ದೇಶ-ವಿದೇಶ

ಫೆ.1ರಂದು ಕೇಂದ್ರ ಬಜೆಟ್ ಮಂಡನೆ| ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭ|

ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ದಿನಾಂಕ ನಿಗದಿ ಪಡಿಸಲಾಗಿದೆ. ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ ನಲ್ಲಿ ಮಂಡನೆಯಾಗಲಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜನವರಿ 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಸಂಸತ್ […]

ಫೆ.1ರಂದು ಕೇಂದ್ರ ಬಜೆಟ್ ಮಂಡನೆ| ಜ.31ರಿಂದ ಸಂಸತ್ ಬಜೆಟ್ ಅಧಿವೇಶನ ಪ್ರಾರಂಭ| Read More »

ಶಬರಿಮಲೆ: ಇಂದು ಜ್ಯೋತಿ ದರ್ಶನ

ಶಬರಿಮಲೆ: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜ.14ರಂದು ಜರುಗಲಿದೆ. ಮಕರಜ್ಯೋತಿಯ ಪೂರ್ವಭಾವಿಯಾಗಿ ಗುರುವಾರ ಪ್ರಾಸಾದ ಶುದ್ಧಿ ಕ್ರಿಯೆ, ಬಿಂಬಶುದ್ಧಿ ನಡೆಯಿತು. ತಮಿಳುನಾಡಿನಲ್ಲಿ ಒಮಿಕ್ರಾನ್ ನಿಯಂತ್ರಣ ನಿಯಮ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಲೆಗೆ ತಮಿಳುನಾಡು ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಕರ್ನಾಟಕ, ಆಂಧ್ರ, ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಮಧ್ಯಾಹ್ನ ನಂತರ ಪಂಪೆಯಿಂದ ಸನ್ನಿಧಾನಕ್ಕೆ ಹಾಗೂ ಹದಿನೆಂಟು ಮೆಟ್ಟಿಲೇರಲು ಭಕ್ತರಿಗೆ ನಿಯಂತ್ರಣ ಹೇರಲಾಗಿದೆ. ಮಧ್ಯಾಹ್ನ ಪೂಜೆಯ ನಂತರ ಗರ್ಭಗುಡಿ ಬಾಗಿಲು ಮುಚ್ಚಿದರೆ, ಪಂದಳ ಅರಮನೆಯಿಂದ

ಶಬರಿಮಲೆ: ಇಂದು ಜ್ಯೋತಿ ದರ್ಶನ Read More »

ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ|

ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫೆರೆನ್ಸ್‌ ನಂತರ ಮಾತನಾಡಿದ ಪ್ರಧಾನಿ ಮೋದಿ, ‘ಒಮಿಕ್ರಾನ್‌ ಸೋಂಕು ದಿನೇ ದಿನೇ ಹೆಚ್ಚಾಗಿ ಹರಡುತ್ತಿದೆ. ಅಮೆರಿಕಾದಲ್ಲಿ ಪ್ರತಿನಿತ್ಯ ಲಕ್ಷಾಂತರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಒಮಿಕ್ರಾನ್‌ ಸೋಂಕಿನಿಂದ ಆತಂಕ ಪಡುವ ಆಗತ್ಯವಿಲ್ಲ. ಯಾಕೆಂದರೆ, ಒಮಿಕ್ರಾನ್‌ ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕೊರೊನಾ ರೂಪಾಂತರಿ ಬಗ್ಗೆ ಸ್ಪಷ್ಟ ಚಿತ್ರಣ

ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ| Read More »

ಇಸ್ರೋ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಎಸ್. ಸೋಮನಾಥ್ ನೇಮಕ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ. ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ. ಇಸ್ರೋ ಅಧ್ಯಕ್ಷರಾಗಿರುವುದರ ಜೊತೆಗೆ, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ. 2018ರಿಂದಲೂ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಸೋಮನಾಥ್, ಈಗಾಗಲೇ Liquid Propulsion Systems ಸೆಂಟರ್ ನ ನಿರ್ದೇಶಕರಾಗಿ

ಇಸ್ರೋ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ಎಸ್. ಸೋಮನಾಥ್ ನೇಮಕ Read More »

ಶಾಲೆಗಳಿಗೆ ರಜೆ ಕೊಡಲು ಡಿಸಿಗಳಿಗೆ ಅಧಿಕಾರ – ಸಚಿವ ನಾಗೇಶ್

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸ್ಫೋಟ ಹಿನ್ನಲೆಯಲ್ಲಿ ಶಾಲೆಗಳನ್ನು ಬಂದ್ ಮಾಡಬೇಕಾ, ಮುಂದುವರೆಸಬೇಕೇ? ಬೇಡವೇ? ಎಂಬ ವಿಚಾರವಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಹತ್ವದ ಸಭೆ ನಡೆಸಿದ್ದಾರೆ. ‘ಗ್ರೌಂಡ್ ರಿಯಾಲಿಟಿ ಆಧರಿಸಿ, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಶಾಲೆಗಳನ್ನು ಮುಂದುವರೆಸುವ ಪ್ರಯತ್ನವನ್ನು ನಾವು ಮಾಡುತ್ತೇವೆ. ಟಾಸ್ಕ್‌ಫೋರ್ಸ್ ಜೊತೆಯೂ ಸಭೆ ನಡೆಸಿದ್ದೇವೆ. ತಾಲ್ಲೂಕು ಹಂತಗಳಲ್ಲಿ ಡಿಸಿಗೆ ಅಧಿಕಾರ ಕೊಟ್ಟಿದ್ದೇವೆ. ಸೋಂಕು ಹೆಚ್ಚಾದರೆ ಮತ್ತೊಮ್ಮೆ ಚರ್ಚೆಗೆ ಕೂರುತ್ತೇವೆ’ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಶಾಲೆಗಳಿಗೆ ರಜೆ ಕೊಡಲು ಡಿಸಿಗಳಿಗೆ ಅಧಿಕಾರ – ಸಚಿವ ನಾಗೇಶ್ Read More »

ಪಬ್ಜಿಯಲ್ಲಿ ಉಂಟಾಯ್ತು ಪ್ರೇಮ| ಆನ್ ಲೈನ್ ಗೇಮಿಂಗ್ ಪ್ರೇಮಿಗಳು ಮದುವೆಗೆ ರೆಡಿ|

ನ್ಯೂಸ್ ಡೆಸ್ಕ್: ನಿಷೇಧಿತ ಆನ್‌ಲೈನ್ ಗೇಮ್ ಪಬ್ಜಿ(PubG )ಯನ್ನು ಬಹಳಷ್ಟು ಜನರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಆಡುತ್ತಿದ್ದರು. PubG ಗೇಮ್‌ ಅತ್ಯಂತ ವ್ಯಸನಕಾರಿಯಾಗಿದ್ದು, ಇದರಿಂದ ಅಪಾಯಕಾರಿ ಘಟನೆಗಳು ಸಂಭವಿಸಿವೆ. ಆದರೆ ಅಪಾಯಕಾರಿ ಪಬ್ಜಿ ಆಟವು ಎರಡು ವಿಭಿನ್ನ ರಾಜ್ಯಗಳ ಪ್ರೇಮಿಗಳನ್ನು ಒಂದು ಮಾಡಿದೆ. ಹೇಗೆ ಅಂತೀರಾ? ಮುಂದೆ ಓದಿ… ಪಶ್ಚಿಮ ಬಂಗಾಳದ ಧುಪ್ಗುರಿ ನಿವಾಸಿ ಸೈನೂರ್ ಆಲಂ ನಿಯಮಿತವಾಗಿ ಪಬ್ಜಿ ಆಡುತ್ತಿದ್ದರು. ಆಟ ಆಡುವಾಗ ಕರ್ನಾಟಕದ ಫ್ರಿಜಾ ಎಂಬ ಮಹಿಳೆಯ ಪರಿಚಯವಾಗಿದೆ. ಆಟ ಆಡುವಾಗ ಇಬ್ಬರೂ ಮೊದಲು

ಪಬ್ಜಿಯಲ್ಲಿ ಉಂಟಾಯ್ತು ಪ್ರೇಮ| ಆನ್ ಲೈನ್ ಗೇಮಿಂಗ್ ಪ್ರೇಮಿಗಳು ಮದುವೆಗೆ ರೆಡಿ| Read More »

ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ…

ಪಂಜಾಬ್: ಇಲ್ಲಿನ ಫಿರೋಜ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲು ಉದ್ದೇಶಿಸಿದ್ದ ಸಾರ್ವಜನಿಕ ರ್ಯಾಲಿಗೆ ರೈತರು ಅಡ್ಡಿಪಡಿಸಿದ ಕಾರಣ ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಕ್ಕಿಹಾಕಿಕೊಂಡಿದ್ದರು ಎಂಬ ಘಟನೆ ಇಡೀ ದೇಶದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಈ ಕಾರಣಕ್ಕಾಗಿ ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯನ್ನು ಮೋದಿಯವರು ಮೊಟಕುಗೊಳಿಸಿದರು. ಜ.5 ರಂದು ನಡೆದ ಈ ಘಟನೆಯನ್ನು ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಎಂದು ಬಿಜೆಪಿ ಆರೋಪಿಸಿದೆ. ಇನ್ನೊಂದೆಡೆ ಯಾವುದೇ ಭದ್ರತಾ ಲೋಪ

ಲಾರಿ ಹತ್ತಿಸಿ ಪ್ರಧಾನಿ ಮೋದಿ ಕೊಲ್ಲಲು ಕಾಂಗ್ರೆಸ್ ಸಂಚು ರೂಪಿಸಿತ್ತು…! ಈ ಸುಳ್ಳು ಸುದ್ದಿಯ ಸತ್ಯಾಂಶವೇನು? ವಾಸ್ತವ ಸತ್ಯ ನೀವೇ ಓದಿ… Read More »

ಉತ್ತರಕನ್ನಡ: ನಿಧನರಾಗಿ 8 ತಿಂಗಳಾದರೂ ಯಕ್ಷಗಾನ‌ ಅಕಾಡಮಿ ಅಧ್ಯಕ್ಷರು ಇವರೇ !ಕನ್ನ‌ಡ ಮತ್ತು ಸಂಸ್ಕೃತಿ ಇಲಾಖೆಯ ಬೇಜವಾಬ್ದಾರಿ|

ಶಿರಸಿ: ಮೃತರಾಗಿ ಎಂಟು ತಿಂಗಳಾದರೂ‌ ಆಧುನಿಕ‌ ನಡೆಯಲ್ಲಿ ವಿಫುಲ ಹೆಜ್ಜೆ ಇಡುತ್ತಿರುವ ಕನ್ನಡ‌ ಮತ್ತು ಸಂಸ್ಕ್ರತಿ ‌ಇಲಾಖೆಯ ವೆಬ್ ಸೈಟ್ ನಲ್ಲಿ ಮೃತರೇ ಅಧ್ಯಕ್ಷರಾಗಿ ‌ಮುಂದುವರಿದಿದ್ದಾರೆ. ಕಳೆದ ಏಪ್ರಿಲ್ 18ರಂದು ಅಕಾಲಿಕವಾಗಿ ಅಗಲಿದ ಯಕ್ಷಗಾನ‌ ಅಕಾಡಮಿ ಅಧ್ಯಕ್ಷ ಪ್ರೋ ಎಂ.ಎ.ಹೆಗಡೆ ಅವರ‌ ಜಾಗಕ್ಕೆ ಸರಕಾರ ಆಡಳಿತಾಧಿಕಾರಿ ನೇಮಕ‌ ಮಾಡಿದ್ದರ ಬಗ್ಗೆ ಆಕ್ಷೇಪ, ಅಸಮಧಾನಗಳು ಬಂದ ಬೆನ್ನಲ್ಲೇ, ವೆಬ್ ಸೈಟಿನಲ್ಲಿ ಎಂ.ಎ.ಹೆಗಡೆ ಅವರ ಹೆಸರನ್ನು ಬದಲಾಯಿಸದೇ ಇರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಕನ್ನಡ ನಾಡು‌ ನುಡಿ, ಕಲೆಯ ಸೇವೆಗಾಗಿ ಇರುವ‌

ಉತ್ತರಕನ್ನಡ: ನಿಧನರಾಗಿ 8 ತಿಂಗಳಾದರೂ ಯಕ್ಷಗಾನ‌ ಅಕಾಡಮಿ ಅಧ್ಯಕ್ಷರು ಇವರೇ !ಕನ್ನ‌ಡ ಮತ್ತು ಸಂಸ್ಕೃತಿ ಇಲಾಖೆಯ ಬೇಜವಾಬ್ದಾರಿ| Read More »

ಲಾಠಿ ಹಿಡಿದು ಪೊಲೀಸ್ ಲುಕ್ ನಲ್ಲಿ ದರ್ಶನ ನೀಡುತ್ತಿರುವ ಕಾಲಭೈರವೇಶ್ವರ| ಜಾಲತಾಣಗಳಲ್ಲಿ ಫೋಟೋ ವೈರಲ್|

ಲಕ್ನೋ: ಕಾಲಭೈರವನಿಗೆ ಪೊಲೀಸ್ ಸಮವಸ್ತ್ರ ತೊಡಿಸಿದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ದೇವರನ್ನು ಕಣ್ತುಂಬಿಕೊಳ್ಳಲು ಭಕ್ತರು ದೇವಸ್ಥಾನದತ್ತ ಆಗಮಿಸುತ್ತಿರುವ ದೃಶ್ಯ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಕಾಶಿಯ ಕೊತ್ವಾಲಾ ಎಂದೂ ಕರೆಯಲಾಗುವ ಭೈರವನ ಈ ಸಮವಸ್ತ್ರದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಇದೇ ಮೊದಲ ಬಾರಿಗೆ ಕಾಶಿಯ ಪ್ರಸಿದ್ಧ ದೇವರು ಬಾಬಾ ಕಾಲ ಭೈರವನಿಗೆ ಪೊಲೀಸ್ ಸಮವಸ್ತ್ರ ತೊಡಿಸಲಾಗಿದೆ. ದೇವರ ಮೂರ್ತಿಯ ತಲೆಯ ಮೇಲೆ ಪೊಲೀಸ್ ಕ್ಯಾಪ್ ಹಾಗೂ ಎದೆ ಮೇಲೆ ಬ್ಯಾಡ್ಜ್ ನ್ನು ಹಾಕಲಾಗಿದ್ದು,

ಲಾಠಿ ಹಿಡಿದು ಪೊಲೀಸ್ ಲುಕ್ ನಲ್ಲಿ ದರ್ಶನ ನೀಡುತ್ತಿರುವ ಕಾಲಭೈರವೇಶ್ವರ| ಜಾಲತಾಣಗಳಲ್ಲಿ ಫೋಟೋ ವೈರಲ್| Read More »

ಸೆಕ್ಸ್ ಗಾಗಿ ಪತ್ನಿಯರ ಎಕ್ಸ್ ಚೇಂಜ್| ದೇವರ ನಾಡಲ್ಲೊಂದು ಅನಾಗರಿಕ ದಂಧೆ| ಟೆಲಿಗ್ರಾಂ, ಮೆಸೇಂಜರ್ ನಲ್ಲಿ ನಡೆಯುತ್ತೆ ವ್ಯವಹಾರ|

ತಿರುವನಂತಪುರಂ: ಸೆಕ್ಸ್​ಗಾಗಿ ಪತ್ನಿಯರನ್ನೇ ವಿನಿಮಯ ಮಾಡಿಕೊಳ್ಳುವ ದಂಧೆ ನಡೆಸುತ್ತಾ ದಾಂಪತ್ಯ ಬದುಕಿಗೆ ಕೊಳ್ಳಿ ಇಡುತ್ತಿರುವ ವಿಚಿತ್ರ ದಂಧೆಯೊಂದು ಕೇರಳದಲ್ಲಿ ನಡೆಯುತ್ತಿದೆ. ಇಂತದ್ದೊಂದು ಅನಾಗರಿಕ ವ್ಯವಹಾರಕ್ಕಾಗಿ ಈ ನೀಚ ಕಾಮುಕರು ಟೆಲಿಗ್ರಾಂ, ಮೆಸೆಂಜರ್​ನಲ್ಲಿ ಗ್ರೂಪ್​ ರಚಿಸಿಕೊಂಡು ‘ಪತ್ನಿಯರ ವಿನಿಮಯ’ ದಂಧೆ ನಡೆಸುತ್ತಾ ಕೇರಳದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಕರುಕಾಚಲ್​ನಲ್ಲಿ ಹಣ ಮತ್ತು ಸೆಕ್ಸ್​ಗಾಗಿ ತಮ್ಮ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳಲೆಂದೇ ದುಷ್ಕರ್ಮಿಗಳು ಟೆಲಿಗ್ರಾಂ, ಮೆಸೆಂಜರ್ ಗ್ರೂಪ್​ ರಚನೆ ಮಾಡಿಕೊಂಡಿದ್ದರು. ಕೇರಳದ ಮೂರು ಜಿಲ್ಲೆಯ 1 ಸಾವಿರಕ್ಕೂ

ಸೆಕ್ಸ್ ಗಾಗಿ ಪತ್ನಿಯರ ಎಕ್ಸ್ ಚೇಂಜ್| ದೇವರ ನಾಡಲ್ಲೊಂದು ಅನಾಗರಿಕ ದಂಧೆ| ಟೆಲಿಗ್ರಾಂ, ಮೆಸೇಂಜರ್ ನಲ್ಲಿ ನಡೆಯುತ್ತೆ ವ್ಯವಹಾರ| Read More »