ದೇಶ-ವಿದೇಶ

ಮೇಘ ಸ್ಫೋಟದ ಬಳಿಕ ಇಂದು ಅಮರನಾಥ ಯಾತ್ರೆ ಪುನರಾರಂಭ

ಮೇಘಸ್ಫೋಟದಿಂದಾಗಿ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು (ಸೋಮವಾರ) ಪುನರಾರಂಭವಾಗಿದೆ. ಇಂದು ಶಿವಲಿಂಗದ ದರ್ಶನಕ್ಕೆ 4ಸಾವಿರ ಭಕ್ತರಿಗೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದು, ಯಾತ್ರಾರ್ಥಿಗಳು ಪಹಲ್ಗಾಮ್‌ನ ನುನ್ವಾನ್ ಬೇಸ್ ಕ್ಯಾಂಪ್‌ನಿಂದ ಹೊರಟಿದೆ. ಸೋಮವಾರ ಬೆಳಗ್ಗೆ ನಾಲ್ಕೂವರೆ ಗಂಟೆಗೆ 3,010 ಭಕ್ತರು ಪಹಲ್ಗಾಮ್‌ನಿಂದ ಮತ್ತು 1,016 ಭಕ್ತರು ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಯಾವುದೇ ಕಾರಣಕ್ಕೂ ದರ್ಶನ ಪಡೆಯದೆ ಹಿಂತಿರುಗುವ ಮಾತೇ ಇಲ್ಲೆ ಎಂದು ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ. […]

ಮೇಘ ಸ್ಫೋಟದ ಬಳಿಕ ಇಂದು ಅಮರನಾಥ ಯಾತ್ರೆ ಪುನರಾರಂಭ Read More »

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ ; ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈದ್ ಉಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ದೇಶದಾದ್ಯಂತ ಭಾನುವಾರ ಈದ್ ಉಲ್ ಅಧಾ (ಬಕ್ರೀದ್) ಆಚರಣೆ ಮಾಡಲಾಗುತ್ತಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು  ‘ಈದ್ ಮುಬಾರಕ್! ಈದ್ ಉಲ್ ಅಧಾ ಶುಭಾಶಯಗಳು’ ಎಂದು ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ. ‘ಈ ಹಬ್ಬ ಮಾನವಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಮನೋಭಾವವನ್ನು ಹೆಚ್ಚಿಸಲು ಕೆಲಸ ಮಾಡಲು ನಮಗೆ ಸ್ಫೂರ್ತಿಯಾಗಲಿ” ಎಂದು ಮೋದಿ ಹೇಳಿದ್ದಾರೆ.

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್

ಸಮಗ್ರ ನ್ಯೂಸ್: ಲೋಕಸಭಾ ಸಂಸದ ಮತ್ತು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್, ಈದ್-ಉಲ್-ಅಧಾ ಸಂದರ್ಭದಲ್ಲಿ ಹಿಂದೂಗಳ ಭಾವನೆಗಳನ್ನು ಗೌರವಿಸಿ ಗೋವುಗಳನ್ನು ಬಲಿ ನೀಡದಂತೆ ಅಸ್ಸಾಂನ ಮುಸ್ಲಿಮರಿಗೆ ತನ್ನ ಮನವಿಯನ್ನು ಮಾಡಿದ್ದಾರೆ. ಆರ್‌ಎಸ್‌ ಎಸ್‌ ನ ಕೆಲವರು ಹಿಂದೂ ದೇಶ ಮಾಡಲು ಪ್ರಯತ್ನಿಸುವ ಮೂಲಕ ಹಿಂದೂಸ್ತಾನವನ್ನು ಕೊನೆಗೊಳಿಸಲು ಬಯಸುತ್ತಿದ್ದಾರೆ. ಅವರ ಕನಸಿನಲ್ಲಿಯೂ ಹಿಂದೂ ದೇಶ ಆಗುವುದಿಲ್ಲ. ಅವರು ಈ ದೇಶದಲ್ಲಿ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್ Read More »

ಕೊಲಂಬೊ: ಪಲಾಯನಗೈದ ರಾಜಪಕ್ಸೆ| ಲಂಕನ್ನರ ನಾಡಲ್ಲಿ ಅರಾಜಕತೆ ಮುಂದುವರಿಕೆ

ಸಮಗ್ರ ನ್ಯೂಸ್: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಶನಿವಾರ ರಾಜಧಾನಿ ಕೊಲಂಬೊದಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಪಲಾಯನಗೈದಿದ್ದಾರೆ ಎಂದು ಉನ್ನತ ರಕ್ಷಣಾ ಮೂಲ ತಿಳಿಸಿದೆ. ದೂರದರ್ಶನದ ದೃಶ್ಯಾವಳಿಗಳಲ್ಲಿ ಗೋಟಬಯ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದು ಕಂಪೌಂಡ್ ಗೆ ನುಗ್ಗಿರುವುದನ್ನು ಕಾಣಬಹುದು. “ಅಧ್ಯಕ್ಷರನ್ನು ಸುರಕ್ಷಿತವಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ, ಉದ್ರಿಕ್ತ ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸಕ್ಕೆ ನುಗ್ಗುವ ಸಾಧ್ಯತೆಯನ್ನು ತಡೆಯಲು ಭದ್ರತಾಪಡೆ ಗಾಳಿಯಲ್ಲಿ ಗುಂಡು ಹಾರಿಸಿದೆ. ಇಂದು ಸರ್ಕಾರದ ವಿರುದ್ಧ ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಲ್ಲಿ

ಕೊಲಂಬೊ: ಪಲಾಯನಗೈದ ರಾಜಪಕ್ಸೆ| ಲಂಕನ್ನರ ನಾಡಲ್ಲಿ ಅರಾಜಕತೆ ಮುಂದುವರಿಕೆ Read More »

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಗ್ರ ನ್ಯೂಸ್: ಬಿಜೆಪಿ ವಿವಾದಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮತ್ತೊಬ್ಬ ನಾಯಕ ನಾಲಿಗೆ ಹರಿಬಿಟ್ಟಿದ್ದಾನೆ. ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷದ ಸಂಸದ ವಾಸಿಮ್ ರಝಾ ಘೋಷಿಸಿದ್ದಾನೆ. ಇದು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಇದೀಗ ನೂಪುರ್ ಬೆಂಬಲಿಸಿದವರ ಹತ್ಯೆಗಳು ನಡೆದಿದೆ. ಈ ಸಂಘರ್ಷಕ್ಕೆ

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಸುಧಾ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಅಭ್ಯರ್ಥಿ

ಸಮಗ್ರ ನ್ಯೂಸ್: ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ತಾವು ಕನ್ಸರ್ವೇಟಿವ್ ಪಕ್ಷದ ಮುಂದಿನ ನಾಯಕ ಮತ್ತು ಯುಕೆ ಪ್ರಧಾನಿ ಅಭ್ಯರ್ಥಿ ಎಂದು ಶುಕ್ರವಾರ ಘೋಷಣೆ ಮಾಡಿದ್ದಾರೆ. ಬ್ರಿಟನ್‌ನ ಪ್ರಧಾನಿ ಹುದ್ದೆಗೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ನಾಯಕತ್ವದ ಸ್ಪರ್ಧೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಬೋರಿಸ್‌ ಜಾನ್ಸನ್ ಅವರ ನಾಯಕತ್ವವನ್ನು ವಿರೋಧಿಸಿ ಸುನಕ್‌ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸುನಕ್‌ ಅವರು ತಾವು ಕನ್ಸರ್‌ವೇಟಿವ್‌ ಪಕ್ಷದ ಬ್ರಾಂಡ್ ಅನ್ನು ರಕ್ಷಿಸುವ ಹಾಗೂ ಆರ್ಥಿಕ ಬಿಕ್ಕಟ್ಟನ್ನು

ಸುಧಾ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಅಭ್ಯರ್ಥಿ Read More »

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದೆ. ಒಂದೇ ಸಮನೆ ಸುರಿದ ಭಾರೀ ಮಳೆಗೆ ಅಮರನಾಥ ಯಾತ್ರಾರ್ಥಿಗಳು ನಿಧನರಾಗಿದ್ದು ಹಲವರು ಗಾಯಗೊಂಡಿದ್ದಾರೆ. ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದಿವೆ. ಅಮರನಾಥ ಯಾತ್ರೆ ಬೇಸ್‌ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ನಿರಂತರ ಕಾರ್ಯನಿರ್ವಹಿಸುತ್ತಿದೆ. ಶುಕ್ರವಾರ ಸಂಜೆ 5.30ಕ್ಕೆ ಮೇಘಸ್ಫೋಟ ಸಂಭವಿಸಿದೆ. ಭಾರಿ

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ Read More »

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ ಅಗಲಿದ ಭಾರತದ ಮಿತ್ರನಿಗಾಗಿ ನಾಳೆ ರಾಷ್ಟ್ರೀಯ ಶೋಕಾಚರಣೆ

ಸಮಗ್ರ ನ್ಯೂಸ್: ‘ಆತ್ಮೀಯ ಸ್ನೇಹಿತ’ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಶಿಂಜೋ ಅಬೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಮತ್ತು ಭಾರತದ ಆಳವಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾಳೆ ದೇಶಾದ್ಯಂತ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ ಅಗಲಿದ ಭಾರತದ ಮಿತ್ರನಿಗಾಗಿ ನಾಳೆ ರಾಷ್ಟ್ರೀಯ ಶೋಕಾಚರಣೆ Read More »

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »