ದೇಶ-ವಿದೇಶ

ಇಂಡೋನೇಷ್ಯದಲ್ಲಿ ಕೋವಿಡ್ ಸ್ಫೋಟ | ಆಪತ್ತಿನಲ್ಲಿ ಆಮ್ಲಜನಕ ಆಪತ್ಭಾಂದವ

ಜಕಾರ್ತಾ: ಜನಸಂಖ್ಯೆಯಲ್ಲಿ ಪ್ರಪಂಚದ ನಾಲ್ಕನೇ ದೊಡ್ಡ ರಾಷ್ಟ್ರ ಇಂಡೋನೇಷಿಯಾದಲ್ಲಿ ಇದೀಗ ಕೋವಿಡ್ ಸ್ಫೋಟ ಸಂಭವಿಸಿದ್ದು ಆಮ್ಲಜನಕದ ಕೊರತೆ ಎದುರಾಗಿದೆ. ಕೋರಿಕೆಗೆ ತಕ್ಷಣ ಸ್ಪಂದಿಸಿರುವ ಸಿಂಗಾಪುರ ಮತ್ತು ಆಸ್ಟ್ರೇಲಿಯಾ ಇಂಡೋನೇಷಿಯಾದ ನೆರವಿಗೆ ನಿಂತಿದೆ. ಸಿಂಗಾಪುರ 1,000 ಆಮ್ಲಜನಕ ಸಿಲಿಂಡರ್‌ಗಳು, ಕಾನ್ಸೆಂಟ್ರೇಟರ್‌ಗಳು, ವೆಂಟಿಲೇಟರ್‌ಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಇಂಡೋನೇಷ್ಯಾಗೆ ಕಳುಹಿಸಿಕೊಟ್ಟಿದೆ. ಜೊತೆಗೆ ಅಷ್ಟೇ ಪ್ರಮಾಣದ ನೆರವನ್ನು ಆಸ್ಟ್ರೇಲಿಯಾ ಇಂಡೋನೇಷ್ಯಾಕ್ಕೆ ತಲುಪಿಸಿದೆ. ಈ ನಡುವೆ ಸಿಂಗಾಪುರದಿಂದ 36,000 ಟನ್‌ ಆಮ್ಲಜನಕ ಮತ್ತು ಆಮ್ಲಜನಕ ಉತ್ಪಾದಿಸುವ 10,000 ಕಾನ್ಸೆಂಟ್ರೇಟರ್‌ ಉಪಕರಣಗಳನ್ನು ಖರೀದಿಸಲು […]

ಇಂಡೋನೇಷ್ಯದಲ್ಲಿ ಕೋವಿಡ್ ಸ್ಫೋಟ | ಆಪತ್ತಿನಲ್ಲಿ ಆಮ್ಲಜನಕ ಆಪತ್ಭಾಂದವ Read More »

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ….

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕ್ 43,393 ಜನರಲ್ಲಿ ಪತ್ತೆಯಾಗಿದ್ದು ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 3,07,52,950ಕ್ಕೆ ಏರಿದೆ. ಇದಿರಿಂದ ಮತ್ತೆ ಲಾಕ್ ಡೌನ್ ಆಗುವ ಮುನ್ಸೂಚನೆ ಇದೆ. ಕಳೆದ 24 ಗಂಟೆಯಲ್ಲಿ 911 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದಲ್ಲದೆ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನಲೆ ಲಾಕ್ ಡೌನ್ ಮಾಡುವ ಸ್ಥಿತಿ

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ…. Read More »

ಕೇರಳದಲ್ಲಿ ‌ಕಾಣಿಸಿಕೊಳ್ತು ಮಾರಕ ಝಿಕಾ ವೈರಸ್

ತಿರುವನಂತಪುರಂ: ಮೊದಲ ಬಾರಿಗೆ ಕೇರಳದಲ್ಲಿ ಮಹಿಳೆಯೊಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದಾಗಿ ಆರೋಗ್ಯ ಸಚಿವೆ ಹೇಳಿದ್ದಾರೆ. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಶಾಲಾದ (24) ಗರ್ಭಿಣಿಯಲ್ಲಿ ಈ ರೋಗ ಪತ್ತೆಯಾಗಿದೆ. ಜೂ. 28 ರಂದು ಮಹಿಳೆಯನ್ನು ಜ್ವರ, ತಲೆನೋವು ಮತ್ತು ಕೆಂಪು ಕಲೆಗಳಿಂದ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ನಡೆದ ಮೊದಲ ಪರೀಕ್ಷೆಯಲ್ಲಿ ಅಲ್ಪ ಪ್ರಮಾಣದ ಧನಾತ್ಮಕ ಅಂಶ ಕಂಡುಬಂದಿದೆ. ಝಿಕಾ ವೈರಸ್ ಅನ್ನು ಪತ್ತೆಹಚ್ಚಲು ಎನ್‌ಐವಿ ಅನ್ನು ಬಳಸಬಹುದು. ಮಾದರಿಗಳನ್ನು ಪುಣೆಗೆ ಕಳುಹಿಸಲಾಗಿದೆ. ಅದೇ ಸಮಯದಲ್ಲಿ,

ಕೇರಳದಲ್ಲಿ ‌ಕಾಣಿಸಿಕೊಳ್ತು ಮಾರಕ ಝಿಕಾ ವೈರಸ್ Read More »

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ

ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣು‌ಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ‌ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ

ದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.ಕಳೆದ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ Read More »

ಮೋದಿ ಸಂಪುಟ 2.0: ಯಾರಿಗೆ ಯಾವ ಖಾತೆ? ಇಲ್ಲಿದೆ ಡೀಟೈಲ್ ವರದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ನೂತನ 15 ಸಾರಥಿಗಳು ಸೇರ್ಪಡೆಯಾಗಿದ್ದಾರೆ. ಇಂತಹ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದರ ಡೀಟೈಲ್ ಇಲ್ಲಿದೆ. ಉನ್ನತ ವರದಿಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಮೇಲೆ ನಿಗಾ ಇಡಲಿದ್ದು, ಅಮಿತ್ ಶಾ ಅವರು ಗೃಹ ಸಚಿವಾಲಯದ ಜೊತೆಗೆ ಸಹಕಾರ ಸಚಿವಾಲಯದ ಮೇಲೆ ನಿಗಾ ಇಡಲಿದ್ದಾರೆ. ಮನ್ಸುಖ್ ಮಾಂಡವಿಯಾ ಅವರು ಕೇಂದ್ರ

ಮೋದಿ ಸಂಪುಟ 2.0: ಯಾರಿಗೆ ಯಾವ ಖಾತೆ? ಇಲ್ಲಿದೆ ಡೀಟೈಲ್ ವರದಿ Read More »

ಕೇಂದ್ರ ಸಂಪುಟಕ್ಕೆ ಇಂದು ಮೇಜರ್ ಸರ್ಜರಿ, ಹೊಸಬರಿಗೆ ಅವಕಾಶ, ಹಳೆಮುಖಗಳಿಗೆ ಕೊಕ್?

ನವದೆಹಲಿ(ಜು.07): ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ವಿಸ್ತರಣೆ/ ಪುನಾರಚನೆ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ನಿಗದಿಯಾಗಿದೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಮತ್ತು ಎನ್‌ಡಿಎ ಮಿತ್ರಪಕ್ಷಗಳ ಸಂಸದರಿಗೆ ಕೇಂದ್ರದ ಬಿಜೆಪಿ ನಾಯಕರಿಂದ ಕರೆ ಬಂದಿದ್ದು, ಅವರೆಲ್ಲಾ ಮಂಗಳವಾರವೇ ದೆಹಲಿಗೆ ದೌಡಾಯಿಸಿದ್ದಾರೆ. ಇದು 2019ರಲ್ಲಿ 2ನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಲಿರುವ ಮೊದಲ ಸಂಪುಟ ಬದಲಾವಣೆ ಪ್ರಕ್ರಿಯೆಯಾಗಲಿದೆ. ಕೇಂದ್ರ ಸಂಪುಟದಲ್ಲಿ 81 ಜನರಿಗೆ ಅವಕಾಶವಿದ್ದು,

ಕೇಂದ್ರ ಸಂಪುಟಕ್ಕೆ ಇಂದು ಮೇಜರ್ ಸರ್ಜರಿ, ಹೊಸಬರಿಗೆ ಅವಕಾಶ, ಹಳೆಮುಖಗಳಿಗೆ ಕೊಕ್? Read More »

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ

ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್‌ 11, 1922 ರಲ್ಲಿ ಜನಿಸಿದ್ದ ಮಹಮ್ಮದ್‌ ಯೂಸೂಫ್‌ ಖಾನ್‌ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್‌ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್‌ ಕುಮಾರ್‌ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು. ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್‌ ಕುಮಾರ್‌ ಇಂದು ಬಾರದ ಲೋಕಕ್ಕೆ

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ Read More »

ಲಸಿಕೆ ಹಾಕಿಸಿದ ಬಳಿಕ ಹೋಗಿದ್ದ ದೃಷ್ಟಿ ಮರಳಿ ಬಂತು! ಹೀಗೊಂದು ಪವಾಡವೇ?

ಮುಂಬೈ: ಕರೊನಾ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತೀಯ ಶಕ್ತಿ ಕಾಣಿಸಿಕೊಂಡಿದೆ ಎಂದಿರುವ ಅನೇಕರನ್ನು ನೀವು ನೋಡಿರುತ್ತೀರಿ. ಆದರೆ ವರ್ಷಗಳ ಹಿಂದೆ ಹೋಗಿದ್ದ ದೃಷ್ಟಿಯೇ ವಾಪಸು ಬಂದಿದೆ ಎಂದರೆ ನಂಬುತ್ತೀರಾ? ನಂಬಲೇ ಬೇಕು. ಏಕೆಂದರೆ ಅಂತದ್ದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ನಿವಾಸಿ ಮಥುರಾಬಾಯಿ ಬಿಡ್ವೆ(70)ಗೆ ಒಂಬತ್ತು ವರ್ಷಗಳ ಹಿಂದೆ ಎರಡೂ ಕಣ್ಣುಗಳ ದೃಷ್ಟಿ ಹೋಗಿತ್ತಂತೆ. ಆಕೆ ಜೂನ್ 26ರಂದು ಹತ್ತಿರದ ಕರೊನಾ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಶೀಲ್ಡ್ ಲಸಿಕೆಯ ಮೊದಲನೇ ಡೋಸೇಜ್ ಪಡೆದುಕೊಂಡು

ಲಸಿಕೆ ಹಾಕಿಸಿದ ಬಳಿಕ ಹೋಗಿದ್ದ ದೃಷ್ಟಿ ಮರಳಿ ಬಂತು! ಹೀಗೊಂದು ಪವಾಡವೇ? Read More »

ಬಹಿರ್ದೆಸೆಗೆ ಕುಳಿತವನ ಮರ್ಮಾಂಗಕ್ಕೆ ಕಚ್ಚಿದ ಹಾವು…!

ಕ್ಯಾನ್ಬೆರಾ: ಮುಂಜಾನೆ ನಿದ್ದೆಯಿಂದೆದ್ದು ಟಾಯ್ಲೆಟ್ ನಲ್ಲಿ ಬಹಿರ್ದೆಸೆಗೆ ಕುಳಿತವನ ಮರ್ಮಾಂಗಕ್ಕೆ ಹಾವು ಕಚ್ಚಿದ ಘಟನೆ ಆಸ್ಟ್ರೇಲಿಯಾ ದಲ್ಲಿ ನಡೆದಿದೆ. 65 ವರ್ಷದ ವೃದ್ಧರೊಬ್ಬರು ಬೆಳಿಗ್ಗೆ ನಿದ್ದೆಯಿಂದ ಎದ್ದು ಹಾಗೆ ಟಾಯ್ಲೆಟ್ ನಲ್ಲಿ ಹೋಗಿ ಕುಳಿತಿದ್ದಾರೆ. ಸ್ವಲ್ಪ ಸಮಯದಲ್ಲೇ ಅವರ ಮರ್ಮಾಂಗಕ್ಕೆ ಏನೋ ಕಚ್ಚಿದಂತಾಗಿದೆ. ಎದ್ದು ನೋಡಿದಾಗ ಶೌಚಾಲಯದ ಬೇಸಿನ್ ಒಳಗಡೆ ಹಾವು ಕಾಣಿಸಿಕೊಂಡಿದೆ. ಗಾಬರಿಗೊಂಡ ವೃದ್ಧ ಚೀರಿಕೊಂಡು ಹೊರಗೆ ಓಡಿದ್ದಾರೆ. ಬೊಬ್ಬೆ ಕೇಳಿ ಮನೆಯವರು ಮತ್ತು ಅಕ್ಕಪಕ್ಕದವರು ಓಡೋಡಿ ಬಂದಿದ್ದಾರೆ. ಹಾವನ್ನು ಹಿಡಿದಾಗ ಅದು ಪಕ್ಕದ ಮನೆ

ಬಹಿರ್ದೆಸೆಗೆ ಕುಳಿತವನ ಮರ್ಮಾಂಗಕ್ಕೆ ಕಚ್ಚಿದ ಹಾವು…! Read More »