ದೇಶ-ವಿದೇಶ

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ/ ಸಚಿವ ದಿನೇಶ್ ಗುಂಡೂರಾವ್ ಆದೇಶ

ಸಮಗ್ರ ನ್ಯೂಸ್: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದಲ್ಲಿ ಪತಂಜಲಿಯ ಎಲ್ಲ ಉತ್ಪನ್ನಗಳ ಪರಿಶೀಲನೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ. ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ […]

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ/ ಸಚಿವ ದಿನೇಶ್ ಗುಂಡೂರಾವ್ ಆದೇಶ Read More »

ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು

ಸಮಗ್ರ ನ್ಯೂಸ್‌ : ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ನಡೆಯುವ ವಸಂತೋತ್ಸವ ಈ ಬಾರಿ ಏ. 21ರಿಂದ 23ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೇವಾಲಯದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರಿಂದ ಯಾವುದೇ ನಿಯಮಿತ ಸೇವೆಗಳನ್ನು ನಡೆಸಲಾಗುವುದಿಲ್ಲ. ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಬರುವ ಚೈತ್ರ ಮಾಸದ ತ್ರಯೋದಶಿ, ಚತುರ್ದಶಿ ಮತ್ತು ಪೌರ್ಣಮಿಯ ಶುಭ ದಿನಗಳಲ್ಲಿ ವಾರ್ಷಿಕ ಸಲಕಟ್ಲ ವಸಂತೋತ್ಸವವನ್ನು ನಡೆಸಲಾಗುತ್ತದೆ. ಈ ಬಾರಿ ಮೂರು ದಿನಗಳ ಸಲಕಟ್ಲ ವಸಂತೋತ್ಸವವು ಏಪ್ರಿಲ್ 21ರಿಂದ 23ರವರೆಗೆ ವೈಭವದಿಂದ

ತಿರುಮಲದಲ್ಲಿ ಏಪ್ರಿಲ್ 21ರಿಂದ ಹಲವು ಸೇವೆಗಳು ರದ್ದು Read More »

ಅಪಾಯಕಾರಿ ನಾಯಿಗಳ ನಿಷೇಧ/ ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಪಿಟ್‌ಬುಲ್ ಟೆರಿಯರ್, ಅಮೇರಿಕನ್ ಬುಲ್‌ಡಾಗ್ಸ್, ರೊಟ್‌ವೀಲರ್ಸ್ ಮತ್ತು ಮ್ಯಾಸ್ಟಿಫ್ಟ್ ಸೇರಿದಂತೆ ೨೩ ತಳಿಗಳ ಅಪಾಯಕಾರಿ ನಾಯಿಗಳ ಮಾರಾಟ, ಸಾಕಾಣಿಕೆ ಹಾಗೂ ಅವುಗಳ ಸಂತಾನೋತ್ಪತ್ತಿಗೆ ನಿಷೇಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಇಂದು ಕರ್ನಾಟಕ ಹೈಕೋರ್ಟ್ ಕೇಂದ್ರದ ಸುತ್ತೋಲೆಯನ್ನು ರದ್ದುಗೊಳಿಸಿದ್ದು, ಈ ರೀತಿಯ ಕ್ರಮಕ್ಕೂ ಮುನ್ನ ಶ್ವಾನ ತಳಿ ಸಂವರ್ಧನಾ ಸಂಘಟನೆಯೊAದಿಗೆ ಸಮಾಲೋಚಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಕೇಂದ್ರ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ, ಕಿಂಗ್ ಸಾಲೊಮನ್ ಡೇವಿಡ್ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ

ಅಪಾಯಕಾರಿ ನಾಯಿಗಳ ನಿಷೇಧ/ ಕೇಂದ್ರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ಲಕ್ನೋ:ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 500 ರೂ. ಮೊಬೈಲ್ ಡೇಟಾ ಉಚಿತ; ಅಖಿಲೇಶ್‌

ಸಮಗ್ರ ನ್ಯೂಸ್‌ : ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮೊಬೈಲ್ ಡೇಟಾಗೆ ಉಚಿತವಾಗಿ 500 ರೂ. ಹಣವನ್ನು ಎಲ್ಲಾ ಬಿಪಿಎಲ್‌ ಪಡಿತರ ಕಾರ್ಡ್‌ ಹೊಂದಿದ ಗ್ರಾಹಕರಿಗೆ ನೀಡಲಾಗುವುದು ಎಂದು ಸಮಾಜವಾದಿ ಪಕ್ಷ ಹೇಳಿದೆ. ಎಸ್‌ಪಿ ಅಧ್ಯಕ್ಷ ಅಖಿಲೇಶ್‌ ಯಾದವ್‌ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು ಉಚಿತ ಲ್ಯಾಪ್‌ಟಾಪ್ ನೀಡಿದ ನಂತರ ಸಮಾಜದಲ್ಲಿ ದೊಡ್ಡ ಬದಲಾವಣೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಏರಿದರೆ ಮೊಬೈಲ್‌ ಡೇಟಾಗೆ 500 ರೂ. ನೀಡಲಾಗುವುದು ಎಂದು

ಲಕ್ನೋ:ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 500 ರೂ. ಮೊಬೈಲ್ ಡೇಟಾ ಉಚಿತ; ಅಖಿಲೇಶ್‌ Read More »

ಮದ್ಯ ನೀತಿ ಹಗರಣ/ ಆಮ್ ಆದ್ಮಿ ತೊರೆದ ಸಚಿವ ರಾಜ್ ಕುಮಾರ್ ಆನಂದ್

ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಸರ್ಕಾರ ಮತ್ತು ಪಕ್ಷವನ್ನು ತೊರೆದಿದ್ದಾರೆ. ಭ್ರಷ್ಟಾಚಾರ ವಿರುದ್ಧ ಹೋರಾಡುವ ಕುರಿತು ಎಎಪಿಯ ಬಲವಾದ ಸಂದೇಶವನ್ನು ನೋಡಿದ ನಂತರ ನಾನು ಎಎಪಿಗೆ ಸೇರಿದ್ದೆ. ಇಂದು ಪಕ್ಷ ಭ್ರಷ್ಟತೆ ಮಧ್ಯೆ ಸಿಲುಕಿದೆ. ಅದಕ್ಕಾಗಿಯೇ ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಸಮಾಜ ಕಲ್ಯಾಣ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಚಿವರಾಗಿದ್ದ ಆನಂದ್ ಸ್ಪಷ್ಟಪಡಿಸಿದ್ದಾರೆ. ಮದ್ಯ ನೀತಿಯ ಪ್ರಕರಣದಿಂದ

ಮದ್ಯ ನೀತಿ ಹಗರಣ/ ಆಮ್ ಆದ್ಮಿ ತೊರೆದ ಸಚಿವ ರಾಜ್ ಕುಮಾರ್ ಆನಂದ್ Read More »

ವಿಪರೀತ ತಾಪಮಾನದಿಂದ ಪಂಜಾಬ್‌ನಲ್ಲಿ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಕೆ

ಸಮಗ್ರ ನ್ಯೂಸ್‌ : ‌ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಈ ನಿಟ್ಟಿನಲ್ಲಿ ಪಂಜಾಬ್‌ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಸಲಾಗುತ್ತದೆ. ಜೊತೆಗೆ ಮತದಾರರಿಗೆ ನೀರು, ತಂಪು ಪಾನೀಯ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಈ ಕುರಿತು ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ ಎಂದು ಪಂಜಾಬ್‌ನ ಮುಖ್ಯ ಚುನಾವಣಾಧಿಕಾರಿ ಸಿಬಿನ್‌ ಸಿ. ಅವರು ಹೇಳಿದ್ದಾರೆ. ಈ ವರ್ಷ ಪಂಜಾಬ್‌ನಲ್ಲಿ ಅಧಿಕ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮತದಾರರಿಗೆ

ವಿಪರೀತ ತಾಪಮಾನದಿಂದ ಪಂಜಾಬ್‌ನಲ್ಲಿ ಮತಗಟ್ಟೆಗಳಲ್ಲಿ ಏರ್‌ ಕೂಲರ್‌, ಫ್ಯಾನ್‌ ಅಳವಡಿಕೆ Read More »

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ;ಅಮಿತ್ ಶಾ

ಸಮಗ್ರ ನ್ಯೂಸ್‌ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಜಾರಿ ಮಾಡಿದ್ದೇವೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಲ್ಪ ಸಂಖ್ಯಾತರ ಪೌರತ್ವ ರದ್ದಾಗಲಿದೆ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರು ಏನೇ ಪ್ರಯತ್ನ ಮಾಡಿದರೂ ಸಿಎಎ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸವಾಲು ಹಾಕಿದರು. ಪಶ್ಚಿಮ ಬಂಗಾಳದ ಬಲೂರ್‌ಘಾಟ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ನೀವು ಸಿಎಎಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಪೌರತ್ವವನ್ನು ಕಳೆದುಕೊಳ್ಳುತ್ತೀರಿ ಎಂದು ದಾರಿ ತಪ್ಪಿಸಲಾಗುತ್ತಿದೆ.

ಕೋಲ್ಕತ್ತಾ: ಮಮತಾ ಬ್ಯಾನರ್ಜಿ ಅವರು ಜನರ ದಾರಿ ತಪ್ಪಿಸುತ್ತಿದ್ದಾರೆ;ಅಮಿತ್ ಶಾ Read More »

ಸಾಯಿಬಾಬಾ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್

ಸಮಗ್ರ ನ್ಯೂಸ್‌ : ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದಳಪತಿ ವಿಜಯ್. ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ ಮಂದಿರವನ್ನು ಕಟ್ಟಿದ್ದಾರೆ. ಸಾಯಿಬಾಬಾ ಮಂದಿರವನ್ನು ಕಟ್ಟುದರ ಮೂಲಕ ತಮ್ಮ ತಾಯಿ ಕನಸನ್ನು ದಳಪತಿ ವಿಜಯ್ ಈಡೇರಿಸಿದ್ದಾರೆ. ಚೆನೈನಲ್ಲಿ ಅವರದ್ದೊಂದು ಪುಟ್ಟ ನಿವೇಶನವಿತ್ತು. ಅಲ್ಲಿಯೇ ಸುಂದರವಾದ ಸಾಯಿಬಾಬಾ ಮಂದಿರ ಕಟ್ಟಬೇಕು ಎಂಬುದು ತಾಯಿ ಕನಸು. ಆ ನಿವೇಶನವನ್ನು ತಾಯಿ ಹಾಗೇ ಉಳಿಸಿಕೊಂಡು ಬಂದಿದ್ದರು. ಅವರ ತಾಯಿ ಸಾಯಿಬಾಬಾನ ಮಹಾನ್ ಭಕ್ತರೂ ಆಗಿರುವುದರಿಂದ ಈ ಕೆಲಸ ನೆರವೇರಿದೆ.

ಸಾಯಿಬಾಬಾ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್ Read More »

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಾದ್ಯಂತ ಇಂದು ಹೊರಬಿದ್ದಿದ್ದು, 81.15% ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 6,98,378 ವಿದ್ಯಾರ್ಥಿಗಳಲ್ಲಿ 5,52690 ವಿದ್ಯಾರ್ಥಿಗಳು ಪಾಸ್ ಆಗಿದ್ದು, 1,45,688 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಒಟ್ಟು 18.85% ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಿದೆ. ಮರು ಪರೀಕ್ಷೆಗೆ ಹೆಸರು ನೋಂದಾವಣೆ ಮಾಡಲು ಇಂದಿನಿಂದ 1 ವಾರಗಳ ಕಾಲಾವಕಾಶ ನೀಡಲಾಗಿದೆ. ಏಪ್ರಿಲ್ 10 ರಿಂದ ಎಪ್ರಿಲ್ 16ರವೆಗೆ

ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶ/ ಮರುಪರೀಕ್ಷೆಗೆ ದಿನಾಂಕ ಪ್ರಕಟ Read More »

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ

ಸಮಗ್ರ ನ್ಯೂಸ್: ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ 37 ವರ್ಷದ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಇವರು ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದಾರೆ. ಇತ್ತೀಚೆಗೆ ಪ್ರಧಾನಿ ಲಿಯೊ ವರಾಡ್ಕರ್ ದಿಢೀರ್ ಪದತ್ಯಾಗ ಮಾಡಿದ ಹಿನ್ನೆಲೆಯಲ್ಲಿ ನೂತನ ಪ್ರಧಾನಿ ಆಯ್ಕೆಗೆ ಸಂಸತ್ತಿನಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಸೈಮನ್ ಆಯ್ಕೆಯಾಗಿದ್ದಾರೆ. ಆರೋಗ್ಯ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸಚಿವರಾಗಿ ಕೆಲಸ ಮಾಡಿರುವ ಸೈಮನ್, ಕೋವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡಿದ್ದರು. ಕಳೆದ ತಿಂಗಳು ಸೆಂಟರ್-ರೈಟ್ ಫೈನ್ ಪಕ್ಷದ

ಐರ್ಲೆಂಡ್ ದೇಶದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿ ಹ್ಯಾರಿಸ್ ಆಯ್ಕೆ Read More »