ದೇಶ-ವಿದೇಶ

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸ ಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ವಿಶ್ವಾಸ ಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ Read More »

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು

ಸಮಗ್ರ ನ್ಯೂಸ್: ಕುತೂಹಲ ಹೆಚ್ಚಿರುವ ಶಿವಸೇನಾ ಬಂಡಾಯ ಶಾಸಕರ ಮತ್ತು ಮುಖ್ಯಮಂತ್ರಿ ತಂಡದ‌ ನಡುವಿನ ಒಡಕು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದು ರಾಜ್ಯಪಾಲರ ಆದೇಶವನ್ನು ನ್ಯಾಯಾಲಯ‌ ಎತ್ತಿ ಹಿಡಿದಿದೆ. ವಿಶ್ವಾಸ ಮತ ಯಾಚನೆ ಕುರಿತಂತೆ ಠಾಕ್ರೆ ಅರ್ಜಿ ವಿಚಾರಿಸಿದ ಸುಪ್ರೀಂ ಕೋರ್ಟ್ ಮತಯಾಚನೆ ಮಾಡಲೇಬೇಕೆಂದು ಆದೇಶಿಸಿದೆ. ಬಂಡಾಯ 16 ಶಾಸಕರೂ ಮತ ಚಲಾವಣೆ ಮಾಡಲು ನ್ಯಾಯಾಲಯ ಅನುಮತಿಸಿದ್ದು ಇದಕ್ಕಾಗಿ 11:00ಗಂಟೆಗೆ ಸಮಯ ನಿಗದಿಪಡಿಸಿದ್ದು ಮಹಾರಾಷ್ಟ್ರ ಸರಕಾರ ಪತನ ಖಚಿತವಾಗಿದೆ.

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು Read More »

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ

ಸಮಗ್ರ ನ್ಯೂಸ್: ನುಪೂರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಅಂಗಡಿ ಮಾಲೀಕನ ಶಿರಚ್ಛೇದ ಮಾಡಲಾಗಿದೆ. ವ್ಯಕ್ತಿಯನ್ನು ದುಷ್ಕರ್ಮಿಗಳು ಶಿರಶ್ಚೇಧ ಮಾಡಿದ್ದಾರೆ. ಉದಯಪುರ ನಗರದ ಮಾಲ್ಡಾಸ್ ಸ್ಟ್ರೀಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ಶಿರಚ್ಛೇದನದ ಬಳಿಕ ದುಷ್ಕರ್ಮಿಗಳು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಶಿರಚ್ಛೇದನ ಮಾಡಿದ್ದಕ್ಕೆ ಹೆಮ್ಮೆಯಿದೆ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ಉದಯಪುರದ ಧನ್ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಕನ್ಹಯ್ಯಾ ಲಾಲ್ ಟೈಲರಿಂಗ್

ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದವರ ರುಂಡ ಚೆಂಡಾಡಿದ ದುಷ್ಕರ್ಮಿಗಳು| ಮೋದಿಯನ್ನೂ ಕೊಲ್ಲುವುದಾಗಿ ಬೆದರಿಕೆ Read More »

ರೈಲು ದುರಂತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

ಸಮಗ್ರ ನ್ಯೂಸ್ : ಆಮೆರಿಕದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆಯೊಂದು ನಡೆದಿದೆ. ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಮಂದಿ ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ

ರೈಲು ದುರಂತ; 40ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ Read More »

ಹಳಿ ತಪ್ಪಿದ ರೈಲು| ದುರಂತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ

ಸಮಗ್ರ ನ್ಯೂಸ್: ಭೀಕರ ರೈಲು ಅಪಘಾತ ಸಂಭವಿಸಿದ್ದು, 40 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಅಮೇರಿಕಾದ ಟೆಕ್ಸಾಸ್ ನಲ್ಲಿ ನಡೆದಿದೆ. ಇಲ್ಲಿನ ಮಿಸೌರಿಯ ಮೆಂಡನ್ ನಲ್ಲಿ ಸೋಮವಾರ ಮಧ್ಯಾಹ್ನ ಅಮ್ಟ್ರಾಕ್ ರೈಲು ಡಂಪ್ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಪರಿಣಾಮ 40 ಸಾವನ್ನಪ್ಪಿದ್ದಾರೆ. ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಾಸ್ ಏಂಜಲೀಸ್ನಿಂದ ಚಿಕಾಗೋಗೆ 243 ಪ್ರಯಾಣಿಕರು ಮತ್ತು 12 ಸಿಬ್ಬಂದಿಗಳನ್ನು

ಹಳಿ ತಪ್ಪಿದ ರೈಲು| ದುರಂತದಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ Read More »

ದೆಹಲಿಯ ಪ್ಲಾಸ್ಟಿಕ್ ಗೋದಾಮು ನಲ್ಲಿ‌ ಬೆಂಕಿ ದುರಂತ

ನವದೆಹಲಿ: ವಾಯುವ್ಯ ದೆಹಲಿಯ ಬಾದ್ಲಿ ಪ್ರದೇಶದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿದ್ದ ಗೋದಾಮಿನಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸಲು ರೋಬೊಟ್ ಅನ್ನು ಬಳಸಲಾಗಿದ್ದು, ಯಾವುದೇ ಅಪಾಯ ಸಂಭವಿಸಲಿಲ್ಲ. ಈ ವೇಳೆ ಸ್ಥಳಕ್ಕೆ ತೆರಳಿ, 36 ಅಗ್ನಿಶಾಮಕದಳದ ವಾಹನಗಳ ಸಿಬ್ಬಂದಿ ಮತ್ತು ರೊಬೋಟ್ ಅನ್ನು ಬಳಸಿ ಬೆಂಕಿ ನಿಯಂತ್ರಿಸಲಾಯಿತು’ ಎಂದು ತಿಳಿಸಿದರು.

ದೆಹಲಿಯ ಪ್ಲಾಸ್ಟಿಕ್ ಗೋದಾಮು ನಲ್ಲಿ‌ ಬೆಂಕಿ ದುರಂತ Read More »

ಆನ್ಲೈನ್ ಕ್ಲಾಸ್ನಲ್ಲಿ ಹೋಂ ವರ್ಕ್ ಬದಲು ಸೆಕ್ಸ್ ವಿಡಿಯೋ ಕಳಿಸಿದ ವಿದ್ಯಾರ್ಥಿ!!

ಸಮಗ್ರ ನ್ಯೂಸ್: ಕೊವೀಡ್ ಕಾರಣದಿಂದ ಆನ್ ಲೈನ್ ಕ್ಲಾಸ್ ಮುಗಿದಿದ್ದು ಮಕ್ಕಳು ಶಾಲೆಗಳತ್ತ ಮುಖ ಮಾಡಿದ್ದಾರೆ. ಆದರೆ ದೆಹಲಿಯ ಕೆಲವು ಶಾಲೆಗಳಲ್ಲಿ ಆನ್ ಕ್ಲಾಸ್ ಇನ್ನೂ ಮುಂದುವರೆದಿದೆ. ಆದರೆ ಇದೇ ಆನ್ ಲೈನ್ ಕ್ಲಾಸ್ ನಿಂದ ವಿದ್ಯಾರ್ಥಿಯೊಬ್ಬ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಆನ್‌ಲೈನ್ ನಲ್ಲಿ ತರಗತಿ ನಡೆಸೋ ಶಿಕ್ಷಕರು, ಆನ್ ಲೈನ್ ನಲ್ಲೇ ಹೋಮ್ ವರ್ಕ್ ಕಳುಹಿಸೋಕೆ ಹೇಳ್ತಾರೆ. ಆದರೆ 6ನೇ ತರಗತಿಯ ವಿದ್ಯಾರ್ಥಿಯೋರ್ವ ಹೋಂ ವರ್ಕ್‌ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ

ಆನ್ಲೈನ್ ಕ್ಲಾಸ್ನಲ್ಲಿ ಹೋಂ ವರ್ಕ್ ಬದಲು ಸೆಕ್ಸ್ ವಿಡಿಯೋ ಕಳಿಸಿದ ವಿದ್ಯಾರ್ಥಿ!! Read More »

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಭವಿಷ್ಯದ ರಾಜಕೀಯ ಹೋರಾಟ ಭಾನುವಾರ ಕಾನೂನು ವಲಯಕ್ಕೆ ಹೋಗಿದ್ದು, ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸರ್ವೊಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ. ಉಪಸಭಾಪತಿ ನರಹರಿ ಝಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ಬಣವು ಪ್ರಶ್ನಿಸಿದೆ

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ Read More »

60ನೇ ಹುಟ್ಟು ಹಬ್ಬದ ಸಂದರ್ಭ 60ಸಾವಿರ ಕೋಟಿ ದಾನ ನೀಡಲು ನಿರ್ಧರಿಸಿದ ಅದಾನಿ

ಸಮಗ್ರ ನ್ಯೂಸ್: ಏಷ್ಯಾದ ಶ್ರೀಮಂತ ವ್ಯಕ್ತಿ, ಅದಾನಿ ಗ್ರೂಪ್ ಕಂಪನಿ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಕುಟುಂಬವು ಅವರ 60 ನೇ ಹುಟ್ಟುಹಬ್ಬದ ಪ್ರಯುಕ್ತ 60ಸಾವಿರ ಕೋಟಿ ರೂಪಾಯಿಗಳನ್ನು ಸಾಮಾಜಿಕ ಕಾರ್ಯಗಳಿಗೆ ದೇಣಿಗೆ ನೀಡುವ ವಾಗ್ದಾನ ಮಾಡಿದೆ. ಸಾಮಾಜಿಕ ಕಾರ್ಯಗಳಿಗೆ ಈ ಹಣವನ್ನು ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಅದಾನಿ ಫೌಂಡೇಶನ್ ಕಾರ್ಯ ನಿರ್ವಹಿಸುತ್ತದೆ. ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಅದಾನಿ ಫೌಂಡೇಶನ್ ಈ ದೇಣಿಗೆಯನ್ನು ನಿರ್ವಹಿಸುತ್ತದೆ ಎಂದು ಅದು ಬ್ಲೂಮ್‌ಬರ್ಗ್‌ ಚಾನಲ್

60ನೇ ಹುಟ್ಟು ಹಬ್ಬದ ಸಂದರ್ಭ 60ಸಾವಿರ ಕೋಟಿ ದಾನ ನೀಡಲು ನಿರ್ಧರಿಸಿದ ಅದಾನಿ Read More »

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ. ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ Read More »