ದೇಶ-ವಿದೇಶ

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ದೆಹಲಿ : ಕೊರೋನಾ ಸೋಂಕಿನ ನಂತರ ಉಂಟಾದಂತ ತೊಂದರೆಯಿಂದಾಗಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ನಿಶಾಂಕ್ ಅವರು, ಅನಾರೋಗ್ಯಕ್ಕೆ ಒಳಗಾಗಿ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ದೆಹಲಿಯ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕೋವಿಡ್-19 ರ ನಂತರದ ತೊಡಕುಗಳಿಂದಾಗಿ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ಮಂಗಳವಾರ ಏಮ್ಸ್ ಗೆ ದಾಖಲಿಸಲಾಗಿದೆ, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.ಸಚಿವ ರಮೇಶ್ ಪೋಖ್ರಿಯಾಳ್ ಇತ್ತೀಚೆಗೆ ಕೊರೋನಾ […]

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಳ್ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು Read More »

‘ತಂಬಾಕಿಗೆ ಹೇಳಬೇಕು ನೀನಿನ್ನು ಸಾಕು’ ತಂಬಾಕಿನ ವಿಷಪಾನದಿಂದ ಮುಕ್ತರಾಗೋಣ

ಮೇ 31 ವಿಶ್ವ ತಂಬಾಕು ರಹಿತ ದಿನ. ‘ಜೀವನ ಜಯಿಸಲು ತಂಬಾಕು ತ್ಯಜಿಸಿ’ (quit tobacco to be a winner) ಈ ಬಾರಿಯ ಘೋಷವಾಕ್ಯ. ಹಿಂದೆಂದಿಗಿಂತಲೂ ಈ ಬಾರಿಯ ಘೋಷವಾಕ್ಯ ಹೆಚ್ಚು ಅರ್ಥಪೂರ್ಣವಾಗಿದೆ. ಇಂದಿನ ಕೋವಿಡ್‌ ಸನ್ನಿವೇಶದಲ್ಲಿ ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಮುಕ್ತಿ ಪಡೆಯುವುದು ಬಹಳ ಅಗತ್ಯ ಮತ್ತು ಅನಿವಾರ್ಯ ಕ್ರಮವಾಗಿದೆ ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆ. ಅಷ್ಟೆ ಅಲ್ಲ, ಧೂಮಪಾನ ಮತ್ತು ತಂಬಾಕು ಸೇವನೆಯನ್ನು ತ್ಯಜಿಸಲು ನೂರಾರು ಕಾರಣ, ಅಂತಹ ಹಲವು ಕಾರಣಗಳನ್ನು

‘ತಂಬಾಕಿಗೆ ಹೇಳಬೇಕು ನೀನಿನ್ನು ಸಾಕು’ ತಂಬಾಕಿನ ವಿಷಪಾನದಿಂದ ಮುಕ್ತರಾಗೋಣ Read More »

ಕೊರೋನಾದಿಂದ ರಕ್ಷಿಸಿಕೊಳ್ಳಲು ಬೈಕಿಗೆ ಬಬಲ್ | ಇಲ್ಲಿದೆ ವೈರಲ್ ವೀಡಿಯೋ

ನವದೆಹಲಿ: ಕರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಅನೇಕ ರೀತಿಯ ಪ್ಲ್ಯಾನ್‌ ಮಾಡುವಲ್ಲಿ ಕೆಲವರು ನಿರತರಾಗಿದ್ದಾರೆ. ಅಂಥದ್ದೇ ಒಂದು ಕುತೂಹಲ ಎನ್ನುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಎಲ್ಲರ ಮನಸ್ಸನ್ನು ಗೆದ್ದಿದೆ. ವೈರಸ್‌ನಿಂದ ರಕ್ಷಿಸಿಕೊಳ್ಳಲು ವ್ಯಕ್ತಿಯೊಬ್ಬ ಬೈಕ್‌ಗೆ ಟಾರ್ಪಲ್ ಮಾದರಿ ವೈಟ್‌ಶೀಟ್‌ ಹಾಕಿದ್ದಾನೆ. ಇಡೀ ಬೈಕ್‌ ಅನ್ನು ಇದರಿಂದ ಮುಚ್ಚಿದ್ದಾನೆ. ವ್ಯಕ್ತಿಯು ಬೈಕ್‍ನಲ್ಲಿ ಕಬ್ಬಿಣದ ರಾಡ್‍ಗಳನ್ನು ಬೈಕ್ ಸುತ್ತಲೂ ಅಳವಡಿಸಿದ್ದು, ಅದಕ್ಕೆ ಬಿಳಿ ಪ್ಲಾಸ್ಟಿಕ್ ಶೀಟ್‍ ಹೊದಿಸಿದ್ದಾನೆ. ಇದನ್ನು ಗುಳ್ಳೆ ಆಕಾರದಲ್ಲಿ ಇರುವ ಕಾರಣ ಬಬಲ್‌ ಮಾದರಿ

ಕೊರೋನಾದಿಂದ ರಕ್ಷಿಸಿಕೊಳ್ಳಲು ಬೈಕಿಗೆ ಬಬಲ್ | ಇಲ್ಲಿದೆ ವೈರಲ್ ವೀಡಿಯೋ Read More »

ನೈಟ್ರೋಜನ್ ಆಕ್ಸೈಡ್ ಲೀಕೇಜ್ ಪರಿಣಾಮ: ಆ್ಯಸಿಡ್ ಮಳೆ ಭೀತಿಯಲ್ಲಿ ಕೊಲಂಬೋ

ಕೊಲಂಬೋ,ಮೇ.29-ಕಳೆದ ವಾರ ಕೊಲಂಬೊ ಸಮುದ್ರ ತೀರದಲ್ಲಿ ಸಿಂಗಾಪೂರ್ ನ ಸರಕು ಸಾಗಾಣೆ ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನೈಟ್ರೋಜನ್ ಡೈ ಆಕ್ಸೆಡ್ ಹೊರಸೂಸಿರುವುದರಿಂದ ಸಮೀಪದ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದ ಆಸಿಡ್ ಮಳೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹೀಗಾಗಿ ಕೊಲಂಬೊ ಸುತ್ತಮುತ್ತಲಿನ ಜನ ಎಚ್ಚರಿಕೆ ವಹಿಸಬೇಕು ಎಂದು ಶ್ರೀಲಂಕಾ ಪರಿಸರ ಇಲಾಖೆ ಕರೆ ನೀಡಿದೆ.ಗುಜರಾತ್‍ನ ಹಜೀರಾದಿಂದ ಕೆಮಿಕಲ್ ಹಾಗೂ ಕಾಸ್ಮೇಟಿಕ್ ಕಚ್ಚಾ ವಸ್ತುಗಳನ್ನು ಕೊಲಂಬೊ ತರುತ್ತಿದ್ದ ಸಿಂಗಾಪೂರ್‍ನ ಎಂವಿ ಎಕ್ಸ್‍ಪ್ರೆಸ್ ಪರ್ಲ್ ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಹಡಗಿನ ಟ್ಯಾಂಕಿನಲ್ಲಿ

ನೈಟ್ರೋಜನ್ ಆಕ್ಸೈಡ್ ಲೀಕೇಜ್ ಪರಿಣಾಮ: ಆ್ಯಸಿಡ್ ಮಳೆ ಭೀತಿಯಲ್ಲಿ ಕೊಲಂಬೋ Read More »

ಅವಳು ಸರ್ಜರಿ ಮಾಡಿಸಿಕೊಂಡು ಅವನಾಗಲು ಕಾರಣವೇನು..!?

ಅಮೆರಿಕ: ಈಗಿನ ಕಾಲದಲ್ಲಿ ಹಣವಿದ್ದರೆ ಎಲ್ಲವೂ ಸಾಧ್ಯವಿದೆ ಎಂಬ ಮಾತೊಂದು ಹಳ್ಳಿಗಳಲ್ಲಿದೆ. ಈ ಮಾತಿಗೆ ಪೂರಕವಾದಂತಹ ಘಟನೆಯೊಂದು ಅಮೆರಿಕದಲ್ಲಿ ನಡೆದಿದೆ. ಸಿನಿಮಾ ನಟಿಯೊಬ್ಬಳು ಶಸ್ತ್ರಚಿಕಿತ್ಸೆಗೊಳಪಟ್ಟು ನಟನಾಗಿ ಬದಲಾದ ಘಟನೆ ನಡೆದಿದೆ. ಕೇಳಲು ಅಚ್ಚರಿಯೆನಿಸಿದರೂ ಇದು ಅಕ್ಷರಶಃ ಸತ್ಯ. ಹೌದು, ಹಾಲಿವುಡ್ ನಟಿ ಎಲೆನ್ ಈಗ ಸರ್ಜರಿ ಮಾಡಿಸಿಕೊಂಡು ಹುಡುಗನಾಗಿ ಬದಲಾಗಿದ್ದಾರೆ. ಅಷ್ಟೇ ಅಲ್ಲದೆ ಎಲೆನ್ ಸಿಕ್ಸ್ ಪ್ಯಾಕ್ ಮಾಡಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ಸೆಪ್ಷನ್ ಮತ್ತು ಜುನೋ ಚಿತ್ರಗಳಲ್ಲಿ ನಟಿಸಿ ಖ್ಯಾತಿ

ಅವಳು ಸರ್ಜರಿ ಮಾಡಿಸಿಕೊಂಡು ಅವನಾಗಲು ಕಾರಣವೇನು..!? Read More »

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ

ನವದೆಹಲಿ: ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆದ ಹೆಚ್ ಡಿ ಎಫ್ ಸಿ  ಸಂಸ್ಥೆಗೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) 10 ಕೋಟಿ ರೂ.ಗಳ ದಂಡ ವಿಧಿಸಿದೆ. 1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ದಂಡವನ್ನು ವಿಧಿಸಲಾಗಿದೆ. ಬ್ಯಾಂಕಿನ ಥರ್ಡ್‌ ಪಾರ್ಟಿ ನಾನ್‌-ಫಿನಾನ್ಶಿಯಲ್‌ ಉತ್ಪನ್ನಗಳ ಮಾರ್ಕೆಟಿಂಗ್‌ ವಿಭಾಗದಲ್ಲಿ ಕೆಲವಾರು ಲೋಪಗಳಾಗಿರುವ ಬಗ್ಗೆ ದೂರುಗಳು ಬಂದಿದ್ದವು. ಬ್ಯಾಂಕಿನ ಆಟೊಮೊಬೈಲ್‌ ಸಾಲ ನೀಡುವಿಕೆಯಲ್ಲಿ ಕೆಲವಾರು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಕಾರಣದಿಂದಾಗಿ

HDFC ಬ್ಯಾಂಕ್ ಮೇಲೆ 10 ಕೋಟಿ ದಂಡ ವಿಧಿಸಿದ ಆರ್‌ಬಿಐ Read More »

ಕೊರೋನಾಗೆ ಬಲಿಯಾದವರ ಸಂಖ್ಯೆ ಬರೋಬ್ಬರಿ 80 ಲಕ್ಷ…..!? | ಸಾವಿನಲ್ಲೂ ತಪ್ಪು ಅಂಕಿ-ಅಂಶ ನೀಡುತ್ತಿವೆ ರಾಷ್ಟ್ರಗಳು : WHO

ಸಾವಿನ ಲೆಕ್ಕಾಚಾರದಲ್ಲೂ ರಾಷ್ಟ್ರಗಳು ತಪ್ಪು ಲೆಕ್ಕಾಚಾರ ಕೊಡುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥ ಶಂಕೆ ವ್ಯಕ್ತಪಡಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಸಾವಿಗೀಡಾಗಿರುವ ಜನರ ಅಂಕಿ-ಸಂಖ್ಯೆಯ ಕುರಿತು ನೀಡಲಾಗುತ್ತಿರುವ ಅಧಿಕೃತ ಸಾವಿನ ಪ್ರಮಾಣವನ್ನು ವಾಸ್ತವಕ್ಕಿಂತ ಗಮನಾರ್ಹವಾಗಿ ತಗ್ಗಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯಪಟ್ಟಿದೆ. ಅಂದಾಜು 80 ಲಕ್ಷಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವ ಸಾಧ್ಯತೆ ಇದ್ದು, ನೀಡಲಾದ ಮಾಹಿತಿ ಅದರ ಶೇಖಡಾ 50 ಕ್ಕಿಂತಲೂ ಕಡಿಮೆ ಇದೆ ಎಂದಿದೆ. ಕಳೆದೊಂದು ವರ್ಷದ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡ ಕೋವಿಡ್-19

ಕೊರೋನಾಗೆ ಬಲಿಯಾದವರ ಸಂಖ್ಯೆ ಬರೋಬ್ಬರಿ 80 ಲಕ್ಷ…..!? | ಸಾವಿನಲ್ಲೂ ತಪ್ಪು ಅಂಕಿ-ಅಂಶ ನೀಡುತ್ತಿವೆ ರಾಷ್ಟ್ರಗಳು : WHO Read More »

ಗರಿಷ್ಠ 150 ವರ್ಷಗಳವರೆಗೂ ಮಾನವನು ಬದುಕಬಲ್ಲನು !

ನ್ಯೂಯಾರ್ಕ್: ಮಾನವನ ಆಯುಷ್ಯದ ಮೇಲೆ ನಿರಂತರ ಸಂಶೋಧನೆಗಳು ನಡೆಯುತ್ತಲೇ ಬಂದಿದೆ. ಇದೀಗ ಮಾನವನ ಜೀವಿತಾವಧಿಯ ಮೇಲೆ ನಡೆದ ಸಂಶೋಧನೆಯು ಮಾನವನ ಜೀವಿತಾವಧಿ ಗರಿಷ್ಠ 120-150 ವರ್ಷ ಎಂದು ತಿಳಿಸಿದೆ. ನೇಚರ್ ಕಮ್ಯೂನಿಕೇಷನ್‌ ಜರ್ನಲ್‌ನಲ್ಲಿ ಮಾನವ ಕ್ಯಾನ್ಸರ್, ಹೃದ್ರೋಗ ಅಥವಾ ಅಪಘಾತಗಳಿಂದ ಸಾಯದೇ ಉಳಿದರೆ 120-150ವರ್ಷಗಳ ಕಾಲ ಬದುಕಬಹುದು ಎಂದು ವರದಿಯಾಗಿದೆ.ಮನುಷ್ಯನ ವಯಸ್ಸಾಗುವ ವೇಗವು ಆತನ ಜೀವಾತಾವಧಿಯನ್ನು ನಿರ್ಧರಿಸುತ್ತದೆ.‌ವಯಸ್ಸಾದಂತೆ ದೇಹದ ಚಟುವಟಿಗಳಿಗೆ ರಕ್ತಕಣಗಳು ಸ್ಪಂದಿಸುವ ಸಾಮರ್ಥ್ಯ ಕಡಿಮೆಯಾಗುತ್ತದೆ. ವಯಸ್ಸಾದ ವ್ಯಕ್ತಿಯ ಚೇತರಿಕೆಗೆ ಅಧಿಕ ಸಮಯ ಬೇಕಾಗುತ್ತದೆ. ಆದರೆ, ಮನುಷ್ಯನ

ಗರಿಷ್ಠ 150 ವರ್ಷಗಳವರೆಗೂ ಮಾನವನು ಬದುಕಬಲ್ಲನು ! Read More »

ಕೊಲೆ‌ ಪ್ರಕರಣ: ಒಲಿಂಪಿಯನ್ ಸುಶೀಲ್ ಕುಮಾರ್‌ ಅರೆಸ್ಟ್

ನವದೆಹಲಿ.ಮೇ.23: ಕಿರಿಯ ಕುಸ್ತಿಪಟು ಸಾಗರ್ ರಾಣಾ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಒಲಿಂಪಿಯನ್ ಹಿರಿಯ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸುಶೀಲ್ ಕುಮಾರ್ ಪಂಜಾಬ್ ನಲ್ಲಿರುವ ಸುಳಿವು ಪಡೆದುಕೊಂಡ ದೆಹಲಿ ಪೊಲೀಸರು, ಹಿರಿಯ ಕುಸ್ತಿಪಟು ಹಾಗೂ ಆತನ ಮತ್ತೊಬ್ಬ ಶಂಕಿತ ಸಹಚರ ಅಜಯ್ ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ. ಸಾಗರ್ ರಾಣಾ ಕೊಲೆ ಪ್ರಕರಣದ ತನಿಖೆಗಾಗಿ ಪೊಲೀಸರು ಅವರನ್ನು ಟ್ರಾನ್ಸಿಟ್ ವಾರೆಂಟ್ ಪಡೆದು ದೆಹಲಿಗೆ ಕರೆದೊಯ್ದಿದ್ದಾರೆ.ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಮೇ 4 ರಂದು ಸಾಗರ್ ರಾಣಾ

ಕೊಲೆ‌ ಪ್ರಕರಣ: ಒಲಿಂಪಿಯನ್ ಸುಶೀಲ್ ಕುಮಾರ್‌ ಅರೆಸ್ಟ್ Read More »

ಸದ್ಯದಲ್ಲೆ ಬಳಕೆಗೆ ಸಿಗಲಿದೆ ಕೊವಿಸೆಲ್ಫ್ ಟೆಸ್ಟಿಂಗ್ ಕಿಟ್, ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಕೋವಿಡ್ ಟೆಸ್ಟ್ ಮಾಡಿಕೊಳ್ಳಬಹುದು

ನವದೆಹಲಿ: ಮನೆಯಲ್ಲೇ ಕುಳಿತು ಸ್ವತಃ ಶಂಕಿತ ವ್ಯಕ್ತಿಗಳೇ ಕೋವಿಡ್ ಟೆಸ್ಟ್ ಮಾಡಿಕೊಳ್ಳುವ ಕೊವಿ-ಸೆಲ್ಫ್ ಎಂಬ ಟೆಸ್ಟಿಂಗ್ ಕಿಟ್ ಇನ್ನೇನು ಹೊರಬರಲಿದೆ. ಇದೊಂದು ರಾಪಿಡ್ ಆಂಟಿಜನ್ ಮಾದರಿ ಪರೀಕ್ಷಾ ಸಾಧನವಾಗಿದ್ದು, ಇದರ ಬಳಕೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಒಪ್ಪಿಗೆ ಸೂಚಿಸಿದೆ. ಈ ಟೆಸ್ಟಿಂಗ್ ಕಿಟ್, ಬಳಕೆದಾರರ ಮಾಹಿತಿ ಚೀಟಿ, ಫ್ರೀ-ಫೀಲ್ಡ್ ಎಕ್ಸ್ಟ್ರಾಕ್ಷನ್ ಟ್ಯೂಬ್, ಟೆಸ್ಟಿಂಗ್ ಸ್ಟ್ರಿಪ್, ತ್ಯಾಜ್ಯ ಬಿಸಾಡಲು ಪುಟ್ಟ ಪ್ಲಾಸ್ಟಿಕ್ ಅನ್ನು ಒಳಗೊಂಡಿದೆ. ಇದರ ಉಪಯೋಗದಿಂದ ಕೇವಲ 15 ನಿಮಿಷಗಳಲ್ಲಿ ಫಲಿತಾಂಶ ಪಡೆಯಬಹುದು. ಮನೆಯಲ್ಲಿ ಕುಳಿತು

ಸದ್ಯದಲ್ಲೆ ಬಳಕೆಗೆ ಸಿಗಲಿದೆ ಕೊವಿಸೆಲ್ಫ್ ಟೆಸ್ಟಿಂಗ್ ಕಿಟ್, ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಕೋವಿಡ್ ಟೆಸ್ಟ್ ಮಾಡಿಕೊಳ್ಳಬಹುದು Read More »