ದೇಶ-ವಿದೇಶ

ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ […]

ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ Read More »

ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಮೂರನೇ ಅವಧಿಯ ತಮ್ಮ ಸಂಪುಟ ಸಭೆಗೆ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ತಮ್ಮ ಮಿತ್ರ ಪಕ್ಷದ ಸಂಸದರಿಗೆ ಸಂಪುಟ ಸಭೆಯಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ದಕ್ಷಿಣ ಭಾರತದಿಂದ ಒಟ್ಟು 12 ಸಂಸದರನ್ನು ಸಂಪುಟಸಭೆಗೆ ಆಯ್ಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ಜೆಡಿಎಸ್‍ನಿಂದ

ಮೋದಿ 3.0/ ದಕ್ಷಿಣ ಭಾರತದಿಂದ 12 ಮಂದಿಗೆ ಸಚಿವ ಸ್ಥಾನ Read More »

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೋನಿ ಪ್ರದೇಶದ ತೆರ್ಯಾತ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಇದರಿಂದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ.ಇದರಲ್ಲಿ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿಗೆ 10 ಮಂದಿ ಸಾವು Read More »

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಸಂಸದ

ಸಮಗ್ರ ನ್ಯೂಸ್: ಕೇರಳದಿಂದ ಆಯ್ಕೆಯಾದ ಬಿಜೆಪಿಯ ಏಕೈಕ ಸಂಸದ ಸುರೇಶ್ ಗೋಪಿ ಅವರಿಗೆ ಇಂದು ಮೋದಿ ಸರ್ಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಲು ಸಿದ್ಧರಾಗಿದ್ದಾರೆ. ಮೋದಿ ಮತ್ತು ನಂತರ ಅಮಿತ್ ಶಾ ಇಬ್ಬರೂ ಸುರೇಶ್ ಗೋಪಿ ಅವರಿಗೆ ಕರೆ ಮಾಡಿದ್ದಾರೆ. ಈ ಕುರಿತು ಖುಷಿ ಹಂಚಿಕೊಂಡ ಅವರು, ಮೋದಿಯವರ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಮತ್ತು ಅದನ್ನು ಪಾಲಿಸುತ್ತಿದ್ದೇನೆ, ನನಗೆ ಯಾವ ಹುದ್ದೆ ನೀಡುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ಸುರೇಶ್ ಗೋಪಿ ತಿಳಿಸಿದರು.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಸಂಸದ Read More »

ಮೋದಿ ನೂತನ ಸರ್ಕಾರದಲ್ಲಿ 72 ಸಚಿವರಿಗೆ ಸ್ಥಾನ| ಯಾರಿಗೆಲ್ಲ ಸಿಕ್ತು ಪಟ್ಟ? ಇಲ್ಲಿದೆ ಸಂಪೂರ್ಣ ಪಟ್ಟಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಪಡೆದಿದ್ದ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ 24 ರಾಜ್ಯಗಳ 72 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು, ಏಳು ಮಹಿಳೆಯರು, 33 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ. ಇಲ್ಲಿದೆ ಕೇಂದ್ರ

ಮೋದಿ ನೂತನ ಸರ್ಕಾರದಲ್ಲಿ 72 ಸಚಿವರಿಗೆ ಸ್ಥಾನ| ಯಾರಿಗೆಲ್ಲ ಸಿಕ್ತು ಪಟ್ಟ? ಇಲ್ಲಿದೆ ಸಂಪೂರ್ಣ ಪಟ್ಟಿ Read More »

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ

ಸಮಗ್ರ ನ್ಯೂಸ್: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ. ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ Read More »

ಮುಂಬೈ:ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ!!

ಸಮಗ್ರ ನ್ಯೂಸ್: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ (ಜೂ.8) ಸಂಜೆ ಒಂದೇ ರನ್‌ವೇಯಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಫ್‌ ಆದರೆ ಇಂಡಿಗೋ ವಿಮಾನ ಲ್ಯಾಂಡಿಂಗ್‌ ಆಗಿದೆ. ಏರ್‌ ಇಂಡಿಯಾ ವಿಮಾನ ತಿರುವನಂತಪುರಂಗೆ ಟೇಕಾಫ್‌ ಆಗುತ್ತಿತ್ತು. ಈ ಸಂದರ್ಭದಲ್ಲಿ ಇಂದೋರ್‌ನಿಂದ ಆಗಮಿಸಿದ ಇಂಡಿಗೋ ವಿಮಾನಕ್ಕೆ ತಪ್ಪಾಗಿ ರನ್‌ವೇಯಲ್ಲಿ ಲ್ಯಾಂಡಿಂಗ್‌ ಮಾಡಲು ಅನುಮತಿ ಸಿಕ್ಕಿದೆ. ಅನುಮತಿ ಸಿಕ್ಕಿದ ಕಾರಣ ಪೈಲಟ್‌ ರನ್‌ವೇಯಲ್ಲಿ ಟಚ್‌ಡೌನ್‌ ಆಗುತ್ತಿದ್ದಾಗ ಏರ್‌ ಇಂಡಿಯಾ ಜಸ್ಟ್‌ ಟೇಕಾಫ್‌ ಆಗಿತ್ತು. ಒಂದು ವೇಳೆ ಏರ್‌ ಇಂಡಿಯಾ

ಮುಂಬೈ:ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ!! Read More »

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಈನಾಡು ಮೀಡಿಯಾ ಗ್ರೂಪ್ ಅಧ್ಯಕ್ಷ ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (87) ಇನ್ನಿಲ್ಲ. ಶನಿವಾರ ಮುಂಜಾನೆ ರಾವ್ ಅವರು ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಪ್ರಸಿದ್ಧ ವಾಣಿಜ್ಯೋದ್ಯಮಿ ರಾಮೋಜಿ ಗ್ರೂಪ್ ಮತ್ತು ಈಟಿವಿ ಭಾರತ್ ಮಾಧ್ಯಮ ಸಂಸ್ಥೆ ಸಂಸ್ಥಾಪಕ ರಾಮೋಜಿ ರಾವ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣದಿಂದ ಅವರು ಇದೇ ಜೂನ್ 5ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾದೇ ಶನಿವಾರ ಬೆಳಗಿನ

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ Read More »

ಚುನಾವಣೆಯಲ್ಲಿ ಹಿನ್ನಡೆ/ ಸಚಿವರ ವಿರುದ್ಧ ಗರಂ ಆದ ರಾಹುಲ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಗೆದ್ದ ಕರ್ನಾಟಕದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದು, ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಇಂದು ಬೆಂಗಳೂರಿನ ಸ್ಟೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆದ ಸಭೆಯಲ್ಲಿಗೆದ್ದವರಿಗೆ ಅಭಿನಂದನೆ ಹಾಗೂ ಸೋತ ಅಭ್ಯರ್ಥಿಗಳಿಗೆ ರಾಹುಲ್ ಗಾಂಧಿ ಧೈರ್ಯ ಹೇಳಿದರು. ಲೀಡ್ ಕಡಿಮೆ ಕೊಟ್ಟ ಸಚಿವರ ಬಗ್ಗೆ ರಣದೀಪ್ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. 18 ಸಚಿವರು ಲೀಡ್

ಚುನಾವಣೆಯಲ್ಲಿ ಹಿನ್ನಡೆ/ ಸಚಿವರ ವಿರುದ್ಧ ಗರಂ ಆದ ರಾಹುಲ್ Read More »

ರಾಜಕೀಯ ಗುರು ಅಡ್ವಾಣಿಯ ಆಶೀರ್ವಾದ ಪಡೆದ ಮೋದಿ

ಸಮಗ್ರ ನ್ಯೂಸ್: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಗಿರುವ ನರೇಂದ್ರ ಮೋದಿ ಅವರು, ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ದೆಹಲಿಯಲ್ಲಿರುವ ಎಲ್.ಕೆ.ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ಅಡ್ವಾಣಿ ಅವರ ಜತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು. 2014, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕವೂ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

ರಾಜಕೀಯ ಗುರು ಅಡ್ವಾಣಿಯ ಆಶೀರ್ವಾದ ಪಡೆದ ಮೋದಿ Read More »