ದೇಶ-ವಿದೇಶ

ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ

ಸಮಗ್ರ ನ್ಯೂಸ್: ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಮೂವರು ಸೇರಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ. ಇದುವರೆಗೂ ಪರೀಕ್ಷೆ ವೇಳೆ ಅವಮಾನಕರ ತಪಾಸಣೆ ಬಗ್ಗೆ ಮೂರು ದೂರು ದಾಖಲಾಗಿವೆ. ತಮ್ಮ ಮಗಳಿಗಾದ ಅವಮಾನ ಮತ್ತು ಮಾನಸಿಕ ಹಿಂಸೆಯಿಂದ ದೂರು ನೀಡಿದ ವಿದ್ಯಾರ್ಥಿನಿ ತಂದೆಯ ದೂರನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಿರಾಕರಿಸಿದೆ. ದೂರನ್ನು ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ

ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ Read More »

ಡಾಲರ್ ಎದುರು ರೂಪಾಯಿ ದುರ್ಬಲ | ಮೊದಲ ಬಾರಿಗೆ 80ರೂ. ದಾಟಿದ ಭಾರತೀಯ ಕರೆನ್ಸಿ| ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಸಂಭವ

ಸಮಗ್ರ ನ್ಯೂಸ್: ಡಾಲರ್ ಎದುರು ದುರ್ಬಲಗೊಳ್ಳುತ್ತಿರುವ ರೂಪಾಯಿ ಮೌಲ್ಯ ಇದೇ ಮೊದಲ ಬಾರಿಗೆ 80 ರೂ. ಮುಟ್ಟಿದೆ. ಸೋಮವಾರ ವಿದೇಶಿ ವಿನಿಮಯ ಮಾರುಕಟ್ಟೆಯು 79.76 ರೂಪಾಯಿ ಮೂಲಕ ವಹಿವಾಟು ಆರಂಭಿಸಿ, ಮಧ್ಯಂತರದಲ್ಲಿ 80 ರೂ. ಗಡಿ ದಾಟಿತು. ಕಡೆಗೆ ಕೊಂಚ ಚೇತರಿಸಿಕೊಂಡು 16 ಪೈಸೆ ಇಳಿಕೆ ಆಗಿ ದಿನ ಅಂತ್ಯಕ್ಕೆ 79.98 ರೂ.ಗೆ ವಿನಿಮಯ ದರ ಸ್ಥಿರಗೊಂಡಿತು. ಮಂಗಳವಾರವೂ ಆರಂಭಿಕ ವಹಿವಾಟಿನಲ್ಲಿ ಶೇ.0.03 ಕುಸಿತದೊಂದಿಗೆ ಮತ್ತೆ 80.02 ರೂ. ಗಡಿ ದಾಟಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರದ

ಡಾಲರ್ ಎದುರು ರೂಪಾಯಿ ದುರ್ಬಲ | ಮೊದಲ ಬಾರಿಗೆ 80ರೂ. ದಾಟಿದ ಭಾರತೀಯ ಕರೆನ್ಸಿ| ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಸಂಭವ Read More »

ದಂತಚೋರರ‌ ಬೆನ್ನಿಗೆ ನಿಂತರಾ ಪ್ರಜ್ವಲ್ ರೇವಣ್ಣ? ಸಿಎಂ ಗೆ ಪತ್ರ ಬರೆದ‌ ಸಂಸದೆ ಮನೇಕಾ ಗಾಂಧಿ

ಸಮಗ್ರ ನ್ಯೂಸ್: ಸಂಸದೆ ಮನೇಕಾ ಗಾಂಧಿ ಸಿಎಂ ಬೊಮ್ಮಾಯಿಗೆ ಬರೆದ ಪತ್ರವೊಂದು ಸದ್ಯ ಭಾರೀ ಸಂಚಲನ ಸೃಷ್ಟಿಸಿದೆ. ಮನೇಕಾ ಗಾಂಧಿ ಬರೆದಿರುವ ಪತ್ರದಲ್ಲಿ ಪ್ರಜ್ವಲ್​ ರೇವಣ್ಣ ಹಾಗೂ ರಾಜ್ಯ ಅರಣ್ಯ ಇಲಾಖೆ ವಿರುದ್ಧ ಭಾರೀ ದೊಡ್ಡ ಆರೋಪವನ್ನೇ ಮಾಡಿದ್ದಾರೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಆನೆ ದಂತ ಪ್ರಕರಣ ಸಂಬಂಧಿಸಿದಂತೆ ಹಾಸನದಿಂದ ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ರಾಷ್ಟ್ರ ರಾಜಧಾನಿ ದೆಹಲಿ ಮಟ್ಟದಲ್ಲೂ ಭಾರೀ ಚರ್ಚೆಯಾಗುತ್ತಿದೆ. ಮನೇಕಾ ಗಾಂಧಿ ಈ ಕುರಿತು ರಾಜ್ಯ ಅರಣ್ಯ ಇಲಾಖೆಯಲ್ಲಿ

ದಂತಚೋರರ‌ ಬೆನ್ನಿಗೆ ನಿಂತರಾ ಪ್ರಜ್ವಲ್ ರೇವಣ್ಣ? ಸಿಎಂ ಗೆ ಪತ್ರ ಬರೆದ‌ ಸಂಸದೆ ಮನೇಕಾ ಗಾಂಧಿ Read More »

ವಿದೇಶದಿಂದ ಬಂದ ಯುವಕನಲ್ಲಿ ಮಂಕಿಪಾಕ್ಸ್ ಲಕ್ಷಣ| ಆಸ್ಪತ್ರೆಗೆ ದಾಖಲಾದ ಯುವಕ

ಸಮಗ್ರ ನ್ಯೂಸ್: ವಿದೇಶದಿಂದ ಬಂದ ಯುವಕನೋರ್ವನಲ್ಲಿ ಮಂಕಿಪಾಕ್ಸ್‌ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತನನ್ನು ಕಣ್ಣೂರಿನ ಪರಿಯಾರಂ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಕಣ್ಣೂರು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ವಿದೇಶದಿಂದ ಶನಿವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಇಲ್ಲಿಗೆ ಬಂದಿದ್ದ ಯುವಕನಲ್ಲಿ ಮಂಕಿಪಾಕ್ಸ್‌ನ ಲಕ್ಷಣಗಳು ಕಾಣಿಸಿದ್ದರಿಂದ ಆತ ಸ್ವತಃ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಆರೋಗ್ಯಾಧಿಕಾರಿ ತಿಳಿಸಿದರು. ಯುವಕನ ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ಫ‌ಲಿತಾಂಶ ಬಂದ ಬಳಿಕವಷ್ಟೇ ಆತನಿಗೆ ಮಂಕಿಪಾಕ್ಸ್‌ ತಗಲಿದೆಯೇ ಎಂಬುದು ಸ್ಪಷ್ಟವಾಗಲಿದೆ. ಪ್ರಸ್ತುತ

ವಿದೇಶದಿಂದ ಬಂದ ಯುವಕನಲ್ಲಿ ಮಂಕಿಪಾಕ್ಸ್ ಲಕ್ಷಣ| ಆಸ್ಪತ್ರೆಗೆ ದಾಖಲಾದ ಯುವಕ Read More »

3 ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಗಂಡು ಮಗು ಸಾವು

ಸಮಗ್ರ ನ್ಯೂಸ್: ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಪರಿಣಾಮ ನಾಲ್ಕು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆಯೊಂದು ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ. ಬರೇಲಿಯ ಡುಂಕಾ ಗ್ರಾಮದ ನಿವಾಸಿ ನಿರ್ದೇಶ್ ಉಪಾಧ್ಯಾಯ (25) ಅವರು ಶುಕ್ರವಾರ ಸಂಜೆ ತಮ್ಮ ಪತ್ನಿ ಮತ್ತು ನಾಲ್ಕು ತಿಂಗಳ ಮಗುವಿನೊಂದಿಗೆ

3 ಅಂತಸ್ತಿನ ಮನೆಯ ಛಾವಣಿಯಿಂದ ಮಗುವನ್ನು ಎಸೆದ ಕೋತಿ; 4 ತಿಂಗಳ ಗಂಡು ಮಗು ಸಾವು Read More »

ಸೇತುವೆಯಿಂದ ನರ್ಮದಾ ನದಿಗೆ ಉರುಳಿದ ಬಸ್| 12 ಜನರ ದುರ್ಮರಣ

ಸಮಗ್ರ ನ್ಯೂಸ್: 100 ಅಡಿ ಎತ್ತರವಿದ್ದ ಸೇತುವೆಯ ಮೇಲಿಂದ ಬಸ್ಸೊಂದು ನರ್ಮದಾ ನದಿಗೆ ಬಿದ್ದಿದ್ದು ಈ ಭೀಕರ ದುರ್ಘಟನೆಯಲ್ಲಿ ಕನಿಷ್ಠ 12 ಬಸ್ ಪ್ರಯಾಣಿಕರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಧಾರ್ ಜಿಲ್ಲೆಯ ಖಲ್ಘಾಟ್ ಸಂಜಯ್ ಸೇತುವೆಯ ಮೇಲೆ ಸೋಮವಾರ ಪ್ರಯಾಣಿಸುತ್ತಿದ್ದ ಮಹಾರಾಷ್ಟ್ರ ರೋಡ್‌ವೇಸ್ ಬಸ್ 100 ಅಡಿ ಎತ್ತರದಿಂದ ನರ್ಮದಾ ನದಿಗೆ ಬಿದ್ದು ಬಿದ್ದು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಬಸ್ ಪ್ರಯಾಣಿಕರ ಪೈಕಿ 15 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸಹ ವರದಿಯಾಗಿದೆ. ನರ್ಮದಾ ನದಿಯ ಆಳದಲ್ಲಿ ಸಂಪೂರ್ಣವಾಗಿ

ಸೇತುವೆಯಿಂದ ನರ್ಮದಾ ನದಿಗೆ ಉರುಳಿದ ಬಸ್| 12 ಜನರ ದುರ್ಮರಣ Read More »

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ| ನೇರಪ್ರಸಾರ

ಸಮಗ್ರ ನ್ಯೂಸ್: ಇಂದಿನಿಂದ ಆ.12ರ ವರೆಗೆ ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 24 ವಿಧೇಯಕಗಳನ್ನು ಮಂಡಿಸಲು ಮುಂದಾಗಿದೆ. ಇಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದು, ಮುಂದೆ 338 ವಿಧೇಯಕಗಳ ಕುರಿತು ಚರ್ಚೆ ನಡೆಯಲಿದೆ. ಒಟ್ಟಾರೆ ಈ ಬಾರಿಯ ಅಧಿವೇಶನ ಕುತೂಹಲ ಕೆರಳಿಸಿದೆ. ವಿಡಿಯೋ ಕೃಪೆ: ಸಂಸದ್ ಟಿವಿ

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ| ನೇರಪ್ರಸಾರ Read More »

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಮೊದಲ ದಿನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು ಮತದಾನದ ನಂತರ, ಇದೇ ೨೧ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಹಾಲಿ ಇರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಇದೇ ೨೪ರಂದು ಕೊನೆಗೊಳ್ಳುತ್ತಿದೆ. ಈ ನಡುವೆ ಉಪರಾಷ್ಟ್ರಪತಿ ಸ್ಥಾನಕ್ಕೆ ಕೂಡ ಮುಂದಿನ ತಿಂಗಳು ಆಗಸ್ಟ್ ೬ರಂದು

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ Read More »

ನಾಳೆಯಿಂದ ಅಗತ್ಯ ವಸ್ತುಗಳ ಮೇಲೆ‌ ಜಿಎಸ್ ಟಿ ಬರೆ| ಅಚ್ಚೇದಿನದ ಮತ್ತೊಂದು ಕೊಡುಗೆ ಎಂದ ಗ್ರಾಹಕ

ಸಮಗ್ರ ನ್ಯೂಸ್: ಪೆಟ್ರೋಲ್, ಡಿಸೇಲ್, ಅಡುಗೆ ಎಣ್ಣೆ ದರ ಸದ್ಯ ಕೊಂಚ ಇಳಿಕೆ ಕಾಣುತ್ತಿರುವ ಬೆನ್ನಲ್ಲೇ ಕೊಂಚ ರಿಲಾಕ್ಸ್ ಆಗಿದ್ದ ದೇಶವಾಸಿಗಳಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ಶಾಕ್ ಕೊಟ್ಟಿದೆ. ಕೊಂಚ ಸುಧಾರಿಸಿಕೊಳ್ಳುವ ಜೊತೆಗೆ ನಾಳೆಯಿಂದ ಅಗತ್ಯ ವಸ್ತುಗಳು, ಆಹಾರ ವಸ್ತುಗಳ ಮೇಲೆ ಜಿಎಸ್‌ಟಿ ಬರೆ ಬೀಳುತ್ತಿದ್ದು, ದುನಿಯಾ ಮತ್ತಷ್ಟು ದುಬಾರಿಯಾಗಲಿದೆ. ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಆಹಾರ ಉತ್ಪನ್ನಗಳ ಮೇಲೆ ಜಿಎಸ್‌ಟಿ ವಿಧಿಸಲು ನಿರ್ಧರಿಸಲಾಗಿದೆ. ಈ ದುಬಾರಿ‌ ತೆರಿಗೆಯಿಂದಾಗಿ ಗ್ರಾಹಕ ಇದೇನಾ ಅಚ್ಚೇದಿನ್

ನಾಳೆಯಿಂದ ಅಗತ್ಯ ವಸ್ತುಗಳ ಮೇಲೆ‌ ಜಿಎಸ್ ಟಿ ಬರೆ| ಅಚ್ಚೇದಿನದ ಮತ್ತೊಂದು ಕೊಡುಗೆ ಎಂದ ಗ್ರಾಹಕ Read More »

ವಿಷಪೂರಿತ ಆಹಾರ ಸೇವನೆಯಿಂದ ಮದರಸಾ ವಿದ್ಯಾರ್ಥಿ ಸಾವು ; ಐದು ಮಂದಿ ಅಸ್ವಸ್ಥ

ಆಂಧ್ರಪ್ರದೇಶ: 12 ವರ್ಷ ಪ್ರಾಯದ ಮದರಸಾ ವಿದ್ಯಾರ್ಥಿ ಮೃತಪಟ್ಟಿದ್ದು, ಐವರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆಯೊಂದು ಆಂಧ್ರದ ಪಲ್ನಾಡು ಜಿಲ್ಲೆಯ ಗುರಜಾಲ ಮಂಡಲದಲ್ಲಿರುವ ಇಸ್ಲಾಮಿಯಾ ನೂರುಲ್ ಹುದಾ ಮದ್ರಸಾದಲ್ಲಿ ನಡೆದಿದೆ. ಮದರಸಾ ವಿದ್ಯಾರ್ಥಿ ಮುನ್ನಾ(12) ಮೃತ ಬಾಲಕ. ತರಕಾರಿ ಸೊಪ್ಪಿನ ಪದಾರ್ಥ ಸೇವಿಸಿದ ಬಳಿಕ ಮುನ್ನಾ ಸಾವನ್ನಪ್ಪಿದ್ದು, ಐವರು ವಿದ್ಯಾರ್ಥಿಗಳು ವಿಷಪೂರಿತ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡಿದ್ದಾರೆ. ಗುರಜಾಲ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮೇಂದ್ರ ಬಾಬು ಅವರು ಈ‌ ಬಗ್ಗೆ ಪ್ರತಿಕ್ರಿಯಿಸಿದ್ದು, ಮದರಸಾದ ಬಳಿ ಆರು ಮಂದಿ ಮದರಸಾ ವಿದ್ಯಾರ್ಥಿಗಳು

ವಿಷಪೂರಿತ ಆಹಾರ ಸೇವನೆಯಿಂದ ಮದರಸಾ ವಿದ್ಯಾರ್ಥಿ ಸಾವು ; ಐದು ಮಂದಿ ಅಸ್ವಸ್ಥ Read More »