ದೇಶ-ವಿದೇಶ

ಅಪರೂಪದ ಎರಡು ತಲೆ ಹಾವು ಪತ್ತೆ

ಸಮಗ್ರ ನ್ಯೂಸ್ : ಅಪರೂಪದ ಮತ್ತು ಎರಡು ತಲೆಗಳನ್ನು ಹೊಂದಿರುವ ಸೌಥರ್ನ್ ಬ್ರೌನ್ ಎಗ್-ಈಟರ್ ಹಾವು ದಕ್ಷಿಣ ಆಫ್ರಿಕಾದ ಕಾಡಿನಲ್ಲಿ ಕಂಡುಬಂದಿದೆ. ವ್ಯಕ್ತಿಯೊಬ್ಬರು ತಮ್ಮ ತೋಟದಲ್ಲಿ ಎರಡು ತಲೆಯ ಹಾವನ್ನು ಕಂಡ ಕೂಡಲೇ ಹಾವು ರಕ್ಷಕ ನಿಕ್ ಇವಾನ್ಸ್ ಅವರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಅವರು ಹಾವನ್ನು ರಕ್ಷಣೆ ಮಾಡಿದ್ದಾರೆ.

ಅಪರೂಪದ ಎರಡು ತಲೆ ಹಾವು ಪತ್ತೆ Read More »

ಮಂಗಳೂರು- ದೆಹಲಿ ನಡುವೆ ನೇರ ವಿಮಾನ ಯಾನ ಸೇವೆ ಪ್ರಾರಂಭ

ಸಮಗ್ರ ನ್ಯೂಸ್: ಮಂಗಳೂರು ನಗರದಿಂದ ರಾಷ್ಟ್ರದ ರಾಜಧಾನಿ ದೆಹಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಮಂಗಳೂರು – ದೆಹಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ. ಡೆಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ಡೆಲ್ಲಿ ತಲುಪಿದೆ.

ಮಂಗಳೂರು- ದೆಹಲಿ ನಡುವೆ ನೇರ ವಿಮಾನ ಯಾನ ಸೇವೆ ಪ್ರಾರಂಭ Read More »

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು

ಸಮಗ್ರ ನ್ಯೂಸ್: ನೂಪರ್ ಶರ್ಮಾ ಬೆಂಬಲಿಸಿದ್ದ ರಾಜಸ್ಥಾನದ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಪ್ರಕರಣದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನೂಪರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿರುವ ವಿಚಾರ ವರದಿಯಾಗಿದೆ. ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಎನ್ನಲಾಗಿದ್ದು, ಹೀಗಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ಜೂನ್ 21 ರಂದು

ಟೈಲರ್ ಹತ್ಯೆ ಬಳಿಕ ಮೆಡಿಕಲ್ ಅಂಗಡಿ ಮಾಲೀಕನ ಕೊಲೆ| ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆಗೈದ ಕಿರಾತಕರು Read More »

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ?

ಸಮಗ್ರ ನ್ಯೂಸ್: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ Indiatoday.com ಮಾಡಿರುವ ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಕಳೆದ ಹತ್ತು ವರ್ಷಗಳಿಂದ ಇರುವ ಸದಸ್ಯ ಇರ್ಷಾದ್‌ ಚೈನ್‌ವಾಲ ಆರೋಪಿಗಳಲ್ಲಿ ಓರ್ವನಾದ ರಿಯಾಝ್‌ ಜೊತೆ ಕಾಣಿಸಿಕೊಂಡಿರುವ ಹಲವು ಚಿತ್ರಗಳನ್ನು ಇಂಡಿಯಾ ಟುಡೆ ವರದಿ ಮಾಡಿದೆ. ಈ ಕುರಿತು ಇರ್ಷಾದ್‌ ಬಳಿ ಕೇಳಿದಾಗ, ಬಿಜೆಪಿ ನಾಯಕ ಗುಲಾಬ್‌ ಚಂದ್‌ ಕಟಾರಿಯಾ

ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು‌ ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ? Read More »

ಬ್ರೇಕಿಂಗ್ ಸಮಾಚಾರ
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ –

ಸಮಗ್ರ ನ್ಯೂಸ್ : ಮಾಜಿ ಸಿ ಎಂ ಫಡ್ನವೀಸ್ ಅವರಿಂದ ನೂತನ ಸರಕಾರಕ್ಕೆ ಬಾಹ್ಯ ಬೆಂಬಲ ಘೋಷಣೆ ಇಂದೇ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಪಡೆದ ಏಕನಾಥ್ ಶಿಂಧೆ ಶಿವಸೇನೆ ರೆಬೆಲ್​ ನಾಯಕ ಏಕನಾಥ್​​ ಶಿಂಧೆ ಬಣದ ಸಹಕಾರದೊಂದಿಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಸರ್ಕಾರ ರಚನೆಗೆ ಅವಕಾಶ ನೀಡಿ ಎಂದು ಮಹಾರಾಷ್ಟ್ರ ರಾಜ್ಯಪಾಲರಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್​​​ ಅವರು ಮನವಿ ಮಾಡಿದ್ದರು. ಈಗ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದು,

ಬ್ರೇಕಿಂಗ್ ಸಮಾಚಾರ
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ –
Read More »

ಔರಂಗಾಬಾದ್, ಉಸ್ಮಾನಾಬಾದ್ ಹೆಸರು ಬದಲಾಯಿಸಿದ ಮಹಾ ಸರ್ಕಾರ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಔರಂಗಾಬಾದ್, ಉಸ್ಮಾನಾಬಾದ್ ಮತ್ತು ಮುಂಬರುವ ಹೊಸ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ಮರುನಾಮಕರಣ ಮಾಡುವ ವಿವಾದಾತ್ಮಕ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಔರಂಗಾಬಾದ್ ಅನ್ನು ಸಂಭಾಜಿ ನಗರ ಎಂದು ಮತ್ತು ಉಸ್ಮಾನಾಬಾದ್ ಅನ್ನು ಧರಾಶಿವ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ದಟ್ಟಣೆಯನ್ನು

ಔರಂಗಾಬಾದ್, ಉಸ್ಮಾನಾಬಾದ್ ಹೆಸರು ಬದಲಾಯಿಸಿದ ಮಹಾ ಸರ್ಕಾರ Read More »

ಉದಯಪುರ ಕೊಲೆಗಾರರಿಗಿತ್ತು ಪಾಕ್ ಉಗ್ರರೊಂದಿಗೆ ಸಂಬಂಧ| ಕೊಲೆಮಾಡಿ ವಿಡಿಯೋ ಸಂದೇಶ ಕಳಿಸ್ತೇವೆ ಎಂದಿದ್ರಂತೆ ಪಾತಕಿಗಳು

ಸಮಗ್ರ ನ್ಯೂಸ್: ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹತ್ಯೆಗೀಡಾದ ಟೈಲರ್ ಕನ್ನಯ್ಯ ಲಾಲ್ ಪ್ರಕರಣವನ್ನು ಕೇಂದ್ರ ಸರ್ಕಾರ, ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಇದರ ಮಧ್ಯೆ ಹಂತಕರ ಕುರಿತು ಒಂದೊಂದೇ ಶಾಕಿಂಗ್ ಸಂಗತಿಗಳು ಬಹಿರಂಗವಾಗುತ್ತಿವೆ. ಮಹಮ್ಮದ್ ರಿಯಾಜ್ ಆಕ್ತಾರಿ ಮತ್ತು ಗೌಸ್ ಮಹಮ್ಮದ್ ಎಂಬ ಈ ಹಂತಕರು ಕನ್ನಯ್ಯ ಲಾಲ್ ಅವರನ್ನು ಹತ್ಯೆ ಮಾಡಿದ ಬಳಿಕ ಅಜ್ಮೀರ್ ದರ್ಗಾಕ್ಕೆ ಭೇಟಿ ನೀಡುವ ಪ್ಲಾನ್ ಮಾಡಿದ್ದರಾದರೂ ರಾಜ್ ಸಮಂದ್ ಬಳಿ ಪೊಲೀಸರಿಗೆ ಸೆರೆಸಿಕ್ಕಿದ್ದಾರೆ. ಅವರುಗಳ ವಿಚಾರಣೆ ವೇಳೆ ಈ

ಉದಯಪುರ ಕೊಲೆಗಾರರಿಗಿತ್ತು ಪಾಕ್ ಉಗ್ರರೊಂದಿಗೆ ಸಂಬಂಧ| ಕೊಲೆಮಾಡಿ ವಿಡಿಯೋ ಸಂದೇಶ ಕಳಿಸ್ತೇವೆ ಎಂದಿದ್ರಂತೆ ಪಾತಕಿಗಳು Read More »

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸ ಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ವಿಶ್ವಾಸ ಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ Read More »

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು

ಸಮಗ್ರ ನ್ಯೂಸ್: ಕುತೂಹಲ ಹೆಚ್ಚಿರುವ ಶಿವಸೇನಾ ಬಂಡಾಯ ಶಾಸಕರ ಮತ್ತು ಮುಖ್ಯಮಂತ್ರಿ ತಂಡದ‌ ನಡುವಿನ ಒಡಕು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದು ರಾಜ್ಯಪಾಲರ ಆದೇಶವನ್ನು ನ್ಯಾಯಾಲಯ‌ ಎತ್ತಿ ಹಿಡಿದಿದೆ. ವಿಶ್ವಾಸ ಮತ ಯಾಚನೆ ಕುರಿತಂತೆ ಠಾಕ್ರೆ ಅರ್ಜಿ ವಿಚಾರಿಸಿದ ಸುಪ್ರೀಂ ಕೋರ್ಟ್ ಮತಯಾಚನೆ ಮಾಡಲೇಬೇಕೆಂದು ಆದೇಶಿಸಿದೆ. ಬಂಡಾಯ 16 ಶಾಸಕರೂ ಮತ ಚಲಾವಣೆ ಮಾಡಲು ನ್ಯಾಯಾಲಯ ಅನುಮತಿಸಿದ್ದು ಇದಕ್ಕಾಗಿ 11:00ಗಂಟೆಗೆ ಸಮಯ ನಿಗದಿಪಡಿಸಿದ್ದು ಮಹಾರಾಷ್ಟ್ರ ಸರಕಾರ ಪತನ ಖಚಿತವಾಗಿದೆ.

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು Read More »

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ

ಸಮಗ್ರ ನ್ಯೂಸ್: ನುಪೂರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಅಂಗಡಿ ಮಾಲೀಕನ ಶಿರಚ್ಛೇದ ಮಾಡಲಾಗಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಶಿರಶ್ಚೇಧ ಮಾಡಿದ್ದಾರೆ. ಉದಯಪುರ ನಗರದ ಮಾಲ್ಡಾಸ್ ಸ್ಟ್ರೀಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ಶಿರಚ್ಛೇದನದ ಬಳಿಕ ದುಷ್ಕರ್ಮಿಗಳು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಶಿರಚ್ಛೇದನ ಮಾಡಿದ್ದಕ್ಕೆ ಹೆಮ್ಮೆಯಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ಉದಯಪುರದ ಧನ್ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಕನ್ಹಯ್ಯಾ ಲಾಲ್ ಟೈಲರಿಂಗ್

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ Read More »