ದೇಶ-ವಿದೇಶ

ಇಂದೂ ಏರಿಕೆ ಕಂಡ ತೈಲ ಬೆಲೆ| ನಾಲ್ಕೇ ದಿನದಲ್ಲಿ 3.6 ರೂ ಹೆಚ್ಚಳ

ಸಮಗ್ರ ನ್ಯೂಸ್: ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.6 . ರೂ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 113.27 ರೂ […]

ಇಂದೂ ಏರಿಕೆ ಕಂಡ ತೈಲ ಬೆಲೆ| ನಾಲ್ಕೇ ದಿನದಲ್ಲಿ 3.6 ರೂ ಹೆಚ್ಚಳ Read More »

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಭಾರತೀಯ ನೌಕಾಪಡೆಯು ನಾವಿಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಭಾರತೀಯ ನೌಕಾಪಡೆಹುದ್ದೆಗಳ ಸಂಖ್ಯೆ: 2500ಉದ್ಯೋಗ ಸ್ಥಳ: ಭಾರತದಾದ್ಯಂತಹುದ್ದೆಯ ಹೆಸರು: ನಾವಿಕರು (AA & SSR)ವೇತನ: ರೂ.21700-69100/- ಪ್ರತಿ ತಿಂಗಳುಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ Read More »

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜಪಾನ್| ಸೂರ್ಯೋದಯದ ನಾಡಲ್ಲಿ ಜನಜೀವನ ದುಸ್ಥರ

ಸಮಗ್ರ ನ್ಯೂಸ್: ಬುಧವಾರ ರಾತ್ರಿ ಉತ್ತರ ಜಪಾನ್‌ ನ ಫುಕುಶಿಮಾ ಕರಾವಳಿಯಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪ್ರಬಲ ಭೂಕಂಪದಿಂದ ಹಲವು ನಗರಗಳಲ್ಲಿ ವಿದ್ಯುತ್ ವ್ಯವಸ್ಥೆ ಕಡಿತಗೊಂಡಿದೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉತ್ತರ ಅಕ್ಷಾಂಶ 37.7 ಮತ್ತು ಪೂರ್ವ ರೇಖಾಂಶ 141.7ರ 60 ಕಿಮೀ ಆಳದಲ್ಲಿ, ಬುಧವಾರ ಸ್ಥಳೀಯ ಕಾಲಮಾನ ರಾತ್ರಿ 11.36ರ ಸುಮಾರಿಗೆ ಕಂಪನ ಸಂಭವಿಸಿದೆ.

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಜಪಾನ್| ಸೂರ್ಯೋದಯದ ನಾಡಲ್ಲಿ ಜನಜೀವನ ದುಸ್ಥರ Read More »

ಸುಪ್ರೀಂ ಮೆಟ್ಟಿಲೇರಿದ ‘ಹಿಜಾಬ್’| ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಅರ್ಜಿದಾರರು

ಸಮಗ್ರ ನ್ಯೂಸ್: ರಾಜ್ಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ ರಾಜ್ಯ ಹೈಕೋರ್ಟ್‌ ನ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ʼಗೆ ವಿಶೇಷ ರಜೆ ಅರ್ಜಿ ಸಲ್ಲಿಸಲಾಗಿದೆ. ಮೇಲ್ಮನವಿಯನ್ನು ವಿದ್ಯಾರ್ಥಿನಿ ನಿಭಾ ನಾಜ್‌ ಪರ ವಕೀಲ ಅನಾಸ್‌ ತನ್ವೀರ್‌ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ. ‘ಹಿಜಾಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ ವ್ಯಾಪ್ತಿಗೆ ಬರುತ್ತದೆ ಮತ್ತು ಹೀಗಾಗಿ ಸಂವಿಧಾನದ ಅನುಚ್ಛೇದ

ಸುಪ್ರೀಂ ಮೆಟ್ಟಿಲೇರಿದ ‘ಹಿಜಾಬ್’| ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಅರ್ಜಿದಾರರು Read More »

ಹಿಜಾಬ್ ವಿವಾದ| ಅರ್ಜಿದಾರರಿಂದ ಸುಪ್ರೀಂ ಮೊರೆ ಹೋಗಲು ನಿರ್ಧಾರ

ಸಮಗ್ರ ನ್ಯೂಸ್: ಹಿಜಾಬ್ ಧಾರಣೆ ಇಸ್ಲಾಂ ನ ಕಡ್ಡಾಯ ಭಾಗವಲ್ಲ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಾರದು, ಸರ್ಕಾರದ ಸಮವಸ್ತ್ರ ಆದೇಶ ಪಾಲನೆ ಕಡ್ಡಾಯ ವಾಗಬೇಕು ಎಂಬ ಕರ್ನಾಟಕ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಗೆ ಮೊರೆ ಹೋಗಲು ನಿರ್ಧರಿಸಿದ್ದಾರೆ. ಹಿಜಾಬ್ ಗೆ ಸಂಬಂಧಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ರದ್ದುಗೊಳಿಸಿ ಕರ್ನಾಟಕ ತ್ರಿಸದಸ್ಯ ಪೀಠ ಇಂದು ತನ್ನ ತೀರ್ಪು ಪ್ರಕಟಿಸಿದೆ. ಆದರೆ ಈ ತೀರ್ಪು ಪ್ರಶ್ನಿಸಲು ಅರ್ಜಿದಾರರು ನಿರ್ಧರಿಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ದಾವೆ

ಹಿಜಾಬ್ ವಿವಾದ| ಅರ್ಜಿದಾರರಿಂದ ಸುಪ್ರೀಂ ಮೊರೆ ಹೋಗಲು ನಿರ್ಧಾರ Read More »

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ – ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವವಾದ ತೀರ್ಪು ನೀಡಿದ್ದು ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎ.ಜಿ ನಾವದಗಿ ಈ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರ ವಿಧಿಸಿರುವ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯ, ಅದನ್ನು ಪ್ರಶ್ನಿಸುವಂತಿಲ್ಲ. ಸರ್ಕಾರದ ಆದೇಶ ಕಡ್ಡಾಯವಾಗಿದೆ ಎಂದು ಪೀಠ ತೀರ್ಪಿತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ – ಹೈಕೋರ್ಟ್ ತೀರ್ಪು Read More »

ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ| ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನ|

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆಯ ಬೇಡಿಕೆಗಳ ನಡುವೆ ಇಂದು ಸಂಜೆ ನಾಲ್ಕೂವರೆ ಗಂಟೆಗಳ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ತೀರ್ಮಾನಿಸಲಾಗಿದೆ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ಸಭೆಯು ಸೋಲಿಗೆ ಕಾರಣಗಳು ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ

ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ| ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನ| Read More »

ನವದೆಹಲಿ: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಭಾಗ-2| ಪ್ರತಿಪಕ್ಷಗಳು ಸರ್ಕಾರದತ್ತ ಮುಗಿಬೀಳಲು ರೆಡಿ

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರ, ಮಾರ್ಚ್ ೧೪ ರಿಂದ ಆರಂಭವಾಗಲಿದೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ, ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿ ದರ ಇಳಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರತಿಪಕ್ಷಗಳು ಸರಕಾರದ ವಿರುದ್ಧ ಹೋರಾಟ ಮಾಡಲು ಸಜ್ಜಾಗಿವೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಬಜೆಟ್ ಪ್ರಸ್ತಾವನೆಗಳು ಮತ್ತು ಬಜೆಟ್ ಮಂಡನೆಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವುದು ಸರ್ಕಾರದ ಕಾರ್ಯಸೂಚಿಯಲ್ಲಿ ಪ್ರಮುಖವಾಗಿದೆ. ವಿತ್ತ ಸಚಿವೆ

ನವದೆಹಲಿ: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಭಾಗ-2| ಪ್ರತಿಪಕ್ಷಗಳು ಸರ್ಕಾರದತ್ತ ಮುಗಿಬೀಳಲು ರೆಡಿ Read More »

ನವೀನ್ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡುವಂತೆ ಮೋದಿ ಸೂಚನೆ

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಚಲಿತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು. ಇತ್ತ, ಮೃತ ವಿದ್ಯಾರ್ಥಿ ನವೀನ್

ನವೀನ್ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡುವಂತೆ ಮೋದಿ ಸೂಚನೆ Read More »

ಉಗ್ರಕೃತ್ಯದಲ್ಲಿ ತೊಡಗಿದ್ದ 81 ಮಂದಿಗೆ ಗಲ್ಲು

ಸಮಗ್ರ ನ್ಯೂಸ್: ಭಯೋತ್ಪಾದನೆ ಸಂಬಂಧಿಸಿದ ವಿವಿಧ ಅಪರಾಧಗಳ ಮೇಲೆ ಒಂದೇ ದಿನದಲ್ಲಿ 81 ಜನರನ್ನು ಗಲ್ಲಿಗೇರಿಸಿರುವುದಾಗಿ ಸೌದಿ ಅರೇಬಿಯಾ ಹೇಳಿದೆ. ಇದು 2021 ರಲ್ಲಿ ಜಾರಿಗೆ ತಂದಿದ್ದ ಮರಣದಂಡನೆಗಳ ಲೆಕ್ಕಾಚಾರದಲ್ಲಿ ಹೆಚ್ಚಿನದು ಎಂದು ಸೌದಿ ಸರ್ಕಾರ ತಿಳಿಸಿದೆ. ಶಿಕ್ಷೆಗೊಳಗಾದವರು ಇಸ್ಲಾಮಿಕ್ ಸ್ಟೇಟ್, ಅಲ್-ಖೈದಾ, ಹೌತಿ ಮತ್ತು ಇತರ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದವರಾಗಿದ್ದರು ಎಂದು ಸೌದಿಯ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಹೇಳಿದೆ. ಮರಣದಂಡನೆಗೆ ಒಳಗಾದವರೆಲ್ಲರೂ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ದೇಶದೊಳಗೆ

ಉಗ್ರಕೃತ್ಯದಲ್ಲಿ ತೊಡಗಿದ್ದ 81 ಮಂದಿಗೆ ಗಲ್ಲು Read More »