ದೇಶ-ವಿದೇಶ

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ

ಸಮಗ್ರ ನ್ಯೂಸ್: ಯುಗಾದಿ ಹಬ್ಬದ ಬಳಿಕ ಚಿನ್ನದ ದರ ಏರಿಕೆ ಕ್ರಮೇಣ ಮುಂದುವರೆದಿದ್ದು, ಶುಕ್ರವಾರವೂ ಕೂಡ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, 22 ಕ್ಯಾರಟ್‌ ಚಿನ್ನದ ದರದಲ್ಲಿ ಬರೊಬ್ಬರಿ 100 ರೂ ಏರಿಕೆಯಾಗಿದ್ದು, 24 ಕ್ಯಾರೆಟ್‌ ಚಿನ್ನದ ಬೆಲೆ 109 ರೂ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನ 6,720ರೂ ಇದ್ದು, 24 ಕ್ಯಾರಟ್ ಚಿನ್ನದರ 7,331 ರೂಗೆ ಏರಿಕೆಯಾಗಿದೆ. ಮದುವೆಯಂತಹ ಕಾರ್ಯಕ್ರಮದಲ್ಲಿ ಚಿನ್ನ ಖರೀದಿ ಮಾಡುವುದು […]

ಕೈಗೆಟುಕದ ಹಳದಿ ಲೋಹ| ಬಂಗಾರ ಈಗ ಮತ್ತಷ್ಟು ಭಾರ Read More »

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ

ಸಮಗ್ರ ನ್ಯೂಸ್ : ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ ಎಂದರು.

ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ Read More »

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌

ಸಮಗ್ರ ನ್ಯೂಸ್‌ : ರಾತ್ರಿ 10 ಗಂಟೆಯ ನಂತರವೂ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಕೊಯಮತ್ತೂರು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಕಾನೂನು ಬಾಹಿರ ಸಭೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗಡುವು ಮೀರಿ ಬಿಜೆಪಿ ಪ್ರಚಾರ ನಡೆಸಿದ್ದಕ್ಕೆ ಡಿಎಂಕೆ ಮತ್ತು ಎಡಪಕ್ಷಗಳ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಸೆಕ್ಷನ್ 143, 341 ಮತ್ತು 290 ರ ಅಡಿಯಲ್ಲಿ ಎಫ್‌ಐಆರ್

ಚೆನ್ನೈ: ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಅಣ್ಣಾಮಲೈ ವಿರುದ್ಧ ಕೇಸ್‌ Read More »

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ

ಸಮಗ್ರ ನ್ಯೂಸ್: ಈ ಸಂವಿಧಾನ ನಮಗೆ ಗೀತಾ, ಕುರಾನ್, ಬೈಬಲ್ ಎಲ್ಲವೂ ಆಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರೇ ಖುದ್ದು ಬಂದರೂ ಸಂವಿಧಾನವನ್ನು ರದ್ದು ಮಾಡಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರಕ್ಕೆ ದೇಶದ ಸಂವಿಧಾನವೇ ಸರ್ವಸ್ವ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರಾಜಸ್ಥಾನದ ಬಾರ್ಮರ್‍ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಗೆದ್ದರೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ. ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಸಂವಿಧಾನವನ್ನು ನಾಶಪಡಿಸಲು ಯತ್ನಿಸಿದ್ದು

ಬಿಜೆಪಿಗೆ ದೇಶದ ಸಂವಿಧಾನವೇ ಸರ್ವಸ್ವ/ ಪ್ರಧಾನಿ ಮೋದಿ ಘೋಷಣೆ Read More »

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ

ಸಮಗ್ರ ನ್ಯೂಸ್: ಭಾರತ ಜೊತೆಗಿನ ಮಾಲ್ಮೀನ್ಸ್ ರಾಜತಾಂತ್ರಿಕ ಸಂಬಂಧಗಳ ಮುನಿಸಿನ ಬಳಿಕ ಪ್ರವಾಸಿಗರನ್ನು ಮರಳಿ ಸೆಳೆಯಲು ಭಾರತದಲ್ಲಿ ರೋಡ್‍ಶೋಗಳನ್ನು ನಡೆಸುವುದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಲ್ಡೀವ್ಸ್ ಅಸೋಸಿಯೇಶನ್ ಆಫ್ ಟ್ರಾವೆಲ್ ಏಜೆಂಟ್ಸ್ ಮತ್ತು ಟೂರ್ ಆಪರೇಟರ್ಸ್ ಅವರು ಮಾಲೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭಾರತದ ಪ್ರಮುಖ ನಗರಗಳಲ್ಲಿ ಸಮಗ್ರ ರೋಡ್ ಶೋಗಳನ್ನು ನಡೆಸುವುದರ ವಿಚಾರವಾಗಿ ಪ್ರಸ್ತಾಪಿಸಿದ್ದಾರೆ. ಪ್ರವಾಸೋದ್ಯಮದಲ್ಲಿ ಕುಸಿತ ಕಂಡ ಹಿನ್ನೆಲೆ ಸಂಸ್ಥೆಯನ್ನು ಮತ್ತಷ್ಟು

ಪ್ರವಾಸಿಗರಿಲ್ಲದೇ ಸಂಕಷ್ಟಕ್ಕೆ ಒಳಗಾದ ಮಾಲ್ಡೀವ್ಸ್/ ಭಾರತದಲ್ಲಿ ರೋಡ್‍ಶೋ ನಡೆಸಲು ಚಿಂತನೆ Read More »

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ

ಸಮಗ್ರ ನ್ಯೂಸ್: ಏ.19ರಿಂದ ಜೂ.4ರವರೆಗೆ ಭಾರತದಲ್ಲಿ ನಡೆಯಲಿರುವ ನೂರು ಕೋಟಿ ಜನರು ಭಾಗಿಯಾಗುವ ವಿಶ್ವದ ಅತಿದೊಡ್ಡ ಚುನಾವಣೆ ಪ್ರಕ್ರಿಯೆ ಮತ್ತು ಆಡಳಿತಾರೂಢ ಪಕ್ಷದ ಚುನಾವಣಾ ಪ್ರಚಾರ ರಣತಂತ್ರ ವೀಕ್ಷಿಸಲು ಆಗಮಿಸುವಂತೆ ವಿಶ್ವದ ಹಲವು ದೇಶಗಳ 25ಕ್ಕೂ ಅಧಿಕ ರಾಜಕೀಯ ಪಕ್ಷಗಳಿಗೆ ಬಿಜೆಪಿ ಆಹ್ವಾನ ನೀಡಿದೆ. ಈ ಪೈಕಿ 13 ಪಕ್ಷಗಳು ಈಗಾಗಲೇ ತಮ್ಮ ಆಗಮನವನ್ನು ಖಚಿತಪಡಿಸಿವೆ. ಈ ಪಕ್ಷಗಳ ಪ್ರತಿನಿಧಿಗಳು 3 ಅಥವಾ 4ನೇ ಹಂತದ ಚುನಾವಣೆ ವೇಳೆ ಭಾರತಕ್ಕೆ ಆಗಮಿಸಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ

ಲೋಕಸಭಾ ಚುನಾವಣೆ/ ಪ್ರಚಾರ ವೀಕ್ಷಿಸಲು ಹಲವು ದೇಶಗಳಿಗೆ ಆಹ್ವಾನ Read More »

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ

ಸಮಗ್ರ ನ್ಯೂಸ್: ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅರಣ್ಯ ಕ್ಯಾಂಟೀನ್ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆಯ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕಡಿಮೆ ಬೆಲೆಯಲ್ಲಿ ಪಡಿತರ ಸಿಗಲು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಆಗ್ರಹಕ್ಕೆ ಪೂರಕವಾಗಿ ಕೆಲ ತಿಂಗಳ ಹಿಂದಷ್ಟೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಸುಭಾಷ್ ಮಾಲ್ಖೆಡೆ ಅವರು ಸೇನೆ

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ Read More »

ಇರಾನ್-ಇಸ್ರೇಲ್ ಯುದ್ಧ ಸಾಧ್ಯತೆ/ ಎರಡು ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ

ಸಮಗ್ರ ನ್ಯೂಸ್; ಮುಂದಿನ 48 ಗಂಟೆಗಳಲ್ಲಿ ಇರಾನ್- ಇಸ್ರೇಲ್ ಮೇಲೆ ದಾಳಿ ನಡೆಸುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ಇರಾನ್ ಮತ್ತು ಇಸ್ರೇಲ್‍ಗೆ ಪ್ರಯಾಣಿಸುವುದನ್ನು ನಿಲ್ಲಿಸುವಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಇರಾನ್ ಅಥವಾ ಇಸ್ರೇಲ್‍ನಲ್ಲಿ ನೆಲೆಸಿರುವ ಭಾರತೀಯರು ಅಲ್ಲಿನ ಭಾರತೀಯ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ತಮ್ಮನ್ನು ನೋಂದಾಯಿಸಿಕೊಳ್ಳುವಂತೆ ಸಚಿವಾಲಯ ತಿಳಿಸಿದೆ. ಸುರಕ್ಷತೆ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಓಡಾಟ ಕನಿಷ್ಠ ಮಟ್ಟಕ್ಕೆ ನಿಬರ್ಂಧಿಸಲು ವಿನಂತಿಸಲಾಗಿದೆ. ಮುಂದಿನ 48

ಇರಾನ್-ಇಸ್ರೇಲ್ ಯುದ್ಧ ಸಾಧ್ಯತೆ/ ಎರಡು ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಸೂಚನೆ Read More »

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಿಳಿಮರಿ ಕೈಯಲ್ಲಿ ಭವಿಷ್ಯ ಹೇಳಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಡಲೂರು ಲೋಕಸಭಾ ಕ್ಷೇತ್ರದಲ್ಲಿ ಪಿಎಂಕೆ ಪಕ್ಷದಿಂದ ಥಂಕರ್ ಬಚ್ಚನ್ ಅವರು ಸ್ಪರ್ಧಿಸಿದ್ದಾರೆ. ಇವರು ಬೀದಿ ಬದಿಯಲ್ಲಿ ಗಿಳಿ ಶಾಸ್ತ್ರ ಕೇಳಿದ್ದರು. ಸೆಲ್ವರಾಜ್ ಎಂಬುವವರು ಗಿಳಿ ಕೈಯಲ್ಲಿ ಭವಿಷ್ಯ ಹೇಳಿಸಿ ಥಂಕರ್

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ Read More »

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!?

ಸಮಗ್ರ ನ್ಯೂಸ್: ಮಕ್ಕಳ ಬೆತ್ತಲೆ ಚಿತ್ರಗಳನ್ನು ಪೋಷಕರಿಗೆ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುವ ಘಟನೆಗಳು ಹಲವು ಕಡೆ ನಡೆದ ಹಿನ್ನೆಲೆ ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. ಹದಿಹರೆಯದವರು ತಮ್ಮ ನೇರ ಸಂದೇಶಗಳಲ್ಲಿ ಅನಗತ್ಯ ನಗ್ನ ಫೋಟೋಗಳನ್ನು ನೋಡದಂತೆ ರಕ್ಷಿಸಲು ಸಹಾಯ ಮಾಡಲು ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. 18 ವರ್ಷದೊಳಗಿನವರಿಗೆ ಅಶ್ಲೀಲ ಫೋಟೋ ಬ್ಲರ್ ಆಗಿ ಕಾಣಿಸಲಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬಂದರೆ ಮಸುಕಾಗಿಯೇ ಇರುತ್ತವೆ. 18

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!? Read More »