ದೇಶ-ವಿದೇಶ

ದೆಹಲಿ ಯ ಎರಡು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್ ಪತ್ತೆ

ನವದೆಹಲಿ; ದೆಹಲಿಯಲ್ಲಿ ಮಂಕಿ ಪಾಕ್ಸ್‌ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರಲ್ಲಿ ಮಂಕಿ ಪಾಕ್ಸ್‌ ಲಕ್ಷಣಗಳು ಕಂಡುಬಂದಿವೆ. ಈ ಹಿನ್ನಲೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇಬ್ಬರು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್‌ ಲಕ್ಷಣ ಕಂಡುಬಂದಿದ್ದು, ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಸೇರಿಸಲಾಗಿದೆ. ಇಬ್ಬರ ಮಾದರಿಗಳನ್ನು ಸಂಗ್ರಹಣೆ ಮಾಡಿದ್ದು, ಲ್ಯಾಬ್‌ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಅವರಿಗೆ ಬಂದಿರುವ ಕಾಯಿಲೆ ಯಾವುದು ಎಂಬುದು ಗೊತ್ತಾಗಲಿದೆ. ಕೇರಳದಲ್ಲಿ ಇಬ್ಬರಿಗೆ ಮಂಕಿ ಪಾಕ್ಸ್‌ ದೃಢಪಟ್ಟಿತ್ತು. ಅದರಲ್ಲಿ ಒಬ್ಬರು ಸಂಪೂರ್ಣವಾಗಿ ಗಣಮುಖರಾಗಿದ್ದಾರೆ.

ದೆಹಲಿ ಯ ಎರಡು ವ್ಯಕ್ತಿಗಳಲ್ಲಿ ಮಂಕಿ ಪಾಕ್ಸ್ ಪತ್ತೆ Read More »

ಚಲಿಸುತ್ತಿದ್ದ ಕಾರಿಗೆ ರೈಲು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಗುವಾಹಟಿ: ಅಸ್ಸಾಂನ ನಗಾಂವ್ ಜಿಲ್ಲೆಯ ಲೆವೆಲ್ ಕ್ರಾಸಿಂಗ್ ನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುವಾಹಟಿಯಿಂದ ಸಿಲ್ಘಾಟ್ಗೆ ತೆರಳುತ್ತಿದ್ದ ರೈಲು ಮಾರುತಿ ಸ್ವಿಫ್ಟ್ ಕಾರಿಗೆ ರೈಲು ಡಿಕ್ಕಿ ಹೊಡೆದಿದೆ, ಅದರಲ್ಲಿ ಕಾರು ಮಾಲೀಕ ಚಂದ್ರ ಕುಮಾರ್ ಕಲಿತಾ, ಅವರ ಪತ್ನಿ ನೀಲಿಮಾ ಕಲಿತಾ ಮತ್ತು ಅವರ ಮಗ ಸುನುಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕಾರಿಗೆ

ಚಲಿಸುತ್ತಿದ್ದ ಕಾರಿಗೆ ರೈಲು ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು Read More »

ಕಾಣೆಯಾದ ಬಾಲಕ ವಾಷಿಂಗ್ ಮಿಷನ್ ನಲ್ಲಿ ಶವವಾಗಿ ಪತ್ತೆ

ಆಮೆರಿಕ: 7 ವರ್ಷದ ಬಾಲಕನ ಶವ ವಾಷಿಂಗ್ ಮಿಷನ್ ನಲ್ಲಿ ಪತ್ತೆಯಾದ ಘಟನೆಯೊಂದು ಅಮೆರಿಕದಲ್ಲಿ ನಡೆದಿದೆ. ಟ್ರಾಯ್ ಖೋಲಿಯಾರ್ ಎಂಬ ಬಾಲಕ ಸಂಜೆಯಿಂದ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂಬ ದೂರು ದಾಖಲಾಗಿದ್ದು, ಮಗು ನಾಪತ್ತೆಯಾದಾಗ ತಂದೆ ಮನೆಯಲ್ಲೇ ಇದ್ದು, ತಾಯಿ ರಾತ್ರಿ ಪಾಳಿ ಮುಗಿಸಿಕೊಂಡು ಮನೆಗೆ ಮರಳಿದ್ದರು. ಮಗು ಇನ್ನೂ ಶಾಲೆ ಸಮವಸ್ತ್ರದಲ್ಲೇ ವಾಷಿಂಗ್ ಮಿಷನ್ ನಲ್ಲಿಯೇ ಪತ್ತೆಯಾಗಿದೆ.

ಕಾಣೆಯಾದ ಬಾಲಕ ವಾಷಿಂಗ್ ಮಿಷನ್ ನಲ್ಲಿ ಶವವಾಗಿ ಪತ್ತೆ Read More »

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ

ಸಮಗ್ರ ನ್ಯೂಸ್: ಬಿಜೆಪಿ ಮತ್ತು ಜೆಡಿಯು ಮೈತ್ರಿಯು 2024ರ ಲೋಕಸಭಾ ಚುನಾವಣೆಯಲ್ಲಿಯೂ ಮುಂದುವರಿಯುತ್ತದೆ. ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಯಾಗಿರುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಬಿಹಾರ ರಾಜಧಾನಿ ಪಾಟ್ನಾದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ವಿವಿಧ ಮೋರ್ಚಾಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪ್ರಧಾನಿ ಅಭ್ಯರ್ಥಿ ಯಾರಾಗಿರಬೇಕು ಎನ್ನುವುದು ಬಿಸಿಬಿಸಿ ಚರ್ಚೆಯ ವಿಚಾರವಾಗಿತ್ತು. ಹೊಸಬರಿಗೆ

ಮುಂದಿನ ಚುನಾವಣೆಯಲ್ಲೂ ಮೋದಿಯೇ ಪ್ರಧಾನಿ ಅಭ್ಯರ್ಥಿ – ಅಮಿತ್ ಷಾ Read More »

ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿದ ಮಾಜಿ ಸಿಎಂ

ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯೊಬ್ಬರು ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ನಡುವೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ತೀವ್ರ ಪೈಪೋಟಿ ನಡೆಯುತ್ತಿದೆ. ಈ ನಡುವೆ ದಿಗ್ವಿಜಯ ಸಿಂಗ್ ಮತ್ತು ಶಾಸಕರಾದ ಆರಿಫ್ ಮಸೂದ್ ಮತ್ತು ಪಿಸಿ ಶರ್ಮಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭೋಪಾಲ್‍ನ ಜಿಲ್ಲಾ ಪಂಚಾಯತ್ ಕಚೇರಿಯ ಹೊರಗೆ ಪೊಲೀಸರೊಂದಿಗೆ ಘರ್ಷಣೆ

ಪೊಲೀಸ್ ಕಾಲರ್ ಹಿಡಿದು ರಂಪಾಟ ಮಾಡಿದ ಮಾಜಿ ಸಿಎಂ Read More »

ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡ ‌ರಾಜಾಸ್ಥಾನ| 48 ಗಂಟೆ ಕಳೆದರೂ‌ ಪ್ರವೀಣ್ ಕೊಲೆಗಡುಕರ ಬಂಧಿಸದ್ದಕ್ಕೆ ಪ್ರಶ್ನೆ|

ಸಮಗ್ರ‌ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರೋ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್​ ನೆಟ್ಟಾರು ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದು ರಾಜಸ್ಥಾನ ಸಿಎಂ ಅಶೋಕ್​​ ಗೆಹ್ಲೋಟ್​ ಟ್ವೀಟ್​ ಮಾಡಿದ್ದಾರೆ. “ಇತ್ತೀಚೆಗೆ ಉದಯಪುರದಲ್ಲಿ ಕನ್ಹಯ್ಯ ಲಾಲ್​ ಹತ್ಯೆ ಆದಾಗ ಕೇವಲ 4 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದೆವು. ಈಗ ಕರ್ನಾಟಕದಲ್ಲಿ ಪ್ರವೀಣ್​ ಹತ್ಯೆಯಾಗಿ 48 ಗಂಟೆ ಆದ್ರೂ ಆರೋಪಿ ಬಂಧನವಾಗಿಲ್ಲ” ಎಂದು ಗೆಹ್ಲೋಟ್​ ಪ್ರಶ್ನಿಸಿದ್ದಾರೆ. ಇನ್ನು, ಕನ್ಹಯ್ಯ ಲಾಲ್​​ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಕನ್ಹಯ್ಯ

ಕರ್ನಾಟಕವನ್ನು ತರಾಟೆಗೆ ತೆಗೆದುಕೊಂಡ ‌ರಾಜಾಸ್ಥಾನ| 48 ಗಂಟೆ ಕಳೆದರೂ‌ ಪ್ರವೀಣ್ ಕೊಲೆಗಡುಕರ ಬಂಧಿಸದ್ದಕ್ಕೆ ಪ್ರಶ್ನೆ| Read More »

ರಾಜಾಸ್ಥಾನ: ವಾಯುಪಡೆಯ ಮಿಗ್21 ವಿಮಾನ ಪತನ; ಪೈಲಟ್ ಗಳು‌ ಸಾವು

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (IAF) ಮಿಗ್ -21 ವಿಮಾನವು ಗುರುವಾರ ರಾತ್ರಿ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪತನಗೊಂಡಿದ್ದು, ಇಬ್ಬರೂ ಪೈಲಟ್‌ಗಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಬಾರ್ಮರ್ʼನ ಭೀಮ್ಡಾ ಗ್ರಾಮದಲ್ಲಿ ಮಿಗ್ ಅಪಘಾತಕ್ಕೀಡಾಗಿದ್ದು, ಜೋರಾದ ಶಬ್ದದೊಂದಿಗೆ ಬೆಂಕಿಯ ದೊಡ್ಡ ಜ್ವಾಲೆಗಳನ್ನ ಜನರು ನೋಡಿದ್ದು ಮಿಗ್ ಅಪಘಾತದ ಸುದ್ದಿ ಕೋಲಾಹಲವನ್ನ ಸೃಷ್ಟಿಸಿದೆ. ಸಧ್ಯ ಸ್ಥಳಕ್ಕೆ ಅಧಿಕಾರಿಗಳು ತೆರಳುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಪಘಾತವು ಎಷ್ಟು ಗಂಭೀರವಾಗಿದೆಯೆಂದರೆ ಮಿಗ್ʼನ ಅವಶೇಷಗಳು ಅರ್ಧ ಕಿಲೋಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇನ್ನು

ರಾಜಾಸ್ಥಾನ: ವಾಯುಪಡೆಯ ಮಿಗ್21 ವಿಮಾನ ಪತನ; ಪೈಲಟ್ ಗಳು‌ ಸಾವು Read More »

ಬೈಕ್ ಅಪಘಾತ; ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಸವಾರನ ನಿಯಂತ್ರಣ ತಪ್ಪಿ ಬೈಕ್‌ ಉರುಳಿದ ಬಿದ್ದ ಪರಿಣಾಮ ಕಾಲೇಜ್ ಉಪನ್ಯಾಸಕ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ತಾಲೂಕಿನ ರಾ.ಹೆ.66ರ ಬೆಳೆಸೆಯಲ್ಲಿ ಗುರುವಾರ ನಡೆದಿದೆ. ತಾಲೂಕಿನ ವಾಸರೆಕುದ್ರಿಗೆಯ ನಿವಾಸಿ ಅರವಿಂದ್ ಬೀರಾ ಆಗೇರ (49) ಮೃತಪಟ್ಟ ದುರ್ದೈವಿ. ಅರವಿಂದ್ ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಸಮಾಜ ವಿಷಯದ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮುಂಜಾನೆ ವಾಸರೆ ಕುದ್ರಿಗೆಯಿಂದ ಕಾಲೇಜಿಗೆ ಬರುತ್ತಿರುವ ವೇಳೆ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸರ್ಕಾರಿ ಆಸ್ಪತ್ರೆಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಬೈಕ್ ಅಪಘಾತ; ಕಾಲೇಜು ಉಪನ್ಯಾಸಕ ಸಾವು Read More »

ಕಾರ್ಗಿಲ್ ವಿಜಯ ದಿವಸ್| ಮರೆಯಲಾಗದ ಆ ನೆನಪುಗಳು

ಸಮಗ್ರ ನ್ಯೂಸ್: ಇಂದು (ಜು.26) ಕಾರ್ಗಿಲ್ ವಿಜಯ ದಿವಸ, ಯುದ್ಧದಲ್ಲಿ ಹುತಾತ್ಮರಾದ ನೂರಾರು ಭಾರತದ ಯೋಧರನ್ನು ಇಡೀ ದೇಶವೇ ಗೌರವಿಸುವ ದಿನ. ಈ ದಿನದಂದು ಕಾರ್ಗಿಲ್ ಯುದ್ಧದ ಇತಿಹಾಸ, ಮಹತ್ವ ಮತ್ತು ಸ್ಮರಣಾರ್ಥಗಳ ಬಗ್ಗೆ ನೋಡೋಣ.ಯಾಕೆಂದರೆ ಇದು ಇಡೀ ದೇಶವೇ ಹೆಮ್ಮೆ ಪಡುವ ದಿವಸ. 1999ರ ಇದೇ ದಿನದಂದು ಪಾಕಿಸ್ತಾನದ ವಿರುದ್ಧ ಕಾರ್ಗಿಲ್​ನಲ್ಲಿ ನಡೆದ ಯುದ್ಧದಲ್ಲಿ ಭಾರತ ಜಯ ಸಾಧಿಸಿದ ದಿವಸವಿದು. ಇದರ ನೆನಪಿಗಾಗಿ ಪ್ರತಿ ವರ್ಷ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ.

ಕಾರ್ಗಿಲ್ ವಿಜಯ ದಿವಸ್| ಮರೆಯಲಾಗದ ಆ ನೆನಪುಗಳು Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿದ್ದ ಶಾಸಕರ ನಿಯೋಗಕ್ಕೆ ಯಶಸ್ಸು| ಹೊಸ ಕಮಿಟಿ ರಚನೆಗೆ ಸಮ್ಮತಿಸಿದ ಕೇಂದ್ರ

ಸಮಗ್ರ ನ್ಯೂಸ್: ಕಸ್ತೂರಿರಂಗನ್ ವರದಿ ವಿರೋಧಿಸಿ ಮಲೆನಾಡಿನ ಶಾಸಕರ ನಿಯೋಗಕ್ಕೆ ಕೊನೆಗೂ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿ ನೇತೃತ್ವದ ಮಲೆನಾಡಿನ ಶಾಸಕರ ನಿಯೋಗವು ಕಸ್ತೂರಿರಂಗನ್ ವರದಿ ಮಾಡಿದ ಪ್ರಕ್ರಿಯೆಯಲ್ಲಿ ಲೋಪ ಇದೆ ಎಂದು ದೂರು ಸಲ್ಲಿಸಿತ್ತು. ಹೀಗಾಗಿ ಕ್ಯಾಬಿನೆಟ್ ಸಬ್ ಕಮಿಟಿ ರಚಿಸಲು ಮನವಿ ಸಲ್ಲಿಸಿತ್ತು. ಈಗ ಇದಕ್ಕೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಒಪ್ಪಿಗೆ ನೀಡಿದ್ದಾರೆ. ಪಶ್ಚಿಮ ಘಟ್ಟದ ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ ಹೊಸ ವರದಿ ತಯಾರಿಸಲು ಹೊಸ ಕಮಿಟಿ ರಚನೆಗೆ ಸಮ್ಮತಿ ನೀಡಿದ್ದಾರೆ. ಈಗಾಗಲೇ

ಕಸ್ತೂರಿ ರಂಗನ್ ವರದಿ ವಿರೋಧಿಸಿದ್ದ ಶಾಸಕರ ನಿಯೋಗಕ್ಕೆ ಯಶಸ್ಸು| ಹೊಸ ಕಮಿಟಿ ರಚನೆಗೆ ಸಮ್ಮತಿಸಿದ ಕೇಂದ್ರ Read More »