ದೇಶ-ವಿದೇಶ

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಶುಲ್ಕ ನಿಗದಿ ಮಾಡುವ ಸಂಸ್ಥೆಯಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಶುಲ್ಕ ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅಕ್ಟೋಬರ್​ನಿಂದ ದೇಶೀಯ ಪ್ರಯಾಣಿಕರಿಗೆ 250 ರೂಪಾಯಿಗಳ ಶುಲ್ಕ ವಿಧಿಸಲು ಪ್ರಯತ್ನಿಸಿದೆ ಅದಾನಿ ಗ್ರೂಪ್​ ಅಕ್ಟೋಬರ್​ 31, 2020ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡಿದೆ. ರನ್​ವೇಯ

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ Read More »

ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಗಟ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡರು. ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದರು. ನಂತರ ಅವರು ಅಪಾರ ಜನಪ್ರಿಯತೆಯನ್ನು ಗಳಿಸಿದರು. ಸೋನಾಲಿ ಫೋಗಟ್ ಕೂಡ ಬಿಜೆಪಿ ನಾಯಕಿಯಾಗಿದ್ದರು. ಅವರು 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಆದಂಪುರದಿಂದ ವಿಧಾನಸಭಾ ಚುನಾವಣೆಯಲ್ಲಿ

ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಗಟ್ ಹೃದಯಾಘಾತದಿಂದ ಸಾವು Read More »

ಹಾಳಾಗಿರುವ ಹೆದ್ದಾರಿ ಸಮಸ್ಯೆ ತಿಳಿಸಲು ಹೊಸ ಆ್ಯಪ್| ನಿಗಧಿತ ಅವಧಿಯೊಳಗೆ ರಿಪೇರಿ ಮಾಡದಿದ್ರೆ ಕ್ರಮ

ಸಮಗ್ರ ನ್ಯೂಸ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸಲು ಟೋಲ್ ಶುಲ್ಕ ನೀಡಿದರೂ ಸಹ ಗುಂಡಿ ಗೊಟರುಗಳಿಂದ ಕೂಡಿರುವುದು ಹಾಗೂ ರಸ್ತೆ ಹಾಳಾಗಿರುವ ಕುರಿತು ವಾಹನ ಸವಾರರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಲ್ಲದೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋವನ್ನು ಹರಿಬಿಟ್ಟು ಸಂಬಂಧಪಟ್ಟವರ ಗಮನಕ್ಕೆ ತರಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗುತ್ತಿರಲಿಲ್ಲ. ಈಗ ಇದಕ್ಕೆ ಪರಿಹಾರ ಕಂಡುಕೊಳ್ಳಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ರಸ್ತೆ ಗುಂಡಿಗಳಿಂದಾಗಿಯೇ ಪ್ರತಿ ವರ್ಷ 2300 ಮಂದಿ ಸಾವನ್ನಪ್ಪಿರುವ ಸಂಗತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ಹಾಳಾಗಿರುವ ಹೆದ್ದಾರಿ ಸಮಸ್ಯೆ ತಿಳಿಸಲು ಹೊಸ ಆ್ಯಪ್| ನಿಗಧಿತ ಅವಧಿಯೊಳಗೆ ರಿಪೇರಿ ಮಾಡದಿದ್ರೆ ಕ್ರಮ Read More »

ಗ್ರಾಹಕರಿಗೆ ಗುಡ್ ನ್ಯೂಸ್; ಅಡುಗೆ ಎಣ್ಣೆ, ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಬಾರೀ ಇಳಿಕೆ

ಸಮಗ್ರ ನ್ಯೂಸ್: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ ದರ ಶೇಕಡ 15 ರಿಂದ 20ರಷ್ಟು ಇಳಿಕೆಯಾಗಿದ್ದು, ಬಿಸ್ಕೆಟ್ ಹಾಗೂ ಇನ್ನಿತರ ವಸ್ತುಗಳ ಬೆಲೆ ಶೇಕಡ 10 ರಿಂದ 15 ರಷ್ಟು ಇಳಿಕೆಯಾಗಿದೆ. ಉತ್ಪಾದನಾ ವೆಚ್ಚ ತಗ್ಗಿರುವುದು, ಕಚ್ಚಾ ವಸ್ತುಗಳ ಬೆಲೆ ಇಳಿಕೆಯಾಗಿರುವುದರಿಂದ ಎಲೆಕ್ಟ್ರಾನಿಕ್ ವಸ್ತುಗಳ ದರವೂ ಕಡಿಮೆಯಾಗಿದೆ. ಪ್ರಮುಖ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕಾ ಸಂಸ್ಥೆಗಳಾದ

ಗ್ರಾಹಕರಿಗೆ ಗುಡ್ ನ್ಯೂಸ್; ಅಡುಗೆ ಎಣ್ಣೆ, ಗೃಹೋಪಯೋಗಿ ವಸ್ತುಗಳ ಬೆಲೆಯಲ್ಲಿ ಬಾರೀ ಇಳಿಕೆ Read More »

ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ‌ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ

ಸಮಗ್ರ ನ್ಯೂಸ್: ರೈತರು ತಮ್ಮ ಕೃಷಿ ಹಾಗೂ ಕೃಷಿ ವಲಯಕ್ಕೆ ಒಳ್ಳೆಯ ಬೆಲೆ ಸಿಗಬೇಕು ಹಾಗೂ ರೈತರು ತಮ್ಮ ಚಟುವಟಿಕೆಗಳಲ್ಲಿ ಬೆಲೆ‌ಸಿಗದೆ ಇದ್ದಾಗ ನಿರಾಸೆಯಾಗದಂತೆ ತಡೆಯಲು ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ರೂಪಿಸಲಾಗಿದೆ. ಇದರಲ್ಲಿ ರೈತರು ತಾವು ಬೆಳೆದ ಬೆಳೆಗೆ ಎಷ್ಟು ಹಣ ವಿಮೆ ಕಟ್ಟಬೇಕು, ಹಾಗೂ ರೈತರ ಬೆಳೆದ ಬೆಳೆಯು ಆಕಸ್ಮಿಕವಾಗಿ ನಾಶ ಹೊಂದಿದರೆ ಅದಕ್ಕೆ ಎಷ್ಟು ಪರಿಹಾರ ಬರುತ್ತದೆ. 2022-23ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ದರದಲ್ಲಿ

ಫಸಲ್ ಬೀಮಾ ಯೋಜನೆಯಲ್ಲಿ ಅರ್ಜಿ‌ ಸಲ್ಲಿಸಿದ್ದೀರಾ? ಹಾಗಿದ್ದಲ್ಲಿ ಈ ಮಾಹಿತಿ ತಿಳಿದುಕೊಳ್ಳಿ Read More »

ವೈಷ್ಣವೋದೇವಿ ಯಾತ್ರೆ ಮತ್ತೆ ಆರಂಭ

ಶ್ರೀನಗರ – ವೈಷ್ಣವೋದೇವಿ ಯಾತ್ರೆ ಮತ್ತೆ ಇಂದಿನಿಂದ ಆರಂಭವಾಗಲಿದೆ. ಹವಾಮಾನ್ಯ ವೈಪರಿತ್ಯ ಹಿನ್ನೆಲೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಇಂದಿನಿಂದ ವೈಷ್ಣವೋದೇವಿ ಯಾತ್ರೆ ಪುನಾರರಾಂಭಗೊಳ್ಳಲು ಸಿದ್ದವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳದಲ್ಲಿ ಯಾತ್ರಾತ್ರಿಗಳ ರಕ್ಷಣೆಗೆ ಪೊಲೀಸರು ಮತ್ತು ಸಿಆರ್‌ಪಿಎಫ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ದೇವಸ್ಥಾನದ ಆಡಳಿತ ಮಂಡಳಿಯು ನಿಗಾವಹಿಸುತ್ತಿದೆ. ಕಳೆದ ಜುಲೈ ತಿಂಗಳಿನಲ್ಲಿ ಅಮರನಾಥದ ಪವಿತ್ರ ಗುಹೆ ಪ್ರದೇಶದಲ್ಲಿ ಮೇಘಸ್ಫೋಟ ಉಂಟಾಗಿ ವೈಷ್ಣವೋದೇವಿ ಗುಹೆಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಅಪಾರ ಹಾನಿ

ವೈಷ್ಣವೋದೇವಿ ಯಾತ್ರೆ ಮತ್ತೆ ಆರಂಭ Read More »

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ಮಂಗಳೂರು ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ. ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ. ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್‌ ಬಳಿ ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಚಾರ್ಜಿಗೆ ಇಡಲಾಗಿತ್ತು. ಮಧ್ಯಾಹ್ನದ ವೇಳೆಗೆ ಸ್ಕೂಟರ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಪರಿಣಾಮ ಎರಡು ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಇನ್ನು ಸ್ಥಳೀಯರ ಪ್ರಯತ್ನದಿಂದಾಗಿ ಇನ್ನೆರಡು

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿ Read More »

ಬಾಡಿಗೆದಾರ ಮಾಲಿಕನನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಶವದ ಜೊತೆ ಸೆಲ್ಫಿ

ದಿಲ್ಲಿ; ಬಾಡಿಗೆದಾರನೊಬ್ಬ ತನ್ನ ಮಾಲೀಕನನ್ನು ಸುತ್ತಿಗೆಯಿಂದ ಹೊಡೆದು, ಶವದ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆಯೊಂದು ದಿಲ್ಲಿಯಲ್ಲಿ ನಡೆದಿದೆ. ಪಂಕಜ್‌ ಕುಮಾರ್‌ ಎನ್ನುವ ಆರೋಪಿ ಸುರೇಶ್‌ ಎಂಬವರ ವ್ಯಕ್ತಿ ಮನೆಗೆ ಬಾಡಿಗೆಗೆ ಬಂದಿದ್ದ. ಆತನಿಗೆ ಮನೆಯಲ್ಲಿ ಮದ್ಯ ಸೇವನೆ ಮಾಡುವ ಹಾಗಿಲ್ಲ ಅಂತ ಹೇಳಲಾಗಿತ್ತು. ಇದೇ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿ, ಪಂಕಜ್‌ ಮಾಲೀಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಒಂದು ದಿನದ ಬಳಿಕ ಮಾಲೀಕನ ಮನೆಗೆ ಕಾಲ್‌ ಮಾಡಿ ತಾನು ಮನೆ ಖಾಲಿ ಮಾಡಿದ್ದಾಗಿ ಹೇಳಿದ್ದಾನೆ. ನಂತರ ಮೃತ

ಬಾಡಿಗೆದಾರ ಮಾಲಿಕನನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಶವದ ಜೊತೆ ಸೆಲ್ಫಿ Read More »

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿರುವ ಅವರ ಸ್ಮಾರಕ ಸ್ಥಳ ವೀರಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯ ಜನ್ಮದಿನದಂದು ಅವರನ್ನು ನೆನೆದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾರೆ. ಅಪ್ಪಾ, ನೀವು ಪ್ರತಿ‌ಕ್ಷಣವೂ ನನ್ನೊಂದಿಗಿದ್ದೀರಿ, ನನ್ನ ಹೃದಯದಲ್ಲಿ ನೆಲೆಸಿದ್ದೀರಿ. ಈ‌

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ Read More »

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ

ರೈಲು ಪ್ರಯಾಣಿಕರಿಗೆ ಕೇಂದ್ರ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿನ ಕೆಲ ನಿಗಮಗಳನ್ನು ಬದಲಾಯಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ.  ಕೊರೋನಾ ಸಮಯದಲ್ಲಿ ಹಿರಿಯ ನಾಗರೀಕರು ಸೇರಿದಂತೆ ಇತರ ಆಯ್ದ ವರ್ಗಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸ್ಥಗತಗೊಳಿಸಲಾಗಿದ್ದ ಹಿರಿಯರು, ಕ್ರೀಡಾಪಟುಗಳು ಹಾಗೂ ಇತರ ಆಯ್ದ ವರ್ಗಗಳ ರಿಯಾಯಿತಿ ಟಿಕೆಟ್ ದರ ಯೋಜನೆನ್ನು ಮತ್ತೆ ಆರಂಭಿಸಲು ರೈಲ್ವೇ ಇಲಾಖೆ ನಿರ್ಧರಿಸಿದೆ. ಹಿರಿಯರ ರಿಯಾಯಿತಿ ಟಿಕೆಟ್ ದರದಲ್ಲಿ ಮಹಿಳೆಯರಿಗೆ ಕನಿಷ್ಠ

ಹಿರಿಯ ನಾಗರೀಕ ರೇಲ್ವೆ ಪ್ರಯಾಣಿಕರಿಗೆ ಇಲ್ಲಿದೆ ಸಿಹಿ ಸುದ್ದಿ Read More »