ದೇಶ-ವಿದೇಶ

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಗರ್ | ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಘೋಷಣೆ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಚುನಾವಣಾ ಪ್ರಚಾರ ನಡೆಯುತ್ತಿರುವ ನಡುವೆಯೇ, ಭಾರತೀಯ ಜನತಾ ಪಕ್ಷ ಸಂಸದೀಯ ಮಂಡಳಿ ಸಭೆ ಶನಿವಾರ ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿ ಜಗದೀಪ್ ಧಂಕರ್’ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಬಿಜೆಪಿ

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಗರ್ | ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಘೋಷಣೆ Read More »

ಆತನ ಜೊತೆಗಿದ್ದು ಸಂಬಂಧ ಕೆಟ್ಟಾಗ ಅತ್ಯಾಚಾರ ಮಾಡ್ದ ಅಂತ ಹೇಳೋಹಾಗಿಲ್ಲ – ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು, ಸಂಬಂಧ ಕೆಟ್ಟ ಮೇಲೆ ಅತ್ಯಾಚಾರವಾಯ್ತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿತ್ತಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ‌ನಡೆಸಿದ ಕೋರ್ಟ್ ಈ ನಿರ್ಧಾರ ಪ್ರಕಟಿಸಿದೆ. ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು

ಆತನ ಜೊತೆಗಿದ್ದು ಸಂಬಂಧ ಕೆಟ್ಟಾಗ ಅತ್ಯಾಚಾರ ಮಾಡ್ದ ಅಂತ ಹೇಳೋಹಾಗಿಲ್ಲ – ಸುಪ್ರೀಂ ಕೋರ್ಟ್ Read More »

ಸಮುದ್ರದಲ್ಲಿ ಕೊಚ್ಚಿಹೋದ ಒಂದೇ ಕುಟುಂಬ| ಓಮಾನ್ ಕರಾವಳಿಯಲ್ಲಿ ಭಾರತೀಯ ಕುಟುಂಬ ಜಲಸಮಾಧಿ

ಸಮಗ್ರ ನ್ಯೂಸ್: ಒಂದೇ ಕುಟುಂಬದ ಮೂವರು ಸಮುದ್ರ ಪಾಲಾಗಿರುವ ಘಟನೆ ಒಮಾನ್ ಕರಾವಳಿ ತೀರದಲ್ಲಿ ನಡೆದಿದೆ. ಕೊಚ್ಚಿಹೋದ ಮೂವರು ಭಾರತೀಯ ಮೂಲದವರೆಂದು ತಿಳಿದುಬಂದಿದೆ. ರಜೆಯನ್ನು ಆನಂದವಾಗಿ ಕಳೆಯಲು ಹೋಗಿದ್ದ ಕುಟುಂಬಕ್ಕೀಗ ಬರಸಿಡಿಲು ಬಡಿದಂತಾಗಿದೆ. ಪತಿ ತನ್ನ ಮಕ್ಕಳನ್ನು ಕಳೆದುಕೊಂಡ ಮಹಿಳೆಯ ಆಕ್ರಂದನ ಮುಗಿಲು ಮುಟ್ಟಿತ್ತು. ದೈತ್ಯಾಕಾರ ಅಲೆಗಳಿಗೆ ಕೊಚ್ಚಿಹೋಗಿದ್ದ ತಂದೆ-ಮಗನ ಮೃತದೇಹ ಪತ್ತೆಯಾಗಿದ್ದು, ಬಾಲಕಿ ಕಣ್ಮರೆಯಾಗಿದ್ದಾಳೆ. ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳು ಬಾಲಕಿ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಶಶಿಕಾಂತ್ ಮೆಕ್ಯಾನಿಕಲ್ ಇಂಜಿನಿಯರ್

ಸಮುದ್ರದಲ್ಲಿ ಕೊಚ್ಚಿಹೋದ ಒಂದೇ ಕುಟುಂಬ| ಓಮಾನ್ ಕರಾವಳಿಯಲ್ಲಿ ಭಾರತೀಯ ಕುಟುಂಬ ಜಲಸಮಾಧಿ Read More »

ಮಳೆಗೆ ನಲುಗಿದ‌ ಮಹಾರಾಷ್ಟ್ರ| ಶತಕ ದಾಟಿದ ಸಾವಿನ ಸಂಖ್ಯೆ; ಜನಜೀವನ ಅಸ್ತವ್ಯಸ್ಥ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮಳೆಯಿಂದಾದ ಅನಾಹುತದಿಂದಾಗಿ ಸಾವಿನ ಸಂಖ್ಯೆ 100ರ ಗಡಿ ದಾಟಿದೆ. ಜೂನ್​ 1 ರಿಂದ ಈವರೆಗೆ 102 ಮಂದಿ ಮೃತಪಟ್ಟಿದ್ದು, ನಿನ್ನೆ ಒಂದೇ ದಿನದಲ್ಲಿ ಮೂವರು ಮೃತಪಟ್ಟಿರುವುದು ವರದಿಯಾಗಿದೆ. ಬುಲ್ಧಾನಾ, ನಾಸಿಕ್​ ಮತ್ತು ನಂದುಬಾರ್​ ಜಿಲ್ಲೆಯಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭೂ ಕುಸಿತ, ಮರಗಳು ಉರುಳಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿದ್ದು, 20 ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ಹಳ್ಳಿಗಳಲ್ಲಿರುವ ಮನೆಗಳು ಸಹ ಕಾಣಿಸದಷ್ಟು

ಮಳೆಗೆ ನಲುಗಿದ‌ ಮಹಾರಾಷ್ಟ್ರ| ಶತಕ ದಾಟಿದ ಸಾವಿನ ಸಂಖ್ಯೆ; ಜನಜೀವನ ಅಸ್ತವ್ಯಸ್ಥ Read More »

ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ!

ಸಮಗ್ರ ನ್ಯೂಸ್: ಮಕ್ಕಳ ಮುಂದೆಯೇ ಪತ್ನಿಯನ್ನು ಕಡಾಯಿಯಲ್ಲಿ ಹಾಕಿ ಬೇಯಿಸಿ ಹತ್ಯೆ ಮಾಡಿರುವ ಭೀಕರ ಕೃತ್ಯವೊಂದು ಪಾಕಿಸ್ತಾನದ ಸಿಂದ್ ಪ್ರಾಂತ್ಯದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಆರು ಮಕ್ಕಳ ಮುಂದೆ ತನ್ನ ಹೆಂಡತಿಯನ್ನು ಕಡಾಯಿಯಲ್ಲಿ ಬೇಯಿಸಿ ಹತ್ಯೆ ಮಾಡಿ ಕ್ರೂರತೆ ಮೆರೆದಿದ್ದಾನೆ. ವರದಿಗಳ ಪ್ರಕಾರ ಘಟನೆಯ ನಂತರ, ಪೊಲೀಸರು ಬುಧವಾರ ನಗರದ ಗುಲ್ಶನ್-ಎ-ಇಕ್ಬಾಲ್ ಪ್ರದೇಶದ ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಪ್ಯಾನ್‌ನಲ್ಲಿ ಮೃತ ನರ್ಗೀಸ್ ಶವವನ್ನು ಪತ್ತೆ ಹಚ್ಚಿದ್ದಾರೆ. ಈ ಮೃತ ಮಹಿಳೆಯ ಪತಿ ಶಾಲೆಯಲ್ಲಿ ವಾಚ್‌ಮನ್ ಆಗಿ

ಹೆಂಡತಿಯನ್ನು ಕೊಂದು ಕಡಾಯಿಯಲ್ಲಿ ಬೇಯಿಸಿದ ಗಂಡ| ಮಕ್ಕಳ ಮುಂದೆಯೇ ನಡೆಯಿತು ಘನಘೋರ ಕೃತ್ಯ! Read More »

ಕೈಕೊಟ್ಟ ಟ್ವಿಟರ್ ಸರ್ವರ್; ಬಳಕೆದಾರರ ಪರದಾಟ

ಸಮಗ್ರ ನ್ಯೂಸ್: ಭಾರತದ ಹಲವಾರು ನಗರಗಳಲ್ಲಿ ಮೈಕ್ರೋ-ಬ್ಲಾಗಿಂಗ್ ಸೇವೆ ಟ್ವಿಟರ್ ಸರ್ವರ್‌ ಡೌನ್‌ ಆಗಿದ್ದು, ಸೇವೆ ಲಭಿಸದೇ ಬಳಕೆದಾರರು ಪರದಾಡುತ್ತಿದ್ದಾರೆ. ಹಲವಾರು ಬಳಕೆದಾರರು ಫೋನ್‌ಗಳು ಮತ್ತು ಡೆಸ್ಕ್ ಟಾಪ್ಗಳೆರಡರಲ್ಲೂ ಟ್ವಿಟ್ಟರ್ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ಭಾರತದಲ್ಲಿ ಸಂಜೆ 4:45 ರಿಂದ ಸಂಜೆ 5:00 ರವರೆಗೆ ಟ್ವಿಟ್ಟರ್‌ನ ದೂರುಗಳು ಹೆಚ್ಚಾಗುತ್ತಲೇ ಇವೆ. ಬೆಂಗಳೂರು, ಮುಂಬೈ, ದೆಹಲಿ ಮತ್ತು ಹೈದರಾಬಾದ್‌ನಿಂದ ಪ್ರಕರಣಗಳು ವರದಿಯಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಕೈಕೊಟ್ಟ ಟ್ವಿಟರ್ ಸರ್ವರ್; ಬಳಕೆದಾರರ ಪರದಾಟ Read More »

ಮತ್ತೆ ಮುನ್ನಲೆಗೆ ಬಂದ ಹಿಜಾಬ್ ವಿವಾದ| ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆಗೆ ಒಪ್ಪಿಗೆ

ಸಮಗ್ರ ನ್ಯೂಸ್: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ವಿವಾದ ಕುರಿತ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಅಡ್ವೊಕೇಟ್ ಪ್ರಶಾಂತ್ ಭೂಷಣ್ ಇಂದು ಸುಪ್ರೀಂ ಕೋರ್ಟ್ ನಲ್ಲಿ ಕಲಾಪ ಆರಂಭ ವೇಳೆ ನ್ಯಾಯಪೀಠದ ಗಮನಕ್ಕೆ ತಂದರು. ಕರ್ನಾಟಕದ ಹಿಜಾಬ್ ವಿವಾದ ವಿಚಾರಣೆಯನ್ನು ಕೈಗೆತ್ತಿಕೊಂಡಿಲ್ಲ. ಮಾರ್ಚ್ ತಿಂಗಳಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು

ಮತ್ತೆ ಮುನ್ನಲೆಗೆ ಬಂದ ಹಿಜಾಬ್ ವಿವಾದ| ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆಗೆ ಒಪ್ಪಿಗೆ Read More »

ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ‌ ತಗಾದೆ; ಕೇಂದ್ರ ಸ್ಪಷ್ಟನೆ

ಸಮಗ್ರ ನ್ಯೂಸ್: ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಅನ್ನೋದು ವಿಪಕ್ಷಗಳ ಪ್ರಮುಖ ಆರೋಪ. ಸಾಮಾನ್ಯವಾಗಿ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳು ಸೌಮ್ಯ ಸಂದೇಶ ಸಾರುತ್ತವೆ. ಆದರೆ ಈ ಹೊಸ ಶಿಲ್ಪದಲ್ಲಿ ‘ನರಭಕ್ಷಕ ಪ್ರವೃತ್ತಿ’ ರೀತಿಯಲ್ಲಿ ಬಿಂಬಿಸಲಾಗಿದೆ. ಸಾಮಾನ್ಯ ಲಾಂಛನದಲ್ಲಿ ಸಿಂಹದ ಹಲ್ಲುಗಳು ಕಾಣಿಸಲ್ಲ. ಆದರೆ ಇಲ್ಲಿ ಸಿಂಹದ ಹಲ್ಲುಗಳು ಕಾಣಿಸುತ್ತಿವೆ ಎಂದು ಆರ್ಜೆಡಿ ಸೇರಿ ವಿಪಕ್ಷಗಳು ಆರೋಪಿಸಿವೆ. ಅಷ್ಟು

ಸಿಂಹ ಲಾಂಛನ ವಿರೂಪಗೊಳಿಸಿತೇ ಮೋದಿ ಸರ್ಕಾರ| ಪ್ರತಿಪಕ್ಷಗಳ‌ ತಗಾದೆ; ಕೇಂದ್ರ ಸ್ಪಷ್ಟನೆ Read More »

ಮೇಘ ಸ್ಫೋಟದ ಬಳಿಕ ಇಂದು ಅಮರನಾಥ ಯಾತ್ರೆ ಪುನರಾರಂಭ

ಮೇಘಸ್ಫೋಟದಿಂದಾಗಿ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಇಂದು (ಸೋಮವಾರ) ಪುನರಾರಂಭವಾಗಿದೆ. ಇಂದು ಶಿವಲಿಂಗದ ದರ್ಶನಕ್ಕೆ 4ಸಾವಿರ ಭಕ್ತರಿಗೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದು, ಯಾತ್ರಾರ್ಥಿಗಳು ಪಹಲ್ಗಾಮ್‌ನ ನುನ್ವಾನ್ ಬೇಸ್ ಕ್ಯಾಂಪ್‌ನಿಂದ ಹೊರಟಿದೆ. ಸೋಮವಾರ ಬೆಳಗ್ಗೆ ನಾಲ್ಕೂವರೆ ಗಂಟೆಗೆ 3,010 ಭಕ್ತರು ಪಹಲ್ಗಾಮ್‌ನಿಂದ ಮತ್ತು 1,016 ಭಕ್ತರು ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ, ಯಾವುದೇ ಕಾರಣಕ್ಕೂ ದರ್ಶನ ಪಡೆಯದೆ ಹಿಂತಿರುಗುವ ಮಾತೇ ಇಲ್ಲೆ ಎಂದು ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ.

ಮೇಘ ಸ್ಫೋಟದ ಬಳಿಕ ಇಂದು ಅಮರನಾಥ ಯಾತ್ರೆ ಪುನರಾರಂಭ Read More »

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ ; ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈದ್ ಉಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದರು. ದೇಶದಾದ್ಯಂತ ಭಾನುವಾರ ಈದ್ ಉಲ್ ಅಧಾ (ಬಕ್ರೀದ್) ಆಚರಣೆ ಮಾಡಲಾಗುತ್ತಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು  ‘ಈದ್ ಮುಬಾರಕ್! ಈದ್ ಉಲ್ ಅಧಾ ಶುಭಾಶಯಗಳು’ ಎಂದು ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ. ‘ಈ ಹಬ್ಬ ಮಾನವಕುಲದ ಒಳಿತಿಗಾಗಿ ಸಾಮೂಹಿಕ ಯೋಗಕ್ಷೇಮ ಮತ್ತು ಸಮೃದ್ಧಿಯ ಮನೋಭಾವವನ್ನು ಹೆಚ್ಚಿಸಲು ಕೆಲಸ ಮಾಡಲು ನಮಗೆ ಸ್ಫೂರ್ತಿಯಾಗಲಿ” ಎಂದು ಮೋದಿ ಹೇಳಿದ್ದಾರೆ.

ಬಕ್ರೀದ್ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ Read More »