ದೇಶ-ವಿದೇಶ

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ|

ಸಮಗ್ರ ನ್ಯೂಸ್: ಜುಲೈ 18ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿ ಎ ಮೈತ್ರಿಕೂಟ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಬುಡಕಟ್ಟು ಜನಾಂಗದ ಮಹಿಳೆಯೋರ್ವರು ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದರೆ ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಶ್ವಂತ್ ಸಿನ್ಹಾ ಸ್ಪರ್ಧಿಸಿದ್ದರು. ದ್ರೌಪದಿ ಮುರ್ಮು ಅವರಿಗೆ ಯುಪಿಎ ಮೈತ್ರಿಕೂಟದಲ್ಲಿದ್ದ ಕೆಲವೊಂದು ಪಕ್ಷಗಳು ಬೆಂಬಲಿಸಿದ್ದು ಗಮನಾರ್ಹ. […]

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ| ಬುಡಕಟ್ಟು ಜನಾಂಗದ ಮಹಿಳೆಗೊಲಿದ ಅತ್ಯುನ್ನತ ಪಟ್ಟ| Read More »

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ

ಶ್ರೀಲಂಕಾ: ಇಲ್ಲಿನ ನೂತನ ಅಧ್ಯಕ್ಷರಾಗಿ ರನೀಲ್‌ ವಿಕ್ರಮ ಸಿಂಘೇ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ದ್ವೀಪರಾಷ್ಟ್ರದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಇತರನ್ನು ಹಿಂದಿಕ್ಕಿ ಗೆಲುವು ಸಾಧಿಸುವ ಮೂಲಕ ವಿಕ್ರಮಸಿಂಘೇ ಲಂಕೆಯ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶ್ರೀಲಂಕಾ ದ ನೂತನ ಅಧ್ಯಕ್ಷರಾಗಿ ರನೀಲ್ ವಿಕ್ರಮ ಸಿಂಘೇ ಪ್ರಮಾಣವಚನ ಸ್ವೀಕಾರ Read More »

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇಂದು ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇಂದು ವೀರೇಂದ್ರ ಹೆಗ್ಗಡೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಯಾದ ವೀರೇಂದ್ರ ಹೆಗಡೆಯವರು ಜನಪರ, ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿದ್ದಾರೆ. ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯ ಸಭೆಯಿಂದ ನೇರಪ್ರಸಾರ

ರಾಜ್ಯಸಭಾ ನಾಮನಿರ್ದೇಶಿತ ಸದಸ್ಯರಾಗಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರಮಾಣವಚನ Read More »

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ…

ಸಮಗ್ರ ನ್ಯೂಸ್: ಪಶ್ಚಿಮ ಘಟ್ಟಗಳು ಭಾರತೀಯ ಪರ್ಯಾಯ ದ್ವೀಪದ ಪಶ್ಚಿಮ ಕರಾವಳಿಗೆ ಸಮಾನಾಂತರವಾಗಿ ಹಬ್ಬಿದ ಪರ್ವತ ಶ್ರೇಣಿ. ಪಶ್ಚಿಮಘಟ್ಟದ ಶ್ರೇಣಿಯು ಗುಜರಾತ್‌ನಿಂದ ಆರಂಭವಾಗಿ ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯದ ಕನ್ಯಾಕುಮಾರಿವರೆಗೂ ಹಬ್ಬಿದೆ. ಪಶ್ಚಿಮ ಘಟ್ಟಗಳ ಒಟ್ಟು 1,64,280 ಚ.ಕಿ.ಮೀ. ಪ್ರದೇಶದಲ್ಲಿ ಸುಮಾರು 59.940 ಚ.ಕಿ.ಮೀ ವಿಸ್ತೀರ್ಣ ಪ್ರದೇಶ ಅಂದರೆ ಸುಮಾರು ಶೇಕಡಾ 36.49ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಪಶ್ಚಿಮ ಘಟ್ಟಗಳ ಈ ಸೂಕ್ಷ್ಮ ಪರಿಸರವು ಅಪರೂಪದ ಪ್ರಾಣಿಗಳು, ಪಕ್ಷಿಗಳು,

ಪಶ್ಚಿಮ ಘಟ್ಟಗಳ ಉಳಿವಿಗೆ ಕಸ್ತೂರಿ‌ ರಂಗನ್ ವರದಿ ಜಾರಿ| ಜನ ಯಾಕಿಷ್ಟು ಭಯ ಪಡ್ತಾರೆ ಗೊತ್ತಾ? ಅಂಥಾದ್ದೇನಿದೆ ಈ ವರದಿಯಲ್ಲಿ? ಕಂಪ್ಲೀಟ್ ಸ್ಟೋರಿ… Read More »

ಇಂಗ್ಲೇಂಡ್: ಬ್ರಿಟನ್ ಪ್ರಧಾನಿಯಾಗಲು ರಿಷಿ‌ ಸುನಕ್ ಗೆ ಇನ್ನೊಂದೇ ಮೆಟ್ಟಿಲು

ಸಮಗ್ರ ನ್ಯೂಸ್: ಬ್ರಿಟನ್ ಪ್ರಧಾನಿ ರೇಸ್‌ನಲ್ಲಿ ಭಾರತೀಯ ಮೂಲದ ರಿಷಿ ಸುನಕ್ ಐದನೇ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದು 137 ಮತಗಳನ್ನು ಪಡೆದಿದ್ದಾರೆ. ಇದರಿಂದ ಸುನಕ್ ಬ್ರಿಟನ್ ಪ್ರಧಾನಿಯಾಗಲು ಇನ್ನೊಂದೇ ಮೆಟ್ಟಿಲು ಬಾಕಿ ಇದೆ. ಇನ್ನು ಐದನೇ ಸುತ್ತಿನ ಮತದಾನದಲ್ಲಿ 105 ಮತಗಳನ್ನ ಪಡೆದ ವ್ಯಾಪಾರ ಸಚಿವ ಪೆನ್ನಿ ಮೊರ್ಡಾಂಟ್ ಪ್ರಧಾನಿ ರೇಸ್‌ನಿಂದ ಹೊರಗುಳಿದಿದ್ದಾರೆ. ಈಗ ಸುನಕ್, ಲಿಜ್ ಟ್ರಸ್ ಅವರನ್ನು ಎದುರಿಸಲಿದ್ದು, ಅವರು 113 ಮತಗಳನ್ನ ಪಡೆದಿದ್ದಾರೆ. ಎಲ್ಲಾ ಐದು ಹಂತಗಳಲ್ಲಿ ರಿಷಿ ಸುನಕ್ ಅತಿ ಹೆಚ್ಚು

ಇಂಗ್ಲೇಂಡ್: ಬ್ರಿಟನ್ ಪ್ರಧಾನಿಯಾಗಲು ರಿಷಿ‌ ಸುನಕ್ ಗೆ ಇನ್ನೊಂದೇ ಮೆಟ್ಟಿಲು Read More »

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ!

ಸಮಗ್ರ ನ್ಯೂಸ್: ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಹೊರಡಿಸಿರುವ ಆದೇಶವನ್ನು ಅಧಿಸೂಚನೆಯನ್ನು ಅನುಸರಿಸಿದರೆ ರಾಜ್ಯದ ಕರಾವಳಿ, ಮಲೆನಾಡು, ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ವಾಸಿಸುವ ಜನ

ಕಸ್ತೂರಿ ರಂಗನ್ ವರದಿ‌ಯ ಐದನೇ ಅಧಿಸೂಚನೆ ಹೊರಡಿಸಿದ ಪರಿಸರ ಇಲಾಖೆ| ದ.ಕ ಜಿಲ್ಲೆಯ ಈ ಹಳ್ಳಿಗಳು ಡೇಂಜರ್ ಝೋನ್ ನಲ್ಲಿ! Read More »

ಮಂಗಳೂರು: ಸಂಗೀತ ನಿರ್ದೇಶಕ ವನಿಲ್ ವೇಗಸ್ ಗೆ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ| ಮೊದಲ ಬಾರಿಗೆ ಕರಾವಳಿಗೆ ಒಲಿದ ಸಂಗೀತ ಗೌರವ

ಸಮಗ್ರ ನ್ಯೂಸ್: ಮಂಗಳೂರು ಮೂಲದ ಸಂಗೀತ ನಿರ್ದೇಶಕ ವನಿಲ್ ವೇಗಸ್ ರವರು ಸಂಗೀತ ಕ್ಷೇತ್ರದ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ. ಬೆಂಗಳೂರಿನ ರಿಕ್ಕಿ ಕೇಜ್ ತಂಡದ ಮುಖ್ಯಸ್ಥರಾಗಿರುವ ವನಿಲ್, ರಿಕ್ಕಿ ಕೇಜ್- ಸ್ಟೂವರ್ಟ್ ಕೋಪ್ಲಾಂಡ್ ನಿರ್ಮಿತ “ಡಿವೈನ್ ಟೈಡ್ಸ್” ಆಲ್ಬಂಗೆ ಇಂಜಿನೀಯರಿಂಗ್ ಮತ್ತು ಮಿಕ್ಸಿಂಗ್ ವಿಭಾಗದಲ್ಲಿ ಕೆಲಸ ನಿರ್ವಹಿಸಿದ್ದರು. ಅದೇ ವಿಭಾಗದಲ್ಲಿ ಈಗ ಜಗತ್ತಿನಲ್ಲಿಯೇ ಸಂಗೀತ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದು ಕರ್ನಾಟಕದ ಎರಡನೇ ಗ್ರ್ಯಾಮಿ ವಿಜೇತರೆಂಬ ಖ್ಯಾತಿಯನ್ನು ಪಡೆದಿದ್ದಾರೆ. 64 ವರ್ಷಗಳ ಗ್ರ್ಯಾಮಿ

ಮಂಗಳೂರು: ಸಂಗೀತ ನಿರ್ದೇಶಕ ವನಿಲ್ ವೇಗಸ್ ಗೆ ಅತ್ಯುನ್ನತ ಗ್ರ್ಯಾಮಿ ಪ್ರಶಸ್ತಿ| ಮೊದಲ ಬಾರಿಗೆ ಕರಾವಳಿಗೆ ಒಲಿದ ಸಂಗೀತ ಗೌರವ Read More »

ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಮೂವರು ಸೇರಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ. ಇದುವರೆಗೂ ಪರೀಕ್ಷೆ ವೇಳೆ ಅವಮಾನಕರ ತಪಾಸಣೆ ಬಗ್ಗೆ ಮೂರು ದೂರು ದಾಖಲಾಗಿವೆ. ತಮ್ಮ ಮಗಳಿಗಾದ ಅವಮಾನ ಮತ್ತು ಮಾನಸಿಕ ಹಿಂಸೆಯಿಂದ ದೂರು ನೀಡಿದ ವಿದ್ಯಾರ್ಥಿನಿ ತಂದೆಯ ದೂರನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಿರಾಕರಿಸಿದೆ. ದೂರನ್ನು ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ

ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ Read More »

ಡಾಲರ್ ಎದುರು ರೂಪಾಯಿ ದುರ್ಬಲ | ಮೊದಲ ಬಾರಿಗೆ 80ರೂ. ದಾಟಿದ ಭಾರತೀಯ ಕರೆನ್ಸಿ| ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಸಂಭವ

ಸಮಗ್ರ ನ್ಯೂಸ್: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಮಂಗಳವಾರವೂ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರದ

ಡಾಲರ್ ಎದುರು ರೂಪಾಯಿ ದುರ್ಬಲ | ಮೊದಲ ಬಾರಿಗೆ 80ರೂ. ದಾಟಿದ ಭಾರತೀಯ ಕರೆನ್ಸಿ| ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಸಂಭವ Read More »

ದಂತಚೋರರ‌ ಬೆನ್ನಿಗೆ ನಿಂತರಾ ಪ್ರಜ್ವಲ್ ರೇವಣ್ಣ? ಸಿಎಂ ಗೆ ಪತ್ರ ಬರೆದ‌ ಸಂಸದೆ ಮನೇಕಾ ಗಾಂಧಿ

ಸಮಗ್ರ ನ್ಯೂಸ್: ಸಂಸದೆ ಮನೇಕಾ ಗಾಂಧಿ ಸಿಎಂ ಬೊಮ್ಮಾಯಿಗೆ ಬರೆದ ಪತ್ರವೊಂದು ಸದ್ಯ ಭಾರೀ ಸಂಚಲನ ಸೃಷ್ಟಿಸಿದೆ. ಮನೇಕಾ ಗಾಂಧಿ ಬರೆದಿರುವ ಪತ್ರದಲ್ಲಿ ಪ್ರಜ್ವಲ್​ ರೇವಣ್ಣ ಹಾಗೂ ರಾಜ್ಯ ಅರಣ್ಯ ಇಲಾಖೆ ವಿರುದ್ಧ ಭಾರೀ ದೊಡ್ಡ ಆರೋಪವನ್ನೇ ಮಾಡಿದ್ದಾರೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಆನೆ ದಂತ ಪ್ರಕರಣ ಸಂಬಂಧಿಸಿದಂತೆ ಹಾಸನದಿಂದ ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ರಾಷ್ಟ್ರ ರಾಜಧಾನಿ ದೆಹಲಿ ಮಟ್ಟದಲ್ಲೂ ಭಾರೀ ಚರ್ಚೆಯಾಗುತ್ತಿದೆ. ಮನೇಕಾ ಗಾಂಧಿ ಈ ಕುರಿತು ರಾಜ್ಯ ಅರಣ್ಯ ಇಲಾಖೆಯಲ್ಲಿ

ದಂತಚೋರರ‌ ಬೆನ್ನಿಗೆ ನಿಂತರಾ ಪ್ರಜ್ವಲ್ ರೇವಣ್ಣ? ಸಿಎಂ ಗೆ ಪತ್ರ ಬರೆದ‌ ಸಂಸದೆ ಮನೇಕಾ ಗಾಂಧಿ Read More »