ದೇಶ-ವಿದೇಶ

ಇಂದು(ನ.05) ಅಮೇರಿಕಾದ ಅಧ್ಯಕ್ಷೀಯ ಚುನಾವಣೆ| ಕಮಲಾ ಹ್ಯಾರೀಸ್- ಟ್ರಂಪ್ ಮಧ್ಯೆ ತೀವ್ರ ಹಣಾಹಣಿ

ಸಮಗ್ರ ನ್ಯೂಸ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಮಂಗಳವಾರ (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಅಮೆರಿಕದ ಜನಗಣತಿ ಬ್ಯೂರೊ ಪ್ರಕಾರ, 15.5 ಕೋಟಿ ಅಮೆರಿಕನ್ನರು ಮತದಾನ ಮಾಡಲು ಅರ್ಹರಾಗಿದ್ದಾರೆ. ನವೆಂಬರ್‌ 2ರವರೆಗೆ 7.5 ಕೋಟಿಗೂ ಹೆಚ್ಚು ಮಂದಿ ಆನ್‌ಲೈನ್‌ (ಮೇಲ್‌-ಇನ್‌ ವೋಟಿಂಗ್) ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಫ್ಲಾರಿಡಾ […]

ಇಂದು(ನ.05) ಅಮೇರಿಕಾದ ಅಧ್ಯಕ್ಷೀಯ ಚುನಾವಣೆ| ಕಮಲಾ ಹ್ಯಾರೀಸ್- ಟ್ರಂಪ್ ಮಧ್ಯೆ ತೀವ್ರ ಹಣಾಹಣಿ Read More »

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬ‌ರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಟಿಪ್ಪಣಿ ಹೊರಡಿಸಿ ಸೂಚನೆ ನೀಡಿದ್ದಾರೆ.

ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಕನ್ನಡ ರಾಜ್ಯೋತ್ಸವ’ ಆಚರಣೆ ಕಡ್ಡಾಯ Read More »

ಅಬ್ಬಾ…. ಬಂಗಾರ ಮತ್ತಷ್ಟು ಭಾರ| ಗಗನ ಕುಸುಮವಾದ ಹಳದಿ ಲೋಹ| ಸಾರ್ವಕಾಲಿಕ ದರ ದಾಖಲಿಸಿದ ಚಿನ್ನ

ಸಮಗ್ರ ನ್ಯೂಸ್: ಆಭರಣ ತಯಾರಕರು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಧಂತೇರಸ್’ಗೆ ಭಾರಿ ಬೇಡಿಕೆ ಇರುವುದರಿಂದ ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 300 ರೂಪಾಯಿ ಏರಿಕೆಯಾಗಿದ್ದು, 81,400 ರೂ.ಗೆ ಏರಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್ ವರದಿ ಮಾಡಿದೆ. ಕೈಗಾರಿಕಾ ಘಟಕಗಳು ಮತ್ತು ನಾಣ್ಯ ತಯಾರಕರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಬೆಳ್ಳಿ ಪ್ರತಿ ಕೆ.ಜಿ.ಗೆ 200 ರೂಪಾಯಿ ಏರಿಕೆ ಕಂಡು 99,700 ರೂ.ಗೆ ಏರಿದೆ. ಇದು ಸೋಮವಾರ ಪ್ರತಿ ಕೆ.ಜಿ.ಗೆ 99,500 ರೂ.ಗೆ ಕೊನೆಗೊಂಡಿತ್ತು.

ಅಬ್ಬಾ…. ಬಂಗಾರ ಮತ್ತಷ್ಟು ಭಾರ| ಗಗನ ಕುಸುಮವಾದ ಹಳದಿ ಲೋಹ| ಸಾರ್ವಕಾಲಿಕ ದರ ದಾಖಲಿಸಿದ ಚಿನ್ನ Read More »

ಕನ್ನಡ ರಾಜ್ಯೋತ್ಸವದಂದು `ಕರಾಳ ದಿನ’ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ.!

ಸಮಗ್ರ ನ್ಯೂಸ್: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿದೆ. ಸಂಘಟನೆಯ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಮಾತನಾಡಿ, ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರ್ಧಾರಿಸಿದೆ. ನವೆಂಬರ್ 1ರ ರಾಜ್ಯೋತ್ಸವದಂದು ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸಲಿದ್ದಾರೆ. ಶಾಲೆಗಳಿಗೆ ಮಾನ್ಯತೆ ನವೀಕರಣ, ಆರ್‌ಟಿಇಗೆ ಚಾಲನೆ,

ಕನ್ನಡ ರಾಜ್ಯೋತ್ಸವದಂದು `ಕರಾಳ ದಿನ’ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ.! Read More »

ಭಾರತದಲ್ಲಿ ಇನ್ಮುಂದೆ ನಗದು ಕರೆನ್ಸಿ ಇರೋದಿಲ್ಲ| ಸ್ಪೋಟಕ ಮಾಹಿತಿ ನೀಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ಸಮಗ್ರ ನ್ಯೂಸ್: ಭಾರತ ಮತ್ತೊಂದು ಹಂತದ ಬದಲಾವಣೆಗೆ ತೆರೆದುಕೊಳ್ಳುತ್ತಿದೆ. ಇದು ಜಗತ್ತನ್ನೇ ಬೆರಗಾಗಿಸುವ ಹಾಗೂ ಅನುಸರಿಸುವ ಬದಲಾವಣೆ. ಹೌದು, ಭಾರತದಲ್ಲಿ ಇನ್ನು ನಗದು ಹಣ ಇರುವುದಿಲ್ಲ. ಆರ್‌ಬಿಐ ನೋಟು ಪ್ರಿಂಟ್ ಮಾಡುವ ಪ್ರಮೇಯವೂ ಇಲ್ಲ. ಯಾರ ಬಳಿಯೂ ನಗದು ಹಣ ಇರಲ್ಲ, ವ್ಯವಹಾರವೂ ಇರುವುದಿಲ್ಲ. ಏನಿದ್ದರೂ ಡಿಜಿಟಲ್ ಕರೆನ್ಸಿ ಮಾತ್ರ. ಈ ಮಾತನ್ನು ಭಾರತದ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಕೋಲ್ಕತಾದಲ್ಲಿ ನಡೆದ ವಾರ್ಷಿಕ ಜಿ30 ಅಂತಾರಾಷ್ಟ್ರೀಯ ಬ್ಯಾಂಕಿಂಗ್ ಸೆಮಿನಾರ್‌ನಲ್ಲಿ ಮಾತನಾಡಿದ ಶಕ್ತಿಕಾಂತ ದಾಸ್

ಭಾರತದಲ್ಲಿ ಇನ್ಮುಂದೆ ನಗದು ಕರೆನ್ಸಿ ಇರೋದಿಲ್ಲ| ಸ್ಪೋಟಕ ಮಾಹಿತಿ ನೀಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ Read More »

ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿ ಹೆಡೆ ಬಿಚ್ಚಿದ ಮರಿ ನಾಗರಾಜ

ಸಮಗ್ರ ನ್ಯೂಸ್: ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿದ ನಾಗರ ಹಾವು ಹೆಡೆ ಬಿಚ್ಚಿದ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ ವಿದ್ಯಾಭ್ಯಾಸದಲ್ಲಿ ಮಗ್ನ ವಾಗಿರುವ ಸಂದರ್ಭ ಏಕಾಏಕಿ ನಾಗರಹಾವಿನ ಮರಿಯೊಂದು ಕ್ಲಾಸ್ ರೂಂ ಗೆ ನುಗ್ಗಿದೆ.ಬಳಿಕ ಉರಗ ತಜ್ಞರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ತೇಜಸ್ ನಾಗರಹಾವಿನ ಮರಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿ ಹೆಡೆ ಬಿಚ್ಚಿದ ಮರಿ ನಾಗರಾಜ Read More »

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಂಡಿದೆ. ಪ್ರಚಂಡ ಮಳೆ ಹಾಗೂ ಭಾರೀ ಬಿರುಗಾಳಿಯಿಂದಾಗಿ ರಾಜ್ಯಾದ್ಯಂತ ಆತಂಕದ ಪರಿಸ್ಥಿತಿ ಎದುರಾಗಿದೆ.ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಸಹ ಬೀರಲಿದ್ದು, ಇನ್ನೂ ಎರಡು ದಿನ ರಾಜ್ಯಾದ್ಯಂತ ಮಳೆಯಾಗುವ ಸಂಭವವಿದೆ. 100-110 ಮೈಲಿ ವೇಗದಲ್ಲಿ ಚಂಡ ಮಾರುತ ಬಂದು ಅಪ್ಪಳಿಸುತ್ತಿದ್ದು, ಏಕಾಏಕಿ ಮಳೆ ಅಬ್ಬರ ಹೆಚ್ಚಾಗಿದೆ. ಭದ್ರಕ್‌, ಕೇಂದ್ರಪರ, ಬಲಸೋರ್‌ ಹಾಗೂ ಜಗತ್‌ ಸಿಂಗ್‌ ಪುರ ಜಿಲ್ಲೆಯಲ್ಲಿ ಇದುವರೆಗೂ 6 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ. ಉತ್ತರ

ಡಾನಾ ಚಂಡಮಾರುತದ ರೌದ್ರನರ್ತನ| ಒಡಿಶಾದಲ್ಲಿ ಭಾರೀ ಮಳೆ| ಕರ್ನಾಟಕ ಸೇರಿದಂತೆ ದ. ರಾಜ್ಯಗಳಲ್ಲಿ ಹೈ ಅಲರ್ಟ್ Read More »

ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕಕ್ಕೆ ಈ ಬಾರಿ ಹೆಚ್ಚಿನ ಒತ್ತು: ಸ್ಪೀಕರ್

ಸಮಗ್ರ ನ್ಯೂಸ್: ಈ ವರ್ಷವೂ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಿದ್ದು ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುತ್ತೇವೆ ಎಂದು ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ. ಜನಪ್ರತಿನಿಧಿಗಳು ವಿಧಾನಸೌಧ ಮಾತ್ರ ಅಲ್ಲ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು

ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕಕ್ಕೆ ಈ ಬಾರಿ ಹೆಚ್ಚಿನ ಒತ್ತು: ಸ್ಪೀಕರ್ Read More »

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ನ್ಯಾಷನಲ್ ಕಾನ್ನರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮ‌ರ್ ಅಬ್ದುಲ್ಲಾ ಅವರು ಬುಧವಾರ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ನನ್ ಸೆಂಟರ್ (ಎಸ್ಕೆಐಸಿಸಿ) ನಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.ಎನ್ಸಿ-ಕಾಂಗ್ರೆಸ್ ಮೈತ್ರಿಕೂಟದ ಅಡಿಯಲ್ಲಿ 2009 ರಿಂದ 2014 ರವರೆಗೆ ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಈ ಪ್ರದೇಶದ ಸರ್ಕಾರದ ಮುಖ್ಯಸ್ಥರಾಗಿ ಎರಡನೇ ಅವಧಿಯನ್ನು

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ‘ಓಮರ್ ಅಬ್ದುಲ್ಲಾ’ ಪ್ರಮಾಣ ವಚನ ಸ್ವೀಕಾರ Read More »