಕಪೂರ್ ಪಕ್ಕಾ ತೆಲುಗು ಹುಡುಗಿಯಂತೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಭಾರತದ ಮೊದಲ ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಚಿತ್ರೀಕರಣ ಬ್ರೇಕ್ ನೀಡಿ,ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ,

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ Read More »

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ

ಸಮಗ್ರ ನ್ಯೂಸ್:  ಶನಿವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನೇಪಾಳಿ ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವರದಿ ಪ್ರಕಾರ, 60 ನೇಪಾಳದ ವಲಸೆ ಕಾರ್ಮಿಕರನ್ನು ಹೊತ್ತ ಸ್ಲೀಪರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂಗುಪುರ ಗ್ರಾಮದಲ್ಲಿ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ಬಸ್ಸಿನ ಚಾಲಕ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ವೇಳೆ

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ Read More »

ಭಾರೀ ಪ್ರತಿಭಟನೆ ವೇಳೆ ಶ್ರೀಲಂಕಾ ತೊರೆದಿದ್ದ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್

ಕೊಲಂಬೋ: ಜುಲೈನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಗರಿಕರು ನಡೆಸಿದ ಭಾರೀ ಪ್ರತಿಭಟನೆ ಹಿನ್ನೆಲೆ ಶ್ರೀಲಂಕಾದಿಂದ ಪಲಾಯನಗೈದಿದ್ದ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಶನಿವಾರ ಮುಂಜಾನೆ ತಾಯ್ನಾಡಿಗೆ ಮರಳಿದ್ದಾರೆ. ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿ, ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಜುಲೈ 9 ರಂದು ಪ್ರತಿಭಟನಾಕಾರರು ರಾಜಪಕ್ಸೆ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಶ್ರೀಲಂಕಾದಿಂದ ಪಲಾಯನಗೈದಿದ್ದ ರಾಜಪಕ್ಸೆ

ಭಾರೀ ಪ್ರತಿಭಟನೆ ವೇಳೆ ಶ್ರೀಲಂಕಾ ತೊರೆದಿದ್ದ ಮಾಜಿ ಅಧ್ಯಕ್ಷ ತಾಯ್ನಾಡಿಗೆ ವಾಪಸ್ Read More »

ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ‌ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್?

ಸಮಗ್ರ ನ್ಯೂಸ್: ಟೋರಿ ಪಕ್ಷದ ಮುಖ್ಯಸ್ಥ ಹಾಗೂ ಬ್ರಿಟನ್‌ ಪ್ರಧಾನಿ ಆಯ್ಕೆಗಾಗಿ ಪಕ್ಷದ ಕಾರ್ಯಕರ್ತರಿಂದ ನಡೆದ ಮತ ಚಲಾವಣೆ ಪ್ರಕ್ರಿಯೆ ಶುಕ್ರವಾರ ಮುಕ್ತಾಯಗೊಂಡಿದೆ. ಸೆ. 5ರಂದು ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ ಮಾಜಿ ಸಚಿವ ರಿಷಿ ಸುನಕ್‌ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್‌ ಟ್ರಸ್‌ ಪೈಕಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂಬುದು ಆ ದಿನ ಬಹಿರಂಗವಾಗಲಿದೆ. ‘ಕಳೆದ ಒಂದು ತಿಂಗಳಿನಿಂದ ಮತ ಚಲಾಯಿಸುವ ಪ್ರಕ್ರಿಯೆ ನಡೆದಿದೆ. ಟೋರಿ ಪಕ್ಷದ 1.60 ಲಕ್ಷದಷ್ಟು ಸದಸ್ಯರು ತಮ್ಮ ಹಕ್ಕು

ಬ್ರಿಟನ್ ನಲ್ಲಿ ಮತದಾನ ಪ್ರಕ್ರಿಯೆ ಅಂತ್ಯ| ಸೆ.5ಕ್ಕೆ‌ ಮತ ಎಣಿಕೆ; ಪ್ರಧಾನಿಯಾಗ್ತಾರಾ ರಿಷಿ ಸುನಕ್? Read More »