ದೇಶ-ವಿದೇಶ

ಟ್ರಂಪ್ ಮೇಲೆ‌ ಗುಂಡಿನ ದಾಳಿ| ಅಮೇರಿಕಾದ ಮಾಜಿ ಅಧ್ಯಕ್ಷ ಗಂಭೀರ

ಸಮಗ್ರ ನ್ಯೂಸ್: ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಂಭೀರವಾಗಿ ಗಾಯಗೊಂಡಿದ್ದಾರೆ ವರದಿಯಾಗಿದೆ. ‌ದಾಳಿಯಿಂದ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಒಸರುತ್ತಿರುವುದು ಕಂಡುಬಂದಿದೆ. ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಆರಂಭಿಕ ದೊಡ್ಡ ಸ್ಫೋಟದ ನಂತರ ಟ್ರಂಪ್ ಗಾಯಗೊಂಡಂತೆ ನೆಲಕ್ಕೆ ಬಿದ್ದರು. ಭದ್ರತಾ ಸಿಬ್ಬಂದಿ ಮಾಜಿ ಅಧ್ಯಕ್ಷರನ್ನು ತ್ವರಿತವಾಗಿ ರಕ್ಷಿಸಿ ವೇದಿಕೆಯಿಂದ ಹೊರಗೆ ಕರೆದೊಯ್ಯುತ್ತಿದ್ದಂತೆ ಅನೇಕ ಪ್ರೇಕ್ಷಕರಿಂದ ಕಿರುಚಾಟಗಳು […]

ಟ್ರಂಪ್ ಮೇಲೆ‌ ಗುಂಡಿನ ದಾಳಿ| ಅಮೇರಿಕಾದ ಮಾಜಿ ಅಧ್ಯಕ್ಷ ಗಂಭೀರ Read More »

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ/ ಸರ್ಕಾರಿ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಿದ್ಧತೆ

ಸಮಗ್ರ ನ್ಯೂಸ್‌: ಬ್ಯಾಂಕಿಂಗ್ ಕ್ಷೇತ್ರದಲ್ಲಿ ‘ಸುಧಾರಣೆ’ ತರುವ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲು ಅನುವಾಗುವ ಮಹತ್ವದ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಬಜೆಟ್‌ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಯಿದೆ. ಜುಲೈ 22 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದೆ. ಜು.23ರಂದು ಬಜೆಟ್‌ ಮಂಡನೆ ನಡೆಯಲಿದೆ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949 ಮತ್ತು ಇತರ ಕಾಯ್ದೆಗಳಲ್ಲಿ ಸರ್ಕಾರ ಬ್ಯಾಂಕಿಂಗ್ ಕಾಯ್ದೆಗಳಲ್ಲಿ ತಿದ್ದುಪಡಿಗೆ ಮುಂದಾಗಿದೆ. ಇದಲ್ಲದೆ, ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣಕ್ಕಾಗಿ ‘ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ-1970’ ಮತ್ತು ’ಬ್ಯಾಂಕಿಂಗ್

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಧಾರಣೆ/ ಸರ್ಕಾರಿ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಿದ್ಧತೆ Read More »

ನೇಪಾಳದಲ್ಲಿ ಭಾರೀ ಭೂಕುಸಿತ| 63 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡೂ ಬಸ್ಸುಗಳಲ್ಲಿ ಬಸ್ ಚಾಲಕರು ಸೇರಿದಂತೆ ಒಟ್ಟು 63 ಜನರು ಇದ್ದರು ಎನ್ನಲಾಗಿದೆ. ಮುಂಜಾನೆ 3.30ರ ಸುಮಾರಿಗೆ ಭೂಕುಸಿತವಾಗಿ ಬಸ್ಸುಗಳು ನದಿಯಲ್ಲಿ ಕೊಚ್ಚಿಕೊಂಡು ಹೋಯಿತು. ನಾವು ಘಟನಾ ಸ್ಥಳದಲ್ಲಿದ್ದೇವೆ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕಾಣೆಯಾದ ಬಸ್ಸುಗಳನ್ನು, ಜನರನ್ನು ಹುಡುಕುವ

ನೇಪಾಳದಲ್ಲಿ ಭಾರೀ ಭೂಕುಸಿತ| 63 ಮಂದಿ ದುರ್ಮರಣ Read More »

ಮತ್ತೊಮ್ಮೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ

ಸಮಗ್ರ ನ್ಯೂಸ್‌: ನಾಲ್ಕು ದಶಕಗಳ ನಂತರ ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರವನ್ನು ಜು.14ರಂದು ತೆರೆಯಲು ಒಡಿಶಾ ಸರ್ಕಾರ ನಿರ್ಧರಿಸಿದೆ. ಆಭರಣ ಹಾಗೂ ಬೆಲೆಬಾಳುವ ಲೋಹಗಳಿರುವ ಈ ತಿಜೋರಿಯನ್ನು ಕೊನೆಯ ಬಾರಿಗೆ 1985ರಲ್ಲಿ ತೆರೆಯಲಾಗಿತ್ತು. ಮುಖ್ಯಮಂತ್ರಿ ಮೋಹನ್ ಮಾಝಿ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿ ರತ್ನಭಂಡಾರದಲ್ಲಿರುವ ಅಮೂಲ್ಯ ವಸ್ತುಗಳನ್ನು ದಾಸ್ತಾನು ಮಾಡಲಿದೆ. ಕಳೆದ ಬಾರಿ ತೆರೆಯಲಾದಾಗ ಭಂಡಾರದಲ್ಲಿ 12,500 ರತ್ನಖಚಿತ ಚಿನ್ನದ ಆಭರಣ ಹಾಗೂ 22,000 ತುಂಡು ಬೆಳ್ಳಿ ಇತ್ತು. 2018ರಲ್ಲಿ ಇದರ ತನಿಖೆ

ಮತ್ತೊಮ್ಮೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ Read More »

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್‌: ಟಿಬೆಟನ್ ಧರ್ಮಗುರು ದಲೈಲಾಮ ವಿರುದ್ಧ ಬಾಲಕನೊಬ್ಬನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಬಾಲಕನ ತುಟಿ ಚುಂಬಿಸಿ, ತಮ್ಮ ನಾಲಿಗೆ ಚೀಪುವಂತೆ ದಲೈಲಾಮ ಅವರು ಹೇಳುವ ವಿಡಿಯೋ ಕಳೆದ ವರ್ಷ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವಿವಾದಕ್ಕೆ ಕಾರಣವಾಗಿತ್ತು. ದಲೈಲಾಮ ವಿರುದ್ಧ ಪೋಟೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಕೋರಿ ‘ಕಾನ್ಸೆಡರೇಷನ್ ಆಫ್ ಎನ್‌ಜಿಒ’ ತನ್ನ ಅರ್ಜಿಯಲ್ಲಿ ಮನವಿ ಮಾಡಿತ್ತು. ಹಂಗಾಮಿ ಮುಖ್ಯ ನ್ಯಾಯಮೂರ್ತಿ

ಬಾಲಕನಿಗೆ ಕಿರುಕುಳ ನೀಡಿದ ಆರೋಪ/ ದಲೈಲಾಮ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾ Read More »

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ

ಸಮಗ್ರ ನ್ಯೂಸ್::ಉತ್ತರ ಪ್ರದೇಶದ ಉನ್ನಾವ್‌ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ ಬಳಿ ಮುಂದೆ ಚಲಿಸುತ್ತಿದ್ದ ಹಾಲಿನ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್ ಹಿಂದಿನಿಂದ ಮುಂದೆ ಚಲಿಸುತ್ತಿದ್ದ

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ Read More »

ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್‌ ಪುತಿನ್‌

ಸಮಗ್ರ ನ್ಯೂಸ್‌: ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದು, ಮಂಗಳವಾರ ಮಾಸ್ಕೋ ಕ್ರೆಮಿನ್ ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಸಾಂಪ್ರದಾಯಿಕವಾಗಿ ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ

ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್‌ ಪುತಿನ್‌ Read More »

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ

ಸಮಗ್ರ ನ್ಯೂಸ್: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಹಳ ಆತ್ಮೀಯವಾಗಿ ನಿನ್ನೆ ಬರಮಾಡಿಕೊಂಡಿದ್ದು, ಅದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಅವರು ಡ್ರೈವರ್ ಸೀಟಿನಲ್ಲಿ ಕುಳಿತಿದ್ದು, ಪ್ರಧಾನಿ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದಾರೆ. ಇಬ್ಬರು ಆ ಪ್ರಯಾಣವನ್ನು ಎಂಜಾಯ್ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಹೀಗೆ ಕಾರಿನಲ್ಲಿ ಪ್ರಧಾನಿಯವರನ್ನು ಕೂರಿಸಿಕೊಂಡೆ ರಷ್ಯಾ ಅಧ್ಯಕ್ಷ ಪುಟಿನ್ ಅವರು ತಮ್ಮ ಬಂಗಲೆಗೆ ಒಂದು

ಎಲೆಕ್ಟ್ರಿಕ್ ವಾಹನದಲ್ಲಿ ಪುತಿನ್ – ಮೋದಿ ರೌಂಡ್ಸ್| ನಮೋಗೆ ಸಾರಥಿಯಾದ ರಷ್ಯಾ ಅಧ್ಯಕ್ಷ Read More »

ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದೆ. ಕಳೆದೆರಡು ತಿಂಗಳಲ್ಲಿ ಸೇನೆ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಇದೀಗ ಕಥುವಾ ಬಳಿ ಭಾರತೀಯ ಸೇನಾ ವಾಹನ ಗುರಿಯಾಗಿ ಉಗ್ರರು ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೇನ ಪ್ರತಿ ದಾಳಿ ನಡೆಸುತ್ತಿದ್ದಂತೆ ಉಗ್ರರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಈ ದಾಳಿಯ ಹೊಣೆಯನ್ನು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇಂದು ಮಧ್ಯಾಹ್ನ 3.30ರ ವೇಳೆಗೆ

ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ Read More »

ಇಂದಿನಿಂದ ಪ್ರಧಾನಿ ಮೋದಿ ರಷ್ಯಾ ಪ್ರವಾಸ

ಸಮಗ್ರ ನ್ಯೂಸ್‌: ಉಕ್ರೇನ್ ರಷ್ಯಾ ಯುದ್ಧ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಇಂದಿನಿಂದ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಕಾಲ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಪ್ರಧಾನಿ ಆಸ್ಟ್ರಿಯಾಕ್ಕೆ ತೆರಳಲಿದ್ದು, 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲಾಗಿದೆ. ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ನಂತರದ ಮೊದಲ ಭೇಟಿಯಲ್ಲಿ ಮೋದಿ ಅವರು ರಷ್ಯಾ ಅಧ್ಯಕ್ಷ

ಇಂದಿನಿಂದ ಪ್ರಧಾನಿ ಮೋದಿ ರಷ್ಯಾ ಪ್ರವಾಸ Read More »