ದೇಶ-ವಿದೇಶ

ಜು.1ರಿಂದ ತೈಲ ಮಾರಾಟದ ಮೇಲಿನ ಎಲ್ಲಾ ನಿರ್ಬಂಧ ತೆರವು

ಸಮಗ್ರ ನ್ಯೂಸ್: ವಾಹನ ಸವಾರರು ಮತ್ತು ವಾಣಿಜ್ಯ ಗ್ರಾಹಕರಿಗೆ ನಿರಾಳ ಸುದ್ದಿ ಸಿಕ್ಕಿದೆ. ದೇಶದಲ್ಲಿ ಇಂಧನ ಪೂರೈಕೆ ವ್ಯವಸ್ಥೆಯು ಸಂಪೂರ್ಣವಾಗಿ ಸುಧಾರಿಸಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿದ್ದ ಎಲ್ಲ ರದ್ದತಿ ಹಾಗೂ ನಿರ್ಬಂಧಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹೊಸ ಆದೇಶವು ಜುಲೈ 1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ನಡೆದ ಸಂಘರ್ಷಗಳಿಂದಾಗಿ ಜಾಗತಿಕ ಸರಬರಾಜು ವ್ಯವಸ್ಥೆಯಲ್ಲಿ ಏರುಪೇರಾಗಿತ್ತು. ಇದರಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಕೊರತೆ ಉಂಟಾಗದಂತೆ […]

ಜು.1ರಿಂದ ತೈಲ ಮಾರಾಟದ ಮೇಲಿನ ಎಲ್ಲಾ ನಿರ್ಬಂಧ ತೆರವು Read More »

ಪ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ| ಕನಿಷ್ಟ 11 ಮಂದಿ‌ ಸಾವು

ಸಮಗ್ರ ನ್ಯೂಸ್: ಈಶಾನ್ಯ ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಈಶಾನ್ಯ ಫ್ರಾನ್ಸ್‌ನ ನ್ಯಾನ್ಸಿ ಬಳಿಯ ಟೊಂಬ್ಲೇನ್ ಪಟ್ಟಣದಲ್ಲಿ ನಾಗರಿಕ ವಿಮಾನ ಅಪಘಾತಕ್ಕೀಡಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಸ್ಕೈಡೈವಿಂಗ್ ಪ್ರವಾಸದಲ್ಲಿದ್ದ ಜನರ ಗುಂಪೊಂದು ವಿಮಾನದಲ್ಲಿತ್ತು. ಟೊಂಬ್ಲೇನ್‌ನಲ್ಲಿರುವ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಕ್ಕೆ ಬರದಂತೆ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ ಎಂದು ಫ್ರೆಂಚ್ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪೂರ್ವ ಫ್ರೆಂಚ್ ಪಟ್ಟಣವಾದ ಟೊಂಬ್ಲೇನ್ ಬಳಿ ಭಾನುವಾರ ನಾಗರಿಕ ವಿಮಾನ ಅಪಘಾತಕ್ಕೀಡಾಗಿದ್ದು,

ಪ್ರಾನ್ಸ್ ನಲ್ಲಿ ನಾಗರಿಕ ವಿಮಾನ ಪತನ| ಕನಿಷ್ಟ 11 ಮಂದಿ‌ ಸಾವು Read More »

ಅಯೋಧ್ಯೆ: ರಾಮಮಂದಿರದಲ್ಲಿ ಬರೋಬ್ಬರಿ 70 ಬಾರಿ‌ ಹುಂಡಿ ಕಳ್ಳತನ| 7.5 ಕೋಟಿ ಎಗರಿಸಿದ ಕಳ್ಳರ ಗ್ಯಾಂಗ್

ಸಮಗ್ರ ನ್ಯೂಸ್: ದೇಶದ ಕೋಟ್ಯಂತರ ಹಿಂದೂಗಳ ಭಕ್ತಿಯ ಕೇಂದ್ರವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬೆಚ್ಚಿಬೀಳಿಸುವ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಹಲವು ತಿಂಗಳುಗಳಿಂದ ಸಂಘಟಿತ ತಂಡವೊಂದು ( ಹಣ ಎಣಿಸುವ ಗ್ಯಾಂಗ್)‌ ರಾಮಮಂದಿರದ ಹುಂಡಿಯಿಂದ ಹಣ ಕಳವು ಮಾಡುತ್ತಿದ್ದು, ಸುಮಾರು ₹7.5 ಕೋಟಿ ಎಗರಿಸಿರುವ ಆರೋಪ ಎದುರಾಗಿದೆ. ಪ್ರಕರಣದ ತನಿಖೆ ವೇಳೆ ಆರೋಪಿಗಳು ಅತ್ಯಂತ ವ್ಯವಸ್ಥಿತವಾಗಿ ಕಳ್ಳತನ ನಡೆಸಿರುವುದು ಬಹಿರಂಗವಾಗಿದೆ. ದೇವಸ್ಥಾನದ ಭದ್ರತಾ ವ್ಯವಸ್ಥೆಯನ್ನು ಚಾಣಾಕ್ಷತನದಿಂದ ಬಳಸಿಕೊಂಡು, ಸಿಸಿಟಿವಿ ಕ್ಯಾಮೆರಾಗಳ ಕಣ್ತಪ್ಪಿಸಿ ಹಲವು ಬಾರಿ ಹಣ

ಅಯೋಧ್ಯೆ: ರಾಮಮಂದಿರದಲ್ಲಿ ಬರೋಬ್ಬರಿ 70 ಬಾರಿ‌ ಹುಂಡಿ ಕಳ್ಳತನ| 7.5 ಕೋಟಿ ಎಗರಿಸಿದ ಕಳ್ಳರ ಗ್ಯಾಂಗ್ Read More »

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ಕರ್ನಾಟಕದಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿಯಲ್ಲಿ

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ Read More »

ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್| ಎಲ್ಲಾ ನಿರ್ಬಂಧ ತೆರವುಗೊಳಿಸಿದ ಕೇಂದ್ರ

ಸಮಗ್ರ ನ್ಯೂಸ್: ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ನೆಮ್ಮದಿ ನೀಡುವ ಕ್ರಮವಾಗಿ, ಕೇಂದ್ರ ಸರ್ಕಾರ ಎಲ್‌ಪಿಜಿ ಪೂರೈಕೆಯ ಮೇಲಿದ್ದ ಎಲ್ಲಾ ರೀತಿಯ ನಿರ್ಬಂಧಗಳನ್ನು ತಕ್ಷಣದಿಂದಲೇ ಹಿಂತೆಗೆದುಕೊಂಡಿದೆ. ಗೃಹೇತರ ಪ್ಯಾಕೇಜ್ಡ್ ಎಲ್‌ಪಿಜಿ ಪೂರೈಕೆಗೆ ವಿಧಿಸಲಾಗಿದ್ದ ವಲಯವಾರು ಮಿತಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವುದಾಗಿ ಸರ್ಕಾರ ಘೋಷಿಸಿದೆ. ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣದಿಂದಲೇ ತೆರವುಗೊಳಿಸಿದ್ದು, ಇದರಿಂದ ಹೋಟೆಲ್‌ಗಳು, ಕೈಗಾರಿಕೆಗಳು ಹಾಗೂ ವಾಣಿಜ್ಯ

ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್| ಎಲ್ಲಾ ನಿರ್ಬಂಧ ತೆರವುಗೊಳಿಸಿದ ಕೇಂದ್ರ Read More »

ಭರ್ಜರಿ ಕುಸಿತ ಕಂಡ ಬಂಗಾರದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್

ಸಮಗ್ರ ನ್ಯೂಸ್: ಸತತವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಜೂನ್‌ 16 ರಿಂದ ಆರಂಭವಾದ ಚಿನ್ನದ ಬೆಲೆಯ ಕುಸಿತ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಒಂದೇ ದಿನಕ್ಕೆ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 3650 ರೂ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಸಾವಿರ ರೂ ಕಡಿತಗೊಂಡಿದೆ. ಈಕ್ವಿಟಿ ಮಾರುಕಟ್ಟೆ ಹೆಚ್ಚು ಲಾಭದಾಯಕ ಎಂದೆನಿಸಿದ್ದರಿಂದ ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಕುಸಿದಿದ್ದು, ಬೆಲೆ ಇಳಿಕೆಗೆ ಕಾರಣವಾಗಿದೆ. ಜೂನ್ 19 2026 ಶುಕ್ರವಾರದಂದು , 24 ಕ್ಯಾರೆಟ್ 1

ಭರ್ಜರಿ ಕುಸಿತ ಕಂಡ ಬಂಗಾರದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್ Read More »

ಅಮೇರಿಕಾ – ಇರಾನ್ ನಡುವಿನ ಮಹಾಸಮರ ಅಂತ್ಯ| ಹಾರ್ಮೋಜ್ ತೆರವು, ನಿಟ್ಟುಸಿರು ಬಿಟ್ಟ ಜಗತ್ತು

ಸಮಗ್ರ ನ್ಯೂಸ್: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ ಕೊನೆಗೂ ಶಾಶ್ವತ ಬ್ರೇಕ್ ಬೀಳುವ ಕಾಲ ಸನ್ನಿಹಿತವಾಗಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಇಡೀ ಜಗತ್ತಿಗೆ ತೈಲ ಬಿಕ್ಕಟ್ಟಿನ ಆತಂಕದಿಂದ ದೊಡ್ಡ ಮುಕ್ತಿ ಸಿಕ್ಕಂತಾಗಿದೆ. ಅಮೆರಿಕ

ಅಮೇರಿಕಾ – ಇರಾನ್ ನಡುವಿನ ಮಹಾಸಮರ ಅಂತ್ಯ| ಹಾರ್ಮೋಜ್ ತೆರವು, ನಿಟ್ಟುಸಿರು ಬಿಟ್ಟ ಜಗತ್ತು Read More »

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿನ ದಿಢೀರ್ ಬೆಳವಣಿಗೆಗಳ ಪರಿಣಾಮವಾಗಿ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಜೂನ್ 10 ರ ಇಂದಿನ ಮಾರುಕಟ್ಟೆ ವರದಿಗಳ ಪ್ರಕಾರ, ಆಭರಣ ಖರೀದಿಸಲು ಕಾಯುತ್ತಿದ್ದವರಿಗೆ ಇದು ಅತ್ಯುತ್ತಮ ಸಮಯವಾಗಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಗಮನಾರ್ಹವಾಗಿ ಇಳಿಕೆಯಾಗಿದ್ದು, ಗ್ರಾಹಕರಿಗೆ ದೊಡ್ಡ ರಿಲೀಫ್ ನೀಡಿದೆ. ಎಂಸಿಎಕ್ಸ್ ಮಾರುಕಟ್ಟೆಯಲ್ಲಿನ ಏರಿಳಿತಗಳು ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಮೌಲ್ಯ ಬಲಗೊಂಡಿರುವುದು ಈ ದಿಢೀರ್ ಬೆಲೆ ಇಳಿಕೆಗೆ ಪ್ರಮುಖ ಕಾರಣವಾಗಿದೆ. ಅಮೆರಿಕ

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ Read More »

ಯುದ್ಧ ನಿಲ್ಲಿಸದಿದ್ರೆ ಏಕಾಂಗಿಯಾಗ್ತೀರಿ| ಇಸ್ರೇಲ್ ಗೆ ಅಮೇರಿಕಾ ಎಚ್ಚರಿಕೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ನಡುವೆ ”ಪಶ್ಚಿಮ ಏಷ್ಯಾ ಸಂಘರ್ಷ ತಣಿಸಲು ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳ ನಡುವೆ ಇರಾನ್‌ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರಿಸಿದರೆ ಇಸ್ರೇಲ್‌ ಏಕಾಂಗಿಯಾಗಲಿದೆ,” ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಿದ ಟ್ರಂಪ್ ”ಸಂಧಾನ ಮಾತುಕತೆಯನ್ನು ಹಳ್ಳ ಹಿಡಿಸುವಂತಹ ಯಾವುದೇ ವಿಪರೀತದ ಕ್ರಮಗಳು ನಿಮ್ಮನ್ನು (ಇಸ್ರೇಲ್‌) ಒಂಟಿಯಾಗಿ ಮಾಡಲಿದೆ. ಬೀಬಿ (ಬೆಂಜಮಿನ್‌ ನೆತನ್ಯಾಹು) ತುಂಬ ಜಾಗರೂಕಧಿನಾಗಿರು. ಇಲ್ಲವಾದಲ್ಲಿ

ಯುದ್ಧ ನಿಲ್ಲಿಸದಿದ್ರೆ ಏಕಾಂಗಿಯಾಗ್ತೀರಿ| ಇಸ್ರೇಲ್ ಗೆ ಅಮೇರಿಕಾ ಎಚ್ಚರಿಕೆ Read More »

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ

ಸಮಗ್ರ ನ್ಯೂಸ್: ಭಾರತದ ರಾಜಕೀಯ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೊಸದೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ದಿನಗಳ ಕಾಲ ಸತತವಾಗಿ ಅಧಿಕಾರ ನಡೆಸಿದ ಪ್ರಜಾಸತ್ತಾತ್ಮಕ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇದರೊಂದಿಗೆ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರ ಹೆಸರಿನಲ್ಲಿದ್ದ ಸುದೀರ್ಘ ಅವಧಿಯ ದಾಖಲೆಯನ್ನು ಮೋದಿ ಅವರು ಹಿಂದಿಕ್ಕಿದ್ದಾರೆ. ಈ ಐತಿಹಾಸಿಕ ಸಾಧನೆಗೆ ವಿಶ್ವದ ಹಲವು ದೇಶಗಳ ನಾಯಕರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಮುಕ್ತಕಂಠದಿಂದ

ಭಾರತದ ಇತಿಹಾಸದಲ್ಲಿ ದೀರ್ಘಾವಧಿ ಪೂರೈಸಿದ ಪ್ರಧಾನಿ ಮೋದಿ| ವಿಶ್ವದೆಲ್ಲೆಡೆಯಿಂದ ಅಭಿನಂದ‌ನೆಯ ಮಹಾಪೂರ Read More »