ದೇಶ-ವಿದೇಶ

ತಮಿಳುನಾಡು ರಾಜಕಾರಣದಲ್ಲಿ ಭಾರೀ ಸಂಚಲನ, ರಾಜಕೀಯ ವಿದಾಯ ಘೋಷಿಸಿದ ರಜನಿಕಾಂತ್,

ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದು, ರಾಜಕೀಯ ಪಕ್ಷ ಬರ್ಕಾಸ್ತುಗೊಳಿಸುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಸಂಪೂರ್ಣವಾಗಿ ವಿದಾಯ ಘೋಷಿಸಿದ್ದಾರೆ.ತಮ್ಮ ಪಕ್ಷ […]

ತಮಿಳುನಾಡು ರಾಜಕಾರಣದಲ್ಲಿ ಭಾರೀ ಸಂಚಲನ, ರಾಜಕೀಯ ವಿದಾಯ ಘೋಷಿಸಿದ ರಜನಿಕಾಂತ್, Read More »

ಸಿಡಿಲು ಬಡಿದು 20 ಮಂದಿ ದುರ್ಮರಣ, 17 ಮಂದಿ ಗಂಭೀರ

ಜೈಪುರ: ರಾಜಸ್ಥಾನದಲ್ಲಿ ಭಾನುವಾರ ಸಿಡಿಲಿನ ಹೊಡೆತಕ್ಕೆ ಸಿಲುಕಿ ಸುಮಾರು 20 ಜನ ಸಾವಿಗೀಡಾದ್ದಾರೆ. ರಾಜ್ಯದ ಜೈಪುರ, ಝಲವಾರ್, ಧೋಲ್‌ಪುರ ಜಿಲ್ಲೆಗಳಲ್ಲಿ‌ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಸುಮಾರು 20 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಮಾರು 20 ಸಾವಿನ ಪೈಕಿ ಜೈಪುರದ ಹೊರವಲಯದಲ್ಲಿರುವ ಅಮೆರ್ ಕೋಟೆ (Amer Fort) ವೀಕ್ಷಣೆಗಾಗಿ ಸಂಜೆ ವೇಳೆ ಪ್ರವಾಸಿಗರು ಬಂದಿದ್ದಾಗ ವೇಳೆ ಸಂಭವಿಸಿದೆ ಎನ್ನಲಾಗಿದೆ. ಅಮೆರ್​ ಕೋಟೆಯ ವೀಕ್ಷಣಾಗೋಪುರದ ಬಳಿ ನಿಂತು ಪ್ರಕೃತಿ ವೀಕ್ಷಣೆಯಲ್ಲಿ ತೊಡಗಿದ್ದ ವೇಳೆ ಏಕಾಏಕಿ

ಸಿಡಿಲು ಬಡಿದು 20 ಮಂದಿ ದುರ್ಮರಣ, 17 ಮಂದಿ ಗಂಭೀರ Read More »

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್‌ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್‌, ಪ್ಯಾರಾಮೆಡಿಕಲ್‌ ಮತ್ತು ಅಲೈಡ್‌ ಹೆಲ್ತ್ ಕೇರ್‌ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್‌ ಮೂಲಕ ಬೋಧಿಸುತ್ತಿದೆ. ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಿಪೇಡ್‌ ಎಜುಕೇಷನ್ App ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? Read More »

‘ಲವ್ ಜಿಹಾದ್’ ಅಂದ್ರೆ ಮುಸ್ಲಿಂಗೆ ಮಾತ್ರ‌ ಸೀಮಿತ ಅಲ್ಲವೆಂದ ಅಸ್ಸಾಂ ಸಿಎಂ

ಗುವಾಹಟಿ: ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಪ್ರೀತಿ ಹೆಸರಲ್ಲಿ ‌ಮೋಸ ಮಾಡಿದ್ರೆ ಮಾತ್ರ ಲವ್ ಜಿಹಾದ್ ಅಲ್ಲ, ಹಿಂದೂ ಹುಡುಗ ಹಿಂದೂ ಹುಡುಗಿಗೆ ಮೋಸ ಮಾಡಿದ್ರೂ ಅದು ಲವ್ ಜಿಹಾದ್ ಎನಿಸಿಕೊಳ್ಳುತ್ತೆ ಎಂದು ಅಸ್ಸಾಂ ಸರ್ಕಾರ ಅಭಿಪ್ರಾಯಪಟ್ಟಿದೆ. ನಾವು ಲವ್‌ಜಿಹಾದ್ ಪದವನ್ನು ಬಳಸಲು ಬಯಸುವುದಿಲ್ಲ. ಏಕೆಂದರೆ ಹಿಂದೂವೊಬ್ಬ ಹಿಂದೂ ಯುವತಿಗೆ ಮೋಸ ಮಾಡಬಾರದು ಎಂದು ನಾವು ಭಾವಿಸುತ್ತೇವೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಗೆ ಮೋಸ ಮಾಡುವುದು ಮಾತ್ರ ಲವ್‌ ಜಿಹಾದ್ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಕಾನೂನು

‘ಲವ್ ಜಿಹಾದ್’ ಅಂದ್ರೆ ಮುಸ್ಲಿಂಗೆ ಮಾತ್ರ‌ ಸೀಮಿತ ಅಲ್ಲವೆಂದ ಅಸ್ಸಾಂ ಸಿಎಂ Read More »

5 ನೇ ತರಗತಿ ಮಕ್ಕಳಿಗೆ ಶಾಲೆಯಿಂದಲೇ ಉಚಿತ ಕಾಂಡೋಮ್…! | ಅಚ್ಚರಿಯ ಹಿಂದಿನ ಅಸಲಿಯತ್ತೇನು…?

ವಾಷಿಂಗ್ಟನ್: ಇಲ್ಲಿನ ಪಬ್ಲಿಕ್ ಸ್ಕೂಲ್ಸ್ ಬೋರ್ಡ್ ತನ್ನ ಅಧೀನದ ಶಾಲೆಗಳಲ್ಲಿ ಉಚಿತ ಕಾಂಡೋಮ್ ಯೋಜನೆ ಜಾರಿಗೊಳಿಸಿ ಐದನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಆವರಣದಲ್ಲಿಯೇ ಕಾಂಡೋಮ್ ನೀಡಿ ಪ್ರೋ ತ್ಸಾಹಿಸಲಾಗುತ್ತಿದೆ. ಇಂತಾಹದೊಂದು ಅಚ್ಚರಿ ಘಟನೆ ಚಿಕಾಗೊದಲ್ಲಿ ನಡೆದಿದೆ. ಐದನೇ ತರಗತಿ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಕಾಂಡೋಮ್ ಒದಗಿಸಲಾಗುತ್ತಿದೆ. ಆದರೆ ಐದನೇ ತರಗತಿಯಿಂದ ಕೆಳಗಿನ ಮಕ್ಕಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಇದಕ್ಕೆ ಸಮಜಾಯಿಸಿ ನೀಡಿರುವ ಸಿಪಿಎಸ್, ಉತ್ತಮ ಲೈಂಗಿಕ ಶಿಕ್ಷಣವು ಆರಂಭದಲ್ಲಿಯೇ ದೊರೆಯಬೇಕು. ಅದರಿಂದ ಅಕಾಲಿಕ ಸಂತಾನ ಮತ್ತು ಲೈಂಗಿಕ

5 ನೇ ತರಗತಿ ಮಕ್ಕಳಿಗೆ ಶಾಲೆಯಿಂದಲೇ ಉಚಿತ ಕಾಂಡೋಮ್…! | ಅಚ್ಚರಿಯ ಹಿಂದಿನ ಅಸಲಿಯತ್ತೇನು…? Read More »

ಉದ್ಯಮಿ ರಿಚರ್ಡ್ ಬ್ರಾನ್ಸನ್ ಜೊತೆ ಭಾರತೀಯ ಮೂಲದ ಸಿರಿಶಾ ಬಾಂದ್ಲಾ ಬಾಹ್ಯಾಕಾಶಕ್ಕೆ

ವಾಷಿಂಗ್ಟನ್: ಹೆಸರಾಂತ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರ ಜೊತೆ ಭಾರತೀಯ ಮೂಲದ ಏರೋನಾಟಿಕಲ್ ಎಂಜಿನಿಯರ್ ಸಿರಿಶಾ ಬಾಂದ್ಲಾ ಇಂದು ಬಾಹ್ಯಕಾಶಕ್ಕೆ ಹಾರಲಿದ್ದಾರೆ. Join us July 11th for our first fully crewed rocket powered test flight, and the beginning of a new space age. The countdown begins. #Unity22 https://t.co/5UalYT7Hjb. @RichardBranson pic.twitter.com/ZL9xbCeWQX — Virgin Galactic (@virgingalactic) July 1, 2021 ಈ ಮೂಲಕ ಸ್ಪೇಸ್ ಟೂರಿಸಮ್

ಉದ್ಯಮಿ ರಿಚರ್ಡ್ ಬ್ರಾನ್ಸನ್ ಜೊತೆ ಭಾರತೀಯ ಮೂಲದ ಸಿರಿಶಾ ಬಾಂದ್ಲಾ ಬಾಹ್ಯಾಕಾಶಕ್ಕೆ Read More »

ಇಂಡೋನೇಷ್ಯದಲ್ಲಿ ಕೋವಿಡ್ ಸ್ಫೋಟ | ಆಪತ್ತಿನಲ್ಲಿ ಆಮ್ಲಜನಕ ಆಪತ್ಭಾಂದವ

ಜಕಾರ್ತಾ: ಜನಸಂಖ್ಯೆಯಲ್ಲಿ ಪ್ರಪಂಚದ ನಾಲ್ಕನೇ ದೊಡ್ಡ ರಾಷ್ಟ್ರ ಇಂಡೋನೇಷಿಯಾದಲ್ಲಿ ಇದೀಗ ಕೋವಿಡ್ ಸ್ಫೋಟ ಸಂಭವಿಸಿದ್ದು ಆಮ್ಲಜನಕದ ಕೊರತೆ ಎದುರಾಗಿದೆ. ಕೋರಿಕೆಗೆ ತಕ್ಷಣ ಸ್ಪಂದಿಸಿರುವ ಸಿಂಗಾಪುರ ಮತ್ತು ಆಸ್ಟ್ರೇಲಿಯಾ ಇಂಡೋನೇಷಿಯಾದ ನೆರವಿಗೆ ನಿಂತಿದೆ. ಸಿಂಗಾಪುರ 1,000 ಆಮ್ಲಜನಕ ಸಿಲಿಂಡರ್‌ಗಳು, ಕಾನ್ಸೆಂಟ್ರೇಟರ್‌ಗಳು, ವೆಂಟಿಲೇಟರ್‌ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಇಂಡೋನೇಷ್ಯಾಗೆ ಕಳುಹಿಸಿಕೊಟ್ಟಿದೆ. ಜೊತೆಗೆ ಅಷ್ಟೇ ಪ್ರಮಾಣದ ನೆರವನ್ನು ಆಸ್ಟ್ರೇಲಿಯಾ ಇಂಡೋನೇಷ್ಯಾಕ್ಕೆ ತಲುಪಿಸಿದೆ. ಈ ನಡುವೆ ಸಿಂಗಾಪುರದಿಂದ 36,000 ಟನ್‌ ಆಮ್ಲಜನಕ ಮತ್ತು ಆಮ್ಲಜನಕ ಉತ್ಪಾದಿಸುವ 10,000 ಕಾನ್ಸೆಂಟ್ರೇಟರ್‌ ಉಪಕರಣಗಳನ್ನು ಖರೀದಿಸಲು

ಇಂಡೋನೇಷ್ಯದಲ್ಲಿ ಕೋವಿಡ್ ಸ್ಫೋಟ | ಆಪತ್ತಿನಲ್ಲಿ ಆಮ್ಲಜನಕ ಆಪತ್ಭಾಂದವ Read More »

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ….

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕ್ 43,393 ಜನರಲ್ಲಿ ಪತ್ತೆಯಾಗಿದ್ದು ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 3,07,52,950ಕ್ಕೆ ಏರಿದೆ. ಇದಿರಿಂದ ಮತ್ತೆ ಲಾಕ್ ಡೌನ್ ಆಗುವ ಮುನ್ಸೂಚನೆ ಇದೆ. ಕಳೆದ 24 ಗಂಟೆಯಲ್ಲಿ 911 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದಲ್ಲದೆ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನಲೆ ಲಾಕ್ ಡೌನ್ ಮಾಡುವ ಸ್ಥಿತಿ

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ…. Read More »

ಕೇರಳದಲ್ಲಿ ‌ಕಾಣಿಸಿಕೊಳ್ತು ಮಾರಕ ಝಿಕಾ ವೈರಸ್

ತಿರುವನಂತಪುರಂ: ಮೊದಲ ಬಾರಿಗೆ ಕೇರಳದಲ್ಲಿ ಮಹಿಳೆಯೊಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದಾಗಿ ಆರೋಗ್ಯ ಸಚಿವೆ ಹೇಳಿದ್ದಾರೆ. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಶಾಲಾದ (24) ಗರ್ಭಿಣಿಯಲ್ಲಿ ಈ ರೋಗ ಪತ್ತೆಯಾಗಿದೆ. ಜೂ. 28 ರಂದು ಮಹಿಳೆಯನ್ನು ಜ್ವರ, ತಲೆನೋವು ಮತ್ತು ಕೆಂಪು ಕಲೆಗಳಿಂದ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ನಡೆದ ಮೊದಲ ಪರೀಕ್ಷೆಯಲ್ಲಿ ಅಲ್ಪ ಪ್ರಮಾಣದ ಧನಾತ್ಮಕ ಅಂಶ ಕಂಡುಬಂದಿದೆ. ಝಿಕಾ ವೈರಸ್ ಅನ್ನು ಪತ್ತೆಹಚ್ಚಲು ಎನ್‌ಐವಿ ಅನ್ನು ಬಳಸಬಹುದು. ಮಾದರಿಗಳನ್ನು ಪುಣೆಗೆ ಕಳುಹಿಸಲಾಗಿದೆ. ಅದೇ ಸಮಯದಲ್ಲಿ,

ಕೇರಳದಲ್ಲಿ ‌ಕಾಣಿಸಿಕೊಳ್ತು ಮಾರಕ ಝಿಕಾ ವೈರಸ್ Read More »

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ

ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣು‌ಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ‌ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »