ದೇಶ-ವಿದೇಶ

ಕೋವಿಡ್ ಲಾಕ್ ಡೌನ್ ಎಫೆಕ್ಟ್| ದೇಶದಲ್ಲಿ ದಿಢೀರ್ ಏರಿಕೆಯಾದ ಹೆಚ್ಐವಿ| ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡಿದ ಮಾರಕ ರೋಗ

ಸಮಗ್ರ ನ್ಯೂಸ್: ಕೋವಿಡ್​-19 ಹಾವಳಿಯಿಂದಾಗಿ ಹೇರಲಾಗಿದ್ದ ಲಾಕ್​ಡೌನ್​ ಸಂದರ್ಭದಲ್ಲಿನ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದಾಗಿ ಉಂಟಾಗಿರುವ ಮಾರಕ ಸಂಗತಿಯೊಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಪ್ರಶ್ನೆಯಿಂದಾಗಿ ಬಹಿರಂಗಗೊಂಡಿದೆ. ಮಧ್ಯಪ್ರದೇಶದ ಆರ್​ಟಿಐ ಕಾರ್ಯಕರ್ತ ಚಂದ್ರೇಶೇಖರ್​ ಗೌರ್ ಎಂಬಾತ ಕೇಳಿದ್ದ ಪ್ರಶ್ನೆಗೆ ಸಿಕ್ಕ ಉತ್ತರ ಭಯಂಕರ ವಿಷಯವೊಂದನ್ನು ಬೆಳಕಿಗೆ ತಂದಿದೆ. ಈತ ಸಲ್ಲಿಸಿದ್ದ ಅರ್ಜಿಗೆ ರಾಷ್ಟ್ರೀಯ ಏಯ್ಡ್ಸ್​ ತಡೆ ಸಂಸ್ಥೆ ನೀಡಿರುವ ಉತ್ತರ ಚಿಂತೆಗೀಡು ಮಾಡುವಂತಿದೆ. ಲಾಕ್​ಡೌನ್​ ಅವಧಿಯಲ್ಲಿನ ಅಸುರಕ್ಷಿತ ಸಂಭೋಗದಿಂದಾಗಿ ದೇಶದಲ್ಲಿ 85 ಸಾವಿರಕ್ಕೂ ಅಧಿಕ ಮಂದಿ ಏಯ್ಡ್ಸ್​ ಸೋಂಕಿಗೆ […]

ಕೋವಿಡ್ ಲಾಕ್ ಡೌನ್ ಎಫೆಕ್ಟ್| ದೇಶದಲ್ಲಿ ದಿಢೀರ್ ಏರಿಕೆಯಾದ ಹೆಚ್ಐವಿ| ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಹರಡಿದ ಮಾರಕ ರೋಗ Read More »

ಪ್ರಧಾನಿ ನೇತೃತ್ವದಲ್ಲಿ ಸಿಎಂಗಳ ಸಭೆ| ಕೊರೊನಾ ನಡುವೆಯು ಪೆಟ್ರೋಲ್ ಡೀಸೇಲ್ ದರ ಇಳಿಸುವಂತೆ ಪ್ರಧಾನಿ ಮನವಿ|

ಸಮಗ್ರ ನ್ಯೂಸ್: ಕೊರೊನಾ ಸವಾಲು ಇನ್ನೂ ಮುಗಿದಿಲ್ಲ. ಶಾಲೆ ಆರಂಭದ ಹೊತ್ತಲ್ಲಿ ಕರೊನಾ 4ನೇ ಅಲೆಯ ಭೀತಿ ಹುಟ್ಟಿದೆ.ದೇಶದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ರಾಜ್ಯಗಳಲ್ಲಿ ಪೆಟ್ರೋಲ್​, ಡಿಸೇಲ್​ ದರ ಕಡಿಮೆ ಮಾಡಲೂ ಪ್ರಧಾನಿ ಮನವಿಯನ್ನು ಮಾಡಿಕೊಂಡಿದ್ದಾರೆ.ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಆತಂಕ ಹಿನ್ನೆಲೆ ಬುಧವಾರ ಬೆಳಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್​ ಸಭೆ ನಡೆಸಿದ ಪ್ರಧಾನಿ ಮೋದಿ ಈಗಾಗಲೇ ಆರೋಗ್ಯ ಕ್ಷೇತ್ರದಲ್ಲಿ

ಪ್ರಧಾನಿ ನೇತೃತ್ವದಲ್ಲಿ ಸಿಎಂಗಳ ಸಭೆ| ಕೊರೊನಾ ನಡುವೆಯು ಪೆಟ್ರೋಲ್ ಡೀಸೇಲ್ ದರ ಇಳಿಸುವಂತೆ ಪ್ರಧಾನಿ ಮನವಿ| Read More »

ಅಮೇರಿಕಾದ ಉಪಾಧ್ಯಕ್ಷರಿಗೂ ಬಂತು ಕೊರೋನಾ

ಸಮಗ್ರ ನ್ಯೂಸ್: ಭಾರತವು ಕೊರೋನಾ ನಾಲ್ಕನೆಯ‌ ಅಲೆಯ ಭೀತಿಯಲ್ಲಿದ್ದರೆ ಅತ್ತ ವಿಶ್ವದ ಬಲಾಢ್ಯ ಅಮೇರಿಕಕ್ಕೂ ಇದರ ಚಿಂತೆ ಶುರುವಾದಂತೆ ಕಾಣಿಸುತ್ತಿದೆ. ಅಮೇರಿಕಾದ ಉಪಾಧ್ಯಕ್ಷೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಆದರೆ ಅದು ಲಕ್ಷಣರಹಿತವಾಗಿದ್ದು ಆರೋಗ್ಯಕರವಾಗಿದ್ದಾರೆ. ಇದುವರೆಗಿನ ಮಾಹಿತಿಯ ಪ್ರಕಾರ ಅವರು ಅಮೇರಿಕಾ ಅಧ್ಯಕ್ಷರ ಪ್ರಾಥಮಿಕ ಸಂಪರ್ಕಕ್ಕೆ ಒಳಪಟ್ಟಿಲ್ಲ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ

ಅಮೇರಿಕಾದ ಉಪಾಧ್ಯಕ್ಷರಿಗೂ ಬಂತು ಕೊರೋನಾ Read More »

ಕೋವಿಡ್ ಜನಕ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ?

ಸಮಗ್ರ ನ್ಯೂಸ್: ಜಗತ್ತು ಕೋವಿಡ್ ಭೀತಿಯಿಂದ ಹೊರಬರುವ ಮೊದಲೇ ಚೀನಾದಿಂದ ಬಂದ ಮತ್ತೊಂದು ಆಘಾತಕಾರಿ ಸುದ್ದಿ ಆರೋಗ್ಯದ ಕಾಳಜಿಯನ್ನು ಹೆಚ್ವಿಸುವಂತೆ ಮಾಡಿದೆ. ಕೋವಿಡ್ ಜನಕ ಚೀನಾದಲ್ಲಿ ಹಕ್ಕಿಜ್ವರದ ತಳಿಯಾಗಿರುವ H3N8 ಚೀನಾದಲ್ಲಿ ಮಾನವರಲ್ಲಿ ಪತ್ತೆಯಾಗಿದೆ. ಚೀನಾದ ಆರೋಗ್ಯ ಇಲಾಖೆಯ ವರದಿಗಳ ಪ್ರಕಾರ ನಾಲ್ಕು ವರ್ಷದ ಮಗುವಿನಲ್ಲಿ ಈ ಸೋಂಕು ಪತ್ತೆಯಾಗಿದ್ದು, ಯಾವುದೇ ಪ್ರಾಥಮಿಕ ಸಂಪರ್ಕಕ್ಕೆ ಹರಡಿಲ್ಲ ಎಂಬುದು‌ ತೃಪ್ತಿಕರ ಸಂಗತಿಯಾಗಿದೆ.

ಕೋವಿಡ್ ಜನಕ ಚೀನಾದಲ್ಲಿ ಮತ್ತೊಂದು ರೋಗ ಪತ್ತೆ? Read More »

ಕೇರಳದಲ್ಲಿ ಕಾರು ಚಲಾಯಿಸಲೂ ಹೆಲ್ಮೆಟ್ ಬೇಕಂತೆ; ಚಾಲಕನಿಗೆ ದಂಡ ವಿಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಹೆಲ್ಮೆಟ್ ಧರಿಸದ ಕಾರಣ ಕಾರು ಮಾಲೀಕರಿಗೆ 500 ರೂ.ಗಳ ದಂಡ ವಿಧಿಸಿದ ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಮಾರುತಿ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಾತ್ರ ಅಜಿತ್ ಎ ಎಂಬವರಿಗೆ ಕೇರಳ ಟ್ರಾಫಿಕ್ ಪೊಲೀಸರು 500 ರೂ.ಗಳ ದಂಡ ವಿಧಿಸಿದ್ದು, ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ‘ಡ್ರೈವಿಂಗ್ ಅಥವಾ ಸವಾರ ತಲೆಗೆ ಹೆಲ್ಮೆಟ್ ಧರಿಸಿಲ್ಲ’ ಎಂಬ ಕಾರಣಕ್ಕೆ 500 ರೂ.ಗಳ ದಂಡ ಪಾವತಿಸಿದ್ದು, ಕೇರಳ ಪೊಲೀಸರಿಗೆ ಯಾರು ಹೆಲ್ಮೆಟ್ ಧರಿಸಬೇಕೆಂಬುದೇ ಮರೆತುಹೋಗಿದೆ. ಡಿಸೆಂಬರ್ 7, 2021

ಕೇರಳದಲ್ಲಿ ಕಾರು ಚಲಾಯಿಸಲೂ ಹೆಲ್ಮೆಟ್ ಬೇಕಂತೆ; ಚಾಲಕನಿಗೆ ದಂಡ ವಿಧಿಸಿದ ಪೊಲೀಸರು Read More »

ರಥೋತ್ಸವ ವೇಳೆ ಕರೆಂಟ್ ಶಾಕ್; ಹತ್ತು ಮಂದಿ ಸಾವು|

ಸಮಗ್ರ ನ್ಯೂಸ್: ರಥೋತ್ಸವದ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಹರಿದು 10 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಂಜಾವೂರು ಕಲಿಮೇಡು ದೇವಸ್ಥಾನದಲ್ಲಿ ನಡೆದಿದೆ. ತಂಜಾವೂರಿನ ದೇವಾಲಯದ ರಥೋತ್ಸವದ ವೇಳೆ ವಿದ್ಯುತ್ ಹರಿದು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೇವಾಲಯದ ರಥೋತ್ಸವದ ವಿದ್ಯುತ್ ವೈರ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಮೃತಪಟ್ಟಿದ್ದು, ಗಾಯಗೊಂಡ ಮೂವರನ್ನು ತಂಜಾವೂರು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ರಥೋತ್ಸವ ವೇಳೆ ಕರೆಂಟ್ ಶಾಕ್; ಹತ್ತು ಮಂದಿ ಸಾವು| Read More »

ಬುಡಕಟ್ಟು ಜನಾಂಗದವರ ನಡುವೆ ಮಾರಾಮಾರಿ

ಸಮಗ್ರ ನ್ಯೂಸ್: ಬುಡಕಟ್ಟು ಜನಾಂಗದವರ ಮಧ್ಯೆ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಮಾರಾಮಾರಿಯಲ್ಲಿ ಬರೋಬ್ಬರಿ 175ಕ್ಕೂ ಹೆಚ್ಚು ಜನರ ಬಲಿಯಾಗಿದೆ. ಅರಬ್ಬರು ಮತ್ತು ಆಫ್ರಿಕನ್ ಮಸಲಿತ್ ಬುಡಕಟ್ಟುಗಳ ನಡುವೆ ಉಂಟಾದ ಹಿಂಸಾಚಾರ ಮುಂದುವರೆದಿದ್ದು, ನೂರಾರು ಜನರನ್ನು ಬಲಿ ಪಡೆದಿದೆ. ಐದು ದಿನಗಳಲ್ಲಿ 175ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬುಡಕಟ್ಟು ಜನಾಂಗದ ಮಾರಾಮಾರಿ ತಡೆಯಲು ಸೂಡಾನ್ ಸರ್ಕಾರ ಪಶ್ಚಿಮ, ಧಾರ್‍ಪುರ್ ಪ್ರಾಂತ್ಯಕ್ಕೆ ಮತ್ತಷ್ಟು ಸೇನಾಪಡೆಗಳನ್ನು ನಿಯೋಜಿಸಿದೆ. ರಾಜಧಾನಿ ಜಿನೇನಾದಿಂದ 80ಕಿ.ಮೀ. ಪೂರ್ವಕ್ಕೆ ಕ್ರೆನಿನ್ ಪಟ್ಟಣದಲ್ಲಿ ಅರಬ್ಬರು ಮತ್ತು ಆಫ್ರಿಕನ್

ಬುಡಕಟ್ಟು ಜನಾಂಗದವರ ನಡುವೆ ಮಾರಾಮಾರಿ Read More »

ನ್ಯೂಯಾರ್ಕ್: ಎಲಾನ್ ಮಸ್ಕ್ ಪಾಲಾದ ಟ್ವಿಟರ್|

ಸಮಗ್ರ ನ್ಯೂಸ್: ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರು ಸಾಮಾಜಿಕ ಜಾಲತಾಣ ಟ್ವೀಟರ್ ಕಂಪನಿಯನ್ನು ಸುಮಾರು 3 ಲಕ್ಷ ಕೋಟಿ ರೂ.ಗೆ ಖರೀದಿ ಮಾಡಿದ್ದು, ಒಪ್ಪಂದ ಅಂತಿಮಗೊಂಡಿದೆ ಎಂದು ಟ್ವೀಟರ್ ಘೋಷಣೆ ಮಾಡಿದೆ. ಮಸ್ಕ್ ಈಗಾಗಲೇ ಶೇ.9.1 ರಷ್ಟು ಷೇರುಗಳನ್ನು ಹೊಂದುವ ಮೂಲಕ ಅತಿ ದೊಡ್ಡ ಷೇರುದಾರ ಎನಿಸಿಕೊಂಡಿದ್ದರು ಹಾಗೂ ಟ್ವೀಟರ್ ಗಳನ್ನು ಖರೀದಿಸಲು ಏಪ್ರಿಲ್ 14 ರಂದು 3 ಲಕ್ಷ ಕೋಟಿ ರೂ. ಮೊತ್ತದ ಆಫರ್ ನೀಡಿದ್ದರು. ಅಲ್ಲದೆ ತಮ್ಮ ಶೇ. 9 ಪಾಲನ್ನು

ನ್ಯೂಯಾರ್ಕ್: ಎಲಾನ್ ಮಸ್ಕ್ ಪಾಲಾದ ಟ್ವಿಟರ್| Read More »

ಮತ್ತೆ 16 ಯೂಟ್ಯೂಬ್ ‌ಚಾನೆಲ್ ಗಳಿಗೆ ಕೇಂದ್ರದಿಂದ ‌ನಿಷೇಧ; ಕಾರಣ?

ಸಮಗ್ರ ನ್ಯೂಸ್: ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯು ಇಂದು ಮತ್ತೆ 16 ಯೂಟ್ಯೂಬ್ ಚಾನೆಲ್‌ಗಳ ಪ್ರಸಾರವನ್ನು ನಿಷೇಧಿಸಿದೆ. ರಾಷ್ಟ್ರದ ಸಮಗ್ರತೆ, ಕೋಮು ಸೌಹಾರ್ದ ಕದಡುವ ತಪ್ಪು ಮಾಹಿತಿಯನ್ನು ಹಂಚುವ ಕಾರಣ ನೀಡಿ ಈ ಚಾನೆಲ್‌ಗಳ ಪ್ರಸಾರವನ್ನು ನಿಷೇಧಿಸಲಾಗಿದೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಮತ್ತೆ 16 ಯೂಟ್ಯೂಬ್ ‌ಚಾನೆಲ್ ಗಳಿಗೆ ಕೇಂದ್ರದಿಂದ ‌ನಿಷೇಧ; ಕಾರಣ? Read More »

ಮತ್ತಷ್ಟು ಹೆಚ್ಚಾಗಲಿದೆ ಅಡುಗೆ ಎಣ್ಣೆ ಬೆಲೆ.

ಸಮಗ್ರ ನ್ಯೂಸ್: ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ನಡುವೆಯೂ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಿದೆ. ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ವಿಶ್ವದ ಎಲ್ಲ ರಾಷ್ಟ್ರಗಳಿಗೂ ತಟ್ಟಿದ್ದು, ಭಾರತದ ಮೇಲೂ ಇದು ಪರಿಣಾಮ ಬೀರಿದೆ. ತಾಳೆಎಣ್ಣೆ ರಫ್ತು ನಿಷೇಧಿಸಲು ಇಂಡೋನೇಷ್ಯಾ ತೀರ್ಮಾನಿಸಿರುವ ಕಾರಣ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ತೀವ್ರವಾಗಿ ಏರಿಕೆಯಾಗಬಹುದು ಹೇಳಲಾಗಿದೆ. ಈಗಾಗಲೇ ಅಡುಗೆ ಎಣ್ಣೆ ಬೆಲೆ ಹೆಚ್ಚಿದ್ದು, ಈಗ ಮತ್ತಷ್ಟು ಏರಿಕೆಯಾಗಬಹುದು ಎಂಬ ವಿಷಯ ಆತಂಕಕ್ಕೆ ಕಾರಣವಾಗಿದೆ. ಅಡುಗೆ ಎಣ್ಣೆ ಬೆಲೆ

ಮತ್ತಷ್ಟು ಹೆಚ್ಚಾಗಲಿದೆ ಅಡುಗೆ ಎಣ್ಣೆ ಬೆಲೆ. Read More »