ದೇಶ-ವಿದೇಶ

ದಕ್ಷಿಣ ಆಫ್ರಿಕಾದ ಧಗಧಗ | 250ಕ್ಕೂ ಹೆಚ್ಚು ಬಲಿ | ಹಿಂಸಾಚಾರಿಗಳಿಗೆ ಭಾರತೀಯರೇ ಟಾರ್ಗೆಟ್…!

ಡರ್ಬನ್: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜೋಕೋಬ್ ಜೂಮಾ ಬಂಧನದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಸುಮಾರು 250ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಹಿಂಸಾಚಾರಿಗಳು ಭಾರತೀಯರನ್ನು ಟಾರ್ಗೆಟ್ ಮಾಡುತ್ತಿದ್ದು 70ಕ್ಕೂ ಹೆಚ್ಚು ಭಾರತೀಯ ಮೂಲದವರನ್ನು ಕೊಲ್ಲಲಾಗಿದೆ. ಮಾಜಿ ಅಧ್ಯಕ್ಷ ಜೋಕೋಬ್ ಜೂಮಾ ಅವರು ತಮ್ಮ ಅಧಿಕಾರವಧಿಯಲ್ಲಿ ಮಾಡಿದ ಜನಾಂಗೀಯ ನಿಂದನೆ ಆರೋಪ ಎದುರಿಸುತ್ತಿದ್ದು ಕಳೆದವಾರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರ ಭುಗಿಲೆದ್ದಿದ್ದು ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಆಕ್ರೋಶಿತ ಜನರು ಅಂಗಡಿ ಮುಂಗಟ್ಟುಗಳನ್ನು ಒಡೆದು ಹಾಕುತ್ತಿದ್ದು […]

ದಕ್ಷಿಣ ಆಫ್ರಿಕಾದ ಧಗಧಗ | 250ಕ್ಕೂ ಹೆಚ್ಚು ಬಲಿ | ಹಿಂಸಾಚಾರಿಗಳಿಗೆ ಭಾರತೀಯರೇ ಟಾರ್ಗೆಟ್…! Read More »

ಕೃತಕ ಹಲ್ಲು ನುಂಗಿ ಮಹಿಳೆ ಸಾವು

ಚೆನ್ನೈ: ಆಕಸ್ಮಿಕವಾಗಿ ನೀರಿನೊಂದಿಗೆ ಕೃತಕ ಹಲ್ಲನ್ನು ನುಂಗಿದ ಮಹಿಳೆ ಮೃತಪಟ್ಟಿರುವ ಘಟನೆ ಜುಲೈ 4 ರಂದು ಚೆನ್ನೈನಲ್ಲಿ ನಡೆದಿದ್ದು. ವಲಸರವಕ್ಕಂನ 43 ವರ್ಷದ ಮಹಿಳೆ ರಾಜಲಕ್ಷ್ಮಿ ಎಂಬವರು ಮೃತಪಟ್ಟವರು. ಇವರು ನೀರು ಕುಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೃತಕ ಹಲ್ಲನ್ನು ನುಂಗಿದ್ದಾರೆ. ಆ ಬಳಿಕ ಮಹಿಳೆಗೆ ತಲೆತಿರುಗುವಿಕೆ ಮತ್ತು ವಾಂತಿ ಉಂಟಾಗಿತ್ತು. ಬಳಿಕ ವೈದ್ಯರು ಆಕೆಯನ್ನು ಪರೀಕ್ಷಿಸಿ ಬಿಡುಗಡೆ ಮಾಡಿದ್ದರು. ಮರುದಿನ, ಪರೀಕ್ಷಿಸಿಸಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ನಿಧನರಾದರು. ಶವಪರೀಕ್ಷೆ ನಡೆಸಿ ದೇಹವನ್ನು ಬಿಟ್ಟುಕೊಡಲಾಗಿದೆ. ಕ್ರಿಮಿನಲ್ ಪ್ರೊಸಿಜರ್ನ ಕೋಡ್ನ

ಕೃತಕ ಹಲ್ಲು ನುಂಗಿ ಮಹಿಳೆ ಸಾವು Read More »

ರಾಜ್ಯಸಭೆಯ ಸದನ ನಾಯಕರಾಗಿ ಪಿಯೂಷ್ ಗೋಯಲ್

ನವೆದಹಲಿ : ಪ್ರಸ್ತುತ ರಾಜ್ಯಸಭೆಯ ಉಪ ಮಹಡಿ ನಾಯಕರಾಗಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಭಾರತೀಯ ಜನತಾ ಪಕ್ಷದ ರಾಜ್ಯಸಭೆಯ ಸದನದ ನಾಯಕರಾಗಲಿದ್ದಾರೆ. ಸಧ್ಯ ಕರ್ನಾಟಕದ ರಾಜ್ಯಪಾಲರಾಗಿರುವ ಹಿರಿಯ ನಾಯಕ ಥಾವರ್ ಚಂದ್ ಗೆಹ್ಲೋಟ್ ಅವರ ರಾಜೀನಾಮೆಯ ನಂತರ ತೆರವಾದ ಸ್ಥಾನವನ್ನ ಗೋಯಲ್ ಅಲಂಕರಿಸಲಿದ್ದಾರೆ. ಹಿರಿಯ ಸಂಸದೀಯ ನಾಯಕರಾಗಿರುವ ಗೋಯಲ್ ಅವರು ತ್ರಿವಳಿ ತಲಾಖ್ ಮತ್ತು ಅನುಚ್ಛೇದ 370 ರಂತಹ ನಿರ್ಣಾಯಕ ಮಸೂದೆಗಳನ್ನು ಅಂಗೀಕರಿಸುವ ಸಮಯದಲ್ಲಿ ಸೇರಿದಂತೆ ಪರಿಣಾಮಕಾರಿ ಸನ್ನಿವೇಶಗಳಲ್ಲಿ ಫ್ಲೋರ್ ಮ್ಯಾನೇಜರ್ ಆಗಿದ್ದಾರೆ.ಮಹಾರಾಷ್ಟ್ರ ಮೂಲದ

ರಾಜ್ಯಸಭೆಯ ಸದನ ನಾಯಕರಾಗಿ ಪಿಯೂಷ್ ಗೋಯಲ್ Read More »

ಮುಳುಗಿದ್ದ ಸೇತುವೆ ಮೇಲೆ ಬಸ್ ಚಲಾಯಿಸಿದ ಚಾಲಕ ಅಮಾನತು

ಮಹಾರಾಷ್ಟ್ರ: ಪ್ರವಾಹದಿಂದ ಸಂಪೂರ್ಣವಾಗಿ ಮುಳುಗಿದ್ದು ಸೇತುವೆ ಮೇಲೆ ಚಾಲಕನೊಬ್ಬ ಬಸ್ ಚಲಾಯಿಸಿದ ಘಟನೆ ರಾಯಗಡ ಜಿಲ್ಲೆಯಲ್ಲಿ ನಡೆದಿದೆ. ಜನರ ಜೀವದ ಜೊತೆ ಚೆಲ್ಲಾಟವಾಡಿದ ಚಾಲಕರನ್ನು ಎಂಎಸ್ಆರ್’ಟಿಸಿ ಅಮಾನತು ಮಾಡಿದೆ. ರಾಯಗಡದ ಮಹಾಡ ತಾಲೂಕಿನ ನದಿಯ ಸೇತುವೆ ಭಾರಿ ಮಳೆ ಹಿನ್ನೆಲೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಿದೆ ಸೇತುವೆ ಮೇಲೆ ಇತರೆ ಯಾವುದೇ ವಾಹನಗಳು ಸಂಚರಿಸಿಲ್ಲ. ಆದರೆ ದುಸ್ಸಾಹಸಕ್ಕೆ ಕೈಹಾಕಿದ ಎಂಎಸ್ಆರ್’ಟಿಸಿ ಬಸ್ ಚಾಲಕ ಬಸ್ಸನ್ನು ನೀರಿನ ಮೇಲೆಯೇ ನದಿಯ ಇನ್ನೊಂದು ಬದಿಗೆ ಕೊಂಡೊಯ್ದಿದ್ದಾನೆ. ನದಿ ದಾಟುತ್ತಿದ್ದಂತೆ ಬಸ್ ಹಡಗಿನಂತೆ ಕಂಡುಬಂದಿದೆ.

ಮುಳುಗಿದ್ದ ಸೇತುವೆ ಮೇಲೆ ಬಸ್ ಚಲಾಯಿಸಿದ ಚಾಲಕ ಅಮಾನತು Read More »

RBI ಮುದ್ರಣಾಲಯದಿಂದಲೇ ಬಂಡಲ್ ಬಂಡಲ್ ಬಿಸಿ ಬಿಸಿ ನೋಟು ಮಾಯ…..!

ಮುಂಬೈ: ಮುಂಬೈನಲ್ಲಿರುವ ನೋಟು ಮುದ್ರಾಣಾಲಯದಿಂದ ಐದು ಬಂಡಲ್ 500 ರೂ ನೋಟು ನಾಪತ್ತೆಯಾಗಿದೆ. ಈ ಬಗ್ಗೆ ನಾಸಿಕ್ ಪೊಲೀಸ್ ಠಾಣೆಯಲ್ಲಿ ಮುದ್ರಣಾಲಯದ ಅಧಿಕಾರಿಗಳು ದೂರು ನೀಡಿದ್ದಾರೆ. ಝೆಡ್ ಪ್ಲಸ್ ಸೆಕ್ಯೂರಿಟಿ ನಡುವೆಯೂ 5 ಲಕ್ಷ ಮೌಲ್ಯದ ನೋಟು ನಾಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ ಮತ್ತು ಅನುಮಾನಕ್ಕೆ ಕಾರಣವಾಗಿದೆ. ವರ್ಷಕ್ಕೆ ಎರಡರಿಂದ ಎರಡೂವರೆ ಸಾವಿರ ಮಿಲಿಯನ್ ರೂಪಾಯಿ ಮೌಲ್ಯದ ನೋಟುಗಳನ್ನು ಇಲ್ಲಿ ಮುದ್ರಿಸಲಾಗುತ್ತದೆ. ಆದರೆ ಇಲ್ಲಿಯ ವರೆಗೆ ಇಂತಹ ಪ್ರಕರಣಗಳು ವರದಿಯಾಗಿಲ್ಲ. ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ದಿನಕ್ಕೆ ಕೋಟಿ-ಕೋಟಿ ಮೌಲ್ಯದ

RBI ಮುದ್ರಣಾಲಯದಿಂದಲೇ ಬಂಡಲ್ ಬಂಡಲ್ ಬಿಸಿ ಬಿಸಿ ನೋಟು ಮಾಯ…..! Read More »

ಪುಲ್ವಾಮದಲ್ಲಿ ಬೆಳ್ಳಂಬೆಳಗ್ಗೆ ಮೂವರು LET ಉಗ್ರರು ಫಿನಿಷ್

ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮ ದಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಸೇನೆ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ . ಇಂದು ಮುಂಜಾನೆ ಪುಲ್ವಾಮ ನಗರದಲ್ಲಿ ಉಗ್ರರಿರುವ ಬಗ್ಗೆ ಸೇನಾಧಿಕಾರಿಗಳಿಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯಪ್ರವೃತವಾದ ಭಾರತೀಯ ಭೂ ಸೇನೆ ಉಗ್ರರಿರುವ ಸ್ಥಳವನ್ನು ಸುತ್ತುವರೆದಿದೆ. ಅದಾಗಲೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ಆರಂಭಿಸಿದ್ದಾರೆ. ತಕ್ಷಣ ಪ್ರತಿದಾಳಿ ನಡೆಸಿದ ಯೋಧರು ಲಷ್ಕರ್-ಇ-ತಾಯ್ಬಾ ಉಗ್ರ ಸಂಘಟನೆಯ ಓರ್ವ ಕಾಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪುಲ್ವಾಮದಲ್ಲಿ ಬೆಳ್ಳಂಬೆಳಗ್ಗೆ ಮೂವರು LET ಉಗ್ರರು ಫಿನಿಷ್ Read More »

ಎಷ್ಟೇ ಗೋಗರೆದರೂ ಕರಗದ ಪ್ರಿಯಕರನ ಮನ | ಕಲ್ಯಾಣ ಮಂಟಪದೆದುರು ಪ್ರೀತಿಗಾಗಿ ಅಂಗಲಾಚಿದ ಪ್ರೇಯಸಿ | ಇಲ್ಲಿದೆ ಮನಕರಗಿಸುವ ವಿಡಿಯೋ

ಮಧ್ಯಪ್ರದೇಶ: ತನ್ನನ್ನು ಪ್ರೀತಿಸಿದ ಯುವಕ ಬೇರೊಬ್ಬಳು ಯುವತಿಯೊಂದಿಗೆ ವಿವಾಹವಾಗುತ್ತಿರುವ ವಿಷಯ ತಿಳಿದ ಯುವತಿಯೊಬ್ಬಳು ಮನನೊಂದು ಕಲ್ಯಾಣ ಮಂಟಪದೆದುರು ಪ್ರೀತಿಗಾಗಿ ಗೋಗರೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗಿದೆ. ರಾಜ್ಯದ ಹೋಶಂಗಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಯುವಕ ಮತ್ತು ಕಾನ್ಪುರ ಮೂಲದ ಯುವತಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಒಬ್ಬೊರನ್ನೊಬ್ಬರು ಬಿಟ್ಟಿರದ ಇಬ್ಬರೂ, ಬಹಳ ಅನ್ಯೋನ್ಯವಾಗಿದ್ದರು. ಆದರೆ ಕೊನೆಯಲ್ಲಿ ಯುವಕ ಕೈಕೊಟ್ಟಿದ್ದಾನೆ. ಯುವಕ ತನಗೆ ಮೋಸ ಮಾಡಿ ಬೇರೊಬ್ಬಳ ಜೊತೆ ಮದುವೆಯಾಗುತ್ತಿರುವ ವಿಷಯ ಇತ್ತೀಚೆಗೆ

ಎಷ್ಟೇ ಗೋಗರೆದರೂ ಕರಗದ ಪ್ರಿಯಕರನ ಮನ | ಕಲ್ಯಾಣ ಮಂಟಪದೆದುರು ಪ್ರೀತಿಗಾಗಿ ಅಂಗಲಾಚಿದ ಪ್ರೇಯಸಿ | ಇಲ್ಲಿದೆ ಮನಕರಗಿಸುವ ವಿಡಿಯೋ Read More »

ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ

ನವದೆಹಲಿ: ಕೊರೋನಾ 2ನೇ ಅಲೆ ಇಳಿಕೆಯ ನಂತರ ಜನರು ಮಾರ್ಗಸೂಚಿಗಳನ್ನು ಎಗ್ಗಿಲ್ಲದೇ ಮುರಿಯುತ್ತಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆತಂಕ ವ್ಯಕ್ತಪಡಿಸಿದೆ. ಜನರ ವಿನಾಕಾರಣ ಓಡಾಟ ಹಾಗೂ‌ ಯಾತ್ರೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದೆ. ‘ ಜಗತ್ತಿನಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ನೋಡಿದರೆ ಹಾಗೂ ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸವನ್ನು ಗಮನಿಸಿದರೆ ಕೊರೋನಾದ 3ನೇ ಅಲೆ ಕೂಡ ಬಂದೇ ಬರುತ್ತದೆ ಎಂದು ಅನುಮಾನವಿಲ್ಲದೆ ಹೇಳಬಹುದು. ದೇಶದ ವೈದ್ಯಕೀಯ

ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ Read More »

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು

ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಅಲ್-ಹುಸೇನ್ ಕೊರೊನಾವೈರಸ್ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಇರಾಕ್ ಸುದ್ದಿ ಸಂಸ್ಥೆ ಹೇಳಿದೆ. ದಕ್ಷಿಣ ಇರಾಕಿನ ನಗರ ನಾಸಿರಿಯಾದ ಅಲ್ ಹುಸೇನ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು Read More »

ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ?

ಲಕ್ನೊ: ಉತ್ತರ ಪ್ರದೇಶದಲ್ಲಿ ದಿನೇದಿನೇ ಅಪರಾದ ಚಟುವಟಿಕೆಗಳು ಹೆಚ್ಚಾಗ್ತಿದೆ. ಕೆಲ ದಿನಗಳ ಹಿಂದಷ್ಟೇ ದಲಿತ ಯುವಕನ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳ ಕುರಿತು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ವಾಕ್ಸಮರ ನಡೆಸಿದ್ದವು. ಅದರ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ ರಾಜ್ಯದ ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡದಲ್ಲಿ ನಡೆದಿದೆ. ವ್ಯಕ್ಯಿಯೋರ್ವ ಮನೆ ಮುಂದೆ ಬಿದ್ದಿದ್ದ ಸೆಗಣಿಯನ್ನು ಬಾಲಕಿಯೋರ್ವಳ ಬಳಿ ಎತ್ತಾಕಲು ಹೇಳಿದ್ದು, ಆಕೆ ವಿರೋದಿಸಿದಾಗ ಅವಳ ಜೊತೆಗೆ ಜಗಳ ಕಾಯ್ದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆಕೆಯ

ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ? Read More »