ದೇಶ-ವಿದೇಶ

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪಹಲ್ಗಾಮ್ ನಲ್ಲಿ ನಡೆದಿದೆ. ಕಾಲ್ನಡಿಗೆ ಮೂಲಕ ಪಹಲ್ಗಾಮ್ ಪ್ರದೇಶಕ್ಕೆ ತೆರಳುತ್ತಿದ್ದ ಪ್ರವಾಸಿಗರ ಮೇಲೆ ನಾಲ್ವರು ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸೇನೆ ಸಮವಸ್ತ್ರದಲ್ಲಿ ಬಂದು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ೧೨ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರ ದಾಳಿ ಬೆನ್ನಲ್ಲೇ ಪಹಲ್ಗಾಮ್ ಪ್ರದೆಶವನ್ನು ಸೇನೆ ಸುತ್ತುವರೆದಿದ್ದು, ಉಗ್ರರ […]

ಜಮ್ಮುವಿನಲ್ಲಿ ಪ್ರವಾಸಿಗರ ಮೇಲೆ ಉಗ್ರರಿಂದ ಗುಂಡಿನ ದಾಳಿ| ಕನ್ನಡಿಗ ಸೇರಿ ಇಬ್ಬರು ‌ಹತ; ಹಲವರಿಗೆ ಗಾಯ Read More »

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ

ಸಮಗ್ರ ನ್ಯೂಸ್‌: ವಿಶ್ವದ ಮೊದಲ 10ಜಿ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಅನ್ನು ಚೀನಾವು ಪರಿಚಯಿಸಿದ್ದು, ಇದರಿಂದಾಗಿ ಬರೀ ಒಂದು ನಿಮಿಷದಲ್ಲಿಯೇ ಎರಡು ಗಂಟೆ ಅವಧಿಯ ಸಿನಿಮಾವನ್ನು ಡೌನ್‌ಲೋಡ್ ಮಾಡಬಹುದಾಗಿದೆ. ಚೀನಾ ಹಾಗೂ ಹುವೈ ಯುನಿಕಾರ್ನ್ ಜೊತೆ ಜಂಟಿಯಾಗಿ 10ಜಿ 10ಜಿ ಬ್ರಾಡ್‌ಬ್ಯಾಂಡ್‌ ನೆಟ್ವರ್ಕ್ ಅನ್ನು ಚೀನಾದ ಹೆಬ್ಬೆ ಪ್ರಾಂತ್ಯದ ಸುನನ್ ಕೌಂಟಿಯಲ್ಲಿ ಕಾರ್ಯಗತಗೊಳಿಸಿದೆ.ಭಾರತ ಸೇರಿ ಇತರೆ ದೇಶಗಳು 100 ಎಂಬಿಪಿಎಸ್ ವೇಗದಲ್ಲಿರುವಾಗ, ಚೀನಾ ಕಂಪನಿಗಳು ಇದರಿಂದ 10 ಪಟ್ಟು ವೇಗವನ್ನು ಹೊಂದಿರುವ ಬ್ರಾಡ್‌ಬ್ಯಾಂಡ್ ನೆಟ್ವರ್ಕ್ ಅನ್ನು ಜಾರಿಗೊಳಿಸಿದೆ. 2

10ಜಿ ಪರಿಚಯಿಸಿದ ಚೀನಾ/ ಒಂದು ನಿಮಿಷದಲ್ಲಿಯೇ ಡೌನ್‌ಲೋಡ್ ಆಗಲಿದೆ ಎರಡು ಗಂಟೆಯ ಸಿನಿಮಾ Read More »

ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ , ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ಅವರು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವ್ಯಾಟಿಕನ್ ನ್ಯೂಸ್ ಟ್ವಿಟ್ಟರ್‌ ಪೇಜ್ ಈ ವಿಚಾರವನ್ನು ಖಚಿತಪಡಿಸಿದೆ. ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರ, ಏಪ್ರಿಲ್ 21, 2025 ರಂದು ತಮ್ಮ 88 ನೇ

ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ Read More »

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000

ಸಮಗ್ರ ನ್ಯೂಸ್: ಚಿನ್ನದ ಬೆಲೆ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ. ದೆಹಲಿಯ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆ 98,100 ರೂ. ತಲುಪಿದೆ. ಕೇವಲ ಒಂದೇ ದಿನದಲ್ಲಿ, ಬುಧವಾರ 10 ಗ್ರಾಂಗೆ 1,650 ರೂ. ಏರಿಕೆಯಾಗಿದ್ದು, ಮಂಗಳವಾರ ಇದ್ದ 96,450 ರೂ.ನಿಂದ ಈ ಗಮನಾರ್ಹ ಜಿಗಿತ ಕಂಡಿದೆ. ಚಿನ್ನದ ಜೊತೆಗೆ ಬೆಳ್ಳಿಯ ಬೆಲೆಯೂ ಗಗನಕ್ಕೇರಿದೆ. ಬುಧವಾರ 1 ಕೆಜಿ ಬೆಳ್ಳಿಯ ಬೆಲೆ 99,400 ರೂ. ತಲುಪಿದ್ದು, ಒಂದೇ ದಿನದಲ್ಲಿ 1,900 ರೂ. ಏರಿಕೆ ಕಂಡಿದೆ. ಮಾರುಕಟ್ಟೆ

ಲಕ್ಷದ ಸನಿಹಕ್ಕೆ ತಲುಪಿದ ಬಂಗಾರದ ದರ|10 ಗ್ರಾಂ‌ಗೆ ರೂ.98000 Read More »

ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ

ಸಮಗ್ರ ನ್ಯೂಸ್: ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಇಂದು ಮಧ್ಯಾಹ್ನ 2 ಗಂಟೆಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರ ಸದಸ್ಯರನ್ನು ನೇಮಕ ಮಾಡುವ ಕಾಯ್ದೆಯ ನಿಯಮವನ್ನು ಪ್ರಶ್ನಿಸಿತು. “ಸರಕಾರವೇನಾದರೂ ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತದೆಯೆ?” ಎಂದು ಕೇಂದ್ರ ಸರಕಾರವನ್ನು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೂತನ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿನ ವಿವಿಧ ನಿಯಮಗಳು, ವಿಶೇಷವಾಗಿ ಬಳಕೆದಾರರ ಆಸ್ತಿಯನ್ನು ಬಳಸಿಕೊಳ್ಳುವ ವಕ್ಫ್‌ಗೆ ರೂಪಿಸಲಾಗಿರುವ ನಿಯಮಗಳ

ಹಿಂದೂ ದೇವಸ್ಥಾನ ಮಂಡಳಿಗಳಲ್ಲಿ ಮುಸ್ಲಿಮರಿಗೆ ಅವಕಾಶ ನೀಡುತ್ತೀರಾ? ವಕ್ಫ್ ತಿದ್ದುಪಡಿ ಕಾಯ್ದೆ ಅರ್ಜಿ ವಿಚಾರಣೆ ವೇಳೆ ಕೇಂದ್ರಕ್ಕೆ ಸುಪ್ರೀಂ ತರಾಟೆ Read More »

ಮದುವೆಯ ಬಳಿಕ‌ ಒಪ್ಪಿಗೆಯ ದೈಹಿಕ ಸಂಬಂಧ ಅಪರಾಧವಲ್ಲ| ಕೊಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ಮದುವೆಯ ನಂತರ ಪರಸ್ಪರ ಒಪ್ಪಿಗೆಯ ದೈಹಿಕ ಸಂಬಂಧವು ಅಪರಾಧವಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿವಾಹಿತ ದಂಪತಿಗಳ ಪ್ರಕರಣದಲ್ಲಿ ಕಲ್ಕತ್ತಾ ಹೈಕೋರ್ಟ್ ಒಂದು ದೊಡ್ಡ ಹೇಳಿಕೆ ನೀಡಿದೆ. ಮದುವೆಯ ಸುಳ್ಳು ಭರವಸೆ ನೀಡಿ ತನ್ನ ಪ್ರೇಮಿ ತನ್ನ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಮಹಿಳೆಯೊಬ್ಬಳು ಆರೋಪ ಮಾಡಿದ್ದಾಳೆ. ಇಬ್ಬರೂ ಈಗಾಗಲೇ ವಿವಾಹಿತರಾಗಿದ್ದರು ಮತ್ತು ಎರಡು ವರ್ಷಗಳಿಂದ ಪ್ರೇಮ ಸಂಬಂಧದಲ್ಲಿದ್ದರು. ಮಹಿಳೆಯ ಪತಿಗೆ ಈ ಸಂಬಂಧದ ಬಗ್ಗೆ ತಿಳಿದಾಗ, ಅವನು ಅವಳೊಂದಿಗೆ ವಾಸಿಸಲು

ಮದುವೆಯ ಬಳಿಕ‌ ಒಪ್ಪಿಗೆಯ ದೈಹಿಕ ಸಂಬಂಧ ಅಪರಾಧವಲ್ಲ| ಕೊಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು Read More »

ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಾಲಾ‌ ಶಿಕ್ಷಣ ಇಲಾಖೆ| 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲ

ಸಮಗ್ರ ನ್ಯೂಸ್: ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು. ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಶಾಲಾ ಮಕ್ಕಳ ವಯೋಮಿತಿ

ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಾಲಾ‌ ಶಿಕ್ಷಣ ಇಲಾಖೆ| 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲ Read More »

ಚೀನಾದ ಆಮದಿಗೆ 245% ತೆರಿಗೆ ನೀತಿಗೆ ಟ್ರಂಪ್ ಸಹಿ

ಸಮಗ್ರ ನ್ಯೂಸ್: ಚೀನಾದಿಂದ ಆಮದಿನ ಮೇಲೆ 245% ನಷ್ಟು ಹೆಚ್ಚಿನ ಸುಂಕವನ್ನು ವಿಧಿಸುವ ಹೊಸ ಕಾರ್ಯನಿರ್ವಾಹಕ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕುವುದರೊಂದಿಗೆ ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧವು ನಾಟಕೀಯ ತಿರುವು ಪಡೆದುಕೊಂಡಿದೆ. ಶ್ವೇತಭವನದ ಪ್ರಕಾರ, ಈ ಹೊಸ ಸುಂಕಗಳ ಪ್ರಾಥಮಿಕ ಗುರಿ ವೈದ್ಯಕೀಯ ಉಪಕರಣಗಳು- ವಿಶೇಷವಾಗಿ ಸಿರಿಂಜ್ಗಳು ಮತ್ತು ಸೂಜಿಗಳು – ಏಕೆಂದರೆ ಯುಎಸ್ ವೈದ್ಯಕೀಯ ಪೂರೈಕೆ ಸರಪಳಿಯ ನಿರ್ಣಾಯಕ ಕ್ಷೇತ್ರಗಳಲ್ಲಿ ಚೀನಾದ ಉತ್ಪಾದನೆಯ ಮೇಲೆ ಅತಿಯಾದ ಅವಲಂಬನೆ ಎಂದು

ಚೀನಾದ ಆಮದಿಗೆ 245% ತೆರಿಗೆ ನೀತಿಗೆ ಟ್ರಂಪ್ ಸಹಿ Read More »

ರಾಜ್ಯದಲ್ಲಿ ಇಂದಿನಿಂದ ‌ಸಿಇಟಿ ಪರೀಕ್ಷೆ| ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‍ಗಳ ಪ್ರವೇಶಕ್ಕೆ ನಡೆಸುವ 2025ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯು(ಸಿಇಟಿ) ಎ.15, ಎ.16 ಮತ್ತು ಎ.17 ರಂದು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗೆ 3.31 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ನಾಳೆ(ಎ.15) ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ನಡೆಯಲಿದೆ. ಎ.16ರಂದು ಭೌತ ವಿಜ್ಞಾನ

ರಾಜ್ಯದಲ್ಲಿ ಇಂದಿನಿಂದ ‌ಸಿಇಟಿ ಪರೀಕ್ಷೆ| ಪರೀಕ್ಷಾ ಕೇಂದ್ರ ಸುತ್ತಲೂ ನಿಷೇದಾಜ್ಞೆ Read More »

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಒಂದೇ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 6250 ರೂ. ಏರಿಕೆಯಾಗಿ, 10 ಗ್ರಾಂ ಚಿನ್ನದ ಬೆಲೆ 96,450 ರೂ. ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಒಂದೇ ದಿನ ರು.ಏರಿಕೆಯಾಗಿ, 96,450 ರು.ಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆ ಬರೆದಿದೆ. ಸ್ಥಳೀಯ ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಂದ ಚಿನ್ನಕ್ಕೆ ಭಾರೀ ಬೇಡಿಕೆ ಸೃಷ್ಟಿಯಾದ ಕಾರಣ ದರದಲ್ಲಿ ಏರಿಕೆಯಾಗಿದೆ. ಬುಧವಾರ(ಏ.09) ದಂದು ಶೇ.99.9 ಶುದ್ಧತೆಯ ಗೋಲ್ಡ್

ಮತ್ತೆ ಗಗನಕ್ಕೇರಿದ ಬಂಗಾರ ಧಾರಣೆ| ಒಂದೇ ದಿನ ₹.6250 ಏರಿಕೆ Read More »