ದೇಶ-ವಿದೇಶ

75 ವರ್ಷಗಳಲ್ಲಿ ದೇಶ ಹಲವು ಸವಾಲುಗಳನ್ನು ಮೆಟ್ಟಿನಿಂತಿದೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು. […]

75 ವರ್ಷಗಳಲ್ಲಿ ದೇಶ ಹಲವು ಸವಾಲುಗಳನ್ನು ಮೆಟ್ಟಿನಿಂತಿದೆ – ಪ್ರಧಾನಿ ಮೋದಿ Read More »

ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ದೇಶದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7.15 ಕ್ಕೆ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ 2 ವರ್ಷದ ಸ್ವಾತಂತ್ರ್ಯ ದಿನಾಚರಣೆಗಳು ಕೋವಿಡ್ 19 ಸೋಂಕಿನ ಹಾವಳಿಯಿಂದ ಮಂಕಾಗಿದ್ದವು. ಈ ಬಾರಿ ಕೋವಿಡ್ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಸೇರಿ ಹಲವು ಅಭಿಯಾನಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಇಂದು

ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ Read More »

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ರವಿವಾರ ಬೆಳಿಗ್ಗೆ ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಹಾಗೂ ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬದ ಐವರು ಹಾಗೂ ಇನ್ನೊಬ್ಬ ವ್ಯಕ್ತಿ

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು Read More »

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಮಾಜಿ ಸಚಿವ ವಿನಾಯಕ್ ಮೇಟೆ ಮೃತಪಟ್ಟಿದ್ದಾರೆ. ರವಿವಾರ ಮುಂಜಾನೆ ಮಡಪ್ ಸುರಂಗದ ಬಳಿ ಕಾರು ಅಪಘಾತಗೊಂಡಿದ್ದು ಕಾರಿನಲ್ಲಿದ್ದ ಮಾಜಿ ಸಚಿವ ಸೇರಿ ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ. ವಿನಾಯಕ್ ಅವರಿಗೆ ತಲೆ , ಕೈ, ಕಾಲು ಸೇರಿದಂತೆ ಹಲವೆಡೆ ತೀವ್ರ ಗಾಯಗೊಂಡ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ನಿಧನರಾದ ವಿನಾಯಕ್ ಅವರು ಮರಾಠ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ

ಭೀಕರ ರಸ್ತೆ ಅಪಘಾತ ಮಹಾರಾಷ್ಟ್ರದ ಮಾಜಿ ಸಚಿವ ವಿಧಿವಶ Read More »

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ

ಶೇರು ಮಾರುಕಟ್ಟೆಯ ಅತೀ ದೊಡ್ಡ ಹೆಸರು, ಬಿಲಿಯನೇರ್ ಉದ್ಯಮಿ ರಾಕೇಶ್ ಜುಂಜುನ್‌ವಾಲಾ ಭಾನುವಾರ ಬೆಳಿಗ್ಗೆ ನಿಧನರಾದರು. ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರ ರಾಕೇಶ್​ ಜುಂಜುನ್​ವಾಲಾ (62) ಅವರು ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶೇರು ಮಾರುಕಟ್ಟೆಯ ತನ್ನ ಹಿಡಿತದ ಕಾರಣದಿಂದ ರಾಕೇಶ್ ಜುಂಜುನ್ ವಾಲಾ ಅವರನ್ನು “ಬಿಗ್ ಬುಲ್ ಆಫ್ ಇಂಡಿಯಾ” ಮತ್ತು “ಕಿಂಗ್ ಆಫ್ ಬುಲ್ ಮಾರ್ಕೆಟ್”

ಬಿಲಿಯನೇರ್ ಉದ್ಯಮಿ ಷೇರು ಮಾರುಕಟ್ಟೆಯ ದಿಗ್ಗಜ ಅಸ್ತಂಗತ Read More »

ಯಾವುದೇ ವಾಹನದ ಮೇಲೆ ಭಾರತದ ಧ್ವಜ ಹೊದಿಸುವ ಮೊದಲು ಎಚ್ಚರ|ಮೂರು ವರ್ಷ ಜೈಲು ಶಿಕ್ಷೆ ತಪ್ಪಿದಲ್ಲ!

ನವದೆಹಲಿ; ಭಾರತವು ಈ ವರ್ಷ ಆಗಸ್ಟ್ 15 ರಂದು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ ಮತ್ತು ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸಲು ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆಗೆ ತಮ್ಮ ಮನೆಯಲ್ಲಿ ಭಾರತೀಯ ರಾಷ್ಟ್ರಧ್ವಜವನ್ನು ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನಾಗರಿಕರನ್ನು ಒತ್ತಾಯಿಸಿದ್ದಾರೆ. ಆದರೆ ಕಾರು, ಬೈಕ್ ಅಥವಾ ಇತರ ಯಾವುದೇ ವಾಹನದ ಮೇಲೆ ಭಾರತದ ಧ್ವಜವನ್ನು ಹೊದಿಸಿದರೆ ನಿಮ್ಮನ್ನು ಜೈಲಿಗೆ ಹಾಕಬಹುದು. ಆಗಸ್ಟ್ 2 ರಿಂದ 15 ರ

ಯಾವುದೇ ವಾಹನದ ಮೇಲೆ ಭಾರತದ ಧ್ವಜ ಹೊದಿಸುವ ಮೊದಲು ಎಚ್ಚರ|ಮೂರು ವರ್ಷ ಜೈಲು ಶಿಕ್ಷೆ ತಪ್ಪಿದಲ್ಲ! Read More »

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ಪಾಸಿಟಿವ್

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಮತ್ತೆ ಕೋವಿಡ್ ಪಾಸಿಟಿವ್ ಆಗಿದ್ದು, ಸರ್ಕಾರದ ಕೊರೋನಾ ಶಿಷ್ಟಾಚಾರ ಪ್ರಕಾರ ಅವರು ಹೋಂ ಐಸೊಲೇಷನ್ ಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಸಂಸದ ಹಾಗೂ ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ಪಾಸಿಟಿವ್ Read More »

ಭೂಮಿಯ ಮೂಲಕ ಹಾದು ಹೋಗಲಿದೆ ಕ್ಷುದ್ರ ಗ್ರಹ! ನಾಸಾ ಹೇಳಿದ್ದೇನು ?

ಮುಂದಿನ ಮೂರು ದಿನಗಳಲ್ಲಿ ಕನಿಷ್ಠ ಮೂರು ಕ್ಷುದ್ರ ಆಕಾಶ ಕಾಯಗಳು ಭೂಮಿಗೆ ಅತೀ ಸನಿಹವಾಗಿ ಹಾದುಹೋಗಲಿವೆ.  ಈ ಕ್ಷುದ್ರ ಕಾಯ ರವಿವಾರ ಬೆಳಗ್ಗೆ ಭೂಮಿಯಿಂದ 47 ಲಕ್ಷ ಕಿ.ಮೀ. ದೂರದಲ್ಲಿ ಪ್ರತೀ ಸೆಕುಂಡಿಗೆ 5.7 ಕಿ.ಮೀ. ವೇಗದಲ್ಲಿ ಹಾದುಹೋಗಲಿದೆ. ಅತೀ ದೊಡ್ಡದಾಗಿರುವ 110 ಅಡಿ ಅಗಲದ ಕ್ಷುದ್ರ ಗ್ರಹ ಅಪ್ಪಳಿಸಿದರೆ ಪ್ಯಾರಿಸ್‌ನಷ್ಟು ದೊಡ್ಡದಾದ ಕುಳಿ ಉಂಟಾಗಬಹುದು ಎಂದು ನಾಸಾ ವಿಜ್ಞಾನಿಗಳು ಹೇಳಿದ್ದಾರೆ. ನಾಸಾದ ಆಸ್ಟರಾಯ್ಡ ವಾಚ್‌ ಭೂಮಿಗೆ 75 ಲಕ್ಷ ಕಿ.ಮೀ. ಆಸುಪಾಸಿಗೆ ಬರುವ ಕ್ಷುದ್ರಗ್ರಹ, ಧೂಮಕೇತುಗಳ

ಭೂಮಿಯ ಮೂಲಕ ಹಾದು ಹೋಗಲಿದೆ ಕ್ಷುದ್ರ ಗ್ರಹ! ನಾಸಾ ಹೇಳಿದ್ದೇನು ? Read More »

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ!

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಅಂಗವಾಗಿ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಾಲಾ- ಕಾಲೇಜುಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳಲ್ಲಿ, ಗ್ರಾಮ ಪಂಚಾ​ಯಿತಿ ಮಟ್ಟದಲ್ಲಿ, ಕೋಟೆ ಕೊತ್ತಲಗಳಲ್ಲಿ, ಐತಿಹಾಸಿಕ ಸ್ಥಳಗಳಲ್ಲಿ ಸೇರಿದಂತೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಲಿವೆ. ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಬೇಕು ಎಂಬ ಪ್ರಧಾನಮಂತ್ರಿ ಮೋದಿ ಆಶಯದಂತೆ ಜಿಲ್ಲೆಯಲ್ಲೂ ‘ಹರ್‌ ಘರ್‌ ತಿರಂಗಾ’ ಧ್ವಜ ಶನಿವಾರದಿಂದ ಹಾರಾಡಲಿದೆ. ಇದಕ್ಕಾಗಿ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳು ಸರ್ಕಾರದ ಜೊತೆ

ದೇಶಾದ್ಯಂತ ಮನೆಮನೆಯಲ್ಲೂ ಹಾರಾಡಲಿದೆ ತ್ರಿವರ್ಣ ಧ್ವಜ| ನೆನಪಿರಲಿ ಈ ಕೆಲಸ ಎಚ್ಚರಿಕೆಯಿಂದ ಮಾಡಿ! Read More »

ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪದಕ

ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ಉತ್ತಮ ತನಿಖೆ ನಡೆಸಿದ ಪೊಲೀಸರಿಗೆ ನೀಡುವ ಕೇಂದ್ರ ಗೃಹ ಸಚಿವಾಲಯದ ಪದಕಕ್ಕೆ ಕರ್ನಾಟಕ ರಾಜ್ಯದ ಆರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರತಿವರ್ಷ ನೀಡುವ ಈ ಉನ್ನತ ಪದಕಕ್ಕೆ ದೇಶದ ಎಲ್ಲಾ ರಾಜ್ಯಗಳಲ್ಲಿ ಉತ್ತಮ ಕೆಲಸ ಮಾಡಿದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸದ್ಯ ಈ ವರ್ಷ ದೇಶದಾದ್ಯಂತ ಸಿವಿಲ್ ಪೊಲೀಸ್ ಸಿಬಿಐ, ಎನ್ ಸಿಬಿ ಸೇರಿ 151 ಅಧಿಕಾರಿಗಳನ್ನು ಈ ಪದಕಕ್ಕೆ ಆಯ್ಕೆ ಮಾಡಲಾಗಿದ್ದು, ಪಟ್ಟಿ ಬಿಡುಗಡೆಯಾಗಿದೆ. ಈ

ರಾಜ್ಯದ ಆರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯದಿಂದ ಪದಕ Read More »