ದೇಶ-ವಿದೇಶ

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ

ಸಮಗ್ರ ನ್ಯೂಸ್ : ಬ್ರೆಜಿಲ್‌ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದಿಂದಾಗಿ 37 ಮಂದಿ ಸಾವಿಗೀಡಾಗಿದ್ದಾರೆ. 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ನಾವು ಇತಿಹಾಸದಲ್ಲಿ ಅತ್ಯಂತ ಕೆಟ್ಟ ದುರಂತವನ್ನು ಎದುರಿಸುತ್ತಿದ್ದೇವೆ. ಅಲ್ ಜಜೀರಾ […]

ಬ್ರೆಜಿಲ್‌: ಭಾರೀ ಮಳೆ: ಮಣ್ಣಿನ ಕುಸಿತದಿಂದಾಗಿ 37 ಮಂದಿ ಮೃತ್ಯು, 74 ಕ್ಕೂ ಹೆಚ್ಚು ಜನ ಕಾಣೆ Read More »

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು

ಸಮಗ್ರ ನ್ಯೂಸ್‌ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಉಪಾಧ್ಯಕ್ಷ ನಿರಂಜನ್‌ ರೆಡ್ಡಿ ಅಮಿತ್‌ ಶಾ ವಿರುದ್ಧ ದೂರು ದಾಖಲಿಸಿದ್ದರು. ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು

ತೆಲಂಗಾಣ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ – ಅಮಿತ್‌ ಶಾ ವಿರುದ್ಧ ಕೇಸ್‌ ದಾಖಲು Read More »

ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ

ಸಮಗ್ರ ನ್ಯೂಸ್‌ : ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಆಚರಿಸಲಾಗುತ್ತಿದೆ. ಇವರು ಜನ ಸಮುದಾಯಗಳನ್ನು ರಕ್ಷಿಸುವ ಜೊತೆಗೆ ವಿವಿಧ ಪರಿಸ್ಥಿತಿಗಳಲ್ಲಿ ಅಪಾಯಕ್ಕೆ ಸಿಲುಕಿರುವವರ ಜೀವಗಳನ್ನು ಉಳಿಸುವ ಕೆಲಸವನ್ನೂ ನಿರ್ವಹಿಸುತ್ತಾರೆ. ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಮೇ 4ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಅಗ್ನಿಶಾಮಕ ದಳದ ಪೋಷಕ ಸಂತ ಸೇಂಟ್ ಫ್ಲೋರಿಯನ್ ಅವರ ಸ್ಮರಣಾರ್ಥ ಆಚರಿಸಲಾಗುತ್ತಿದೆ. ಸೇಂಟ್ ಫ್ಲೋರಿಯನ್ ಅನ್ನು ರೋಮನ್

ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ Read More »

ವಾರಾಣಸಿಯಲ್ಲಿ ಮೇ 14ರಂದು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕೊನೆಯ ಹಂತವಾದ ಜೂ.1ರಂದು ಮತದಾನ ನಡೆಯಲಿರುವ ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮೇ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಸತತ 3ನೇ ಬಾರಿಗೆ ಅವರು ಕಾಶಿಯಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರಕ್ಕೂ ಮುನ್ನ ಮೇ 13 ರಂದು ವಾರಣಾಸಿಯಲ್ಲಿ ಭವ್ಯವಾದ ರೋಡ್‍ಶೋ ಆಯೋಜಿಸಲಾಗಿದೆ. ಅಲ್ಲಿ ಪ್ರಧಾನಿ ಮೋದಿ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ಇನ್ನು ಮರುದಿನ 14ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕಾಶಿ ವಿಶ್ವನಾಥ ಮಂದಿರ ಹಾಗೂ ಕಾಲಭೈರವ

ವಾರಾಣಸಿಯಲ್ಲಿ ಮೇ 14ರಂದು ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಆಫ್ರಿಕಾ : ಧಾರಾಕಾರ ಮಳೆಯಿಂದ ಮಹಾ ಪ್ರವಾಹ: 90 ಜನ ಕಾಣೆ, 350ಕ್ಕೂ ಅಧಿಕ ಜನ ಮೃತ್ಯು

ಸಮಗ್ರ ನ್ಯೂಸ್ : ಕಳೆದೊಂದು ವಾರದಿಂದ ಕೀನ್ಯಾ ಮತ್ತು ತಂಜಾನಿಯಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳೆಲ್ಲ ನದಿಯಂತಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹಾಗೂ ಸಾಕು ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಿಂದಾಗಿ ಸುಮಾರು 350ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹಕ್ಕೆ ಮನೆಗಳು, ರಸ್ತೆಗಳು ಕೊಚ್ಚಿ ಹೋಗಿದ್ದು, ಹಲವು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇನ್ನೂ ಭೀಕರ ಮಳೆಯಿಂದಾಗಿ ಕಿನ್ಯಾದ ಲಕ್ಷಕ್ಕೂ ಅಧಿಕ ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಅಲ್ಲಿನ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು

ಆಫ್ರಿಕಾ : ಧಾರಾಕಾರ ಮಳೆಯಿಂದ ಮಹಾ ಪ್ರವಾಹ: 90 ಜನ ಕಾಣೆ, 350ಕ್ಕೂ ಅಧಿಕ ಜನ ಮೃತ್ಯು Read More »

ಮಹಾರಾಷ್ಟ್ರ : ಮನೆಯಲ್ಲಿ ಬೆಂಕಿ ಅವಘಡ: 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆಯಲ್ಲಿ ಏಳು ಮಂದಿ ವಯಸ್ಕರು ಹಾಗೂ 2–3 ಮಕ್ಕಳು ಇದ್ದರು. ಸಿಲಿಂಡರ್‌ ಬ್ಲಾಸ್ಟ್‌ನಿಂದ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಸದಾಫ್ ಇರ್ಫಾನ್ ಶೇಖ್ (3) ಮೃತಪಟ್ಟರೆ, ರಿಜ್ವಾನ್ ಖಾನ್ (40), ರೆಹಾನ್ ಶೇಖ್ (17), ಆದಿಲ್ ಖಾನ್ (10), ಫೈಜಾನ್

ಮಹಾರಾಷ್ಟ್ರ : ಮನೆಯಲ್ಲಿ ಬೆಂಕಿ ಅವಘಡ: 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ Read More »

ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ/ ರಾಹುಲ್ ಗಾಂಧಿ ಟ್ವೀಟ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ. ಈ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವುದು ನನಗೆ ಭಾವನಾತ್ಮಕ ಕ್ಷಣ. ನಮ್ಮ ಕುಟುಂಬದ ‘ಕರ್ಮಭೂಮಿ’ ಮತ್ತು ಕ್ಷೇತ್ರದ ಜನರ ಸೇವೆ ಮಾಡುವ ಅವಕಾಶದ ಜವಾಬ್ದಾರಿಯನ್ನು ನನ್ನ ತಾಯಿ ನನಗೆ ವಹಿಸಿದ್ದಾರೆ ಎಂದು ರಾಯ್ ಬರೇಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೇಥಿ ಮತ್ತು ರಾಯ್‍ಬರೇಲಿಯ ಜನರು ಯಾವಾಗಲೂ ನಮ್ಮ ಕುಟುಂಬಸ್ಥರಿದ್ದಂತೆ ಎಂದು ಟ್ವೀಟ್ ಮಾಡಿದ್ದಾರೆ. ಅಮೇಥಿ ಮತ್ತು ರಾಯ್ ಬರೇಲಿ ನನಗೆ

ರಾಯ್ ಬರೇಲಿ ನಮ್ಮ ಕುಟುಂಬದ ಪಾಲಿಗೆ ಕರ್ಮಭೂಮಿ/ ರಾಹುಲ್ ಗಾಂಧಿ ಟ್ವೀಟ್ Read More »

ರೋಹಿತ್ ವೇಮುಲ ದಲಿತನಲ್ಲ/ ತನಿಖೆ ಮುಕ್ತಾಯಗೊಳಿಸಿದ ತೆಲಂಗಾಣ ಪೊಲೀಸರು

ಸಮಗ್ರ ನ್ಯೂಸ್: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿದ್ದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದ ಪಿಎಚ್‍ಡಿ ವಿದ್ಯಾರ್ಥಿ ರೋಹಿತ್ ವೇಮುಲ ಸಾವಿನ ಪ್ರಕರಣದ ತನಿಖೆಯನ್ನು ತೆಲಂಗಾಣ ಪೊಲೀಸರು ಮುಕ್ತಾಯಗೊಳಿಸಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಂದಿನ ಸಿಕಂದರಾಬಾದ್ ಸಂಸದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್ ಸದಸ್ಯ ಎನ್ ರಾಮಚಂದರ್ ರಾವ್ ಮತ್ತು ಉಪಕುಲಪತಿ ಅಪ್ಪಾ ರಾವ್ ಅವರನ್ನು ದೋಷಮುಕ್ತಗೊಳಿಸಿದ್ದಾರೆ. 2016ರ ಜನವರಿ 17ರಂದು ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯಲ್ಲಿ ರೋಹಿತ್ ವೇಮುಲ ಆತ್ಮಹತ್ಯೆ ಮಾಡಿಕೊಂಡಿದ್ದ. ಈತನು ದಲಿತನೆಂದು, ವಿಶ್ವವಿದ್ಯಾಲಯದಲ್ಲಿ ದಲಿತ

ರೋಹಿತ್ ವೇಮುಲ ದಲಿತನಲ್ಲ/ ತನಿಖೆ ಮುಕ್ತಾಯಗೊಳಿಸಿದ ತೆಲಂಗಾಣ ಪೊಲೀಸರು Read More »

ಷೇರು ಪೇಟೆಯಲ್ಲಿ ಕರಡಿ ಕುಣಿತ| ಕೋಟಿ ಕೋಟಿ ನಷ್ಟ ಕಂಡ ಹೂಡಿಕೆದಾರರು

ಸಮಗ್ರ ನ್ಯೂಸ್: ಷೇರು ಮಾರುಕಟ್ಟೆಯಲ್ಲಿ ಶುಕ್ರವಾರ (ಮೇ 3) ತಲ್ಲಣ ಸೃಷ್ಟಿಯಾಗಿದ್ದು, ಎನ್‌ಎಸ್‌ಇ ನಿಫ್ಟಿ ಹಾಗೂ ಬಿಎಸ್‌ಇ ಸೆನ್ಸೆಕ್ಸ್‌ ಭಾರಿ ಕುಸಿತ ಕಂಡ ಕಾರಣ ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಎನ್‌ಎಸ್‌ಇ ನಿಫ್ಟಿ 50 ಸುಮಾರು 172.35 ಪಾಯಿಂಟ್‌ಗಳ ಕುಸಿತ ಕಂಡರೆ, ಬಿಎಸ್‌ಇ ಸೆನ್ಸೆಕ್ಸ್‌ (BSE Sensex) 733 ಪಾಯಿಂಟ್‌ಗಳ ಕುಸಿತ ಕಂಡಿದೆ. ಆರಂಭದಲ್ಲಿ ಲಾಭ ಕಂಡ ಹೂಡಿಕೆದಾರರು ದಿನದ ಅಂತ್ಯಕ್ಕೆ ನಷ್ಟ ಅನುಭವಿಸಿದರು. ಎನ್‌ಎಸ್‌ಇ ನಿಫ್ಟಿ 50

ಷೇರು ಪೇಟೆಯಲ್ಲಿ ಕರಡಿ ಕುಣಿತ| ಕೋಟಿ ಕೋಟಿ ನಷ್ಟ ಕಂಡ ಹೂಡಿಕೆದಾರರು Read More »

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಸಮಗ್ರ ನ್ಯೂಸ್‌ : ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ದು ಪರೇಲಿ ಎಂಬ ಐಷಾರಾಮಿ ಹಡಗು ಮಂಗಳೂರಿನ ಹಳೇ ಬಂದರಿಗೆ ಬಂದಿದೆ. ಈ ಐಷಾರಾಮಿ ಹಡಗಿನಲ್ಲಿ 150 ಪ್ರಯಾಣಿಕರು ಸೇರಿದಂತೆ 8 ಮಂದಿ ಸಿಬ್ಬಂದಿ, ಓರ್ವ ಪೈಲಟ್, ಚೀಫ್ ಇಂಜಿನಿಯರ್, ಸಹಾಯಕ ಇಂಜಿನಿಯರ್‌ ಬಂದಿಳಿದಿದ್ದಾರೆ. ಕಳೆದ ಏಳು ವರ್ಷಗಳಿಂದ ಲಕ್ಷದ್ವೀಪದಿಂದ ಕೇವಲ ಸರಕು ಸಾಗಣೆ ಹಡಗುಗಳಷ್ಟೇ ಬರುತ್ತಿತ್ತು. ಸದ್ಯ

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು Read More »