ದೇಶ-ವಿದೇಶ

60ನೇ ಹುಟ್ಟು ಹಬ್ಬದ ಸಂದರ್ಭ 60ಸಾವಿರ ಕೋಟಿ ದಾನ ನೀಡಲು ನಿರ್ಧರಿಸಿದ ಅದಾನಿ

ಸಮಗ್ರ ನ್ಯೂಸ್: ಏಷ್ಯಾದ ಶ್ರೀಮಂತ ವ್ಯಕ್ತಿ, ಅದಾನಿ ಗ್ರೂಪ್ ಕಂಪನಿ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಕುಟುಂಬವು ಅವರ 60 ನೇ ಹುಟ್ಟುಹಬ್ಬದ ಪ್ರಯುಕ್ತ 60ಸಾವಿರ ಕೋಟಿ ರೂಪಾಯಿಗಳನ್ನು ಸಾಮಾಜಿಕ ಕಾರ್ಯಗಳಿಗೆ ದೇಣಿಗೆ ನೀಡುವ ವಾಗ್ದಾನ ಮಾಡಿದೆ. ಸಾಮಾಜಿಕ ಕಾರ್ಯಗಳಿಗೆ ಈ ಹಣವನ್ನು ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಅದಾನಿ ಫೌಂಡೇಶನ್ ಕಾರ್ಯ ನಿರ್ವಹಿಸುತ್ತದೆ. ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಅದಾನಿ ಫೌಂಡೇಶನ್ ಈ ದೇಣಿಗೆಯನ್ನು ನಿರ್ವಹಿಸುತ್ತದೆ ಎಂದು ಅದು ಬ್ಲೂಮ್‌ಬರ್ಗ್‌ ಚಾನಲ್ […]

60ನೇ ಹುಟ್ಟು ಹಬ್ಬದ ಸಂದರ್ಭ 60ಸಾವಿರ ಕೋಟಿ ದಾನ ನೀಡಲು ನಿರ್ಧರಿಸಿದ ಅದಾನಿ Read More »

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ. ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ Read More »

ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ

ಸಮಗ್ರ ನ್ಯೂಸ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಮಗೆ ಭಾರತ ನೀಡಿದ ಹಣಕಾಸಿನ ನೆರವು ದತ್ತಿ ದೇಣಿಗೆಗಳಲ್ಲ’ ಎಂದು ಶ್ರೀಲಂಕಾದ ಸಂಸತ್ತಿಗೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ತಿಳಿಸಿದ್ದಾರೆ. ಅಲ್ಲದೆ, ಈ ಹಣಕಾಸಿನ ನೆರವಿನ ಸಾಲವನ್ನು ಮರುಪಾವತಿಸಲೇಬೇಕು ಎಂದು ಹೇಳಿದ್ದಾರೆ. ಭಾರತದಿಂದ ನಾವು ಸಾಲದ ರೂಪದಲ್ಲಿ ₹31 ಸಾವಿರ ಕೋಟಿ ನೆರವು ಪಡೆದಿದ್ದೇವೆ. ಅಲ್ಲದೆ, ಇನ್ನೂ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಭಾರತಕ್ಕೆ ಕೋರಿದ್ದೆವು. ಆದರೆ, ಇಂಥ ಸಂದರ್ಭದಲ್ಲಿ ಭಾರತವೊಂದೇ ನಿರಂತರವಾಗಿ ನಮ್ಮ ನೆರವಿಗೆ ನಿಲ್ಲಲು ಸಾಧ್ಯವಿಲ್ಲ. ನಮಗೆ

ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ Read More »

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್

ಸಮಗ್ರ ನ್ಯೂಸ್: ತಾಂತ್ರಿಕ ದೋಷದಿಂದ ಸರಕು ಸಾಗಾಟದ ಹಡಗು ಅರಬ್ಬೀ ಸಮುದ್ರದಲ್ಲಿ ಮುಳುಗುವ ಭೀತಿ ಎದುರಿಸುತ್ತಿರುವ ಘಟನೆ ಮಂಗಳೂರಿನ 5.6 ನಾಟೆಕಲ್ ಮೈಲ್ ದೂರದ ಆಳ ಸಮುದ್ರದಲ್ಲಿ ನಡೆದಿದೆ. ಮಲೇಷ್ಯಾದಿಂ‌ದ ಲೆಬನಾಲ್‌ಗೆ ಸಾಗುತ್ತಿದ್ದ ಪ್ರಿನ್ಸೆಸ್ ಮಿರಾಲ್ ಎಂಬ ಹೆಸರಿನ ಹಡಗು ಇದಾಗಿದ್ದು, ಹಡಗಿನಲ್ಲಿ ರಂಧ್ರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವಘಢ ಸಂಭವಿಸಿದೆ. ಹಡಗಿನಲ್ಲಿದ್ದ 15 ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. ಈ ನೌಕೆ ಲೆಬನಾಲ್ ದೇಶದಿಂದ ಮಲೇಶ್ಯಾದಿಂದ ಉಕ್ಕಿನ ಕಾಯಿಲ್ ಗಳನ್ನು ಸಾಗಿಸುತಿತ್ತು. ಉಳ್ಳಾಲ ಕಡಲಕಿನಾರೆಯಿಂದ

ಮಂಗಳೂರು: ತಾಂತ್ರಿಕ ದೋಷದಿಂದ ಅವಘಡಕ್ಕೆ ಒಳಗಾದ ವಿದೇಶಿ ಹಡಗು| 15 ಜನರ ರಕ್ಷಣೆ ಮಾಡಿದ ಕರಾವಳಿ ಕೋಸ್ಟ್ ಗಾರ್ಡ್ Read More »

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ. ಅಧಿಕಾರಿಗಳು ಹೆಚ್ಚಿನ ಸಾವುನೋವುಗಳನ್ನು ಪರಿಶೀಲಿಸುತ್ತಿರುವುದರಿಂದ ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ನಲ್ಲಿಯೂ ಸಾವುಗಳು ವರದಿಯಾಗಿವೆ‌ ಎಂದು

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು Read More »

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರು ಜಾರ್ಖಂಡ್ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 64 ವರ್ಷದ ದ್ರೌಪದಿ ಮುರ್ಮು ಅವರು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಾಪೋಸಿ ಗ್ರಾಮದಲ್ಲಿ 1958 ರ

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ Read More »

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ

ಸಮಗ್ರ ನ್ಯೂಸ್: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ. ಅದರ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ Read More »

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಜನ್ಮದಿನದಂದು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹೀರಾಬೆನ್ ಮೋದಿ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ಗಾಂಧಿನಗರದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ವಡ್ನಗರ್‌ನ ಹಟಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಯಸ್ಸಿನಲ್ಲೂ ಹೀರಾಬೆನ್ ಮೋದಿ ಆರೋಗ್ಯವಾಗಿದ್ದಾರೆ. ಅವರು ತಮ್ಮ ಕಿರಿಯ ಮಗ ಪಂಕಜ್ ಮೋದಿ ಜೊತೆಗೆ

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ Read More »

ತೀವ್ರ ಹದೆಗೆಟ್ಟ ಪುಟಿನ್ ಆರೋಗ್ಯ| ನಿತ್ರಾಣಗೊಂಡ ಶರೀರ; ಕಷ್ಟಪಡುತ್ತಿರುವ ರಷ್ಯಾ ಅಧ್ಯಕ್ಷ

ಸಮಗ್ರ ನ್ಯೂಸ್: ಇತ್ತೀಚೆಗೆ ಬಿಡುಗಡೆಯಾದ ವೀಡಿಯೊದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅಲುಗಾಡುತ್ತಿದ್ದು ತನ್ನ ಕಾಲುಗಳ ಮೇಲೆ ಬಲಿಷ್ಠವಾಗಿ ನಿಂತುಕೊಳ್ಳಲು ಹೆಣಗಾಡುತ್ತಿರುವುದು ಕಾಣಬಹುದಾಗಿದೆ. ಇದು ಅವರ ಆರೋಗ್ಯದ ಬಗ್ಗೆ ವಿಶ್ವಾದ್ಯಂತ ಊಹಾಪೋಹಗಳು ಮತ್ತು ಕಳವಳಗಳಿಗೆ ಕಾರಣವಾಗಿದೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಕ್ರೆಮ್ಲಿನ್‌ನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಉಪಸ್ಥಿತರಿದ್ದ ಪುಟಿನ್ ನಿಂತುಕೊಳ್ಳಲು ಹೆಣಗಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ವಿಡಿಯೋದ ಸತ್ಯಾಸತ್ಯತೆಗಳು ದೃಢಗೊಂಡಿಲ್ಲ. ಜೂನ್ 12ರಂದು ಚಲನಚಿತ್ರ ನಿರ್ಮಾಪಕ ನಿಕಿತಾ ಮಿಖೈಲೋವ್ ಅವರಿಗೆ

ತೀವ್ರ ಹದೆಗೆಟ್ಟ ಪುಟಿನ್ ಆರೋಗ್ಯ| ನಿತ್ರಾಣಗೊಂಡ ಶರೀರ; ಕಷ್ಟಪಡುತ್ತಿರುವ ರಷ್ಯಾ ಅಧ್ಯಕ್ಷ Read More »