ದೇಶ-ವಿದೇಶ

ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ‌ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂ.ಗ್ರಾಮಾಂತರ, […]

ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್ Read More »

ಬೆಂಗಳೂರು ಏರ್‌ಪೋರ್ಟ್‌ ಪ್ರಯಾಣಕ್ಕೆ ಇನ್ಮುಂದೆ ಹೆಲಿಕಾಪ್ಟರ್‌ ಸೇವೆ| ದರ ಎಷ್ಟು? ಪ್ರಯಾಣ ಹೇಗೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ಎಲೆಕ್ಟ್ರಾನಿಕ್‌ ಸಿಟಿ, ಹಳೆ ಎಚ್‌ಎಎಲ್‌ ನಿಲ್ದಾಣದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸುಲಭವಾಗಿ ತಲುಪಲು ಬ್ಲೇಡ್‌ ಇಂಡಿಯಾ ಸಂಸ್ಥೆಯು ಹೆಲಿಕಾಪ್ಟರ್‌ ಸೇವೆ ಆರಂಭಿಸಲು ಸಿದ್ಧತೆ ನಡೆಸಿದೆ. ಅಂದಾಜು 4000 ರೂಪಾಯಿಯಲ್ಲಿ ನಾಗರಿಕರು ಟ್ರಾಫಿಕ್‌ಜಾಮ್‌ ಕಿರಿಕಿರಿ ಇಲ್ಲದೆ, ಕಡಿಮೆ ಅವಧಿಯಲ್ಲಿ ಏರ್‌ಪೋರ್ಟ್‌ ತಲುಪಬಹುದಾಗಿದೆ. ಜುಲೈನಿಂದ ಈ ಸೇವೆ ಆರಂಭವಾಗಲಿದೆ. ತುಂಬಿ ಏವಿಯೇಶನ್‌ ಸಂಸ್ಥೆಯು ಈ ಹಿಂದೆ ಇದೇ ಮಾದರಿಯ ಹೆಲಿಕಾಪ್ಟರ್‌ ಸೇವೆ ಒದಗಿಸುತ್ತಿತ್ತಾದರೂ ಮೂರು ವರ್ಷದ ಹಿಂದೆಯೇ ಸೇವೆ ಸ್ಥಗಿತಗೊಂಡಿದೆ. ಬ್ಲೇಡ್‌ ಇಂಡಿಯಾ ಸಂಸ್ಥೆಯು ಕೊಡಗಿಗೂ ಹೆಲಿಕಾಪ್ಟರ್‌ ಸೇವೆ ಒದಗಿಸುತ್ತಿದೆ. ”ವಾರದಲ್ಲಿ

ಬೆಂಗಳೂರು ಏರ್‌ಪೋರ್ಟ್‌ ಪ್ರಯಾಣಕ್ಕೆ ಇನ್ಮುಂದೆ ಹೆಲಿಕಾಪ್ಟರ್‌ ಸೇವೆ| ದರ ಎಷ್ಟು? ಪ್ರಯಾಣ ಹೇಗೆ? ಇಲ್ಲಿದೆ ಮಾಹಿತಿ… Read More »

ಭಾರತದಿಂದ ಹೊರಹೋಗುತ್ತಿರುವ ವಿದೇಶಿ ಹೂಡಿಕೆ| 25 ಸಾವಿರ ಕೋಟಿಗೂ ಮಿಕ್ಕಿ ಹೂಡಿಕೆ ಹಿಂತೆಗೆತ

ಸಮಗ್ರ ನ್ಯೂಸ್: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಭಾರತದ ಮಾರುಕಟ್ಟೆಯಿಂದ ನಿರಂತರವಾಗಿ ಬಂಡವಾಳ ಹಿಂದಕ್ಕೆ ಪಡೆಯುತ್ತಲೇ ಇದ್ದು, ಬಂಡವಾಳ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಮೇ 2 ರಿಂದ 13ರವರೆಗಿನ ಅವಧಿಯಲ್ಲಿ ಷೇರುಪೇಟೆಯಿಂದ ₹ 25,200 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ. ಜಾಗತಿಕ ಮಟ್ಟದಲ್ಲಿ ಬಡ್ಡಿದರ ಹೆಚ್ಚಳ ಆಗಿರುವುದು ಮತ್ತು ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ. ‘ಕಚ್ಚಾ ತೈಲ ದರ ಗರಿಷ್ಠ ಮಟ್ಟದಲ್ಲಿ ಇರುವುದು, ಹಣದುಬ್ಬರ ಏರಿಕೆ, ಕೇಂದ್ರೀಯ ಬ್ಯಾಂಕ್‌ಗಳು ಹಣಕಾಸು ನೀತಿಯನ್ನು ಬಿಗಿಗೊಳಿಸುತ್ತಿರುವುದು ಷೇರುಪೇಟೆಯ

ಭಾರತದಿಂದ ಹೊರಹೋಗುತ್ತಿರುವ ವಿದೇಶಿ ಹೂಡಿಕೆ| 25 ಸಾವಿರ ಕೋಟಿಗೂ ಮಿಕ್ಕಿ ಹೂಡಿಕೆ ಹಿಂತೆಗೆತ Read More »

ಪ್ರತ್ಯೇಕ ಬೆಂಕಿ ಅವಘಡ| 31 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಜಮ್ಮುವಿನ ಕತ್ರಾ ಬಳಿ ವೈಷ್ಣೋದೇವಿ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘೋರ ದುರಂತ ಶುಕ್ರವಾರ ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ. ವೈಷ್ಣೋದೇವಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದಾಗ ಹಠಾತ್ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. ದೆಹಲಿಯಲ್ಲಿ 27 ಮಂದಿ ಸಾವು!ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೊ ನಿಲ್ದಾಣ ಸಮೀಪದ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ

ಪ್ರತ್ಯೇಕ ಬೆಂಕಿ ಅವಘಡ| 31 ಮಂದಿ ಸಜೀವ ದಹನ Read More »

ಯುಎಇ ಎರಡನೆಯ ಅಧ್ಯಕ್ಷ ಶೇಖ್ ಖಲೀಫಾ ಇನ್ನಿಲ್ಲ.

ಸಮಗ್ರ ನ್ಯೂಸ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುಎಇ ಅಧ್ಯಕ್ಷ ಶೇಖ್​ ಖಲೀಫಾ ಬಿನ್​ ಜಯಾದ್ ಅಲ್​ ನಹ್ಯಾನ್​(73) ಅವರು ಶುಕ್ರವಾರ ನಿಧನ ಹೊಂದಿದರು. ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ.ಅವರ ಪರವಾಗಿ ಅವರ ಪುತ್ರ ಮೊಹಮ್ಮದ್​ ಬಿನ್​ ಜಯಾದ್​ ಅವರು ಆಡಳಿತ ನಡೆಸುತ್ತಿದ್ದರು. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದು, ಯುಎಇಯಾದ್ಯಂತ 40 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿರುವ ಜೊತೆಗೆ, ಮೂರು ದಿನ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಯುಎಇ ಎರಡನೆಯ ಅಧ್ಯಕ್ಷ ಶೇಖ್ ಖಲೀಫಾ ಇನ್ನಿಲ್ಲ. Read More »

ಗೋವಾ: 12ರ ರಷ್ಯನ್ ಬಾಲೆಯ ಅತ್ಯಾಚಾರ; ಗದಗ ಮೂಲದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಪ್ರವಾಸಕ್ಕೆಂದು ಬಂದಿದ್ದ 12 ವರ್ಷದ ರಷ್ಯನ್ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ಗದಗ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ರಷ್ಯಾದಿಂದ ಗೋವಾಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ಮೇಲೆ ಮೇ.6 ರಂದು ಅತ್ಯಾಚಾರ ನಡೆದಿದ್ದು, ಮೇ 9ರಂದು ಬಾಲಕಿ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಕೃತ್ಯದ ಬಳಿಕ ಆರೋಪಿ ನಾಪತ್ತೆಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಗೋವಾ ಪೊಲೀಸರು ಇದೀಗ ಆರೋಪಿಯನ್ನು ಗದಗದಲ್ಲಿ ಬಂಧಿಸಿದ್ದಾರೆ. ಗೋವಾ ಮಕ್ಕಳ ಕಾಯ್ದೆಯ 8ನೇ ವಿಧಿ ಹಾಗೂ ಪೋಕ್ಸೋ ಕಾಯ್ದೆ ಅಡಿ ಪ್ರಕರಣ

ಗೋವಾ: 12ರ ರಷ್ಯನ್ ಬಾಲೆಯ ಅತ್ಯಾಚಾರ; ಗದಗ ಮೂಲದ ಆರೋಪಿ ಅರೆಸ್ಟ್ Read More »

ರಾಯಪುರ: ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್ ಗಳು ಸಾವು

ಸಮಗ್ರ ನ್ಯೂಸ್: ಹಾರಾಟ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಸರಕಾರಿ ಹೆಲಿಕಾಪ್ಟರ್‌ವೊಂದು ಅಪಘಾತಕ್ಕೊಳಗಾಗಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿರುವ ದುರಂತ ಛತ್ತೀಸ್‌ಗಡ ರಾಜಧಾನಿಯಲ್ಲಿ ಗುರುವಾರ (ಮೇ 12) ರಾತ್ರಿ ಸಂಭವಿಸಿದೆ. ರಾಯಪುರ್‌ನ ಸ್ವಾಮಿ ವಿವೇಕಾನದ ವಿಮಾನ ನಿಲ್ದಾಣದಲ್ಲಿ ರಾತ್ರಿ 9:10ರ ಆಸುಪಾಸು ಸಮಯದಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಪಘಾತಕ್ಕೊಳಗಾದ ಹೆಲಿಕಾಪ್ಟರ್ ಅಗಸ್ಟಾ ಕಂಪನಿಯದ್ದಾಗಿದೆ. ದುರಂತಕ್ಕೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಮಾಮೂಲಿಯ ಹಾರಾಟ ಅಭ್ಯಾಸ ನಡೆಸುವಾಗ ಅಪಘಾತವಾಗಿದೆ. ಹೆಲಿಕಾಪ್ಟರ್ ಅನ್ನು ಕೆಳಗೆ ಇಳಿಸುವಾಗ ಬೆಂಕಿ

ರಾಯಪುರ: ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್ ಗಳು ಸಾವು Read More »

ಮೇ.15ರಿಂದ ಮುಂಗಾರು ಆಗಮನ| ಈ ಬಾರಿ 15 ದಿನ ಮೊದಲೇ ಕಾಲಿಡಲಿದೆ ಮಾನ್ಸೂನ್

ಸಮಗ್ರ ನ್ಯೂಸ್: ನೈರುತ್ಯ ಮಾನ್ಸೂನ್ ಈ ಬಾರಿ ಹದಿನೈದು ದಿನ ಮುಂಚೆಯೇ ಆಗಮಿಸಲಿದೆ. ಮೇ 15 ರಂದೇ ನೈರುತ್ಯ ಮಾನ್ಸೂನ್ ಆಗಮನದ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆಯಿಂದ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸಾಮಾನ್ಯವಾಗಿ ಮೇ ಕೊನೆ ಇಲ್ಲವೇ ಜೂನ್ ಮೊದಲವಾರದಲ್ಲಿ ಮುಂಗಾರು ಆರಂಭವಾಗುತ್ತದೆ. ಆದರೆ, ಈ ಬಾರಿ ಮುಂಗಾರು ಮೇ 15 ರಿಂದಲೇ ಆರಂಭವಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೇ 15 ರಂದು ಮೊದಲ ಋತುಮಾನದ ಮಳೆಯಾಗಲಿದೆ. ಇದರೊಂದಿಗೆ ನೈರುತ್ಯ ಮಾನ್ಸೂನ್

ಮೇ.15ರಿಂದ ಮುಂಗಾರು ಆಗಮನ| ಈ ಬಾರಿ 15 ದಿನ ಮೊದಲೇ ಕಾಲಿಡಲಿದೆ ಮಾನ್ಸೂನ್ Read More »

ಭಾರೀ ಕುಸಿತ ಕಂಡ ಷೇರು ಮಾರುಕಟ್ಟೆ| ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ|

ಸಮಗ್ರ ನ್ಯೂಸ್: ಒಂದೆಡೆ ಭಾರತೀಯ ರೂಪಾಯಿ ಮೌಲ್ಯ ಯುಎಸ್ ಡಾಲರ್ ಎದುರು ಗುರುವಾರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡರೆ, ಇನ್ನೊಂದೆಡೆ ಭಾರತೀಯ ಷೇರು ಮಾರುಕಟ್ಟೆಗಳ ಸಂವೇದಿ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಶೇ.2ಕ್ಕಿಂತಲೂ ಹೆಚ್ಚು ಇಳಿಕೆ ದಾಖಲಿಸಿವೆ. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ 50 ಇಂಡೆಕ್ಸ್ ಶೇ.2.22 ಅಥವಾ 359.10 ಅಂಶ ಕಡಿಮೆಯಾಗಿ 15,808 ಅಂಶಗಳಲ್ಲಿ ವಹಿವಾಟು ಮುಗಿಸಿದೆ. ಇನ್ನು ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಶೇ.2.14ರಷ್ಟು ಅಥವಾ 1,158.08ರಿಂದ 52,930.31 ಮಟ್ಟಕ್ಕೆ ಇಳಿಕೆಯಾಗಿದೆ. ಈ

ಭಾರೀ ಕುಸಿತ ಕಂಡ ಷೇರು ಮಾರುಕಟ್ಟೆ| ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ| Read More »

ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಂಸಿಂಘೆ‌ ನೇಮಕ

ಸಮಗ್ರ ನ್ಯೂಸ್: ಆರ್ಥಿಕ ತುರ್ತು ಪರಿಸ್ಥಿತಿಯ ಹೊಣೆ ಹೊತ್ತು ರಾಜಪಕ್ಸೆ ರಾಜೀನಾಮೆ ಬಳಿಕ, ಇದೀಗ ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮ ಸಿಂಘೆ ನೇಮಕವಾಗಿದ್ದಾರೆ. ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಮಸಿಂಘೆ ಅವರನ್ನು ನೇಮಕ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಶ್ರೀಲಂಕಾದ ನೂತನ ಪ್ರಧಾನಿಯಾಗಿ ರನಿಲ್ ವಿಕ್ರಂಸಿಂಘೆ‌ ನೇಮಕ Read More »