ದೇಶ-ವಿದೇಶ

ಸಾಮೂಹಿಕ ದೃಷ್ಟಿಕೋನದ ಭಾರತೀಯತೆ ನಮ್ಮದಾಗಲಿ- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಮತ

ಹೊಸದಿಲ್ಲಿ: ಈ ಗಣರಾಜ್ಯೋತ್ಸವದಂದು ದೇಶವಾಸಿಗಳೆಲ್ಲರೂ “ಭಾರತೀಯತೆ’ಯನ್ನು ಆಚರಿಸುವಂತೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕರೆ ನೀಡಿದ್ದಾರೆ. 73ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ಕೊರೊನಾ ವೈರಸ್‌ ಸಾಂಕ್ರಾಮಿಕದಿಂದ ಮಾನವತೆಗೆ ಎದುರಾದ ಅತೀ ದೊಡ್ಡ ಸವಾಲನ್ನು ಅತ್ಯಂತ ದೃಢಚಿತ್ತದಿಂದ ದೇಶವು ಎದುರಿಸಿದೆ. ಭಾರತೀಯರಾದ ನಮ್ಮೆಲ್ಲರ ಸಾಮೂಹಿಕ ದೃಷ್ಟಿಕೋನದ ಪ್ರೇರಣೆಯಿಂದ ಮೈದಳೆದ ಸಂವಿಧಾನವನ್ನು ಅನುಷ್ಠಾನಗೊಳಿಸಿದ ದಿನ ಇದಾಗಿದೆ. ನಮ್ಮ ಪ್ರಜಾತಂತ್ರದ ವೈವಿಧ್ಯ ಮತ್ತು ಸ್ಪಂದನಶೀಲತೆ, ಜಗತ್ತಿನೆಲ್ಲೆಡೆ ಮನ್ನಣೆ ಪಡೆದಿದೆ. ಏಕತೆ ಮತ್ತು ಒಂದು ದೇಶ ಎಂಬ ಮನೋಭಾವನೆಯನ್ನು […]

ಸಾಮೂಹಿಕ ದೃಷ್ಟಿಕೋನದ ಭಾರತೀಯತೆ ನಮ್ಮದಾಗಲಿ- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಭಿಮತ Read More »

ಇನ್ನು ಮುಂದೆ ಮನೆಯಲ್ಲೇ ಕುಳಿತು ಡಿಎಲ್‌ ನವೀಕರಣ ಮಾಡಬಹುದು

ಬೆಂಗಳೂರು: ಚಾಲನಾ ಪರವಾನಗಿ(ಡಿಎಲ್‌), ಕಲಿಕಾ ಪರವಾನಗಿ(ಎಲ್‌ಎಲ್‌) ನವೀಕರಣಕ್ಕೆ ಇನ್ನು ಮುಂದೆ ಆರ್‌ಟಿಒ ಕಚೇರಿಗೆ ಹೋಗುವ ಅಗತ್ಯವಿಲ್ಲ. ಮನೆಯಲ್ಲೇ ಕುಳಿತು ನವೀಕರಣ ಮಾಡಬಹುದು. ಪ್ರಾದೇಶಿ ಸಾರಿಗೆ ಇಲಾಖೆ(ಆರ್‌ಟಿಒ) ಕಚೇರಿಯಲ್ಲಿನ ಭ್ರಷ್ಟಾಚಾರ ತಡೆಯಲು ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರಥಿ ವೆಬ್ ಸೈಟ್ ಮೂಲಕ ವಿಳಾಸ ಬದಲಾವಣೆ, ಹೆಸರು ಬದಲಾವಣೆಯಂತಹ ಸೇವೆಗಳನ್ನು ಮನೆಯಲ್ಲೇ ಶುಲ್ಕ ಪಾವತಿಸಿ ಅನ್‌ಲೈನ್‌ನಲ್ಲೇ ಮಾಡಬಹುದು ಎಂದು ಆರ್‌ಇಟಿಒ ತಿಳಿಸಿದೆ. ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್, ಫಿಸಿಕಲ್ ಟೆಸ್ಟ್,

ಇನ್ನು ಮುಂದೆ ಮನೆಯಲ್ಲೇ ಕುಳಿತು ಡಿಎಲ್‌ ನವೀಕರಣ ಮಾಡಬಹುದು Read More »

ರಾಜ್ಯದ ಐವರಿಗೆ ಪದ್ಮ ಪ್ರಶಸ್ತಿ; ಜ. ಬಿಪಿನ್ ರಾವತ್​ಗೆ ಮರಣೋತ್ತರ ಪದ್ಮ ವಿಭೂಷಣ

ನವದೆಹಲಿ: ಭಾರತ ಸರ್ಕಾರದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಅವರಿಗೆ ಈ ಗೌರವ ನೀಡಲಾಗುತ್ತದೆ. 2022ನೇ ಸಾಲಿನಲ್ಲಿ ಒಟ್ಟು 128 ಮಂದಿಯನ್ನು ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 10 ಮಂದಿಗೆ ಮರಣೋತ್ತರ ಪದ್ಮ ಪ್ರಶಸ್ತಿ ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು

ರಾಜ್ಯದ ಐವರಿಗೆ ಪದ್ಮ ಪ್ರಶಸ್ತಿ; ಜ. ಬಿಪಿನ್ ರಾವತ್​ಗೆ ಮರಣೋತ್ತರ ಪದ್ಮ ವಿಭೂಷಣ Read More »

ಗುಡ್ಡಕೊರೆದು ಜಲಧಾರೆ ಹರಿಸಿದ ಅಮೈ ಮಹಾಲಿಂಗ ನಾಯ್ಕರಿಗೆ ಒಲಿದ “ಪದ್ಮಶ್ರೀ”

ಮಂಗಳೂರು: ಗುಡ್ಡಕ್ಕೆ ಸುರಂಗ ಕೊರೆದು ಜೀವಜಲ ಪಡೆದು ಬೋಳುಗುಡ್ಡೆಯಲ್ಲಿ ಹಸಿರೆಬ್ಬಿಸಿದ ಅಪರೂಪದ ಸಾಹಸಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77 ವರ್ಷದ ಮಹಾಲಿಂಗ ನಾಯ್ಕ ಕೃಷಿಗೆ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದು ನೀರು ಪಡೆದು, ಅದನ್ನು ಕೆರೆಯಲ್ಲಿ ಸಂಗ್ರಹಿಸಿ ಅದನ್ನು ಗುರುತ್ವ ಬಲದ ಮೂಲಕ ತುಂತುರು ನೀರಾವರಿಯಾಗಿ ಕೃಷಿಗೆ ಹರಿಸಿ

ಗುಡ್ಡಕೊರೆದು ಜಲಧಾರೆ ಹರಿಸಿದ ಅಮೈ ಮಹಾಲಿಂಗ ನಾಯ್ಕರಿಗೆ ಒಲಿದ “ಪದ್ಮಶ್ರೀ” Read More »

ಕಿಕ್-ಸ್ಟಾರ್ಟಿಂಗ್ ಜೀಪ್ ತಯಾರಿಸಿದ ವ್ಯಕ್ತಿ |ಪ್ರತಿಭೆಗೆ ಮೆಚ್ಚಿ ಬೊಲೆರೋ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ

ಮುಂಬೈ: ಕಿಕ್-ಸ್ಟಾರ್ಟಿಂಗ್ ಜೀಪ್ ತಯಾರಿಸಿದ ಬಡ ಪ್ರತಿಭೆಗೆ ಆನಂದ್ ಮಹೀಂದ್ರಾ ಬೊಲೆರೋ ಗಿಫ್ಟ್ ನೀಡುವ ಮೂಲಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ತಯಾರಿಸಿದ ಕಿಕ್-ಸ್ಟಾರ್ಟಿಂಗ್ ಜೀಪ್‍ನ ವೀಡಿಯೋ ಹಂಚಿಕೊಂಡು, ಅವರಿಗೆ ಬೊಲೆರೋ ಕಾರು ಗಿಫ್ಟ್ ನೀಡುವುದಾಗಿ ಭರವಸೆ ನೀಡಿದ್ದ ಆನಂದ್ ಮಹೀಂದ್ರಾ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ದತ್ತಾತ್ರೇಯ ಲೋಹರ್ ಹಳೆಯ ವಾಹನದ ಬಿಡಿ ಭಾಗಗಳನ್ನ ಬಳಸಿ, ದ್ವಿ-ಚಕ್ರ ವಾಹನ ಸಿದ್ಧಪಡಿಸಿದ್ದರು. ಇದಕ್ಕಾಗಿ 60 ಸಾವಿರ ರೂ. ಖರ್ಚು ಮಾಡಿದ್ದರು. ಇದರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ

ಕಿಕ್-ಸ್ಟಾರ್ಟಿಂಗ್ ಜೀಪ್ ತಯಾರಿಸಿದ ವ್ಯಕ್ತಿ |ಪ್ರತಿಭೆಗೆ ಮೆಚ್ಚಿ ಬೊಲೆರೋ ಗಿಫ್ಟ್ ನೀಡಿದ ಆನಂದ್ ಮಹೀಂದ್ರಾ Read More »

ಹನಿಮೂನ್ ಫೋಟೋ ಶೇರ್ ಮಾಡಿಕೊಂಡ ಕತ್ರಿನಾ ಕೈಫ್

ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಅದ್ದೂರಿಯಾಗಿ ಮದುವೆಯಾಗುವ ಮೂಲಕವಾಗಿ ಸಖತ್ ಸುದ್ದಿಯಲ್ಲಿದ್ದರು. ಇದೀಗ ಹನಿಮೂನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರ ಮದುವೆ ಡಿ.9ರಂದು ಅದ್ದೂರಿಯಾಗಿ ನಡೆಯಿತು. ಇದಾದ ಮರುದಿನವೇ ಅವರು ಹನಿಮೂನ್‍ಗೆ ಮಾಲ್ಡೀವ್ಸ್‌ಗೆ ಹೋಗಿದ್ದರು ಎನ್ನಲಾಗಿತ್ತು. ನಾಲ್ಕು ದಿನ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆದು ಭಾರತಕ್ಕೆ ವಾಪಸ್ ಬಂದಿತ್ತು. ಮಾಲ್ಡೀವ್ಸ್ ಡೈರಿಯ ಫೋಟೋ ಹಂಚಿಕೊಂಡಿರಲಿಲ್ಲ. ಈಗ ಕತ್ರಿನಾ ಅವರು ಹನಿಮೂನ್ ಫೋಟೋ ಹಂಚಿಕೊಂಡಿದ್ದಾರೆ ಮಾಲ್ಡೀವ್ಸ್ ಸಮುದ್ರ

ಹನಿಮೂನ್ ಫೋಟೋ ಶೇರ್ ಮಾಡಿಕೊಂಡ ಕತ್ರಿನಾ ಕೈಫ್ Read More »

ಬಿಹಾರದಲ್ಲಿ ಗಂಡು ಮಕ್ಕಳಿಗೂ ನ್ಯಾಪ್ ಕಿನ್ ಭತ್ಯೆ!

ಪಾಟ್ನಾ: ವಿದ್ಯಾರ್ಥಿನಿಯರು ಋತುಚಕ್ರದ ಸಮಯದಲ್ಲಿ ಬಳಸಲೆಂದು ನೀಡಲಾಗುವ ಸ್ಯಾನಿಟರಿ ನ್ಯಾಪ್‌ಕೀನ್‌ ಭತ್ಯೆಯನ್ನು ಬಿಹಾರದ ಶಾಲೆಯೊಂದರಲ್ಲಿ ಗಂಡು ಮಕ್ಕಳಿಗೂ ನೀಡಿದ್ದ ವಿಷಯ ಬೆಳಕಿಗೆ ಬಂದಿದೆ. ಸರನ್‌ ಜಿಲ್ಲೆಯ ಹಲ್ಕೋರಿ ಸಾಹ್‌ ಪ್ರೌಢಶಾಲೆಯ 7 ವಿದ್ಯಾರ್ಥಿಗಳಿಗೆ ನ್ಯಾಪ್‌ಕೀನ್‌ ಖರೀದಿಗೆಂದು 2016-17ನೇ ಸಾಲಿನಲ್ಲಿ ವಾರ್ಷಿಕ 150 ರೂ.ವಿತರಣೆ ಮಾಡಿದ್ದ ವಿಷಯವನ್ನು ಶಾಲೆಯ ಹೊಸ ಮುಖ್ಯೋಪಾಧ್ಯಾಯರು ಪತ್ತೆ ಮಾಡಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಹೆಸರಲ್ಲಿ ಶಾಲಾ ಸಿಬ್ಬಂದಿಯೇ ವಂಚನೆ ಮಾಡಿದ್ದಾರಾ?

ಬಿಹಾರದಲ್ಲಿ ಗಂಡು ಮಕ್ಕಳಿಗೂ ನ್ಯಾಪ್ ಕಿನ್ ಭತ್ಯೆ! Read More »

ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI

ನವದೆಹಲಿ : ದೇಶದಲ್ಲಿ ಶೇ. 45ರಷ್ಟು ಮ್ಯಾನೇಜ್‌ಮೆಂಟ್ ಮತ್ತು ಶೇ.48ರಷ್ಟು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ ಎಂದು NITI ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ. ಗುರುವಾರ, ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಆಯೋಜಿಸಿದ್ದ ‘ಉನ್ನತ ಶಿಕ್ಷಣ ಸಂವಾದ’ವನ್ನು ಉದ್ದೇಶಿಸಿ ಮಾತನಾಡಿದ ಡಾ.ಕುಮಾರ್, ಉನ್ನತ ಶಿಕ್ಷಣದಲ್ಲಿ ನಿರ್ದಿಷ್ಟವಾಗಿ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಸಾಧಿಸಲು ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ಉನ್ನತ ಶಿಕ್ಷಣದಲ್ಲಿ ಶಕ್ತಿ ಕಡಿಮೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ದೇಶದಲ್ಲಿ ಉನ್ನತ ಶಿಕ್ಷಣ

ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI Read More »

ಮತ್ತೊಂದು ಯಶಸ್ವಿ ಪ್ರಯೋಗ| ಮನುಷ್ಯನಿಗೆ ಹಂದಿ ಮೂತ್ರ ಪಿಂಡಗಳ ಕಸಿ ಮಾಡಿದ ವೈದ್ಯರು

ವಾಶಿಂಗ್ಟನ್: ಅಮೇರಿಕನ್ ವೈದ್ಯರು ಮತ್ತೊಂದು ಅದ್ಭುತ ಸಾಧನೆಯೊಂದನ್ನು ಮಾಡಿದ್ದಾರೆ. ಇತಿಹಾಸ ಸೃಷ್ಟಿಸಿರುವ ಅಲ್ಲಿನ ವೈದ್ಯರು ಈ ಬಾರಿ ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಎರಡೂ ಮೂತ್ರಪಿಂಡಗಳನ್ನು ಮೆದುಳು ಸತ್ತ ವ್ಯಕ್ತಿಯ ದೇಹಕ್ಕೆ ಕಸಿ ಮಾಡಿದ್ದಾರೆ. ಮಾಹಿತಿಯ ಪ್ರಕಾರ, 57 ವರ್ಷದ ಜಿಮ್ ಪಾರ್ಸನ್ಸ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಸ್ತೆ ಅಪಘಾತದಲ್ಲಿ ಗಾಯಾಳುವಾಗಿದ್ದು, ಅವರ ಮೆದುಳು ಡೆಡ್ ಆಗಿದೆ ಎಂದು ಘೋಷಿಸಲಾಗಿತ್ತು. ಇದರ ನಂತರ, ಪಾರ್ಸನ್ಸ್ ಕುಟುಂಬದ ಒಪ್ಪಿಗೆಯೊಂದಿಗೆ ರೋಗಿಗೆ ತಳೀಯವಾಗಿ ಮಾರ್ಪಡಿಸಿದ ಹಂದಿಯ ಎರಡೂ ಮೂತ್ರಪಿಂಡಗಳನ್ನು ಕಸಿ ಮಾಡಲಾಗಿದೆ.

ಮತ್ತೊಂದು ಯಶಸ್ವಿ ಪ್ರಯೋಗ| ಮನುಷ್ಯನಿಗೆ ಹಂದಿ ಮೂತ್ರ ಪಿಂಡಗಳ ಕಸಿ ಮಾಡಿದ ವೈದ್ಯರು Read More »

ಬಿಜೆಪಿಯಿಂದ ಟಿಕೆಟ್ ನಿರಾಕರಣೆ| ಸ್ವತಂತ್ರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ| ಬಿಜೆಪಿ ಗೋವಾದಲ್ಲೂ ತಲೆನೋವು

ಪಣಜಿ: ಯುಪಿ ಜೊತೆಗೆ ಇದೀಗ ಗೋವಾದಲ್ಲೂ ಚುನಾವಣಾ ಪ್ರಚಾರ ಜೋರಾಗಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಬಿಜೆಪಿ ಶಾಸಕರ ರಾಜೀನಾಮೆ ಸಮಸ್ಯೆ ಮಾತ್ರವಲ್ಲ, ಹೊಸ ಆತಂಕಕ್ಕೂ ಕಾರಣವಾಗಿದೆ. ಮಾಜಿ ರಕ್ಷಣಾ ಸಚಿವ ಮತ್ತು ಮಾಜಿ ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಮಗ ಬಂಡಾಯ ನಡೆ ತೋರಿಸಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಾಗಿದ್ದಾರೆ. ಕಳೆದ 25 ವರ್ಷಗಳಿಂದಲೂ ಮನೋಹರ್ ಪರಿಕ್ಕರ್ ಪ್ರತಿನಿಧಿಸುತ್ತಿದ್ದ ಪಣಜಿ ವಿಧಾನಸಭಾ ಕ್ಷೇತ್ರದಿಂದ ಉತ್ಪಲ್ ಬದಲಿಗೆ ಪಟ್ನೇಕರ್ ಅವರಿಗೆ ಟಿಕೆಟ್ ನೀಡಿ

ಬಿಜೆಪಿಯಿಂದ ಟಿಕೆಟ್ ನಿರಾಕರಣೆ| ಸ್ವತಂತ್ರ ಅಭ್ಯರ್ಥಿಯಾಗಿ ಉತ್ಪಲ್ ಪರಿಕ್ಕರ್ ಸ್ಪರ್ಧೆ| ಬಿಜೆಪಿ ಗೋವಾದಲ್ಲೂ ತಲೆನೋವು Read More »