ದೇಶ-ವಿದೇಶ

ಮೈತ್ರಿಕೂಟದ ಸಭೆ/ ಪ್ರಬಲ ಪ್ರತಿಪಕ್ಷವಾಗುವತ್ತ ಚಿತ್ತ

ಸಮಗ್ರ ನ್ಯೂಸ್: ಮೈತ್ರಿಕೂಟದ ನಾಯಕರ ಸಭೆಯು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದಿದ್ದು, ಎನ್‍ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು, ರಚನೆಯಾದ ನೂತನ ಸರ್ಕಾರದ ವಿರುದ್ಧ ಹೋರಾಡುವುದು, ಅದನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ರಣತಂತ್ರಗಳ ಕುರಿತು ಚರ್ಚಿಸಲಾಗಿದೆ. ಸಭೆಯಲ್ಲಿ ಮಾತನಾಡಿದ ಖರ್ಗೆ, ನಾವು ಉತ್ತಮವಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಿಂದ ಹೋರಾಡಿದ್ದೇವೆ, ದೃಢವಾಗಿ […]

ಮೈತ್ರಿಕೂಟದ ಸಭೆ/ ಪ್ರಬಲ ಪ್ರತಿಪಕ್ಷವಾಗುವತ್ತ ಚಿತ್ತ Read More »

ಎನ್ ಡಿಎ ಸರ್ಕಾರದ ಜೊತೆಗೆ ಮೈತ್ರಿಗೆ ಬೆಂಬಲ ನೀಡಿದ ನಾಯ್ಡು, ನಿತೀಶ್| ನಮೋಗೆ ಬೆಂಬಲ ಪತ್ರ ನೀಡಿದ‌ ನಾಯಕರು

ಸಮಗ್ರ ನ್ಯೂಸ್: ಎನ್‌ ಡಿಎ ಸರ್ಕಾರ ರಚನೆಯ ಬಗ್ಗೆ ಊಹಾಪೋಹಗಳ ಮಧ್ಯೆ, ಆಡಳಿತಾರೂಢ ಮೈತ್ರಿ ಪಾಲುದಾರರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಬಿಜೆಪಿಗೆ ಬೆಂಬಲ ಪತ್ರವನ್ನು ಹಸ್ತಾಂತರಿಸಿದ್ದಾರೆ. ಈ ಹಿನ್ನಲೆಯಲ್ಲಿ 3ನೇ ಬಾರಿಗೆ ಮೋದಿ ಪ್ರಧಾನ ಮಂತ್ರಿಯಾಗೋದಕ್ಕೆ ಸಜ್ಜಾಗಿದ್ದಾರೆ. ಇಂದೇ 3ನೇ ಅವಧಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಎನ್ ಡಿಎ ರಾಷ್ಟ್ರಪತಿ ಮುರ್ಮು ಭೇಟಿಯಾಗೋ ಸಾಧ್ಯತೆ ಇದೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಎನ್ಡಿಎ ಅಂಗಪಕ್ಷಗಳ ನಾಯಕರು ಇಂದು

ಎನ್ ಡಿಎ ಸರ್ಕಾರದ ಜೊತೆಗೆ ಮೈತ್ರಿಗೆ ಬೆಂಬಲ ನೀಡಿದ ನಾಯ್ಡು, ನಿತೀಶ್| ನಮೋಗೆ ಬೆಂಬಲ ಪತ್ರ ನೀಡಿದ‌ ನಾಯಕರು Read More »

ಅಬಕಾರಿ ನೀತಿ ಹಗರಣ/ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ವೈದ್ಯಕೀಯ ಕಾರಣಗಳಿಗಾಗಿ 7 ದಿನಗಳ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ವಜಾಗೊಳಿಸಿದ್ದಾರೆ. ಅವರ ನಿಯಮಿತ ಜಾಮೀನು ಅರ್ಜಿಯ ವಿಚಾರಣೆ ಜೂನ್ 07 ರಂದು ನಡೆಯಲಿದೆ. ಮಾರ್ಚ್ 21ರಂದು ಅರವಿಂದ್ ಕೇಜ್ರವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್

ಅಬಕಾರಿ ನೀತಿ ಹಗರಣ/ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್ Read More »

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡಿದ್ದಾರೆ. ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ ಜೂ.8 ರಂದು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ದೆಹಲಿ ಮೂಲಗಳು ಮಾಹಿತಿ ನೀಡಿದೆ. ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ Read More »

‘ನಿತ್ಯ ನೂತನ ವಸುಂಧರೆಯ ರಕ್ಷಿಸೋಣ ಬನ್ನಿ’

ಸಮಗ್ರ ವಿಶೇಷ: ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು ಭೂಮಿ. ಹುಟ್ಟಿದ ಘಳಿಗೆಯಿಂದ ಇರುವ ಕಡೆಯ ಕ್ಷಣದವರೆಗೆ ʻನಮನ್ನೆಲ್ಲʼ ಸಲಹುವಂಥ ನಿತ್ಯನೂತನ ಮನೆಯೀ ವಸುಂಧರೆ. ‘ನಮ್ಮನ್ನುʼ ಎಂದರೆ ಮನುಷ್ಯರನ್ನು ಎಂದಷ್ಟೇ ಅರ್ಥ ಮಾಡಿಕೊಂಡಿದ್ದರಿಂದ ಈ ಪರಿಯಲ್ಲಿ ಸಮಸ್ಯೆ ಎದುರಾಗಿದೆ ಇಂದು. ಸಕಲ ಜೀವಜಂತುಗಳಿಗೆ ಇರುವುದೊಂದೇ ಮನೆ. ಆದರೆ ಮನುಷ್ಯರ ಹೊರತಾಗಿ ಇನ್ನಾವ ಜೀವಿಗಳೂ ತಮ್ಮ ಮನೆಯನ್ನು

‘ನಿತ್ಯ ನೂತನ ವಸುಂಧರೆಯ ರಕ್ಷಿಸೋಣ ಬನ್ನಿ’ Read More »

ದೇಶದ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮುನ್ನಡೆ ಸಾಧಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ಎಕ್ಸ್ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ ಮೋದಿ, ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನ್ ಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ

ದೇಶದ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಯೋಧ್ಯೆಯಲ್ಲಿ ಬಿಜೆಪಿ ಬಿಟ್ಟು ಕೈಹಿಡಿದ ರಾಮ!! ಎಸ್ಪಿ ವಿರುದ್ದ ಸೋಲುಕಂಡ ಬಿಜೆಪಿ

ಸಮಗ್ರ ನ್ಯೂಸ್: ರಾಮಮಂದಿರ ಇರುವ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಅಯೋಧ್ಯೆ ನಗರವು ಹಿಂದೆ ಫೈಜಾಬಾದ್ ಜಿಲ್ಲೆಯಲ್ಲಿದೆ. ಫೈಜಾಬಾದ್ ಜಿಲ್ಲೆಯನ್ನು 2018 ರಲ್ಲಿ ಅಧಿಕೃತವಾಗಿ ಅಯೋಧ್ಯೆ ಎಂದು ಮರುನಾಮಕರಣ ಮಾಡಲಾಯಿತು. ಆದರೆ, ಲೋಕಸಭಾ ಸ್ಥಾನವನ್ನು ಇನ್ನೂ ಫೈಜಾಬಾದ್ ಎಂದು ಕರೆಯಲಾಗುತ್ತದೆ. ಒಂಬತ್ತು ಬಾರಿ ಶಾಸಕರಾಗಿರುವ ಸಮಾಜವಾದಿ ಪಕ್ಷದ ಅಭ್ಯರ್ಥಿ ಅವಧೇಶ್ ಪ್ರಸಾದ್ ಅವರು ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ಲಲ್ಲು ಸಿಂಗ್ ಅವರನ್ನು ಸೋಲಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ 35 ಸಾವಿರಕ್ಕೂ

ಅಯೋಧ್ಯೆಯಲ್ಲಿ ಬಿಜೆಪಿ ಬಿಟ್ಟು ಕೈಹಿಡಿದ ರಾಮ!! ಎಸ್ಪಿ ವಿರುದ್ದ ಸೋಲುಕಂಡ ಬಿಜೆಪಿ Read More »

ವಾರಣಾಸಿಯಲ್ಲಿ ಹ್ಯಾಟ್ರಿಕ್ ಗೆಲುವು ಕಂಡ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 2014 ಹಾಗೂ 2019ರಲ್ಲಿ ಇದೇ ವಾರಾಣಸಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಈ ಬಾರಿಯೂ ಗೆಲುವಿನ ನಗೆ ಬೀರುವ ಮೂಲಕ ಹ್ಯಾಟ್ರಿಕ್​ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಪ್ರಾರಂಭದ ಕೆಲವು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್​ ಅಭ್ಯರ್ಥಿ ಅಜಯ್​ ರೈ ಅವರು ಪರಾಜಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 62ರಿಂದ 35ಕ್ಕೆ ಕುಸಿತ ಕಂಡಿದೆ.

ವಾರಣಾಸಿಯಲ್ಲಿ ಹ್ಯಾಟ್ರಿಕ್ ಗೆಲುವು ಕಂಡ ಪ್ರಧಾನಿ ಮೋದಿ Read More »

ರಾಮನಾಡಿನಲ್ಲಿ ಬಿಜೆಪಿಗೆ ಹಿನ್ನಡೆ| ಅಯೋಧ್ಯೆಯಲ್ಲಿ ಮುನ್ನಡೆ ಸಾಧಿಸಿದ ಎಸ್ಪಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಉತ್ತರ ಪ್ರದೇಶವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಕಂಡಿದ್ದ ಬಿಜೆಪಿಗೆ ಆಘಾತ ಎದುರಾಗಿದೆ. ಆರಂಭಿಕ ಹಂತದಲ್ಲಿ ಕೇವಲ 35 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಪಡೆದುಕೊಂಡಿದ್ದು, 35 ಕ್ಷೇತ್ರಗಳಲ್ಲಿ ಸಮಜಾವಾದಿ ಪಕ್ಷ ಮುನ್ನಡೆ ಸಾಧಿಸಿದೆ. ಅಯೋಧ್ಯೆ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ

ರಾಮನಾಡಿನಲ್ಲಿ ಬಿಜೆಪಿಗೆ ಹಿನ್ನಡೆ| ಅಯೋಧ್ಯೆಯಲ್ಲಿ ಮುನ್ನಡೆ ಸಾಧಿಸಿದ ಎಸ್ಪಿ Read More »

ಎಕ್ಸಿಟ್ ಪೋಲ್ ಸುಳ್ಳು ಮಾಡಿದ ಇಂಡಿಯಾ ಒಕ್ಕೂಟ| 225 + ಸ್ಥಾನಗಳಲ್ಲಿ ಲೀಡ್

ಸಮಗ್ರ ನ್ಯೂಸ್: 543 ಲೋಕಸಭಾ ಸ್ಥಾನಗಳ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಆರಂಭಿಕ ಹಂತಗಳಲ್ಲಿ 272 ರ ಮೆಜಾರಿಟಿಯನ್ನು ದಾಟಿದೆ. ಆದರೆ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್‌ಗಳು ನೀಡಿದ್ದ ಹಲವು ಸಮೀಕ್ಷೆಗಳನ್ನು ಇಂಡಿಯಾ ಒಕ್ಕೂಟ ಸುಳ್ಳು ಮಾಡಿಸಿದೆ. ಬಹುತೇಕ ಎಲ್ಲಾ ಎಕ್ಸಿಟ್ ಪೋಲ್‌ಗಳು ಕೂಡ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ 150 ರಿಂದ 180 ಸ್ಥಾನಗಳನ್ನು ದಾಟುವುದಿಲ್ಲ ಎಂದು ಫಲಿತಾಂಶ ನೀಡಿದ್ದವು. ಆದರೆ, ಈ ಫಲಿತಾಂಶವನ್ನು ಇಂಡಿಯಾ ಒಕ್ಕೂಟ ಸುಳ್ಳು ಮಾಡಿದ್ದು, ಬೆಳಗ್ಗೆ

ಎಕ್ಸಿಟ್ ಪೋಲ್ ಸುಳ್ಳು ಮಾಡಿದ ಇಂಡಿಯಾ ಒಕ್ಕೂಟ| 225 + ಸ್ಥಾನಗಳಲ್ಲಿ ಲೀಡ್ Read More »