ದೇಶ-ವಿದೇಶ

“ಗಡಿ ತಲುಪಿದವರನ್ನು ಕರೆತಂದು ಶೋ-ಆಪ್ ಮಾಡ್ತಿದಾರೆ, ಉಕ್ರೇನ್ ಗೆ ಭಾರತ ಕಾಲಿಟ್ಟೇ ಇಲ್ಲ” – ಕೇಂದ್ರದ ವಿರುದ್ಧ ಕನ್ನಡಿಗ ವಿದ್ಯಾರ್ಥಿ ಆಕ್ರೋಶ

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿ ಅನೀಶ್ ಜಯಂತ್ ಎಂಬವರು ಹಂಗೇರಿ ಗಡಿ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ. ಸರ್ಕಾರದ ಸಹಾಯವಿಲ್ಲದೇ ಸ್ನೇಹಿತರ ಜೊತೆ ಗಡಿ ತಲುಪಿದ್ದ ಅನೀಶ್ ಇದೀಗ ದೆಹಲಿಗೆ ಆಗಮಿಸಿದ್ದು, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ವಿದ್ಯಾರ್ಥಿ ಅನೀಶ್ , ಉಕ್ರೇನ್ ನಿಂದ ವಾಪಸ್ ಆಗಿರುವುದು ಖುಷಿ ತಂದಿದೆ ಆದರೆ, ಅಲ್ಲಿಯ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ನಾವು ವೆಸ್ಟರ್ನ್ ಸೈಡ್ ಅಲ್ಲಿ ಇರುವುದರಿಂದ ಬಂದಿದ್ದೇವೆ, […]

“ಗಡಿ ತಲುಪಿದವರನ್ನು ಕರೆತಂದು ಶೋ-ಆಪ್ ಮಾಡ್ತಿದಾರೆ, ಉಕ್ರೇನ್ ಗೆ ಭಾರತ ಕಾಲಿಟ್ಟೇ ಇಲ್ಲ” – ಕೇಂದ್ರದ ವಿರುದ್ಧ ಕನ್ನಡಿಗ ವಿದ್ಯಾರ್ಥಿ ಆಕ್ರೋಶ Read More »

‘ಅಮರಾವತಿಯೇ ಆಂದ್ರದ ರಾಜಧಾನಿ’ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಸಮಗ್ರ‌ ನ್ಯೂಸ್: ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ 3 ರಾಜಧಾನಿಗಳು, ಸಿಆರ್‌ಡಿಎ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಸಿಆರ್‌ಡಿಎ ಕಾಯ್ದೆ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ʻಅಮರಾವತಿʼಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆದೇಶಿಸಲಾಗಿದೆ. ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಿದೆ. ಒಪ್ಪಂದದಂತೆ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್

‘ಅಮರಾವತಿಯೇ ಆಂದ್ರದ ರಾಜಧಾನಿ’ ಮಹತ್ವದ ತೀರ್ಪು ನೀಡಿದ ಹೈಕೋರ್ಟ್ Read More »

ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ‌ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ

ಸಮಗ್ರ ನ್ಯೂಸ್: ಉಕ್ರೇನ್​ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆಯೇ ರಷ್ಯಾದ ರಾಯಭಾರಿ ನಿಯೋಜಿತ ಡೇನಿಸ್​ ಅಲಿಪೋವ್​​ ಉಕ್ರೇನ್​ನ ಖಾರ್ಕಿವ್​, ಸುಮಿ ಹಾಗೂ ಇತರೆ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿವ ಪ್ರಯತ್ನವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಉಕ್ರೇನ್,​ ಭಾರತೀಯ ವಿದ್ಯಾರ್ಥಿಗಳನ್ನು ತನ್ನ ಒತ್ತೆಯಾಳಾಗಿ ನೋಡುತ್ತಿದೆ ಎಂದು ರಷ್ಯಾ ಹೇಳಿದೆ. ಖಾರ್ಕಿವ್‌ನಿಂದ ಭಾರತೀಯ ವಿದ್ಯಾರ್ಥಿಗಳ ಗುಂಪನ್ನು ತುರ್ತಾಗಿ ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿದೆ. ಆದರೆ ಉಕ್ರೇನ್​ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಂತೆ ನೋಡಿಕೊಳ್ತಿದೆ ಎಂದು

ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ‌ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ Read More »

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 110 ಡಾಲರ್‌ ತಲುಪಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಚ್ಚಾ ತೈಲದ ದರ ಈ ಪ್ರಮಾಣಕ್ಕೆ ಮುಟ್ಟಿದೆ. ಇದಕ್ಕೆ ಅನುಗುಣವಾಗಿ ಇಲ್ಲಿಯೂ ದರ ಏರಿಕೆ ಮಾಡಲಾಗುತ್ತಿತ್ತು. ಆದರೆ, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಇರುವುದರಿಂದ ತೈಲ ಕಂಪನಿಗಳು ಬೆಲೆ ಏರಿಕೆಯನ್ನು ತಡೆಹಿಡಿದಿವೆ. ಆದರೆ, ಇನ್ನು ನಾಲ್ಕೈದು

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ Read More »

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು. ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. 5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ Read More »

ರಷ್ಯಾ- ಉಕ್ರೇನ್ ಮಹಾಯುದ್ಧ| 13 ಮಕ್ಕಳು ಸೇರಿದಂತೆ 136 ಮಂದಿಯ ಪ್ರಾಣ ಹರಣ|

ಸಮಗ್ರ ನ್ಯೂಸ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಉಕ್ರೇನ್ ಕೂಡ ನಿರಂತರವಾಗಿ ತಕ್ಕ ಉತ್ತರ ನೀಡುತ್ತಿದೆ. ರಷ್ಯಾ ದಾಳಿಯಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 136 ಜನರು ಸತ್ತಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿಕೊಂಡಿದೆ, ಫೆಬ್ರವರಿ 24 ರ ಗುರುವಾರ ದಿಂದ ಮಾರ್ಚ್ 1 ರವರೆಗೆ ದಾಳಿಗೆ ಉಕ್ರೇನ್ ನಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 136 ಜನರು ಕೊಲ್ಲಲ್ಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ ಈ ಹಿಂದೆ,

ರಷ್ಯಾ- ಉಕ್ರೇನ್ ಮಹಾಯುದ್ಧ| 13 ಮಕ್ಕಳು ಸೇರಿದಂತೆ 136 ಮಂದಿಯ ಪ್ರಾಣ ಹರಣ| Read More »

ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ| 2 ಸಾವಿರ ಗಡಿ ದಾಟಿದ ಅನಿಲ ದರ

ಸಮಗ್ರ ನ್ಯೂಸ್: ಮಾರ್ಚ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌.ಪಿ.ಜಿ. ಸಿಲಿಂಡರ್‌ ಗಳ ಬೆಲೆಯನ್ನು 105 ರೂ. ಹೆಚ್ಚಿಸಲಾಗಿದೆ. ಇದರೊಂದಿಗೆ ಮಂಗಳವಾರದಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,012 ರೂ.ಆಗಲಿದೆ. 5 ಕೆಜಿ ಸಿಲಿಂಡರ್ ಬೆಲೆಯೂ 27 ರೂ.ನಷ್ಟು ಏರಿಕೆಯಾಗಿದೆ. ಈಗ ದೆಹಲಿಯಲ್ಲಿ 5 ಕೆಜಿ ಸಿಲಿಂಡರ್ ಬೆಲೆ 569 ರೂ. ಆಗಲಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ಯಾವುದೇ ಹೆಚ್ಚಳವಿಲ್ಲ. ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ

ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ| 2 ಸಾವಿರ ಗಡಿ ದಾಟಿದ ಅನಿಲ ದರ Read More »

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ

ಸಮಗ್ರ ನ್ಯೂಸ್: ಕೋವಿಡ್‌ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನಗಳ ಸಂಚಾರದ ಮೇಲೆ ವಿಧಿಸಲಾಗಿರುವ ನಿರ್ಬಂಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ. ಆದರೆ, ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಪ್ರಯಾಣಿಕ ವಿಮಾನಗಳು 2020ರ ಜುಲೈ ತಿಂಗಳಿನಿಂದ ಸುಮಾರು 45 ದೇಶಗಳಿಗೆ ಭಾರತದಿಂದ ಸಂಚಾರ ನಡೆಸುತ್ತಿವೆ. ಏರ್‌ ಬಬಲ್‌ ವ್ಯವಸ್ಥೆ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾನಗಳಿಗೆ ಮತ್ತು ಡಿಜಿಸಿಎ ಅನುಮತಿ ಪಡೆದ ಸರಕು ಸಾಗಣೆಯ ಅಂತರರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಈ ನಿರ್ಬಂಧ

ನವದೆಹಲಿ: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಹಾರಾಟ ನಿರ್ಬಂಧ ವಿಸ್ತರಣೆ Read More »

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಭಾನುವಾರ ಪೋಲೆಂಡ್‌ ಗಡಿಯತ್ತ ತೆರಳುತ್ತಿದ್ದಾಗ ಉಕ್ರೇನ್‌ ಭದ್ರತಾ ಪಡೆಗಳು ದೇಶ ತೊರೆಯದಂತೆ ತಡೆದು, ಥಳಿಸಿರುವ ಘಟನೆಗಳು ವರದಿಯಾಗಿವೆ. ಉಕ್ರೇನ್-ಪೋಲೆಂಡ್ ಗಡಿಯಲ್ಲಿರುವ ಶೆಹಿನಿಯಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಲಯಾಳಿ ವಿದ್ಯಾರ್ಥಿಗಳನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ತಡೆದು, ಥಳಿಸಿದ್ದಾರೆ. ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ Read More »

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ!

ಸಮಗ್ರ ನ್ಯೂಸ್: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine) ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ. ಹಿಂಸಾಚಾರಕ್ಕೆ ಬಲಿಯಾದ ಉಕ್ರೇನ್ ಜನರಿಗೆ ಸಹಾಯ ಮಾಡಲು 1 ಬಿಲಿಯನ್ (8.7 ಮಿಲಿಯನ್ ಅಮೇರಿಕನ್ ಡಾಲರ್) ಹಣವನ್ನು ದೇಣಿಗೆ ನೀಡಿ, ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ (Volodymyr Zelenskyy) ಅವರಿಗೆ ಉದ್ಯಮಿ ಹಿರೋಚಿ ಮಿಕಿತಾನಿ (hiroshi Mikitani) ಅವರು ಪತ್ರ ಬರೆದಿದ್ದಾರೆ. ಮಿಕಿತಾನಿ ಅವರು 2019ರಲ್ಲಿ ಕೈವ್‍ಗೆ

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ! Read More »