ದೇಶ-ವಿದೇಶ

ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್:2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಇಂದು (02-12-2024) ಪ್ರಕಟಿಸಲಾಗಿದೆ.ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ:02-12-2024 ರಿಂದ 16-12-2024 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ.ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ […]

ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ Read More »

ಇಂದು ಸಂವಿಧಾನ ದಿನಾಚರಣೆ| ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ನವೆಂಬರ್- 26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ।।ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ

ಇಂದು ಸಂವಿಧಾನ ದಿನಾಚರಣೆ| ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ Read More »

ನೆಟ್ಟಗೆ ಕನ್ನಡ ಬರಲ್ಲ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯಿಂದ ಮುಜುಗರ

ಸಮಗ್ರ ನ್ಯೂಸ್:ವಿಧಾನಸೌಧದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.ವಿಡಿಯೋ ಕಾನ್ಸರೆನ್ಸ್ ವೇಳೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ವಿದ್ಯಾರ್ಥಿಯೊಬ್ಬ ತೀವ್ರ ಮುಜುಗರ ತಂದೊಡ್ಡಿದ್ದಾನೆ.ವಿದ್ಯಾ ಮಂತ್ರಿಗೆ ಕನ್ನಡ ಬರಲ್ಲ ಅನ್ನುವುದರ ಮೂಲಕ ಮಧು ಬಂಗಾರಪ್ಪ ಅವರಿಗೆ ಅವಮಾನ ಮಾಡಿದ್ದ ಘಟನೆ ನ.20ರಂದು ನಡೆದಿದೆ. ವಿಡಿಯೋ ಕಾನ್ಸರೆನ್ಸ್ ಮೂಲಕ ಸಂವಾದ ನಡೆಸುತ್ತಿದ್ದ ವೇಳೆ ವಿದ್ಯಾರ್ಥಿ ಭರತ್‌ ಎಂಬಾತ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ

ನೆಟ್ಟಗೆ ಕನ್ನಡ ಬರಲ್ಲ – ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಯಿಂದ ಮುಜುಗರ Read More »

ದೇಶದಲ್ಲೇ ಪರಿಶುದ್ಧ ಗಾಳಿಗೆ ಮಡಿಕೇರಿ ಅಗ್ರಸ್ಥಾನ| ಗದಗ ಜಿಲ್ಲೆಗೆ 8ನೇ ಸ್ಥಾನ| ಉಳಿದಂತೆ ಟಾಪ್ 10 ನಗರಗಳು‌ ಯಾವುವು ಗೊತ್ತಾ?

ಸಮಗ್ರ ನ್ಯೂಸ್: ದೇಶದಲ್ಲಿಯೇ ಕೊಡಗು ಜಿಲ್ಲೆಯಲ್ಲಿ ಪರಿಶುದ್ಧ ಗಾಳಿ ದೊರೆಯುವುದರಲ್ಲಿ ಅಗ್ರಸ್ಥಾನದಲ್ಲಿ ಇದೆ. ಕೇಂದ್ರ ಪರಿಸರ ಮಾಲಿನ್ಯ ಮಂಡಳಿಯು ಪರಿಶುದ್ಧ ಗಾಳಿ ಹೊಂದಿರುವ ಟಾಪ್ 10 ನಗರಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರಲ್ಲಿ ಮಡಿಕೇರಿ ನಗರಕ್ಕೆ ಪ್ರಥಮ ಸ್ಥಾನ ದೊರೆತ್ತಿದ್ದರೆ ರಾಜ್ಯದ ಗದಗ 8 ನೇ ಸ್ಥಾನ ಪಡೆದಿದೆ. ಕಳೆದ ವರ್ಷ ಕೇಂದ್ರ ಪರಿಸರ ಮಾಲಿನ್ಯ ಮಂಡಳಿ ಬಿಡುಗಡೆ ಮಾಡಿದ ಪಟ್ಟಿಗಳಲ್ಲಿ ಮಡಿಕೇರಿ 5ನೇ ಸ್ಥಾನ ಪಡೆದಿತ್ತು. ಆದರೆ ಈ ಬಾರಿ ದೇಶದಲ್ಲಿಯೇ ಅಗ್ರಸ್ಥಾನ ಪಡೆದಿರುವುದು

ದೇಶದಲ್ಲೇ ಪರಿಶುದ್ಧ ಗಾಳಿಗೆ ಮಡಿಕೇರಿ ಅಗ್ರಸ್ಥಾನ| ಗದಗ ಜಿಲ್ಲೆಗೆ 8ನೇ ಸ್ಥಾನ| ಉಳಿದಂತೆ ಟಾಪ್ 10 ನಗರಗಳು‌ ಯಾವುವು ಗೊತ್ತಾ? Read More »

ಅಮೇರಿಕಾದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅರೆಸ್ಟ್

ಸಮಗ್ರ ನ್ಯೂಸ್: ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಬಾಬಾ ಸಿದ್ಧಿಕ್ ಹತ್ಯೆ ಪ್ರಕರಣದಲ್ಲಿ ಅನ್ಮೋಲ್ ಬಿಷ್ಣೋಯ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಯಿತು. ಕಳೆದ ವರ್ಷ ಭಾರತದಿಂದ ಪಲಾಯನ ಮಾಡಿದ ಅನ್ಮೋಲ್‌ನ ಹಸ್ತಾಂತರಕ್ಕೆ ಮುಂಬೈ ಪೊಲೀಸರು ಪ್ರಸ್ತಾವನೆಯನ್ನು ಕಳುಹಿಸಿದ ಕೆಲವೇ ದಿನಗಳಲ್ಲಿ ಅಮೆರಿಕ ತನ್ನ ಪ್ರದೇಶದಲ್ಲಿ ಅನ್ಮೋಲ್​ ಇರುವಿಕೆಯನ್ನು ಖಚಿತಪಡಿಸಿದೆ. ಪ್ರಸ್ತುತ ಸಬರಮತಿಯ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್‌ನ ಆಡಳಿತವನ್ನು ಅನ್ಮೋಲ್‌ಗೆ ಹಸ್ತಾಂತರಿಸಿದ್ದರು. ಲಾರೆನ್ಸ್ ಬಿಷ್ಣೋಯ್ ಸಹೋದರ

ಅಮೇರಿಕಾದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅರೆಸ್ಟ್ Read More »

ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್!

ಸಮಗ್ರ ನ್ಯೂಸ್:(ನ.14) ಶಾಲೆಯ ಪ್ರಿನ್ಸಿಪಾಲ್ ಮಗನ ಸೇವೆ ಮಾಡಲಿಲ್ಲವೆಂದು 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಬೆತ್ತದಿಂದ ಹಲ್ಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಂಡಿಬೆಲೆ ರಸ್ತೆಯಲ್ಲಿರುವ ವಿಸ್ಲಂ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಪಟ್ಟಣದ ಪ್ರಭಾವತಿ ಹಾಗೂ ಆಂಜಿನಪ್ಪ ದಂಪತಿಯ ಪುತ್ರಿಯಾಗಿರುವ ಭವ್ಯ ವಿದ್ಯಾರ್ಥಿನಿ,ಶಾಲೆಯ ಪ್ರಿನ್ಸಿಪಲ್ ಉಷಾಕಿರಣ್ ಗೆ ವಿಕಲಚೇತನ ಮಗನಿದ್ದಾನೆ. ಅದೇ ಶಾಲೆಯಲ್ಲಿ ಮಗನನ್ನು ನೋಡಿಕೊಳ್ಳಲು ಕೇರ್ ಟೇಕರ್ ಆಗಿ ಮಹಿಳೆಯನ್ನ ನೇಮಿಸಿಕೊಂಡಿದ್ದ ಪ್ರಿನ್ಸಿಪಾಲ್. ಆದರೆ ಆ ಮಹಿಳೆಗೆ ವಿದ್ಯಾರ್ಥಿನಿ ಭವ್ಯ ಸಹಕಾರ

ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್! Read More »

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಸೂಚನೆ: ಮುಸ್ಲಿಂ ವಿದ್ಯಾರ್ಥಿಗಳ ಆಕ್ರೋಶ

ಸಮಗ್ರ ನ್ಯೂಸ್: ಹೊಳೇನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜು ಆಡಳಿತ ಮಂಡಳಿ ತಮಗೆ ಗಡ್ಡ ತೆಗೆಯುವಂತೆ ಸೂಚನೆ ನೀಡಿದೆ ಅಂತ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್ ಮೂಲಕ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಇದೇ ವಿಚಾರವಾಗಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ತಾರಕಕ್ಕೇರಿದೆ. ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು ಮುಸ್ಲಿಂ ಯುವಕರು ಹೊಳೆನರಸೀಪುರಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳು ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜೀನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಸೂಚನೆ: ಮುಸ್ಲಿಂ ವಿದ್ಯಾರ್ಥಿಗಳ ಆಕ್ರೋಶ Read More »

ಇನ್ನೂ 9 ದೇಶಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸಿದ ಚೀನಾ

ಸಮಗ್ರ ನ್ಯೂಸ್: ಚೀನಾ ತನ್ನ ಪ್ರವಾಸೋದ್ಯಮ ಉದ್ಯಮವನ್ನು ಪುನರುಜ್ಜಿವನಗೊಳಿಸುವ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸುವ ವಿಶಾಲ ಪ್ರಯತ್ನಗಳ ಭಾಗವಾಗಿ ದಕ್ಷಿಣ ಕೊರಿಯಾ, ನಾರ್ವೆ, ಫಿಸ್ಟ್ಯಾಂಡ್ ಮತ್ತು ಗ್ಲೋವಾಕಿಯಾ ಸೇರಿದಂತೆ ಒಂಬತ್ತು ಹೆಚ್ಚುವರಿ ದೇಶಗಳ ಪ್ರಜೆಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸುತ್ತಿದೆ ನವೆಂಬರ್ 8 ರಿಂದ, ಡೆನ್ಮಾರ್ಕ್, ಐಸ್ಟ್ಯಾಂಡ್, ಅಂಡೋರಾ, ಮೊನಾಕೊ ಮತ್ತು ಲಿಚೆನ್ನೈನ್ ಜೊತೆಗೆ ಈ ದೇಶಗಳ ನಾಗರಿಕರು ವ್ಯಾಪಾರ, ಪ್ರವಾಸೋದ್ಯಮ, ಕುಟುಂಬ ಭೇಟಿಗಳು ಅಥವಾ ಸಾರಿಗೆ ಉದ್ದೇಶಗಳಿಗಾಗಿ 15 ದಿನಗಳವರೆಗೆ ಉಳಿಯಲು ವೀಸಾ ಇಲ್ಲದೆ ಚೀನಾವನ್ನು

ಇನ್ನೂ 9 ದೇಶಗಳಿಗೆ ವೀಸಾ ಮುಕ್ತ ಪ್ರವೇಶವನ್ನು ವಿಸ್ತರಿಸಿದ ಚೀನಾ Read More »

ಇಂದು(ನ.05) ಅಮೇರಿಕಾದ ಅಧ್ಯಕ್ಷೀಯ ಚುನಾವಣೆ| ಕಮಲಾ ಹ್ಯಾರೀಸ್- ಟ್ರಂಪ್ ಮಧ್ಯೆ ತೀವ್ರ ಹಣಾಹಣಿ

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರ (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಅಮೆರಿಕದ ಜನಗಣತಿ ಬ್ಯೂರೊ ಪ್ರಕಾರ, 15.5 ಕೋಟಿ ಅಮೆರಿಕನ್ನರು ಮತದಾನ ಮಾಡಲು ಅರ್ಹರಾಗಿದ್ದಾರೆ. ನವೆಂಬರ್‌ 2ರವರೆಗೆ 7.5 ಕೋಟಿಗೂ ಹೆಚ್ಚು ಮಂದಿ ಆನ್‌ಲೈನ್‌ (ಮೇಲ್‌-ಇನ್‌ ವೋಟಿಂಗ್) ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಫ್ಲಾರಿಡಾ

ಇಂದು(ನ.05) ಅಮೇರಿಕಾದ ಅಧ್ಯಕ್ಷೀಯ ಚುನಾವಣೆ| ಕಮಲಾ ಹ್ಯಾರೀಸ್- ಟ್ರಂಪ್ ಮಧ್ಯೆ ತೀವ್ರ ಹಣಾಹಣಿ Read More »

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ Read More »