ದೇಶ-ವಿದೇಶ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊನೆಗೂ ಅಂತ್ಯಗೊಂಡ ಪ್ರತಿಭಟನೆ

ಸಮಗ್ರ ನ್ಯೂಸ್: ಜನರು ಬೆಲೆ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾಕ್ ಆಕ್ರಮಿತ ಕಾಶ್ಮೀರದ ನಡೆಸುತ್ತಿದ್ದ 5 ದಿನಗಳ ಹಿಂಸಾತ್ಮಕ ಪ್ರತಿಭಟನೆ ಮಂಗಳವಾರ ಅಂತ್ಯಗೊಂಡಿದೆ. ಪ್ರತಿಭಟನೆ ನೇತೃತ್ವ ವಹಿಸಿದ್ದ ಜಮ್ಮು-ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಮುಖ್ಯಸ್ಥ ಶೌಕತ್ ನವಾಜ್ ಮೀರ್, ಪಾಕಿಸ್ತಾನ ಸರ್ಕಾರ 2300 ಕೋಟಿ ರು. ಅಭಿವೃದ್ಧಿ ಪ್ಯಾಕೇಜ್ ಪ್ರಕಟಿಸಿದ್ದು, ನಮ್ಮ ಬೇಡಿಕೆ ಈಡೇರಿಕೆಗೆ ಒಪ್ಪಿದ್ದಾರೆ. ಹೀಗಾಗಿ ಪ್ರತಿಭಟನೆ ಹಿಂಪಡೆಯುತ್ತಿದ್ದೇವೆ. ಎಲ್ಲ ಪ್ರತಿಭಟನಾಕಾರರು ಹೋರಾಟ ಹಿಂಪಡೆದು ತಮ್ಮ ದೈನಂದಿನ ಚಟುವಟಿಕೆ […]

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊನೆಗೂ ಅಂತ್ಯಗೊಂಡ ಪ್ರತಿಭಟನೆ Read More »

ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಪಡೆದೇ ತೀರುತ್ತೇವೆ/ ಅಮಿತ್ ಷಾ ಪ್ರತಿಪಾದನೆ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಕ್ಷ ಸರ್ಕಾರವು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಬದ್ಧವಾಗಿದೆ ಎಂದು ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದರು. ಮಣಿಶಂಕರ್ ಅಯ್ಯರ್ ಮತ್ತು ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ, ಆದ್ದರಿಂದ ನಾವು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಬಾರದು ಎಂದು ಹೇಳಿ ನಮ್ಮನ್ನು ಹೆದರಿಸುತ್ತಿದ್ದರು. ರಾಹುಲ್ ಬಾಬಾ, ಮಮತಾ ದೀದಿ, ನೀವು ಎಷ್ಟೇ ಹೆದರಿಸಿದರೂ ಪರವಾಗಿಲ್ಲ. ಪಾಕ್

ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಪಡೆದೇ ತೀರುತ್ತೇವೆ/ ಅಮಿತ್ ಷಾ ಪ್ರತಿಪಾದನೆ Read More »

ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್/ ಸರ್ಕಾರಿ ಉದ್ದಿಮೆಗಳ ಖಾಸಗೀಕರಣದ ಘೋಷಣೆ

ಸಮಗ್ರ ನ್ಯೂಸ್: ಆರ್ಥಿಕ ದಿವಾಳಿತನದತ್ತ ಸಾಗುತ್ತಿರುವ ಪಾಕಿಸ್ತಾನ ಸರ್ಕಾರ ತನ್ನ ಕೊನೆಯ ಮಾರ್ಗ ಎನ್ನುವಂತೆ ದೇಶದಲ್ಲಿನ ಆಯಕಟ್ಟಿನ ಪ್ರಮುಖ ಉದ್ಯಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಉದ್ದಿಮೆಗಳ ಕಂಪನಿಗಳನ್ನು ಖಾಸಗೀಕರಣ ಮಾಡುವ ಘೋಷಣೆ ಮಾಡಿದೆ. ಖಾಸಗೀಕರಣ ಸಚಿವಾಲಯ ಮತ್ತು ಖಾಸಗೀಕರಣ ಆಯೋಗಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ, ಸರ್ಕಾರಿ ಕಂಪನಿಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಷರೀಫ್ ಘೋಷಿಸಿದರು. ಎನ್ ಆರ್ ವೈ ನ್ಯೂಸ್‍ನ ವರದಿಯ ಪ್ರಕಾರ, ಇದರಲ್ಲಿ ವಿದ್ಯುತ್ ವಿತರಣಾ

ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್/ ಸರ್ಕಾರಿ ಉದ್ದಿಮೆಗಳ ಖಾಸಗೀಕರಣದ ಘೋಷಣೆ Read More »

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ಅಫಿಡವಿಟ್​ನಲ್ಲಿ

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ

ಸಮಗ್ರ ನ್ಯೂಸ್ : ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ.

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ Read More »

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್

ಸಮಗ್ರ ನ್ಯೂಸ್: ವ್ಯೂಹಾತ್ಮಕವಾಗಿ ಅತ್ಯಂತ ಆಯಕಟ್ಟಿನ ಸ್ಥಳದಲ್ಲಿರುವ ಇರಾನ್‍ನ ಚಾಬಹಾರ್ ಬಂದರಿನ ಒಂದು ಟರ್ಮಿನಲ್ ಅನ್ನು 10 ವರ್ಷ ನಿರ್ವಹಣೆ ಮಾಡುವ ಕುರಿತು ಭಾರತ ಮತ್ತು ಇರಾನ್ ಐತಿಹಾಸಿಕ ಒಪ್ಪಂದಕ್ಕೆ ಸಹಿಹಾಕಿವೆ. ಈ ಮೂಲಕ ವಿದೇಶದಲ್ಲಿರುವ ಬಂದರಿನ ನಿರ್ವಹಣೆಗೆ ಭಾರತ ಮೊದಲ ಬಾರಿಗೆ ಮುಂದಾಗಿದೆ ಪ್ರಾಂತೀಯ ಸಂಪರ್ಕ ಮತ್ತು ವ್ಯಾಪಾರಕ್ಕೆ ಈ ಒಪ್ಪಂದವು ಬಹುದೊಡ್ಡ ಕಾಣಿಕೆ ನೀಡಲಿದೆ ಎಂದು ವಿಶ್ಲೇಷಿಸಲಾಗಿದೆ. ಜೊತೆಗೆ ಪಾಕಿಸ್ತಾನವನ್ನು ಸಂಪರ್ಕಿಸದೆಯೇ ಭಾರತ-ಇರಾನ್- ಆಫ್ಘಾನಿಸ್ತಾನ ನಡುವಣ ವ್ಯಾಪಾರ ವಹಿವಾಟಿಗೆ ಹೊಸ ಮಾರ್ಗವನ್ನೂ ತೆರೆಯಲಿದೆ. ಶಹೀದ್-

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್ Read More »

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು

ಸಮಗ್ರ ನ್ಯೂಸ್: ಕೆಲವರಿಗೆ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದರೆ ಸಾಧನೆ, ಇನ್ನು ಕೆಲವರಿಗೆ ತೇರ್ಗಡೆಯಾದರೆ ಅದೇ ಸಾಧನೆ. ನಿಜದ ಅರ್ಥದಲ್ಲಿ ಎರಡೂ ಸಂಭ್ರಮವೇ, ಆದ್ಯತೆಯೆ ಬೇರೆ. ಕುಡುಪಿನ ಮಂಗಳಾನಗರದಲ್ಲಿ ಇಂಥದ್ದೇ ಒಂದು ಅಪರೂಪದ ಸಂಭ್ರಮಾಚರಣೆ ನಡೆದಿದೆ. ಇತ್ತೀಚಿನ ಎಸ್‌ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೇ (ಜಸ್ಟ್‌ ಪಾಸ್‌) ವಿದ್ಯಾರ್ಥಿಯೋರ್ವನಿಗೆ ಯುವ ಫ್ರೆಂಡ್ಸ್‌ನ ಗೆಳೆಯರು ಹಿತೈಷಿಗಳು ಸೇರಿ ಬ್ಯಾನರ್‌ ಹಾಕಿ ಅಭಿನಂದಿಸಿದ್ದಾರೆ. ಬ್ಯಾನರ್‌ ಹೀಗಿದೆ ನೋಡಿ : ವಿದ್ಯಾರ್ಥಿಯ ಫೋಟೋ ಇರುವ ಬ್ಯಾನರ್‌ನಲ್ಲಿ ಆತನಿಗೆ ಅಭಿನಂದನೆಗಳನ್ನು ಸಲ್ಲಿಸಿ ಪಕ್ಕದಲ್ಲೇ

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು Read More »

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮುಂಬೈನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಫಲಕ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜೊತೆಗೆ 59 ಜನರು ಗಾಯಗೊಂಡಿದ್ದಾರೆ. ಎನ್​​ಡಿಆರ್​ಎಫ್ ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಇದರಂತೆ ಧೂಳು ಗಾಳಿಗೆ ಅನೇಕ ಕಡೆಗಳಲ್ಲಿ ಅನಾಹುತಗಳು ಸಂಭವಿಸಿವೆ. ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ Read More »

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ.. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷಮುಖಂಡ ಅಸಾದುದ್ದೀನ್‌ ಓವೈಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ Read More »

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಸಮಗ್ರ ನ್ಯೂಸ್‌ : ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ Read More »