ದೇಶ-ವಿದೇಶ

ಮಗನ ಒಂದು ವಿಡಿಯೋ ಕ್ಲಿಪ್ ನಿಂದ ಅಪ್ಪನ ಅಂಗಡಿ ಮುಂದೆ ಗ್ರಾಹಕರ ಕ್ಯೂ| ಇದೀಗ ವಿಡಿಯೋ ಜಾಲತಾಣದಲ್ಲಿ ಭಾರೀ ಭಾರೀ ವೈರಲ್|

ಸಮಗ್ರ ನ್ಯೂಸ್: ಬಾಲಕನೊಬ್ಬ ತನ್ನ ತಂದೆಯ ರಸ್ತೆ ಬದಿ ವ್ಯಾಪಾರಕ್ಕೆ ಬೆಂಬಲಿಸುವಂತೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಮಾಡಿ ಬಳಿಕ ಅಂಗಡಿ ಮುಂದೆ ಗ್ರಾಹಕರು ಕ್ಯೂ ನಿಂತಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಇದು ತಂದೆಯ ವ್ಯಾಪಾರಕ್ಕೆ ಉತ್ತಮ ಗ್ರಾಹಕರನ್ನು ಸೆಳೆಯಲು ಕಾರಣವಾಗಿದೆ. ಹೈದರಾಬಾದಿನ ಮೋತಿ ನಗರದಲ್ಲಿ ಹಲೀಮ್‌ ಸ್ಟಾಲ್‌ ಇಟ್ಟುಕೊಂಡಿರುವ ವರ್ತಕರೊಬ್ಬರ ಮಗ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ದಲ್ಲಿ ತನ್ನ ತಂದೆಯ ವ್ಯಾಪಾರವನ್ನು ವಿವರಿಸಿ, ಬೆಂಬಲಿಸುವಂತೆ ಜಾಹಿರಾತು ಮಾಡಿದ್ದಾನೆ. ಬಾಲಕನ ಈ ವಿಡಿಯೋ ಹೈದರಬಾದ್‌ ನಿವಾಸಿಗಳ […]

ಮಗನ ಒಂದು ವಿಡಿಯೋ ಕ್ಲಿಪ್ ನಿಂದ ಅಪ್ಪನ ಅಂಗಡಿ ಮುಂದೆ ಗ್ರಾಹಕರ ಕ್ಯೂ| ಇದೀಗ ವಿಡಿಯೋ ಜಾಲತಾಣದಲ್ಲಿ ಭಾರೀ ಭಾರೀ ವೈರಲ್| Read More »

ಒಮ್ಮೆ ನಡೆಸುವ ವ್ಯಭಿಚಾರಕ್ಕೆ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್

ಸಮಗ್ರ ನ್ಯೂಸ್: ಯಾವಾಗಲಾದರೂ ಒಮ್ಮೆ ಪ್ರತ್ಯೇಕವಾಗಿ ನಡೆಸುವ ವ್ಯಭಿಚಾರವು, ವ್ಯಭಿಚಾರದ ಜೀವನವೆಂದು (ಲಿವಿಂಗ್ ಇನ್ ಅಡಲ್ಟ್ರಿ) ಪರಿಗಣನೆಯಾಗುವುದಿಲ್ಲ. ಹಾಗಾಗಿ, ವಿಚ್ಛೇದನದ ಬಳಿಕವೂ ಮಹಿಳೆಯನ್ನು ಜೀವನಾಂಶದಿಂದ ದೂರವಿಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವಿಚ್ಛೇದನದ ಬಳಿಕ ಸಿಆರ್‌ಪಿಸಿ (ಕ್ರಿಮಿನಲ್‌ ಪ್ರೊಸಿಜರ್‌ ಕೋಡ್‌) ಸೆಕ್ಷನ್ 125ರ ಅಡಿ ಪತ್ನಿಗೆ ಜೀವನಾಂಶ ನೀಡುವಂತೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಲು ಕೋರಿ ಪತಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ. ನಿರಂತರವಾಗಿ ನಡೆಸುವ

ಒಮ್ಮೆ ನಡೆಸುವ ವ್ಯಭಿಚಾರಕ್ಕೆ ಮಹಿಳೆಯನ್ನು ಜೀವನಾಂಶದಿಂದ ಹೊರಗಿಡುವಂತಿಲ್ಲ: ಹೈಕೋರ್ಟ್ Read More »

ಹಲ್ಲಿಯನ್ನೂ ಬಿಡದ ಕಾಮಪಿಶಾಚಿಗಳು| ಬೆಂಗಾಲ್ ಮಾನಿಟರ್ ಮೇಲೆ ಅತ್ಯಾಚಾರಕ್ಕೆ ಯತ್ನ| ನಾಲ್ಕು ಮಂದಿ ಬಂಧನ

ಸಮಗ್ರ ಡಿಜಿಟಲ್ ಡೆಸ್ಕ್: ವಿಚಿತ್ರ ಘಟನೆಯೊಂದರಲ್ಲಿ ಹಲ್ಲಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆಸಿದ್ದು, ಮೊಬೈಲ್ ನಲ್ಲಿ ದೃಶ್ಯ ಚಿತ್ರೀಕರಿಸಿದ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಲ್ಲಿ ಮೇಲೆ ನಾಲ್ವರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ‘ಬಂಗಾಳ ಮಾನಿಟರ್ ಹಲ್ಲಿ’ಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ರತ್ನಗಿರಿ ಜಿಲ್ಲೆಯ ಗೋಥಾನೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೀಸಲು ಪ್ರದೇಶದ ಚಂದೋಲಿ ರಾಷ್ಟ್ರೀಯ ಉದ್ಯಾನವನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪಿಗಳ ವಿರುದ್ಧ ಮಾರ್ಚ್ 31ರಂದು

ಹಲ್ಲಿಯನ್ನೂ ಬಿಡದ ಕಾಮಪಿಶಾಚಿಗಳು| ಬೆಂಗಾಲ್ ಮಾನಿಟರ್ ಮೇಲೆ ಅತ್ಯಾಚಾರಕ್ಕೆ ಯತ್ನ| ನಾಲ್ಕು ಮಂದಿ ಬಂಧನ Read More »

ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಅನಿಲ ಸೋರಿಕೆಯಿಂದ ರಿಯಾಕ್ಟರ್ ಸ್ಫೋಟಗೊಂಡು ಔಷಧಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ 6 ಮಂದಿ ಸಜೀವ ದಹನವಾಗಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ನಡೆದಿದೆ. ಉದುರುಪತಿ ಕೃಷ್ಣಯ್ಯ, ಬಿ ಕಿರಣ್ ಕುಮಾರ್, ಕಾರು ರವಿ ದಾಸ್, ಮನೋಜ್ ಕುಮಾರ್, ಸುವಾಸ್ ರವಿ ದಾಸ್ ಮತ್ತು ಹಬ್ದಾಸ್ ರವಿ ದಾಸ್ ಮೃತರು. ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಔಷಧಿ ಘಟಕದಲ್ಲಿ ಅಗ್ನಿ ದುರಂತ: 6 ಮಂದಿ ಸಜೀವ ದಹನ Read More »

WTO ಒಪ್ಪಿದರೆ ವಿಶ್ವಕ್ಕೆ ಆಹಾರ ಪೂರೈಸುತ್ತೇವೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಅನುಮತಿ ನೀಡಿದರೆ, ವಿಶ್ವಕ್ಕೆ ಭಾರತದ ಆಹಾರ ದಾಸ್ತಾನು ಪೂರೈಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಗುಜರಾತ್‌ನ ಅದಲಾಜ್‌ನಲ್ಲಿ ಶ್ರೀ ಅನ್ನಪೂರ್ಣ ಧಾಮ್ ಟ್ರಸ್ಟ್‌ನ ಹಾಸ್ಟೆಲ್ ಮತ್ತು ಶಿಕ್ಷಣ ಸಂಕೀರ್ಣವನ್ನು ವೀಡಿಯೊ ಲಿಂಕ್ ಮೂಲಕ ಉದ್ಘಾಟಿಸಿದ ನಂತರ ಮೋದಿ ಮಾತನಾಡಿ ರಷ್ಯಾ ಉಕ್ರೇನ್ ಬಿಕ್ಕಟ್ಟಿನಿಂದ ವಿಶ್ವದ ವಿವಿಧ ಭಾಗಗಳಲ್ಲಿ ಆಹಾರ ಸಂಗ್ರಹಣೆ ಕ್ಷೀಣಿಸುತ್ತಿದೆ, ಇಂದು ಜಗತ್ತು ಅನಿಶ್ಚಿತ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಲ್ಲಾ ಬಾಗಿಲುಗಳು ಮುಚ್ಚಿರುವುದರಿಂದ ಪೆಟ್ರೋಲ್, ತೈಲ ಮತ್ತು

WTO ಒಪ್ಪಿದರೆ ವಿಶ್ವಕ್ಕೆ ಆಹಾರ ಪೂರೈಸುತ್ತೇವೆ – ಪ್ರಧಾನಿ ಮೋದಿ Read More »

ಉತ್ತರಾಖಂಡ : ಭೀಕರ ಕಾಳ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯಸಂಕುಲ ನಾಶ

ಸಮಗ್ರ ನ್ಯೂಸ್: ಉತ್ತರಾಖಂಡ್ ನ ತೆಹ್ರಿ ಜಿಲ್ಲೆಯ ತಿವಾರ್ಗಾಂವ್ ಮೇಲಿನ ಕಾಡುಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಅರಣ್ಯ ಸಂಪತ್ತು ನಾಶವಾಗಿದೆ. ಭಾನುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಸಂಜೆಯ ವೇಳೆಗೆ ಇಡೀ ಕಾಡನ್ನು ಆವರಿಸಿದೆ ಎಂದು ತಿಳಿದುಬಂದಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ‌ ಕಾರಣ ಕಾಳ್ಗಿಚ್ಚು ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದಾಗ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅರಣ್ಯ ರೇಂಜರ್ ಆಶಿಶ್ ಡಿಮ್ರಿ ನೇತೃತ್ವದಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದು, ಈ ವೇಳೆ ಹತ್ತು ಹೆಕ್ಟೇರ್

ಉತ್ತರಾಖಂಡ : ಭೀಕರ ಕಾಳ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯಸಂಕುಲ ನಾಶ Read More »

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ ಎ.11ರಂದು ವರ್ಚುವಲ್ ಸಭೆ ನಡೆಸಲಿದ್ದು, . ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ವರ್ಚುವಲ್ ಸಭೆಯಲ್ಲಿ ಉಭಯ ನಾಯಕರು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಲಿದ್ದಾರೆ. ಈ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ Read More »

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್

ಸಮಗ್ರ ನ್ಯೂಸ್: ಭಾರತವನ್ನು ಬಹುವಾಗಿ ಹೊಗಳಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಮೇಲೆ ವಿರೋಧ ಪಕ್ಷ ಪಾಕಿಸ್ತಾನ್‌ ಮುಸ್ಲಿಂ ಲೀಗ್‌ನ ಉಪಾಧ್ಯಕ್ಷೆ ಮರಿಯಂ ನವಾಜ್‌ ಹರಿಹಾಯ್ದಿದ್ದಾರೆ. ಭಾರತವು ಇಮ್ರಾನ್‌ಗೆ ಅಷ್ಟೊಂದು ಇಷ್ಟ ಎಂದಾದರೆ ಅವರು ಅಲ್ಲಿಗೇ ಹೋಗಲಿ ಎಂದಿದ್ದಾರೆ. ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಭಾರತದ ಯಾವ ಪ್ರಧಾನಿಯೂ ಸಂವಿಧಾನವನ್ನು ಉಲ್ಲಂಘಿಸಿದ ಉದಾಹರಣೆ ಇಲ್ಲ. ಇದನ್ನು ಇಮ್ರಾನ್‌ ಅವರೂ ಅನುಸರಿಸಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಮಗಳು ಮರಿಯಂ ಹೇಳಿದ್ದಾರೆ. ‘ಅತ್ಯಂತ ಹೆಮ್ಮೆಯ ಭಾವವನ್ನು

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್ Read More »

ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ

ಸಮಗ್ರ ನ್ಯೂಸ್: ಕೆನಡಾದ ಟೊರೆಂಟೊದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಉತ್ತರ ಪ್ರದೇಶದ ಕಾರ್ತಿಕ್ ವಾಸುದೇವ್ ಎಂದು ಗುರುತಿಸಲಾಗಿದೆ. ಟೊರಂಟೊದ ಶೇರ್ ಬಾರ್ನೆ ಸಬ್ ವೇ ರೈಲು ನಿಲ್ದಾಣದ ಬಳಿ ಗುರುವಾರ ಸಂಜೆ ಸಂಜೆ ತೆರಳುತ್ತಿದ್ದಾಗ ಮುಸುಕುದಾರಿಯೊಬ್ಬ ಗುಂಡಿನ ಸುರಿಮಳೆಗೈದಿದ್ದಾನೆ. ಬಳಿಕ ಕಾರ್ತಿಕ್ ಅವರನ್ನು ರೈಲು ನಿಲ್ದಾಣದ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಈ ಸಂಬಂಧ ಟೊರಂಟೊ ಪೊಲೀಸರು ತನಿಖೆ

ಕೆನಡಾ: ಭಾರತೀಯ ವಿದ್ಯಾರ್ಥಿ ದುಷ್ಕರ್ಮಿಯ ಗುಂಡಿಗೆ ಬಲಿ Read More »

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆ ಅಗತ್ಯ- ಅಮಿತ್ ಶಾ| ಸ್ಥಳೀಯ ಭಾಷೆಗಳ ಮಾನ್ಯತೆ ಕುಂದುವ ಬೀತಿ|

ಸಮಗ್ರ ನ್ಯೂಸ್: ಇಂಗ್ಲಿಷ್‌ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಸ್ಥಳೀಯ ಭಾಷೆಗಳನ್ನು ಮೂಲೆಗೆ ತಳ್ಳುವ ಆತಂಕ ಎದುರಾಗಿದೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮಿತ್ ಶಾ ಸರ್ಕಾರ ನಡೆಸುವ ಮಾಧ್ಯಮವೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ.ಇದು ಖಂಡಿತವಾಗಿಯೂ ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೀಗ ಸಚಿವ ಸಂಪುಟದ

ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆ ಅಗತ್ಯ- ಅಮಿತ್ ಶಾ| ಸ್ಥಳೀಯ ಭಾಷೆಗಳ ಮಾನ್ಯತೆ ಕುಂದುವ ಬೀತಿ| Read More »