ದೇಶ-ವಿದೇಶ

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ಅಫಿಡವಿಟ್​ನಲ್ಲಿ […]

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ

ಸಮಗ್ರ ನ್ಯೂಸ್ : ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ.

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ Read More »

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್

ಸಮಗ್ರ ನ್ಯೂಸ್: ವ್ಯೂಹಾತ್ಮಕವಾಗಿ ಅತ್ಯಂತ ಆಯಕಟ್ಟಿನ ಸ್ಥಳದಲ್ಲಿರುವ ಇರಾನ್‍ನ ಚಾಬಹಾರ್ ಬಂದರಿನ ಒಂದು ಟರ್ಮಿನಲ್ ಅನ್ನು 10 ವರ್ಷ ನಿರ್ವಹಣೆ ಮಾಡುವ ಕುರಿತು ಭಾರತ ಮತ್ತು ಇರಾನ್ ಐತಿಹಾಸಿಕ ಒಪ್ಪಂದಕ್ಕೆ ಸಹಿಹಾಕಿವೆ. ಈ ಮೂಲಕ ವಿದೇಶದಲ್ಲಿರುವ ಬಂದರಿನ ನಿರ್ವಹಣೆಗೆ ಭಾರತ ಮೊದಲ ಬಾರಿಗೆ ಮುಂದಾಗಿದೆ ಪ್ರಾಂತೀಯ ಸಂಪರ್ಕ ಮತ್ತು ವ್ಯಾಪಾರಕ್ಕೆ ಈ ಒಪ್ಪಂದವು ಬಹುದೊಡ್ಡ ಕಾಣಿಕೆ ನೀಡಲಿದೆ ಎಂದು ವಿಶ್ಲೇಷಿಸಲಾಗಿದೆ. ಜೊತೆಗೆ ಪಾಕಿಸ್ತಾನವನ್ನು ಸಂಪರ್ಕಿಸದೆಯೇ ಭಾರತ-ಇರಾನ್- ಆಫ್ಘಾನಿಸ್ತಾನ ನಡುವಣ ವ್ಯಾಪಾರ ವಹಿವಾಟಿಗೆ ಹೊಸ ಮಾರ್ಗವನ್ನೂ ತೆರೆಯಲಿದೆ. ಶಹೀದ್-

ಇರಾನ್‍ನ ಚಾಬಹಾರ್ ಬಂದರಿನ ನಿರ್ವಹಣೆ/ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಇರಾನ್ Read More »

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು

ಸಮಗ್ರ ನ್ಯೂಸ್: ಕೆಲವರಿಗೆ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದರೆ ಸಾಧನೆ, ಇನ್ನು ಕೆಲವರಿಗೆ ತೇರ್ಗಡೆಯಾದರೆ ಅದೇ ಸಾಧನೆ. ನಿಜದ ಅರ್ಥದಲ್ಲಿ ಎರಡೂ ಸಂಭ್ರಮವೇ, ಆದ್ಯತೆಯೆ ಬೇರೆ. ಕುಡುಪಿನ ಮಂಗಳಾನಗರದಲ್ಲಿ ಇಂಥದ್ದೇ ಒಂದು ಅಪರೂಪದ ಸಂಭ್ರಮಾಚರಣೆ ನಡೆದಿದೆ. ಇತ್ತೀಚಿನ ಎಸ್‌ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಪಾಸಾಗಿದ್ದಕ್ಕೇ (ಜಸ್ಟ್‌ ಪಾಸ್‌) ವಿದ್ಯಾರ್ಥಿಯೋರ್ವನಿಗೆ ಯುವ ಫ್ರೆಂಡ್ಸ್‌ನ ಗೆಳೆಯರು ಹಿತೈಷಿಗಳು ಸೇರಿ ಬ್ಯಾನರ್‌ ಹಾಕಿ ಅಭಿನಂದಿಸಿದ್ದಾರೆ. ಬ್ಯಾನರ್‌ ಹೀಗಿದೆ ನೋಡಿ : ವಿದ್ಯಾರ್ಥಿಯ ಫೋಟೋ ಇರುವ ಬ್ಯಾನರ್‌ನಲ್ಲಿ ಆತನಿಗೆ ಅಭಿನಂದನೆಗಳನ್ನು ಸಲ್ಲಿಸಿ ಪಕ್ಕದಲ್ಲೇ

ಎಲ್ಲರಿಗೂ ಡಿಸ್ಟಿಂಕ್ಷನ್ ಬರೋದೇ ಸಾಧನೆ ಆದ್ರೆ, ಈ ‘ಬ್ರೂಸ್ಲಿ’ ಪಾಸಾಗಿದ್ದೇ ಗೆಳೆಯರಿಗೆ ಸಂಭ್ರಮ! ಬ್ಯಾನರ್ ಹಾಕಿ ಖುಷಿ ಹಂಚಿಕೊಂಡ ಪ್ರೆಂಡ್ಸು Read More »

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮುಂಬೈನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಫಲಕ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜೊತೆಗೆ 59 ಜನರು ಗಾಯಗೊಂಡಿದ್ದಾರೆ. ಎನ್​​ಡಿಆರ್​ಎಫ್ ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಇದರಂತೆ ಧೂಳು ಗಾಳಿಗೆ ಅನೇಕ ಕಡೆಗಳಲ್ಲಿ ಅನಾಹುತಗಳು ಸಂಭವಿಸಿವೆ. ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ Read More »

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ.. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷಮುಖಂಡ ಅಸಾದುದ್ದೀನ್‌ ಓವೈಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ Read More »

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌

ಸಮಗ್ರ ನ್ಯೂಸ್‌ : ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌ ಮಾಡಲಾಗಿದೆ. ದೇಶದ ಇತಿಹಾಸದಲ್ಲೇ ಇದೊಂದು ಅತಿ ದೊಡ್ಡ ದರೋಡೆ ಪ್ರಕರಣವಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಅರೆಸ್ಟ್‌ ಮಾಡಿದೆ. ಬಂಧಿತನನ್ನು ಅರ್ಚಿತ್‌ ಗ್ರೋವರ್‌ ಎಂದು ಗುರುತಿಸಲಾಗಿದ್ದು, ಈತನ ಬಂಧನಕ್ಕಾಗಿ ಕೆನಡಾದಾದ್ಯಂತ ವಾರೆಂಟ್‌ ಜಾರಿಗೊಳಿಸಲಾಗಿತ್ತು. ಗ್ರೋವರ್‌ ವಿರುದ್ಧ 5,000ಡಾಲರ್‌ ಕಳ್ಳತನ ಮತ್ತು ದರೋಡೆಗೆ ಸಂಚು ರೂಪಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಅಮೆರಿಕದ

ಕೆನಡಾ: ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಅರೆಸ್ಟ್‌ Read More »

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು

ಸಮಗ್ರ ನ್ಯೂಸ್: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್‌ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು Read More »

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎ. 21ರಂದು ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ನ್ಯಾಶನಲ್ ಡಿಫೆನ್ಸ್ ಅಕಾಡೆಮಿಯವರು ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಕ್ರಿಯೇಟಿವ್ ವಿದ್ಯಾರ್ಥಿ ನೇಹಾ ಕೆ. ಉದಪುಡಿ, ಸುಧೀಶ್ ಕೆ.ಆರ್. ಶೆಟ್ಟಿ, ಸುಜಿತ್ ಡಿ.ಕೆ., ವರ್ಷ ಹೆಚ್.ವಿ. ಲಿಖಿತ ಪರೀಕ್ಷೆಯಲ್ಲಿ ತೆರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕ್ರಿಯೇಟಿವ್

ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ Read More »

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ

ಭಿಕ್ಷುಕರಿಗೆ (ಆಹಾರ+ನೀರು+ಬಟ್ಟೆ) ನೀಡಿ.  ಆದರೆ ನಗದಾಗಿ ಒಂದು ರೂಪಾಯಿಯನ್ನು ಕೊಡಬೇಡಿ. ಯಾವುದೇ ರೀತಿಯ ವ್ಯಕ್ತಿ (ಹೆಣ್ಣು/ಗಂಡು/ವೃದ್ಧ/ಅಂಗವಿಕಲ/ಮಕ್ಕಳು) ಭಿಕ್ಷೆ ಬೇಡಿದರೆ ಹಣದ ಬದಲು (ಆಹಾರ+ನೀರು+ಬಟ್ಟೆ) ಕೊಟ್ಟರೆ. ಇದರ ಪರಿಣಾಮವಾಗಿ, ಅಂತರರಾಷ್ಟ್ರೀಯ / ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ‘ಭಿಕ್ಷುಕರ’ ಗುಂಪುಗಳು ಒಡೆಯುತ್ತವೆ ಮತ್ತು ನಂತರ ಮಕ್ಕಳ ಅಪಹರಣವು ನಿಲ್ಲುತ್ತದೆ. ಪ್ರಾರಂಭಿಸಿ ಪೋಸ್ಟ್ ಅನ್ನು ಹಂಚಿಕೊಳ್ಳಿ. *ದಯವಿಟ್ಟು ಭಿಕ್ಷುಕನಿಗೆ ಒಂದು ರೂಪಾಯಿ ಕೊಡಬೇಡಿ.ನಿಮಗೆ ಮನಸ್ಸಿದ್ದರೆ ಬಿಸ್ಕತ್ತುಗಳನ್ನು ಕಾರಿನಲ್ಲಿ ಇಟ್ಟುಕೊಳ್ಳಿ. ಆದರೆ ನಗದು ಕೊಡಬೇಡಿ*

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ Read More »