ದೇಶ-ವಿದೇಶ

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.!

ಸಮಗ್ರ ನ್ಯೂಸ್: అంತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್ ವಿಲ್ನೋರ್ ಫೆಬ್ರವರಿಯಲ್ಲಿ ಹಿಂತಿರುಗುವುದಿಲ್ಲ ಅಂತ ನಾಸಾ ತಿಳಿಸಿದೆ.ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ಐಎಸ್ಎಸ್) ಹಿಂದಿರುಗುವುದು ತಡವಾಗಲಿದೆ. ಅಲ್ಲಿ ಇಬ್ಬರು ಗಗನಯಾತ್ರಿಗಳು ಆರೋಗ್ಯವಾಗಿದ್ದಾರೆ ಅಂತ ನಾಸಾ ಮಾಹಿತಿ ನೀಡಿದೆ. ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್‌ ಗಗನನೌಕೆಯಲ್ಲಿ ಸುನಿತಾ, ಬುಚ್ ಇಬ್ಬರೂ ಜೂನ್ 5ರಂದು ಬಾಹ್ಯಾಕಾಶ […]

ಶಾಕಿಂಗ್ ನ್ಯೂಸ್ ಕೊಟ್ಟ ಗಗನಯಾತ್ರಿ ಸುನಿತಾ ವಿಲಿಯಮ್ಸ್.! Read More »

ಖ್ಯಾತ ಸುದ್ದಿ ನಿರೂಪಕಿಯ ಅಶ್ಲೀಲ ವಿಡಿಯೋ ಲೀಕ್!?| ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಹಸಿಬಿಸಿ‌ ದೃಶ್ಯ

ಸಮಗ್ರ ನ್ಯೂಸ್: ಖ್ಯಾತ ಸುದ್ದಿ ನಿರೂಪಕಿ ಅವರದ್ದು ಎನ್ನಲಾಗುತ್ತಿರುವ ಆಶ್ಲೀಲ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ಖ್ಯಾತ ಪಾಕಿಸ್ತಾನಿ ಸುದ್ದಿ ನಿರೂಪಕಿ ಮೋನಾ ಆಲಂ ಅವರ ಹೆಸರಿನೊಂದಿಗೆ ಆಶ್ಲೀಲ ವಿಡಿಯೋವೊಂದು ಕಳೆದು ಎರಡು – ಮೂರು ದಿನಗಳಿಂದ ಹರಿದಾಡುತ್ತಿದೆ. ಬೆಡ್‌ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಮಹಿಳೆಯೊಬ್ಬರ ವಿಡಿಯೋ ಹಾಗೂ ಫೋಟೋ ವೈರಲ್‌ ಆಗುತ್ತಿದೆ. ಇದು ಮೋನಾ ಆಲಂ ಅವರ ವಿಡಿಯೋವೆಂದು ಕೆಲವೊಂದಿಷ್ಟು ಜನ ಇದನ್ನು ವೈರಲ್‌ ಮಾಡುತ್ತಿದ್ದಾರೆ. ಈ ಬಗ್ಗೆ ಮೋನಾ ಅವರು ಗರಂ ಆಗಿದ್ದು,

ಖ್ಯಾತ ಸುದ್ದಿ ನಿರೂಪಕಿಯ ಅಶ್ಲೀಲ ವಿಡಿಯೋ ಲೀಕ್!?| ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಹಸಿಬಿಸಿ‌ ದೃಶ್ಯ Read More »

ವೈದ್ಯಕೀಯ ರಂಗದಲ್ಲಿ ಮಹತ್ಸಾಧನೆ ಮೆರೆದ ರಷ್ಯಾ|ಮಹಾಮಾರಿ ಕ್ಯಾನ್ಸರ್​ ಗೆ ಲಸಿಕೆ ಸಿದ್ಧ

ಸಮಗ್ರ ನ್ಯೂಸ್: ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂದು ರಷ್ಯಾ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಆಂಡ್ರೆ ಕಪ್ರಿನ್ ಮಾತನಾಡಿ, ಲಸಿಕೆ ವಿತರಣೆಯನ್ನು 2025ರ ಆರಂಭದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಲಸಿಕೆ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಇರುತ್ತದೆ. ಗಡ್ಡೆಯ ರಚನೆಯನ್ನು ತಡೆಯಲು ಇದನ್ನು ಬಳಸಲಾಗುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕ್ಯಾನ್ಸರ್ ಲಸಿಕೆಗಳಂತೆಯೇ ಪ್ರತಿ ಶಾಟ್ ಅನ್ನು ಪ್ರತಿ

ವೈದ್ಯಕೀಯ ರಂಗದಲ್ಲಿ ಮಹತ್ಸಾಧನೆ ಮೆರೆದ ರಷ್ಯಾ|ಮಹಾಮಾರಿ ಕ್ಯಾನ್ಸರ್​ ಗೆ ಲಸಿಕೆ ಸಿದ್ಧ Read More »

ಜಾಕೀರ್ ಹುಸೇನ್ ನಿಧನರಾಗಿಲ್ಲ| ಕುಟುಂಬಸ್ಥರಿಂದ ಸ್ಪಷ್ಟನೆ

ಸಮಗ್ರ ನ್ಯೂಸ್: ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿನ್ನೆ ನಿಧನರಾಗಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರನ್ನ ಸ್ಯಾನ್ ಅವರ ಸಹೋದರಿ ಖುರ್ಷಿದ್ ಔಲಿಯ ಸ್ಪಷ್ಟನೆ ನೀಡಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. ವಿಶ್ವಪ್ರಸಿದ್ಧ ತಬಲಾ ವಾದಕ ಝಾಕಿರ್ ಹುಸೈನ್ ರವಿವಾರ ನಿಧನರಾಗಿದ್ದಾರೆ ಎಂಬ ವರದಿ ಬೆನ್ನಲ್ಲೇ ಝಾಕಿರ್ ಅವರ ಸಹೋದರಿ ಖುರ್ಶಿದ್‌ ಔಲಿಯಾ ಸ್ಪಷ್ಟನೆ ನೀಡಿದ್ದು,

ಜಾಕೀರ್ ಹುಸೇನ್ ನಿಧನರಾಗಿಲ್ಲ| ಕುಟುಂಬಸ್ಥರಿಂದ ಸ್ಪಷ್ಟನೆ Read More »

ಪದ್ಮವಿಭೂಷಣ ಉಸ್ತಾದ್ ಜಾಕೀರ್ ಹುಸೇನ್ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ತಬಲಾ ವಾದಕ, ಪದ್ಮವಿಭೂಷಣ ಉಸ್ತಾದ್ ಜಾಕೀರ್ ಹುಸೇನ್ ಅವರು ವಿಧಿವಶರಾಗಿದ್ದಾರೆ.73 ವಯಸ್ಸಿನ ಜಾಕಿರ್ ಅವರನ್ನು ಇತ್ತಿಚಿಗಷ್ಟೇ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಸಧ್ಯ ಜಾಕೀರ್ ಹುಸೇನ್ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಅಂದಹಾಗೆ, ಜಾಕೀರ್ ಹುಸೇನ್ ಅವರ ಹೆಸರನ್ನು ಸಂಗೀತ ಜಗತ್ತಿನಲ್ಲಿ ಗೌರವದಿಂದ ತೆಗೆದುಕೊಳ್ಳಲಾಗುತ್ತದೆ. 9 ಮಾರ್ಚ್ 1951 ರಂದು ಮುಂಬೈನಲ್ಲಿ ಜನಿಸಿದ ಉಸ್ತಾದ್ ಜಾಕಿರ್ ಹುಸೇನ್

ಪದ್ಮವಿಭೂಷಣ ಉಸ್ತಾದ್ ಜಾಕೀರ್ ಹುಸೇನ್ ಇನ್ನಿಲ್ಲ Read More »

ಜೈಲಿಗೆ ಹಾಕಿದ್ರೂ ಸರಿ ನಮಗೆ ಭಾರತವೇ ಬೇಕು ಎಂದ ಬಾಂಗ್ಲಾದೇಶ ಹಿಂದೂಗಳು

ಸಮಗ್ರ ನ್ಯೂಸ್ : ನಮ್ಮನ್ನು ಜೈಲಿಗೆ ಹಾಕಿದರೂ ಸರಿ, ನಾವು ಭಾರತ ಬಿಟ್ಟು ಹೋಗಲ್ಲ. ಹೀಗಂತ ತ್ರಿಪುರಾದಲ್ಲಿ ಬಂಧಿತರಾದ ಬಾಂಗ್ಲಾದೇಶ ಹಿಂದೂಗಳು ಹೇಳಿಕೆ ನೀಡಿದ್ದಾರೆ.ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಅಧಿಕಾರ ಕಳೆದುಕೊಂಡ ನಂತರ ನಿರಂತರವಾಗಿ ಹಿಂದೂಗಳ ಮೇಲೆ ಹಿಂಸಾಚಾರ ನಡೆಯುತ್ತಲೇ ಇದೆ. ಇತ್ತೀಚೆಗಂತೂ ಹಿಂದೂಗಳ ಮೇಲೆ ಇನ್ನಿಲ್ಲದಂತೆ ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆಯುತ್ತಲೇ ಇದೆ. ಅಲ್ಪ ಸಂಖ್ಯಾತ ಹಿಂದೂಗಳಿಗೆ ಅಲ್ಲಿನ ಸರ್ಕಾರ ಯಾವುದೇ ರಕ್ಷಣೆ ನೀಡುತ್ತಿಲ್ಲ.ಹೀಗಾಗಿ ಬಾಂಗ್ಲಾದೇಶದಿಂದ ಕೆಲವು ಹಿಂದೂಗಳು ಭಾರತದ ಗಡಿಯೊಳಗೆ ಅಕ್ರಮವಾಗಿ ನುಸುಳುತ್ತಿದ್ದಾರೆ. ಇದೇ ರೀತಿ

ಜೈಲಿಗೆ ಹಾಕಿದ್ರೂ ಸರಿ ನಮಗೆ ಭಾರತವೇ ಬೇಕು ಎಂದ ಬಾಂಗ್ಲಾದೇಶ ಹಿಂದೂಗಳು Read More »

ಡಿ.7 ಮತ್ತು 8ರಂದು‌ ಪಿಡಿಒ ನೇಮಕಾತಿ ‌ಪರೀಕ್ಷೆ| ಇಲ್ಲಿದೆ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 7 ಮತ್ತು 8 ರಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡದೆ ಕಟ್ಟುನಿಟ್ಟಿನ ಪರೀಕ್ಷೆ ಸೂಚನೆ ನೀಡಲಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್

ಡಿ.7 ಮತ್ತು 8ರಂದು‌ ಪಿಡಿಒ ನೇಮಕಾತಿ ‌ಪರೀಕ್ಷೆ| ಇಲ್ಲಿದೆ ಪರೀಕ್ಷಾರ್ಥಿಗಳಿಗೆ ಮುಖ್ಯ ಮಾಹಿತಿ Read More »

ಸಣ್ಣ ತಪ್ಪು ಇಲ್ಲದೆ ನಿರರ್ಗಳವಾಗಿ ಸಂವಿಧಾನ ಪೀಠಿಕೆಯನ್ನು ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ

ಸಮಗ್ರ ನ್ಯೂಸ್: ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಒಂದನೇ ತರಗತಿಯ ಪುಟ್ಟ ಬಾಲಕನೊಬ್ಬ ‘ಭಾರತದ ಸಂವಿಧಾನ ಪೀಠಿಕೆ’ಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಸಣ್ಣ ತಪ್ಪು ಇಲ್ಲದಂತೆ ನಿರರ್ಗಳವಾಗಿ ಹೇಳಿಕೊಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಬರೆದುಕೊಂಡು ಓದದೇ, ಪುಸ್ತಕವನ್ನು ನೋಡದೇ, ಸ್ವಲ್ಪವೂ ತೊದಲದೇ ನಿರರ್ಗಳವಾಗಿ, ಏಕಾಗ್ರತೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಹೇಳಿಕೊಟ್ಟ ರೀತಿ ನಿಜಕ್ಕೂ ನಿಬ್ಬೆರಗಾಗಿಸುತ್ತದೆ. ಬಾಲಕನ ಆತ್ಮವಿಶ್ವಾಸ, ಸ್ಪಷ್ಟ ನುಡಿಗಳು ಎಲ್ಲರನ್ನೂ ಮಂತ್ರಮುಗ್ಧರನ್ನಾಗಿಸುವಂತಿದೆ.ಭಾರತದ ಸಂವಿಧಾನ ಅಂಗೀಕಾರವಾಗಿ 50 ವರ್ಷಗಳು ಕಳೆದಿವೆ. ನವೆಂಬ‌ರ್ 26ರಂದು ಸಂವಿಧಾನ

ಸಣ್ಣ ತಪ್ಪು ಇಲ್ಲದೆ ನಿರರ್ಗಳವಾಗಿ ಸಂವಿಧಾನ ಪೀಠಿಕೆಯನ್ನು ಮಕ್ಕಳಿಗೆ ಹೇಳಿಕೊಟ್ಟ ಪುಟ್ಟ ಬಾಲಕ Read More »

ಹವಾಮಾನ ಸಮಾಚಾರ| ಫೆಂಗಾಲ್ ನಿಂದ ಇನ್ನೆಷ್ಟು ದಿನ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪರಿಣಾಮ ಪೂರ್ವ ಕರಾವಳಿ ರಾಜ್ಯಗಳಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ರಾಜ್ಯಕ್ಕೆ ಇವತ್ತು ಫೆಂಗಲ್ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಮೊನ್ನೆ ಭಾನುವಾರದಿಂದ ರಾಜ್ಯಾದ್ಯಂತ ಹಲವೆಡೆ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡು, ದಿನ ನಿತ್ಯದ ಕಾರ್ಯ ಚಟುವಟಿಕೆಗಳಿಗೆ ಮಳೆರಾಯ ಅಡ್ಡಿಪಡಿಸಿದ್ದಾನೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯಾದ್ಯಂತ ಥಂಡಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ರಾಜಧಾನಿ ಬೆಂಗಳೂರು,ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 16ಕ್ಕೂ

ಹವಾಮಾನ ಸಮಾಚಾರ| ಫೆಂಗಾಲ್ ನಿಂದ ಇನ್ನೆಷ್ಟು ದಿನ ಮಳೆ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ| ಕೊಡಗು, ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಡಿ.3ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಡಿಸೆಂಬರ್ 3ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಕೇರಳ ಹಾಗೂ ಕರ್ನಾಟಕದ ಕರಾವಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಕೇಂದ್ರ ಹವಾಮಾನ ಇಲಾಖೆಯು ನೀಡಿದ ಮಾಹಿತಿಯಂತೆ ಕಾಸರಗೋಡು, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದ್ದು, ಡಿ.3 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಶಾಲೆ, ಕಾಲೇಜು, ವೃತ್ತಿಪರ ಕಾಲೇಜು, ಅಂಗನವಾಡಿ, ಟ್ಯೂಷನ್ ಸೆಂಟರ್, ಕೋಚಿಂಗ್ ಸೆಂಟರ್ ಮತ್ತು

ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ| ಕೊಡಗು, ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ಡಿ.3ರಂದು ರಜೆ ಘೋಷಣೆ Read More »