ದೇಶ-ವಿದೇಶ

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್

ಸಮಗ್ರ ನ್ಯೂಸ್: ಲೋಕಸಭಾ ಸಂಸದ ಮತ್ತು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ ಸಂಸದ ಮೌಲಾನಾ ಬದ್ರುದ್ದೀನ್ ಅಜ್ಮಲ್, ಈದ್-ಉಲ್-ಅಧಾ ಸಂದರ್ಭದಲ್ಲಿ ಹಿಂದೂಗಳ ಭಾವನೆಗಳನ್ನು ಗೌರವಿಸಿ ಗೋವುಗಳನ್ನು ಬಲಿ ನೀಡದಂತೆ ಅಸ್ಸಾಂನ ಮುಸ್ಲಿಮರಿಗೆ ತನ್ನ ಮನವಿಯನ್ನು ಮಾಡಿದ್ದಾರೆ. ಆರ್‌ಎಸ್‌ ಎಸ್‌ ನ ಕೆಲವರು ಹಿಂದೂ ದೇಶ ಮಾಡಲು ಪ್ರಯತ್ನಿಸುವ ಮೂಲಕ ಹಿಂದೂಸ್ತಾನವನ್ನು ಕೊನೆಗೊಳಿಸಲು ಬಯಸುತ್ತಿದ್ದಾರೆ. ಅವರ ಕನಸಿನಲ್ಲಿಯೂ ಹಿಂದೂ ದೇಶ ಆಗುವುದಿಲ್ಲ. ಅವರು ಈ ದೇಶದಲ್ಲಿ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು

ಗೋಮಾಂಸ ತಿನ್ನದೇ ಬಕ್ರೀದ್ ಆಚರಿಸೋಣ; ಹಿಂದೂಗಳ ಭಾವನೆಗೆ ಬೆಲೆ ಕೊಡೋಣ – ಗೌರವಯುತ ಮಾತನ್ನಾಡಿದ ಸಂಸದ ಬದ್ರುದ್ದಿನ್ ಅಜ್ಮಲ್ Read More »

ಕೊಲಂಬೊ: ಪಲಾಯನಗೈದ ರಾಜಪಕ್ಸೆ| ಲಂಕನ್ನರ ನಾಡಲ್ಲಿ ಅರಾಜಕತೆ ಮುಂದುವರಿಕೆ

ಸಮಗ್ರ ನ್ಯೂಸ್: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಶನಿವಾರ ರಾಜಧಾನಿ ಕೊಲಂಬೊದಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಪಲಾಯನಗೈದಿದ್ದಾರೆ ಎಂದು ಉನ್ನತ ರಕ್ಷಣಾ ಮೂಲ ತಿಳಿಸಿದೆ. ದೂರದರ್ಶನದ ದೃಶ್ಯಾವಳಿಗಳಲ್ಲಿ ಗೋಟಬಯ ಅವರ ರಾಜೀನಾಮೆಗೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದು ಕಂಪೌಂಡ್ ಗೆ ನುಗ್ಗಿರುವುದನ್ನು ಕಾಣಬಹುದು. “ಅಧ್ಯಕ್ಷರನ್ನು ಸುರಕ್ಷಿತವಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ, ಉದ್ರಿಕ್ತ ಪ್ರತಿಭಟನಾಕಾರರು ಅಧ್ಯಕ್ಷರ ನಿವಾಸಕ್ಕೆ ನುಗ್ಗುವ ಸಾಧ್ಯತೆಯನ್ನು ತಡೆಯಲು ಭದ್ರತಾಪಡೆ ಗಾಳಿಯಲ್ಲಿ ಗುಂಡು ಹಾರಿಸಿದೆ. ಇಂದು ಸರ್ಕಾರದ ವಿರುದ್ಧ ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಲ್ಲಿ

ಕೊಲಂಬೊ: ಪಲಾಯನಗೈದ ರಾಜಪಕ್ಸೆ| ಲಂಕನ್ನರ ನಾಡಲ್ಲಿ ಅರಾಜಕತೆ ಮುಂದುವರಿಕೆ Read More »

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಗ್ರ ನ್ಯೂಸ್: ಬಿಜೆಪಿ ವಿವಾದಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮತ್ತೊಬ್ಬ ನಾಯಕ ನಾಲಿಗೆ ಹರಿಬಿಟ್ಟಿದ್ದಾನೆ. ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷದ ಸಂಸದ ವಾಸಿಮ್ ರಝಾ ಘೋಷಿಸಿದ್ದಾನೆ. ಇದು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಇದೀಗ ನೂಪುರ್ ಬೆಂಬಲಿಸಿದವರ ಹತ್ಯೆಗಳು ನಡೆದಿದೆ. ಈ ಸಂಘರ್ಷಕ್ಕೆ

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಸುಧಾ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಅಭ್ಯರ್ಥಿ

ಸಮಗ್ರ ನ್ಯೂಸ್: ಬ್ರಿಟನ್‌ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರು ತಾವು ಕನ್ಸರ್ವೇಟಿವ್ ಪಕ್ಷದ ಮುಂದಿನ ನಾಯಕ ಮತ್ತು ಯುಕೆ ಪ್ರಧಾನಿ ಅಭ್ಯರ್ಥಿ ಎಂದು ಶುಕ್ರವಾರ ಘೋಷಣೆ ಮಾಡಿದ್ದಾರೆ. ಬ್ರಿಟನ್‌ನ ಪ್ರಧಾನಿ ಹುದ್ದೆಗೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದು, ನಾಯಕತ್ವದ ಸ್ಪರ್ಧೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಬೋರಿಸ್‌ ಜಾನ್ಸನ್ ಅವರ ನಾಯಕತ್ವವನ್ನು ವಿರೋಧಿಸಿ ಸುನಕ್‌ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸುನಕ್‌ ಅವರು ತಾವು ಕನ್ಸರ್‌ವೇಟಿವ್‌ ಪಕ್ಷದ ಬ್ರಾಂಡ್ ಅನ್ನು ರಕ್ಷಿಸುವ ಹಾಗೂ ಆರ್ಥಿಕ ಬಿಕ್ಕಟ್ಟನ್ನು

ಸುಧಾ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಅಭ್ಯರ್ಥಿ Read More »

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದೆ. ಒಂದೇ ಸಮನೆ ಸುರಿದ ಭಾರೀ ಮಳೆಗೆ ಅಮರನಾಥ ಯಾತ್ರಾರ್ಥಿಗಳು ನಿಧನರಾಗಿದ್ದು ಹಲವರು ಗಾಯಗೊಂಡಿದ್ದಾರೆ. ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದಿವೆ. ಅಮರನಾಥ ಯಾತ್ರೆ ಬೇಸ್‌ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ನಿರಂತರ ಕಾರ್ಯನಿರ್ವಹಿಸುತ್ತಿದೆ. ಶುಕ್ರವಾರ ಸಂಜೆ 5.30ಕ್ಕೆ ಮೇಘಸ್ಫೋಟ ಸಂಭವಿಸಿದೆ. ಭಾರಿ

ಅಮರನಾಥ ಯಾತ್ರೆ ಬೇಸ್ ಕ್ಯಾಂಪ್ ಬಳಿ ಮೇಘಸ್ಫೋಟ| ಐವರು ಯಾತ್ರಾರ್ಥಿಗಳ ದುರ್ಮರಣ Read More »

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ ಅಗಲಿದ ಭಾರತದ ಮಿತ್ರನಿಗಾಗಿ ನಾಳೆ ರಾಷ್ಟ್ರೀಯ ಶೋಕಾಚರಣೆ

ಸಮಗ್ರ ನ್ಯೂಸ್: ‘ಆತ್ಮೀಯ ಸ್ನೇಹಿತ’ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ. ಶಿಂಜೋ ಅಬೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಮತ್ತು ಭಾರತದ ಆಳವಾದ ಗೌರವದ ಸಂಕೇತವಾಗಿ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾಳೆ ದೇಶಾದ್ಯಂತ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ ಅಗಲಿದ ಭಾರತದ ಮಿತ್ರನಿಗಾಗಿ ನಾಳೆ ರಾಷ್ಟ್ರೀಯ ಶೋಕಾಚರಣೆ Read More »

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು. “ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ Read More »

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು

ಸಮಗ್ರ ನ್ಯೂಸ್ : ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಜಪಾನ್ ನ ನಾರಾ ನಗರದಲ್ಲಿ ನಡೆದಿದೆ. ಜಪಾನ್ ನ ನಾರಾ ನಗರದಲ್ಲಿ ಮಾಜಿ ಪ್ರಧಾನಿ ಶಿಂಜೊ ಅಬೆಯನ್ನು ಗುಂಡಿಕ್ಕಿ ಹತ್ಯೆ ಯತ್ನಿಸಲಾಗಿದೆ ಎಂದು ವರದಿಯಾಗಿದೆ. ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ನಾರಾ ನಗರದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ, ಸದ್ಯ ಶಂಕಿತ ಹಂತಕರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಜಪಾನ್ ನ ಎನ್ ಎಚ್ ಕೆ ವಾರ್ತಾ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆ| ಭಾಷಣ ಮಾಡುತ್ತಿರುವಾಗಲೇ ಗುಂಡಿಕ್ಕಿದ ದುಷ್ಕರ್ಮಿಗಳು Read More »