ದೇಶ-ವಿದೇಶ

ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು

ಪುಣೆ: ಇಲ್ಲಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಬೆಂಕಿಯ ಕೆನ್ನಾಲಿಗೆ ಸಿಲುಕಿ 17 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮುಲ್ಶಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಎಸ್‌ಯುಎಸ್‌ ಅಕ್ವಾ ಟೆಕ್ನಾಲಜೀಸ್’ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, 15 ಮಹಿಳೆಯರು ಸೇರಿದಂತೆ 17 ಮಂದಿ ಮೃತಪಟ್ಟಿದ್ದಾರೆ ಹಾಗೂ ಸಣ್ಣಪುಟ್ಟ ಗಾಯಗೊಂಡ 20 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪುಣೆ ಜಿಲ್ಲಾಡಳಿತ ತಿಳಿಸಿದೆ.ಬೆಂಕಿ ನಂದಿಸಿ ಅವಶೇಷಗಳ ತೆರವು ಕಾರ್ಯಾಚರಣೆ ಮತ್ತು ಮೃತ ವ್ಯಕ್ತಿಗಳ ಗುರುತು ಪತ್ತೆ […]

ಪುಣೆ: ಕಾರ್ಖಾನೆಯಲ್ಲಿ ಅಗ್ನಿ ಅವಘಡ | 17 ಜನ ಮೃತ್ಯು Read More »

ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ

ನವದೆಹಲಿ: ಲಸಿಕೆ ಹಂಚಿಕೆಯಲ್ಲಿ ರಾಜ್ಯಗಳಿಗೆ ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ‌ ಮತ್ತೆ ಲಸಿಕಾ ನೀತಿಯಲ್ಲಿ ಯೂ ಟರ್ನ್ ಹೊಡೆದಿದೆ.ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಇದೇ 21ರಿಂದ ಕೇಂದ್ರ ಸರ್ಕಾರವೇ ಹದಿನೆಂಟು ವರ್ಷ ಮೀರಿದ ಎಲ್ಲರಿಗೂ ಉಚಿತ ಲಸಿಕೆ‌ ನೀಡುವುದಾಗಿ ಪ್ರಕಟಿಸಿದ್ದು, ರಾಜ್ಯಗಳಿಗೆ ಲಸಿಕೆ ಹಂಚುವ ಜವಾಬ್ದಾರಿಯನ್ನು ಕೇಂದ್ರವೇ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.ಕೊರೊನ ಎರಡನೇ ಅಲೆಯನ್ನು ಹತೋಟಿಗೆ ತರಲು ಕೇಂದ್ರ ಸರ್ಕಾರ ಶಕ್ತಿಮೀರಿ ಪ್ರಯತ್ನ ‌ನಡೆಸಿದೆ. ಅದಾಗ್ಯೂ ಹಲವು ಮಂದಿ ತಮ್ಮವರನ್ನು

ಲಸಿಕಾ ನೀತಿಯಲ್ಲಿ ಮತ್ತೆ ಯೂ ಟರ್ನ್ ಹೊಡೆದ ಕೇಂದ್ರ, ರಾಜ್ಯಗಳಿಗಿಲ್ಲ ಹೊಣೆಗಾರಿಕೆ Read More »

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು. ಮೋದಿ ಭಾಷಣದ ಸಾರಾಂಶವೇನು?:ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ Read More »

ಎರಡು ಮಕ್ಕಳ ತಾಯಿ, ಮಗನ ವಯಸ್ಸಿನ ಬಾಲಕನ ಜೊತೆ ಪರಾರಿ: ಕಾರಣ ನಿಗೂಢ

ಛತ್ತೀಸ್‌ಗಢ: ಇಲ್ಲಿನ ಕೋರಬಾದದಲ್ಲಿ 30 ವರ್ಷದ ಮಹಿಳೆಯೊಬ್ಬಳು ತನ್ನ ಮಗನ ಸಮನವಾದ 14 ವರ್ಷದ ಬಾಲಕನೊಂದಿಗೆ ಓಡಿ ಹೋದ ಘಡನೆ ನಡೆದಿದೆ. ಈ ಮಹಿಳೆಗೆ ಎರಡು ಮಕ್ಕಳಿದ್ದು ಈ ರೀತಿ ಪರಾರಿಯಾಗಿರುವುದು ಆತಂಕ ಉಂಟುಮಾಡಿದೆ. ಈಕೆಯ ಗಂಡ ಸರಕಾರಿ ನೌಕರನಾಗಿದ್ದ. ಈಕೆಗೆ ಅದೇ ಊರಿನ ಬಾಲಕನೊಂದಿಗೆ ಪ್ರೇಮಾಂಕುರಗೊಂಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರ ನಡುವೆ ಕುಚುಕು ಪ್ರೇಮ ಕೂಡ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಇವರಿಬ್ಬರ ನಡುವಿನ ಈ ವಿಚಿತ್ರ ಪ್ರೇಮ ದೈಹಿಕ ಸಂಪರ್ಕದವರೆಗೂ ತಲುಪಿತ್ತು. ಇದಕ್ಕೆ

ಎರಡು ಮಕ್ಕಳ ತಾಯಿ, ಮಗನ ವಯಸ್ಸಿನ ಬಾಲಕನ ಜೊತೆ ಪರಾರಿ: ಕಾರಣ ನಿಗೂಢ Read More »

ಆದಾಯ ತೆರಿಗೆ ಪಾವತಿದಾರರೇ ಇಲ್ಲಿ ಕೇಳಿ | ನಿಮಗೆ ಗೊತ್ತಿರಲಿ ಈ ೬ ವೈಶಿಷ್ಟ್ಯಗಳು

ನವದೆಹಲಿ: ಆದಾಯ ತೆರಿಗೆ ಇಲಾಖೆಯಿಂದ ಹೊಸ ಇ- ಫೈಲಿಂಗ್ ವೆಬ್ಸೈಟ್ incometax.gov.in – ಇಂದಿನಿOದ (ಜೂನ್ ೭, ೨೦೨೧) ಆರಂಭವಾಗಲಿದೆ. ಎಲ್ಲ ಬಗೆಯಲ್ಲೂ ಹೊಸದಾದ ಮೊಬೈಲ್ ಆ್ಯಪ್, ಪ್ರೀ ಫಿಲ್ಡ್ (ಅದಾಗಲೇ ಭರ್ತಿ ಮಾಡಿದ) ಆದಾಯ ತೆರಿಗೆ ಮಾಹಿತಿ, ಐಟಿಆರ್ ಫಾರ್ಮ್ ಮತ್ತು ಸರಳ ಆದಾಯ ತೆರಿಗೆ ವ್ಯವಸ್ಥೆ ಇವೆಲ್ಲವೂ ಹೊಸ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಲಭ್ಯವಿದೆ. ಇ- ಫೈಲಿಂಗ್ ಪೋರ್ಟಲ್ ೨.೦ ಮೂಲಕ ತೆರಿಗೆ ಪಾವತಿದಾರರಿಗೆ ಆಧುನಿಕವಾದ, ಅಡೆತಡೆ ಇಲ್ಲದಂಥ ಅನುಭವವನ್ನು ದೊರಕಿಸುತ್ತದೆ. ಹಲವು ಬಗೆಯಲ್ಲಿ ತಾಂತ್ರಿಕ

ಆದಾಯ ತೆರಿಗೆ ಪಾವತಿದಾರರೇ ಇಲ್ಲಿ ಕೇಳಿ | ನಿಮಗೆ ಗೊತ್ತಿರಲಿ ಈ ೬ ವೈಶಿಷ್ಟ್ಯಗಳು Read More »

ಪಾಕಿಸ್ತಾನದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ:30ಕ್ಕೂ ಹೆಚ್ಚು ಸಾವು

ಗೊಡ್ಕಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗೊಡ್ಕಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ರೈಲುಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವತ್ತಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಸಿಂಧ್ ಪ್ರಾಂತ್ಯದ ರೆಟಿ ಮತ್ತು ದಹರ್ಕಿ ರೈಲು ನಿಲ್ಧಾಣದ ಮಧ್ಯೆ, ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಮತ್ತು ಮಿಲ್ಲಟ್ ಎಕ್ಸ್ ಪ್ರೆಸ್ ಮಧ್ಯೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ. ಲಾಹೋರ್ ನಿಂದ ಹೊರಟಿದ್ದ ಸರ್ ಸೈಯದ್ ಎಕ್ಸ್ ಪ್ರೆಸ್ ರೈಲು ಅದು ತೆರಳಬೇಕಿದ್ದ ಹಳಿ ತಪ್ಪಿ ತೆರಳಿದ್ದು

ಪಾಕಿಸ್ತಾನದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ:30ಕ್ಕೂ ಹೆಚ್ಚು ಸಾವು Read More »

ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆ ಹಿಮ್ಮೆಟ್ಟಲು ಕಳೆದೊಂದು ತಿಂಗಳಿನಿಂದ ರಾಷ್ಟ್ರವ್ಯಾಪಿ ಲಾಕ್ಡೌನ್ ಮಾಡಲಾಗಿತ್ತು. ಇದೀಗ ಹಲವು ರಾಜ್ಯಗಳಲ್ಲಿ ಹಂತಹಂತವಾಗಿ ಲಾಕ್ಡೌನ್ ತೆರವುಗೊಳಿಸಲಾಗುತ್ತಿದೆ. ಅದಲ್ಲದೆ ರಾಷ್ಟ್ರಾದಾದ್ಯಂತ ಕೊರೋನ ವ್ಯಾಕ್ಸಿನ್ ಚುಚ್ಚು ಮದ್ದು ಹಂತಹಂತವಾಗಿ ನೀಡಲಾಗುತ್ತಿದೆ. ಅದರಂತೆ ಕೋವಿಡ್ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಇನ್ನು ಮುಂದಿನ ನಡೆಯ ಬಗ್ಗೆ ದೇಶದ

ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಭಾಷಣ Read More »

ಕೊರೊನಾ ರೋಗದ ಬೆನ್ನಲ್ಲೇ ಮತ್ತೊಂದು ನಿಗೂಢ ರೋಗ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಕೆನಡಾ: ಕೊರೊನಾ ರೋಗದ ಬೆನ್ನಲ್ಲೇ ಮತ್ತೊಂದು ರೋಗದ ಲಕ್ಷಣದ ೪೮ ಪ್ರಕರಣಗಳು ಪತ್ತೆಯಾಗಿದ್ದು, ಕೆನಡಾದ ಜನತೆಯಲ್ಲಿ ಆತಂಕದ ಹೆಚ್ಚಾಗಿದೆ. ಇದೊಂದು ಮೆದುಳಿನ ಕಾಯಿಲೆಯಾಗಿದ್ದು, ಇದರಲ್ಲಿ ನಿದ್ರಾಹೀನತೆ, ಅಂಗಗಳ ಅಸಾಮಾನ್ಯ ಕ್ರಿಯೆ ಮತ್ತು ಭ್ರಮೆ ಲಕ್ಷಣ ಕಂಡುಬರುತ್ತಿದೆ ಎಂದು ಹೇಳಲಾಗಿದೆ. ಕೆನಡಾದ ನ್ಯೂ ಬ್ರನ್ಸ್ ವಿಕ್‌ನಲ್ಲಿ ೪೮ ರೋಗಿಗಳು: ನ್ಯೂಯಾರ್ಕ್ ಟೈಮ್ಸ್ ವರದಿಯ ಪ್ರಕಾರ, ಈ ನಿಗೂಢ ಕಾಯಿಲೆಯವರು ಕೆನಡಾ ಪ್ರಾಂತ್ಯದ ಬ್ರನ್ಸ್ ವಿಕ್‌ನಲ್ಲಿ ಅಟ್ಲಾಂಟಿಕ್ ಕರಾವಳಿಯ ಪ್ರದೇಶದಲ್ಲಿ ಕಂಡುಬಂದಿದ್ದಾರೆ. ರೋಗಿಗಳು ತಮ್ಮ ಕನಸಿನಲ್ಲಿ ಮೃತದೇಹಗಳನ್ನು, ಸತ್ತ ಜನರನ್ನು

ಕೊರೊನಾ ರೋಗದ ಬೆನ್ನಲ್ಲೇ ಮತ್ತೊಂದು ನಿಗೂಢ ರೋಗ ಪತ್ತೆ: ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಕಾಸರಗೋಡು: ಸಾವಿನ ಸಂಖ್ಯೆ 500 ದಾಟಿದರೂ ಲೆಕ್ಕ ಮಾತ್ರ 154 ಮೀರಿಲ್ಲ

ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ ಐನೂರು ದಾಟಿದ್ದು ಆರೋಗ್ಯ ಇಲಾಖೆ ದಾಖಲೆಗಳಲ್ಲಿ ಮಾತ್ರ 154 ದಾಟಿಲ್ಲ. ಆಸ್ಪತ್ರೆಗಳು ಕೊರೊನಾದಿಂದ ಸಾವು ಸಂಭವಿಸಿದೆ ಎಂದರು ಆರೋಗ್ಯ ಇಲಾಖೆ ಮಾತ್ರ ಅದನ್ನು ಅಲ್ಲಗಳೆದಿದೆ. ಇನ್ನು ಕೋವಿಡ್ ನಿಂದ ಸಾವು ಸಂಭವಿಸಿದಾಗ ಅದನ್ನು ದಾಖಲೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದ ಕೆಲವು ನಿಬಂಧನೆಗಳಿವೆ. ಅದಕ್ಕನುಗುಣವಾಗಿ ಸಾವಿನ ಸಂಖ್ಯೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದ್ದು ಇನ್ನು ಸರಕಾರ ಕೈಗೊಂಡ ನಿಬಂಧನೆಗಳಲ್ಲಿರುವ ಕುಂದುಕೊರತೆಗಳಿಂದಾಗಿ ಈ ದಾಖಲೆಗಳಲ್ಲಿ ಕೊರತೆ ಉಂಟಾಗಿದೆ

ಕಾಸರಗೋಡು: ಸಾವಿನ ಸಂಖ್ಯೆ 500 ದಾಟಿದರೂ ಲೆಕ್ಕ ಮಾತ್ರ 154 ಮೀರಿಲ್ಲ Read More »

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು

ಕೊಲಂಬೊ:ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 2,45,000 ಜನರು ಹಾನಿಗೊಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲ್ಲಲ್ಪಟ್ಟ 14 ಜನರಲ್ಲಿ, ಐದು ಸಾವುಗಳು ರಾಜಧಾನಿ ಕೊಲಂಬೊದಿಂದ 88 ಕಿಲೋಮೀಟರ್ ದೂರದಲ್ಲಿರುವ ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಡಿಎಂಸಿ ಅಂಕಿಅಂಶಗಳ ಪ್ರಕಾರ, 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು Read More »