ದೇಶ-ವಿದೇಶ

ಅಂತರಾಷ್ಟ್ರೀಯ. ವಿಮಾನ ಹಾರಾಟ ನಿಷೇಧ ಅ.31 ವರೆಗೆ ಮುಂದೂಡಿಕೆ

ನವದೆಹಲಿ: ಭಾರತದಿಂದ ಹೊರಡುವ ಮತ್ತು ಬರುವ ಅಂತಾರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಅಕ್ಟೋಬರ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (DGCA) ತಿಳಿಸಿದ್ದಾರೆ. ಈ ವಿಸ್ತರಣೆಯು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಅನ್ವಯಿಸುವುದಿಲ್ಲ, ವಿಶೇಷವಾಗಿ DGCA ಅನುಮೋದಿಸಿದೆ. ಸಲಹೆಯ ಪ್ರಕಾರ, ಸಂದರ್ಭಕ್ಕೆ ಅನುಗುಣವಾಗಿ ಸಕ್ಷಮ ಪ್ರಾಧಿಕಾರ ಆಯ್ದ ಮಾರ್ಗಗಳಲ್ಲಿ, ವಿನಾಯಿತಿಯ ಸಂದರ್ಭದಲ್ಲಿ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು. ಕೊರೊನಾದಿಂದಾಗಿ 2020ರ ಮಾರ್ಚ್ 23 ರಿಂದ ಡಿಜಿಸಿಎ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ. ವಂದೇ […]

ಅಂತರಾಷ್ಟ್ರೀಯ. ವಿಮಾನ ಹಾರಾಟ ನಿಷೇಧ ಅ.31 ವರೆಗೆ ಮುಂದೂಡಿಕೆ Read More »

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ. ಆದರೆ, ಈ ಭಾರತ್‌ ಬಂದ್ ಯಶಸ್ಸು ಕಾಣುವ ಸಾಧ್ಯತೆಗಳು ಕಡಿಮೆ ಇದೆ ಎಂದು ಹೇಳಳಾಗುತ್ತಿದೆ. ಸಂಘಟನೆಗಳು ರೈತರಿಗೆ ನೈತಿಕ ಬೆಂಬಲ ನೀಡುವುದಾಗಿ ಹೇಳುತ್ತಿವೆ. ಆದರೆ, ಬಂದ್’ಗೆ ಆಸಕ್ತಿ ತೋರುತ್ತಿಲ್ಲ. ರೈತರು ಕರೆ ಕೊಟ್ಟಿರುವ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರಲಿದೆ. ಅಲ್ಲದೇ, ಕೆಎಸ್‌ಆರ್’ಟಿಸಿ

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ. Read More »

ಕಳವಾಗಿ ಅಮೇರಿಕಾ ಸೇರಿದ್ದ ಅತ್ಯಮೂಲ್ಯ ವಿಗ್ರಹಗಳು ಭಾರತಕ್ಕೆ ಹಸ್ತಾಂತರ| ಮೋದಿ ಕೈಗೆ ದಾಖಲೆ‌ ಸಮೇತ ವರ್ಗಾಯಿಸಿದ ಬಿಡೆನ್

ವಾಷಿಗ್ಟಂನ್: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತಕ್ಕೆ ವಾಪಾಸ್ಸಾಗುತ್ತಿದ್ದು, ಈ ವೇಳೆ‌ ಭಾರತದ ಅತ್ಯಮೂಲ್ಯ ವಸ್ತುಗಳನ್ನು ವಾಪಾಸು ತರುತ್ತಿದ್ದಾರೆ.ಭಾರತದ ಪರಂಪರೆ, ಇತಿಹಾಸ, ಸಂಸ್ಕೃತಿ ಹೇಳುವ ಐತಿಹಾಸಿಕ, ಪುರಾತನ ಕಲಾಕೃತಿಗಳೊಂದಿಗೆ ಭಾರತಕ್ಕೆ ಮರಳಲಿದ್ದಾರೆ. ಭಾರತದಿಂದ ಕಳುವಾಗಿ ಅಮೆರಿಕ ಸೇರಿದ್ದ 157 ಕಲಾಕೃತಿ ಮತ್ತು ಪುರಾತನ ವಸ್ತುಗಳನ್ನು ಅಮೆರಿಕ ಪ್ರಧಾನಿ ಮೋದಿಗೆ ಹಸ್ತಾಂತರಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೆಲೆ ಕಟ್ಟಲಾಗಾದ ಕಲಾಕೃತಿಗಳನ್ನು, ಪುರಾತನ ವಸ್ತುಗಳನ್ನು ಮೋದಿಗೆ ಹಸ್ತಾಂತರಿಸಿದ್ದಾರೆ. ಇದು ಭಾರತದಿಂದ ಶತಮಾನಗಳ ಹಿಂದೆ

ಕಳವಾಗಿ ಅಮೇರಿಕಾ ಸೇರಿದ್ದ ಅತ್ಯಮೂಲ್ಯ ವಿಗ್ರಹಗಳು ಭಾರತಕ್ಕೆ ಹಸ್ತಾಂತರ| ಮೋದಿ ಕೈಗೆ ದಾಖಲೆ‌ ಸಮೇತ ವರ್ಗಾಯಿಸಿದ ಬಿಡೆನ್ Read More »

ಷೇರುಪೇಟೆಯಲ್ಲಿ ಮುಂದುವರಿದ ಗೂಳಿ ಓಟ| 60ಸಾವಿರ ಗಡಿ ದಾಟಿ ದಾಖಲೆ ಏರಿಕೆ ಕಂಡ ಸೆನ್ಸೆಕ್ಸ್

ನವದೆಹಲಿ: ಷೇರು ಮಾರುಕಟ್ಟೆ ಶುಕ್ರವಾರ ಹೊಸ ಇತಿಹಾಸ ಸೃಷ್ಟಿಸಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ 338 ಅಂಕಗಳ ಜಿಗಿತದೊಂದಿಗೆ ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್​ 60 ಸಾವಿರ ಗಡಿ ದಾಟಿದೆ. ಭಾರತೀಯ ಷೇರು ಮಾರುಕಟ್ಟೆ ಇದೇ ಮೊದಲ ಬಾರಿಗೆ 60 ಸಾವಿರ ಗಡಿ ದಾಟಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಕೂಡ 100 ಅಂಕಗಳ ಜಿಗಿತದೊಂದಿಗೆ ದಾಖಲೆಯ 17,923.35 ನಲ್ಲಿ ವಹಿವಾಟು ನಡೆಸುತ್ತಿದೆ. ಗುರುವಾರ 958 ಪಾಯಿಂಟ್​ಗಳ ಏರಿಕೆ ಕಂಡು ಸೆನ್ಸೆಕ್ಸ್

ಷೇರುಪೇಟೆಯಲ್ಲಿ ಮುಂದುವರಿದ ಗೂಳಿ ಓಟ| 60ಸಾವಿರ ಗಡಿ ದಾಟಿ ದಾಖಲೆ ಏರಿಕೆ ಕಂಡ ಸೆನ್ಸೆಕ್ಸ್ Read More »

ಶಾಲಾ‌ಗ್ರೂಪ್ ನಲ್ಲಿ ಅಶ್ಲೀಲ ದೃಶ್ಯಾವಳಿ| ಪೋಷಕರು, ಮಕ್ಕಳು ಕಂಗಾಲು

ಚೆನ್ನೈ: ತಮಿಳುನಾಡಿನ ಆವಡಿ ಉಪನಗರದ 39 ವರ್ಷದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೊಂದು ವಿಚಿತ್ರ ಪ್ರಕರಣ ತನ್ನ 11 ವರ್ಷದ ಮಗನ ಶಾಲಾ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ಕಂಟೆಂಟ್ ಒಂದನ್ನು ಶೇರ್ ಮಾಡಿದ್ದರಿಂದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಬಿ ಮುನುಸಾಮಿ ಎಂಬುವರನ್ನು ಬಂಧಿಸಲಾಗಿದೆ. ಅವರ ಮಗ ಖಾಸಗಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿ. ಆನ್‌ಲೈನ್ ಶಿಕ್ಷಣಕ್ಕಾಗಿ ಮಗುವಿನ ಶಾಲೆಯು ವಾಟ್ಸಾಪ್‌ನಲ್ಲಿ ಒಂದು ಗುಂಪನ್ನು ರಚಿಸಿತ್ತು. ವಾಟ್ಸಾಪ್ ಗುಂಪಿನಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು

ಶಾಲಾ‌ಗ್ರೂಪ್ ನಲ್ಲಿ ಅಶ್ಲೀಲ ದೃಶ್ಯಾವಳಿ| ಪೋಷಕರು, ಮಕ್ಕಳು ಕಂಗಾಲು Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ಬೆಂಗಳೂರು: ಮರಗಳನ್ನೇ ತನ್ನ ಮಕ್ಕಳೆಂದು ಸಾಕಿ ಸಲಹುತ್ತಾ ಪರಿಸರಕ್ಕಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ವೃಕ್ಷಮಾತೆ 111 ವರ್ಷದ ಶತಾಯುಷಿ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ. 80 ವರ್ಷಗಳಲ್ಲಿ ಪರಿಸರ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿರುವ ಮಹಿಳೆ, 80 ವರ್ಷದಲ್ಲಿ 8 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಅವರು ನೆಟ್ಟ ಸಸಿಗಳು

ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ Read More »

ಪಂಜಾಬ್ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ

ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ, ಪ್ರಸ್ತಾವಿತ ಮುಖ್ಯಮಂತ್ರಿಯಾಗಿ ಸುಖ್ ದೇವ್ ಸಿಂಗ್ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇದೀಗ ದಿಢೀರ್ ವಿದ್ಯಮಾನಗಳಲ್ಲಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಹೊಸ ಪಂಜಾಬ್ ಮುಖ್ಯಮಂತ್ರಿಯಾಗಲಿದ್ದಾರೆ. ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕ ಹರೀಶ್ ರಾವತ್ ಟ್ವೀಟ್ ಮಾಡಿದ್ದು, ಪಂಜಾಬ್ ನ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಆಯ್ಕೆಯಾಗಿರುವುದಾಗಿ ತಿಳಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿ Read More »

ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ

ಬೆಂಗಳೂರು: ಕನ್ನಡ ಬಿಗ್‍ಬಾಸ್ ಸೀಸನ್ 8ರ ಸ್ಪರ್ಧಿ ವೈಜಯಂತಿ ಅಡಿಗ ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡು ಸುದ್ದಿಯಾಗಿದ್ದಾರೆ. ವೈಜಯಂತಿ ಅಡಿಗ ಪ್ರಿಯಕರ ಸೂರಜ್ ಜೊತೆ ಆನ್‍ಲೈನ್‍ನಲ್ಲಿ ಎಂಗೇಜ್‍ಮೆಂಟ್ ಮಾಡಿಕೊಂಡಿದ್ದಾರೆ. ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದೆ . ಬಿಗ್‍ಬಾಸ್ ಮನೆಗೆ ಮೂವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು. ಆದರೆ ವೈಜಯಂತಿಗೆ ಬಿಗ್‍ಬಾಸ್ ಮನೆಯಲ್ಲಿ ಹೆಚ್ಚು

ಆನ್‍ಲೈನ್‍ನಲ್ಲೇ ಎಂಗೇಜ್‍ಮೆಂಟ್ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ Read More »

ಫರ್ಪಾರ್ಮೆನ್ಸ್ ನೋಡಿ ಸ್ಪರ್ಧಿಯ ಕೆನ್ನೆ ಕಚ್ಚಿದ ನಟಿ| ವೇದಿಕೆಯ‌ ಮೇಲೆಯೇ‌ ನಡೆಯಿತು ಖುಲ್ಲಂಖುಲ್ಲಾ ಸನ್ನಿವೇಶ…!

ಕಿರುತೆರೆಗಳಲ್ಲಿ ದಿನಕ್ಕೊಂದು ರಿಯಾಲಿಟಿ ಶೋಗಳು ಅತಿ ವೇಗದಲ್ಲಿ‌ಶುರುವಾಗುತ್ತಾ ಕಾಂಪಿಟೇಷನ್ ಎನ್ನೋ ಹಾಗಾಗಿದೆ. ಪ್ರೇಕ್ಷಕರನ್ನು ತನ್ನತ್ತ ಸೆಳೆಯಲು ತರಹೇವಾರಿ ಪ್ರಯತ್ನಗಳು ವಾಹಿನಿಗಳಲ್ಲಿ ನಡೆಯುತ್ತಿವೆ. ಇದೀಗ ರಿಯಾಲಿಟಿ ಶೋವೊಂದರಲ್ಲಿ ಕನ್ನಡದ ನಟಿಯೊಬ್ಬರು ಸ್ಪರ್ಧಿಗೆ ಮುತ್ತು ಕೊಟ್ಟು, ಕೆನ್ನೆ ಕಚ್ಚಿರುವ ಘಟನೆ ನಡೆದಿದ್ದು, ವಿಡಿಯೋ ಫುಲ್ ವೈರಲ್ ಆಗಿದೆ. ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿರುವ ಶಿಮ್ನಾ ಕಾಸಿಂ ಇದೀಗ ಖಾಸಗಿ ಚಾನೆಲ್ ವೊಂದರ ‘ದಿ ಚಾಂಪಿಯನ್’ ಅನ್ನೋ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಭಾಗಿಯಾಗಿದ್ದಾರೆ. ಆ ಶೋನಲ್ಲಿ ಜಡ್ಜ್ ಗಳಿಗೆ

ಫರ್ಪಾರ್ಮೆನ್ಸ್ ನೋಡಿ ಸ್ಪರ್ಧಿಯ ಕೆನ್ನೆ ಕಚ್ಚಿದ ನಟಿ| ವೇದಿಕೆಯ‌ ಮೇಲೆಯೇ‌ ನಡೆಯಿತು ಖುಲ್ಲಂಖುಲ್ಲಾ ಸನ್ನಿವೇಶ…! Read More »

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ

ಪಂಜಾಬ್ : ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಪಂಜಾಬ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಗೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದಂತ ಅವರು, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಂಜಾಬ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಗೂ ಮುನ್ನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಅಮರಿಂದರ್ ಸಿಂಗ್ ಅವರ

ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ Read More »