ದೇಶ-ವಿದೇಶ

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್

ಸಮಗ್ರ ನ್ಯೂಸ್: 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ 30 ರನ್‌ಗಳಿಂದ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್‌, ಈ ಬಾರಿ ಐಪಿಎಲ್‌ನ 4ನೇ ತಂಡವಾಗಿ ಪ್ಲೇ-ಆಫ್‌ಗೆ ಅಧಿಕೃತ ಪ್ರವೇಶ ಪಡೆದಿದೆ. ಇದರೊಂದಿಗೆ ಪಂಜಾಬ್‌ ಕಿಂಗ್ಸ್‌, ಕೋಲ್ಕತಾ ತಂಡಗಳ ಕನಸು ಭಗ್ನಗೊಂಡಿತು. ರಾಯಲ್ಸ್‌ 14 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕ ಸಂಪಾದಿಸಿದರೆ, ಮುಂಬೈ 10 ಸೋಲಿನೊಂದಿಗೆ ಅಭಿಯಾನ ಕೊನೆಗೊಳಿಸಿತು. ಪ್ಲೇ-ಆಫ್‌ ಪ್ರವೇಶಿಸಬೇಕಿದ್ದರೆ ರಾಯಲ್ಸ್‌ಗೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಆರಂಭಿಕ ಬ್ಯಾಟರ್‌ಗಳ ವೈಫಲ್ಯದ ಹೊರತಾಗಿಯೂ […]

ಐಪಿಎಲ್ ಕ್ರಿಕೆಟ್| ಮುಂಬೈ ಮಣಿಸಿ ಪ್ಲೇ ಆಪ್ ಪ್ರವೇಶಿಸಿದ ರಾಜಾಸ್ತಾನ್ Read More »

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ Read More »

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.    943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ

ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ 

ಸಮಗ್ರ ನ್ಯೂಸ್ : ವಿಶ್ವದಾದ್ಯಂತ ಕೊರೋನಾ (Corona) ವೈರಸ್ ಬಳಿಕ ಇದೀಗ ಎಬೋಲಾ (Ebola) ವೈರಸ್ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನ ಬಿಡುಗಡೆ ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ

ರಾಜ್ಯದಲ್ಲಿ ಎಬೋಲಾ ವೈರಸ್ ಆತಂಕ| ಆರೋಗ್ಯ ಇಲಾಖೆ ಮಾರ್ಗಸೂಚಿ ಹೀಗಿದೆ  Read More »

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್

ಸಮಗ್ರ ನ್ಯೂಸ್: ಭಾರತದ ಮುಖ್ಯ ನ್ಯಾಯಮೂರ್ತಿಗಳು ಯುವಕರ ಬಗ್ಗೆ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಆಕ್ರೋಶ, ವ್ಯಂಗ್ಯ ಮತ್ತು ಆನ್‌ಲೈನ್ ಅಭಿಯಾನವಾಗಿ ಪ್ರಾರಂಭವಾದ ಮೀಮ್-ಉತ್ತೇಜಿತ ವಿಡಂಬನಾತ್ಮಕ ರಾಜಕೀಯ ಚಳವಳಿಯಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಕೇವಲ ಐದು ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಅನುಯಾಯಿಗಳನ್ನು ದಾಟಿದ್ದು, ಆನ್‌ಲೈನ್ ಯುದ್ಧಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ಪಕ್ಷ ಬಿಜೆಪಿಯನ್ನು ಹಿಂದಿಕ್ಕಿದೆ. ದಶಕಗಳಿಂದ ರಾಜಕೀಯ ಪ್ರಾಬಲ್ಯವನ್ನು ಎಚ್ಚರಿಕೆಯಿಂದ ಬೆಳೆಸಿಕೊಂಡು ಬಂದಿರುವ ದೇಶದಲ್ಲಿ, ಆನ್‌ಲೈನ್ ವೈರಲ್ ಪಕ್ಷವು ವ್ಯಂಗ್ಯ, ರೀಲ್‌ಗಳು ಮತ್ತು ವೈರಲ್ ಆಕ್ರೋಶದಿಂದ

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್ Read More »

ಜೂ. 21ಕ್ಕೆ ಮತ್ತೆ ಯುಜಿಸಿ ನೀಟ್ ಮರು ಪರೀಕ್ಷೆ

ಸಮಗ್ರ ನ್ಯೂಸ್: ಮೇ 3 ರಂದು ನಡೆದಿದ್ದ ನೀಟ್ ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದೀಗ ಮರುಪರೀಕ್ಷೆಗೆ ದಿನಾಂಕವನ್ನು ಘೋಷಿಸಲಾಗಿದ್ದು, 2026ರ ಜೂನ್ 21ರಂದು ದೇಶಾದ್ಯಂತ ಮರುಪರೀಕ್ಷೆ ನಡೆಯಲಿದೆ. ಜೂನ್ 21, 2021 (ಭಾನುವಾರ) ನಡೆಯಲಿದ್ದು ಈಗಾಗಲೇ ಮೇ 3 ರಂದು ನಡೆದಿದ್ದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮರುಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ಮರು ಪರೀಕ್ಷೆಗಾಗಿ

ಜೂ. 21ಕ್ಕೆ ಮತ್ತೆ ಯುಜಿಸಿ ನೀಟ್ ಮರು ಪರೀಕ್ಷೆ Read More »

ಹಿಂದೂಗಳು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ – ಸುಪ್ರೀಂ

ಸಮಗ್ರ ನ್ಯೂಸ್: ‘ಹಿಂದುತ್ವ ಎಂಬುದು ಜೀವನ ವಿಧಾನ. ಈ ನಂಬಿಕೆಯನ್ನು ಸಾಬೀತುಪಡಿಸಲು ದೇವಸ್ಥಾನಕ್ಕೆ ಹೋಗಲೇಬೇಕೆಂದಿಲ್ಲ; ಮನೆಯೊಳಗೆ ದೀಪ ಹಚ್ಚಿದರೂ ಸಾಕು’ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು ಶಬರಿಮಲೆ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಈ ಅಭಿ‍ಪ್ರಾಯ ವ್ಯಕ್ತಪಡಿಸಿತು. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ಎಂ.ಎಂ.ಸುಂದ್ರೇಶ್‌, ಅಹ್ಸಾನುದ್ದೀನ್‌ ಅಮಾನುಲ್ಲಾ, ಅರವಿಂದ್‌ ಕುಮಾರ್‌, ಅಗಸ್ಟೀನ್‌ ಜಾರ್ಜ್‌ ಮಸೀಹ್, ಪ್ರಸನ್ನ ಬಿ.ವರಾಳೆ,

ಹಿಂದೂಗಳು ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ – ಸುಪ್ರೀಂ Read More »

ಇಂದಿರಾ ಚಿನ್ನ ಖರೀದಿಸಬೇಡಿ ಎಂದಿದ್ದೇ ಸುಳ್ಳು| ಸ್ಪಷ್ಟನೆ ನೀಡಿದ ‘ದಿ ಹಿಂದೂ’

ಸಮಗ್ರ ನ್ಯೂಸ್: “ಚಿನ್ನ ಖರೀದಿಸಬೇಡಿ, ಇಂದಿರಾ ಮನವಿ; ರಾಷ್ಟ್ರೀಯ ಶಿಸ್ತಿಗಾಗಿ ಕರೆ” ಎಂಬ ಶೀರ್ಷಿಕೆಯಡಿ ದಿ ಹಿಂದೂ ಪತ್ರಿಕೆಯಲ್ಲಿ 1967, ಜೂನ್​ 6ರಂದು ಪ್ರಕಟವಾಗಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟರ್​ ನಕಲಿ ಎಂದು ದಿ ಹಿಂದೂ ಪತ್ರಿಕೆ ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ‘ದಿ ಹಿಂದೂ’ ಪತ್ರಿಕೆಯ ಹಳೆಯ ಮುಖಪುಟವೊಂದರ ಫೋಟೋ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ಇದರಲ್ಲಿ ಜೂನ್ 6, 1967ರ ದಿನಾಂಕವಿದ್ದು, ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ವಿದೇಶಿ ವಿನಿಮಯದ ಕೊರತೆಯನ್ನು ನೀಗಿಸಲು

ಇಂದಿರಾ ಚಿನ್ನ ಖರೀದಿಸಬೇಡಿ ಎಂದಿದ್ದೇ ಸುಳ್ಳು| ಸ್ಪಷ್ಟನೆ ನೀಡಿದ ‘ದಿ ಹಿಂದೂ’ Read More »