ದೇಶ-ವಿದೇಶ

ಯುಎಇ ಎರಡನೆಯ ಅಧ್ಯಕ್ಷ ಶೇಖ್ ಖಲೀಫಾ ಇನ್ನಿಲ್ಲ.

ಸಮಗ್ರ ನ್ಯೂಸ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುಎಇ ಅಧ್ಯಕ್ಷ ಶೇಖ್​ ಖಲೀಫಾ ಬಿನ್​ ಜಯಾದ್ ಅಲ್​ ನಹ್ಯಾನ್​(73) ಅವರು ಶುಕ್ರವಾರ ನಿಧನ ಹೊಂದಿದರು. ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ.ಅವರ ಪರವಾಗಿ ಅವರ ಪುತ್ರ ಮೊಹಮ್ಮದ್​ ಬಿನ್​ ಜಯಾದ್​ ಅವರು ಆಡಳಿತ ನಡೆಸುತ್ತಿದ್ದರು. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ಯುಎಇಯಾದ್ಯಂತ 40 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿರುವ ಜೊತೆಗೆ, ಮೂರು ದಿನ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. […]

ಯುಎಇ ಎರಡನೆಯ ಅಧ್ಯಕ್ಷ ಶೇಖ್ ಖಲೀಫಾ ಇನ್ನಿಲ್ಲ. Read More »

ಗೋವಾ: 12ರ ರಷ್ಯನ್ ಬಾಲೆಯ ಅತ್ಯಾಚಾರ; ಗದಗ ಮೂಲದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಪ್ರವಾಸಕ್ಕೆಂದು ಬಂದಿದ್ದ 12 ವರ್ಷದ ರಷ್ಯನ್ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ರಷ್ಯಾದಿಂದ ಗೋವಾಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ಮೇಲೆ ಮೇ.6 ರಂದು ಅತ್ಯಾಚಾರ ನಡೆದಿದ್ದು, ಮೇ 9ರಂದು ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಕೃತ್ಯದ ಬಳಿಕ ಆರೋಪಿ ನಾಪತ್ತೆಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಗೋವಾ ಪೊಲೀಸರು ಇದೀಗ ಆರೋಪಿಯನ್ನು ಗದಗದಲ್ಲಿ ಬಂಧಿಸಿದ್ದಾರೆ. ಗೋವಾ ಮಕ್ಕಳ ಕಾಯ್ದೆಯ 8ನೇ ವಿಧಿ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ

ಗೋವಾ: 12ರ ರಷ್ಯನ್ ಬಾಲೆಯ ಅತ್ಯಾಚಾರ; ಗದಗ ಮೂಲದ ಆರೋಪಿ ಅರೆಸ್ಟ್ Read More »

ರಾಯಪುರ: ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್ ಗಳು ಸಾವು

ಸಮಗ್ರ ನ್ಯೂಸ್: ಹಾರಾಟ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಸರಕಾರಿ ಹೆಲಿಕಾಪ್ಟರ್‌ವೊಂದು ಅಪಘಾತಕ್ಕೊಳಗಾಗಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿರುವ ದುರಂತ ಛತ್ತೀಸ್‌ಗಡ ರಾಜಧಾನಿಯಲ್ಲಿ ಗುರುವಾರ (ಮೇ 12) ರಾತ್ರಿ ಸಂಭವಿಸಿದೆ. ರಾಯಪುರ್‌ನ ಸ್ವಾಮಿ ವಿವೇಕಾನದ ವಿಮಾನ ನಿಲ್ದಾಣದಲ್ಲಿ ರಾತ್ರಿ 9:10ರ ಆಸುಪಾಸು ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಪಘಾತಕ್ಕೊಳಗಾದ ಹೆಲಿಕಾಪ್ಟರ್ ಅಗಸ್ಟಾ ಕಂಪನಿಯದ್ದಾಗಿದೆ. ದುರಂತಕ್ಕೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಮಾಮೂಲಿಯ ಹಾರಾಟ ಅಭ್ಯಾಸ ನಡೆಸುವಾಗ ಅಪಘಾತವಾಗಿದೆ. ಹೆಲಿಕಾಪ್ಟರ್ ಅನ್ನು ಕೆಳಗೆ ಇಳಿಸುವಾಗ ಬೆಂಕಿ

ರಾಯಪುರ: ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್ ಗಳು ಸಾವು Read More »

ಮೇ.15ರಿಂದ ಮುಂಗಾರು ಆಗಮನ| ಈ ಬಾರಿ 15 ದಿನ ಮೊದಲೇ ಕಾಲಿಡಲಿದೆ ಮಾನ್ಸೂನ್

ಸಮಗ್ರ ನ್ಯೂಸ್: ನೈರುತ್ಯ ಮಾನ್ಸೂನ್ ಈ ಬಾರಿ ಹದಿನೈದು ದಿನ ಮುಂಚೆಯೇ ಆಗಮಿಸಲಿದೆ. ಮೇ 15 ರಂದೇ ನೈರುತ್ಯ ಮಾನ್ಸೂನ್ ಆಗಮನದ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆಯಿಂದ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸಾಮಾನ್ಯವಾಗಿ ಮೇ ಕೊನೆ ಇಲ್ಲವೇ ಜೂನ್ ಮೊದಲವಾರದಲ್ಲಿ ಮುಂಗಾರು ಆರಂಭವಾಗುತ್ತದೆ. ಆದರೆ, ಈ ಬಾರಿ ಮುಂಗಾರು ಮೇ 15 ರಿಂದಲೇ ಆರಂಭವಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೇ 15 ರಂದು ಮೊದಲ ಋತುಮಾನದ ಮಳೆಯಾಗಲಿದೆ. ಇದರೊಂದಿಗೆ ನೈರುತ್ಯ ಮಾನ್ಸೂನ್

ಮೇ.15ರಿಂದ ಮುಂಗಾರು ಆಗಮನ| ಈ ಬಾರಿ 15 ದಿನ ಮೊದಲೇ ಕಾಲಿಡಲಿದೆ ಮಾನ್ಸೂನ್ Read More »

ಭಾರೀ ಕುಸಿತ ಕಂಡ ಷೇರು ಮಾರುಕಟ್ಟೆ| ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ|

ಸಮಗ್ರ ನ್ಯೂಸ್: ಒಂದೆಡೆ ಭಾರತೀಯ ರೂಪಾಯಿ ಮೌಲ್ಯ ಯುಎಸ್ ಡಾಲರ್ ಎದುರು ಗುರುವಾರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡರೆ, ಇನ್ನೊಂದೆಡೆ ಭಾರತೀಯ ಷೇರು ಮಾರುಕಟ್ಟೆಗಳ ಸಂವೇದಿ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಶೇ.2ಕ್ಕಿಂತಲೂ ಹೆಚ್ಚು ಇಳಿಕೆ ದಾಖಲಿಸಿವೆ. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ 50 ಇಂಡೆಕ್ಸ್ ಶೇ.2.22 ಅಥವಾ 359.10 ಅಂಶ ಕಡಿಮೆಯಾಗಿ 15,808 ಅಂಶಗಳಲ್ಲಿ ವಹಿವಾಟು ಮುಗಿಸಿದೆ. ಇನ್ನು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಶೇ.2.14ರಷ್ಟು ಅಥವಾ 1,158.08ರಿಂದ 52,930.31 ಮಟ್ಟಕ್ಕೆ ಇಳಿಕೆಯಾಗಿದೆ. ಈ

ಭಾರೀ ಕುಸಿತ ಕಂಡ ಷೇರು ಮಾರುಕಟ್ಟೆ| ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ| Read More »

ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಂಸಿಂಘೆ‌ ನೇಮಕ

ಸಮಗ್ರ ನ್ಯೂಸ್: ಆರ್ಥಿಕ ತುರ್ತು ಪರಿಸ್ಥಿತಿಯ ಹೊಣೆ ಹೊತ್ತು ರಾಜಪಕ್ಸೆ ರಾಜೀನಾಮೆ ಬಳಿಕ, ಇದೀಗ ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮ ಸಿಂಘೆ ನೇಮಕವಾಗಿದ್ದಾರೆ. ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಂಸಿಂಘೆ‌ ನೇಮಕ Read More »

ರಾಜ್ಯ ಕರಾವಳಿಗೆ ಲಂಕಾ ವಲಸಿಗರ ಭೀತಿ| ಕಡಲ ಕಿನಾರೆಯಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಆರ್ಥಿಕ ಮತ್ತು ರಾಜಕೀಯ ತಲ್ಲಣಕ್ಕೆ ಸಿಲುಕಿರುವ ದ್ವೀಪ ರಾಷ್ಟ್ರ ಶ್ರೀಲಂಕಾದೊಂದಿಗೆ ಸಮುದ್ರ ಗಡಿ ಹಂಚಿಕೊಂಡಿರುವ ಭಾರತಕ್ಕೆ ವಲಸಿಗರ ಆತಂಕ ಎದುರಾಗಿದ್ದು, ರಾಜ್ಯ ಕರಾವಳಿಯಲ್ಲೂ ನಿಗಾ ಹೆಚ್ಚಿಸಲಾಗಿದೆ. ಲಂಕಾ ಪರಿಸ್ಥಿತಿ ಹಿನ್ನೆಲೆಯಲ್ಲಿ ಅಲ್ಲಿನ ಪ್ರಜೆ ಗಳು ಅಕ್ರಮವಾಗಿ ದಕ್ಷಿಣ ಭಾರತಕ್ಕೆ ಬರಲು ಯತ್ನಿಸುತ್ತಿರುವುದನ್ನು ಭಾರತೀಯ ಬೇಹು ವಿಭಾಗ ಪತ್ತೆ ಹಚ್ಚಿದೆ. ಹಾಗಾಗಿ ಕರ್ನಾಟಕ ಸೇರಿದಂತೆ ದ. ಭಾರತದ ಕರಾವಳಿ ರಾಜ್ಯ ಗಳಿಗೆ ಕೇಂದ್ರ ಗುಪ್ತಚರ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ. ಲಭ್ಯ ಮಾಹಿತಿಯ ಪ್ರಕಾರ ತಮಿಳುನಾಡಿಗೆ

ರಾಜ್ಯ ಕರಾವಳಿಗೆ ಲಂಕಾ ವಲಸಿಗರ ಭೀತಿ| ಕಡಲ ಕಿನಾರೆಯಲ್ಲಿ ಕಟ್ಟೆಚ್ಚರ Read More »

ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗ ನೇಮಕಾತಿ

ಸಮಗ್ರ ನ್ಯೂಸ್: ಪದವಿ ಪಾಸಾದವರಿಗೆ ಗುಡ್​ನ್ಯೂಸ್​ ಸಿಕ್ಕಿದ್ದು, ಕರ್ನಾಟಕ ಬ್ಯಾಂಕ್​ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ. ದೇಶಾದ್ಯಂತ ತನ್ನ ಶಾಖೆಗಳು / ಕಚೇರಿಗಳಿಗಾಗಿ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅಧಿಕೃತ ವೆಬ್​ಸೈಟ್​ karnatakabank.com ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ ಶೇ.60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಶುಲ್ಕ: SC ಮತ್ತು ST ವರ್ಗದ ಅಭ್ಯರ್ಥಿಗಳು 600 ಶುಲ್ಕವನ್ನು ಪಾವತಿಸಬೇಕು. ಇತರೆ

ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗ ನೇಮಕಾತಿ Read More »

ಲಂಕನ್ನರ ಪ್ರತಿಭಟನೆಗೆ ಬೆದರಿದ ರಾಜಪಕ್ಸ| ಕುಟುಂಬ ಸಮೇತ ನೌಕಾನೆಲೆಗೆ ಪಲಾಯನ| ಹಿಂಸಾಚಾರಕ್ಕೆ ನಲುಗಿದ ದ್ವೀಪರಾಷ್ಟ್ರ

ಸಮಗ್ರ ನ್ಯೂಸ್: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕರ್ಫ್ಯೂ ನಡುವೆಯೇ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಲಂಕಾದ ಮಾಜಿ ಪ್ರಧಾನಿ ಮಹೀಂದ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ನೌಕಾನೆಲೆಗೆ ಪಲಾಯನಗೈದಿರುವುದಾಗಿ ಮಾತುಗಳು ಕೇಳಿಬರುತ್ತಿವೆ. ಕೆಲವು ಮೂಲಗಳ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಮಾಜಿ ಪ್ರಧಾನಿ ರಾಜಪಕ್ಷ ಮತ್ತು ಕುಟುಂಬ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಕರೆದೊಯ್ಯಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ.

ಲಂಕನ್ನರ ಪ್ರತಿಭಟನೆಗೆ ಬೆದರಿದ ರಾಜಪಕ್ಸ| ಕುಟುಂಬ ಸಮೇತ ನೌಕಾನೆಲೆಗೆ ಪಲಾಯನ| ಹಿಂಸಾಚಾರಕ್ಕೆ ನಲುಗಿದ ದ್ವೀಪರಾಷ್ಟ್ರ Read More »

ಕರೆಂಟು ಹೋದ ಟೈಮಲಿ ಇದೆಂಥ ಎಡವಟ್ಟು, ಅವನ ಹುಡುಗಿಗೆ ಇವನು, ಇವನ ಹುಡುಗಿಗೆ ಅವನು ತಾಳಿ ಕಟ್ಟಿದ!, ಅತ್ತೆ ಮನೆಗೆ ಹೋದಾಗ ಘಟನೆ ಬೆಳಕಿಗೆ

ಮಧ್ಯ ಪ್ರದೇಶ: ಮದುವೆ ದಿನ ವಧು ವರರೇ ಅದಲು ಬದಲಾದರೆ ಅವರ ಪರಿಸ್ಥಿತಿ ಹೇಗಿರಬೇಡ ಯೋಚಿಸಿ.ಮಧ್ಯಪ್ರದೇಶದ ಗ್ರಾಮಾಂತರ ಪ್ರದೇಶದಲ್ಲಿ ಹಿಂದೆಂದೂ ಕೇಳಿರದ ಘಟನೆಯೊಂದು ಬೆಳಕಿಗೆ ಬಂದಿದೆ. ಉಜ್ಜಯಿನಿಯ ಗ್ರಾಮವೊಂದರಲ್ಲಿ ವಿಚಿತ್ರ ಘಟನೆ:ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ರಮೇಶ್‌ಲಾಲ್ ಅವರ ಇಬ್ಬರು ಪುತ್ರಿಯರಾದ ನಿಕಿತಾ ಮತ್ತು ಕರಿಷ್ಮಾ ಬೇರೆ ಬೇರೆ ಕುಟುಂಬದ ಯುವಕರಾದ ದಂಗ್ವಾರಾ ಭೋಲಾ ಮತ್ತು ಗಣೇಶ್ ಅವರನ್ನು ವಿವಾಹವಾಗಬೇಕಿತ್ತು. ಸಂಪ್ರದಾಯದ ಪ್ರಕಾರ ವಧುಗಳು ಮುಖವನ್ನು ಮುಸುಕಿನಿಂದ ಮುಚ್ಚಿಕೊಂಡಿದ್ದರಿಂದ ಹಾಗೂ ಮದುವೆಯ ವೇಳೆ ಕರೆಂಟ್ ಕೈ

ಕರೆಂಟು ಹೋದ ಟೈಮಲಿ ಇದೆಂಥ ಎಡವಟ್ಟು, ಅವನ ಹುಡುಗಿಗೆ ಇವನು, ಇವನ ಹುಡುಗಿಗೆ ಅವನು ತಾಳಿ ಕಟ್ಟಿದ!, ಅತ್ತೆ ಮನೆಗೆ ಹೋದಾಗ ಘಟನೆ ಬೆಳಕಿಗೆ Read More »