ದೇಶ-ವಿದೇಶ

ತಾಂತ್ರಿಕ ಸಮಸ್ಯೆ ಹಿನ್ನೆಲೆ| ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಬೇಕಿದ್ದ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ತಾಂತ್ರಿಕ ಸಮಸ್ಯೆ ಕಾರಣ ನಾಸಾ ಮತ್ತೆ ಮುಂದೂಡಿದ್ದರಿಂದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಬಾಹ್ಯಾಕಾಶದಲ್ಲಿ ಸಿಲುಕಿದ್ದಾರೆ. ಅವರು ಇನ್ನೂ ಕೆಲವು ದಿನಗಳ ಕಾಲ ಅಲ್ಲೇ ಉಳಿಯುವ ಸಾಧ್ಯತೆಯಿದೆ. ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಹೊಂದಿರುವ ಬಾಹ್ಯಾಕಾಶ ನೌಕೆಯ ವಾಪಸಾತಿ ಪ್ರಯಾಣವನ್ನು ಯಾವಾಗ ಕೈಗೊಳ್ಳಲಾಗುತ್ತದೆ ಎಂಬುದಕ್ಕೆ ನಾಸಾ ನಿರ್ದಿಷ್ಟ ದಿನಾಂಕವನ್ನು ನೀಡಿಲ್ಲ. ಬೋಯಿಂಗ್ ಬಾಹ್ಯಾಕಾಶ ನೌಕೆಯಲ್ಲಿ ಇಬ್ಬರು ಗಗನಯಾತ್ರಿಗಳು […]

ತಾಂತ್ರಿಕ ಸಮಸ್ಯೆ ಹಿನ್ನೆಲೆ| ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್ Read More »

ಮೊದಲ‌ ಮಳೆಯಲ್ಲೇ ತೋಯ್ದ ಬಾಲರಾಮ| ಸೋರುತ್ತಿದೆ ರಾಮಮಂದಿರ ಗರ್ಭಗುಡಿ!!

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇನ್ನೂ ಆರು ತಿಂಗಳು ಕಳೆದಿಲ್ಲ. ಆದ್ರೆ ಅದಾಗಲೇ ದೇವಸ್ಥಾನ ಮೇಲ್ಛಾವಣಿ ಸೋರುತ್ತಿದೆಯಂತೆ! ಹೀಗಂತ ದೇಗುಲದ ಅರ್ಚಕ ಸತ್ಯೇಂದ್ರ ದಾಸ್‌ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಸದ್ಯ ಅಯೋಧ್ಯೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ರಾಮಮಂದಿರದ ಛಾವಣಿ ಸೋರುತ್ತಿದೆ ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್‌ ಹೇಳಿಕೆ ನೀಡಿದ್ದಾರೆ. ಗರ್ಭಗುಡಿಯ ಛಾವಣಿ ಮೂಲಕ ನೀರು ಒಳಗೆ ಬಂದಿದೆ. ಸುಸಜ್ಜಿತವಾಗಿಯೇ ದೇಗುಲ ಕಟ್ಟಿದ್ದರೂ ನೀರು ಸೋರುತ್ತಿದೆ ಎಂದು ಅರ್ಚಕರು ಹೇಳಿದ್ದಾರೆ.. ಇನ್ನು ಈ ಬಗ್ಗೆ ಸ್ಪಷ್ಟನೆ

ಮೊದಲ‌ ಮಳೆಯಲ್ಲೇ ತೋಯ್ದ ಬಾಲರಾಮ| ಸೋರುತ್ತಿದೆ ರಾಮಮಂದಿರ ಗರ್ಭಗುಡಿ!! Read More »

ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಘೋಷಿಸಿದ ಯುನೆಸ್ಕೋ

ಸಮಗ್ರ ನ್ಯೂಸ್: ಯುನೆಸ್ಕೋದ ಸೃಜನಶೀಲ ನಗರಗಳ ಸಾಹಿತ್ಯ ವಿಭಾಗದಲ್ಲಿ, ಸಾಂಸ್ಕೃತಿಕ ಪರಂಪರೆಗೆ ಹೆಸರುವಾಸಿಯಾಗಿರುವ ಕೇರಳದ ಉತ್ತರ ಭಾಗದಲ್ಲಿರುವ ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಯುನೆಸ್ಕೋ ಅಧಿಕೃತವಾಗಿ ಘೋಷಿಸಿದೆ. ಇದರೊಂದಿಗೆ ಬರುವ ವರ್ಷದಿಂದ ಜ.23ರನ್ನು ಸಾಹಿತ್ಯ ನಗರದ ದಿನ ಎಂದು ಆಚರಿಸಲು ರಾಜ್ಯ ಸರ್ಕಾರ ಘೋಷಿಸಿದೆ. ಸಂಖ್ಯೆ, ಗುಣಮಟ್ಟ ಮತ್ತು ವೈವಿಧ್ಯಮಯ ಪುಸ್ತಕಗಳು ನಗರದಲ್ಲಿ ಪ್ರಕಟವಾಗುತ್ತಿರಬೇಕು. ಸ್ಥಳೀಯ ಮತ್ತು ವಿದೇಶಿ ಸಾಹಿತ್ಯಗಳ ಕುರಿತು ಗುಣಮಟ್ಟದ ಶೈಕ್ಷಣಿಕ ಕಾರ್ಯಕ್ರಮ ನಡೆಯುತ್ತಿರಬೇಕು. ಸಾಹಿತ್ಯ, ನಾಟಕ, ಕಾವ್ಯ ಮೊದಲಾದ ವಿಷಯಗಳಿಗೆ ನಗರದಲ್ಲಿ ಮನ್ನಣೆ

ಕಲ್ಲಿಕೋಟೆಯನ್ನು ‘ಸಾಹಿತ್ಯ ನಗರ’ ಎಂದು ಘೋಷಿಸಿದ ಯುನೆಸ್ಕೋ Read More »

18ನೇ ಲೋಕಸಭೆ/ ಇಂದಿನಿಂದ ಮೊದಲ ಅಧಿವೇಶನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಅಧಿಕಾರಕ್ಕೆ ಬಂದಿದ್ದು,ಇದೀಗ 18ನೇ ಲೋಕಸಭೆಯ ಮೊದಲ ಸಂಸತ್ ವಿಶೇಷ ಅಧಿವೇಶನವು ಸೋಮವಾರದಿಂದ (ಜೂನ್ 24) ಆರಂಭವಾಗಲಿದೆ. ನರೇಂದ್ರ ಮೋದಿ ಅವರು ಸೇರಿ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲರೂ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಸೇರಿ ಎಲ್ಲರೂ ನೂತನ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಾಗೆಯೇ, ನೂತನ ಸ್ಪೀಕ‌ರ್ ಆಯ್ಕೆಯ ಪ್ರಕ್ರಿಯೆಯೂ ನಡೆಯಲಿದೆ.

18ನೇ ಲೋಕಸಭೆ/ ಇಂದಿನಿಂದ ಮೊದಲ ಅಧಿವೇಶನ Read More »

ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ ಪರೀಕ್ಷೆಯ ಅಕ್ರಮ ಆರೋಪ ಮತ್ತು ಯುಜಿಸಿ-ನೆಟ್ ಪರೀಕ್ಷೆ ಮುಂದೂಡಿಕೆ, ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳ ವಿವಾದಗಳ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ. ನೀಟ್-ಯುಜಿ ಪರೀಕ್ಷೆಯ ಅಕ್ರಮ ಮತ್ತು ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡುವುದರ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಪರೀಕ್ಷೆಯಲ್ಲಿ ನಕಲು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳೂ ಆಕ್ರೋಶ ವ್ಯಕ್ತಪಡಿಸಿವೆ. ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋದ್ ಕುಮಾ‌ರ್ ಸಿಂಗ್‌ ಅವರನ್ನು ತೆಗೆದುಹಾಕಲಾಗಿದೆ ಮತ್ತು ಅವರ ಉತ್ತರಾಧಿಕಾರಿಯಾಗಿ ಮಾಜಿ ಐಎಎಸ್ ಅಧಿಕಾರಿ

ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ Read More »

ಜಿ ಎಸ್ ಟಿ ಕೌನ್ಸಿಲ್ ಸಭೆ/ ಹಲವು ಸೇವೆಗಳಿಗೆ ಜಿ ಎಸ್ ಟಿ ವಿನಾಯಿತಿ

ಸಮಗ್ರ ನ್ಯೂಸ್: ಸರಕು ಮತ್ತು ಸೇವಾ ತೆರಿಗೆ ಕೌನ್ಸಿಲ್ ಸಭೆಯು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಯಿತು. ಭಾರತೀಯ ರೈಲ್ವೆಯು ಸಾಮಾನ್ಯ ಜನರಿಗೆ ಒದಗಿಸುವ ಸೇವೆಗಳು, ಪ್ಲಾಟ್‌ಫಾರ್ಮ್ ಟಿಕೆಟ್‌ಗಳ ಮಾರಾಟ, ಕೊಠಡಿಗಳ ಸೌಲಭ್ಯ, ಕ್ಲೋಕ್‌ರೂಮ್ ಸೇವೆಗಳು ಹಾಗೂ ಬ್ಯಾಟರಿ ಚಾಲಿತ ಕಾರು ಸೇವೆಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ಘೋಷಿಸಲಾಯಿತು. ಇದರ ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ಕೇಂದ್ರದ ಉದ್ದೇಶ ಸ್ಪಷ್ಟವಾಗಿದೆ. ಇಂಧನದ ಮೇಲಿನ ಜಿಎಸ್‌ಟಿ ದರವನ್ನು ನಿರ್ಧರಿಸಲು ರಾಜ್ಯಗಳಿಗೆ ಬಿಟ್ಟಿದೆ

ಜಿ ಎಸ್ ಟಿ ಕೌನ್ಸಿಲ್ ಸಭೆ/ ಹಲವು ಸೇವೆಗಳಿಗೆ ಜಿ ಎಸ್ ಟಿ ವಿನಾಯಿತಿ Read More »

ಶಬರಿಮಲೆಯಲ್ಲಿ‌ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ/ ಭೂ ಸ್ವಾಧೀನ ಅಧಿಸೂಚನೆ ಹಿಂಪಡೆದ ಕೇರಳ ಸರ್ಕಾರ

ಸಮಗ್ರ ನ್ಯೂಸ್: ಶಬರಿಮಲೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಯೋಜನೆಯ ಭೂಸ್ವಾಧೀನ ಕುರಿತು ಆಕ್ಷೇಪಗಳ ಹಿನ್ನೆಲೆಯಲ್ಲಿ ತನ್ನ ನಿಲುವು ಬದಲಿಸಿರುವ ಕೇರಳ ಸರ್ಕಾರ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯುವುದಾಗಿ ಹೈಕೋರ್ಟ್‌ಗೆ ಹೇಳಿದೆ. ಪ್ರಸ್ತುತ ಅಧಿಸೂಚನೆಗೆ ಈ ಹಿಂದೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿಲುವನ್ನು ಬದಲಿಸಿದ್ದು, ಭೂ ಸ್ವಾಧೀನದಿಂದಾಗುವ ಸಾಮಾಜಿಕ ಪರಿಣಾಮದ ಅಧ್ಯಯನವನ್ನು ಹೊಸ ಏಜೆನ್ಸಿಯಿಂದ ನಡೆಸಲಾಗುವುದು ಎಂದು ಕೋರ್ಟ್‌ಗೆ ಹೇಳಿದೆ. ಕೇರಳ ಸರ್ಕಾರದ ಭೂ ಸ್ವಾಧೀನ ಅಧಿಸೂಚನೆಗೆ ಬಿಲೀವರ್ಸ್‌ ಚರ್ಚ್ ಅಧೀನದಲ್ಲಿರುವ ಅಯನಾ ಚಾರಿಟಬಲ್‌

ಶಬರಿಮಲೆಯಲ್ಲಿ‌ ಗ್ರೀನ್‌ ಫೀಲ್ಡ್ ವಿಮಾನ ನಿಲ್ದಾಣ/ ಭೂ ಸ್ವಾಧೀನ ಅಧಿಸೂಚನೆ ಹಿಂಪಡೆದ ಕೇರಳ ಸರ್ಕಾರ Read More »

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ

ಸಮಗ್ರ ನ್ಯೂಸ್: ಯುಜಿಸಿ-ನೆಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆ ಇರುವುದರಿಂದ ಅದನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ. ಎನ್‌ಟಿಎ ಜೂನ್ 18 ರಂದು ನಡೆಸಿದ ಯುಜಿಸಿ- ನೆಟ್ ಪರೀಕ್ಷೆಯಲ್ಲಿ 9 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪರೀಕ್ಷೆಯ ಪಾರದರ್ಶಕತೆಗೆ ಧಕ್ಕೆಯುಂಟಾಗಿರಬಹುದೆಂಬ ಮಾಹಿತಿ ಲಭಿಸಿರುವ ಕಾರಣ ಪರೀಕ್ಷೆಯನ್ನು ರದ್ದುಗೊಳಿಸಲು ಸಚಿವಾಲಯ ನಿರ್ಧರಿಸಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಗೋವಿಂದ್ ಜೈಸ್ವಾಲ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಯುಜಿಸಿ ನೆಟ್ ಪರೀಕ್ಷೆ ರದ್ದು/ ಶೀಘ್ರದಲ್ಲೇ ಮರುಪರೀಕ್ಷೆ Read More »

ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ‌ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕ ಅಧಿಕಾರಿಗಳು ಪ್ರಕಟಿಸಿದ್ದಾರೆ. ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್ ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ. ಕನಿಷ್ಠ 60 ಮಂದಿ ಜೋರ್ಡಾನ್ನರು ಕೂಡಾ ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕರು ತಿಳಿಸಿದ್ದು, ಜೋರ್ಡಾನ್‌ ರಾಜಧಾನಿ ಅಮ್ಮನ್ ನಿಂದ ನೀಡಿರುವ

ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ‌ ಹೆಚ್ಚು ಮಂದಿ ಸಾವು Read More »

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!?

ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!? Read More »