ದೇಶ-ವಿದೇಶ

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸ್ಥಳೀಯ ಸಮಯ) ನ್ಯೂಯಾರ್ಕ್ ನಲ್ಲಿ ಕೃತಕ ಬುದ್ಧಿಮತ್ತೆಯ ವಿಷಯದಲ್ಲಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಎತ್ತಿ ತೋರಿಸಿದರು ಮತ್ತು ಅದಕ್ಕೆ ಹೊಸ ಅರ್ಥವನ್ನು ನೀಡಿದರು, ಇದನ್ನು ಅಮೆರಿಕ-ಭಾರತ ಸ್ಫೂರ್ತಿ ಎಂದು ಬಣ್ಣಿಸಿದರು. ಇಲ್ಲಿನ‌ ನಸ್ಸೌ ಕೊಲಿಸಿಯಂನಲ್ಲಿ ಮೋದಿ ಮತ್ತು ಯುಎಸ್ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಜಗತ್ತಿಗೆ, ಎಐ ಎಂದರೆ ಕೃತಕ ಬುದ್ಧಿಮತ್ತೆ, ಆದರೆ ನನಗೆ ಎಐ ಎಂದರೆ ಅಮೆರಿಕನ್-ಭಾರತೀಯ ಮನೋಭಾವ. ಇದು ವಿಶ್ವದ ಹೊಸ […]

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ Read More »

ಶಾಲೆಗಳಿಗೆ ದಸರಾ ರಜೆ ಘೋಷಣೆ

ಸಮಗ್ರ ನ್ಯೂಸ್:ಕರ್ನಾಟಕದ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಲಾಗಿದ್ದು, ಎಲ್ಲಾ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಲಾಗಿದೆ. ಈ ಹಿಂದೆ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಆಗುತ್ತಿತ್ತು. ಆದ್ರೆ ಈ ಬಾರಿ ಯಾವುದೇ ಮಾರ್ಪಾಡು ಆಗಿಲ್ಲ.ಮತ್ತೊಂದೆಡೆ ದೀಪಾವಳಿ ಅಕ್ಟೋಬರ್ 31 ರಂದು ಬರುವುದರಿಂದ ಆ ದಿನ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಇರಲಿದೆ.ಡಿಸೆಂಬರ್ 22 ರಿಂದ 29 ರವರೆಗೆ ಕ್ರಿಸ್ಮಸ್ ರಜೆಯು

ಶಾಲೆಗಳಿಗೆ ದಸರಾ ರಜೆ ಘೋಷಣೆ Read More »

ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾ ವಿದ್ಯಾಲಯ, ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ ಸೆ.19 ರಂದು ನಡೆಯಿತು. ಬೆಂಗಳೂರಿನ ತರಬೇತಿ ಸಂಸ್ಥೆಯಾದ Q-Spiders ವತಿಯಿಂದ ಟ್ರೈನಿಂಗ್‌ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಇನ್ ಬ್ಯಾಂಕಿಂಗ್ ಸೆಕ್ಟರ್ಸ್ ಅವಕಾಶವನ್ನು ಪಡೆದುಕೊಳ್ಳಲು ಒಟ್ಟು 149 ಅಂತಿಮ ಪದವಿಯ ವಿದ್ಯಾರ್ಥಿಗಳು ಪಾಲ್ಗೊಂಡು ಅಂತಿಮವಾಗಿ 27 ವಿದ್ಯಾರ್ಥಿಗಳು ಬೆಂಗಳೂರಿನ Q- Spiders ತರಬೇತಿ ಸಂಸ್ಥೆಗೆ ಉಚಿತವಾಗಿ ಆಯ್ಕೆಯಾದರು. ಈ

ಕೆ.ಎಸ್.ಎಸ್. ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಅಂಡ್ ಟ್ರೈನಿಂಗ್ ಕಾರ್ಯಕ್ರಮ Read More »

ಪೇಜರ್, ವಾಕಿಟಾಕಿ ಸ್ಪೋಟದ ಬಳಿಕ ಲೆಬನಾನ್ ಮೇಲೆ ಇಸ್ರೇಲ್ ದಾಳಿ| ಹಿಬ್ಜುಲ್ ಕೋಟೆಗಳ ಮೇಲೆ ಬಾಂಬ್ ಮಳೆ

ಸಮಗ್ರ ನ್ಯೂಸ್: ಪೇಜರ್, ವಾಕಿ ಟಾಕಿ ಸ್ಫೋಟದ ನಂತರ ಹಿಜ್ಜುಲ್ಲಾ ಉಗ್ರ ಸಂಘಟನೆ ಮೇಲೆ ಇಸ್ರೇಲ್ ಇದೀಗ ನೇರ ದಾಳಿ ಶುರು ಮಾಡಿದೆ. ದಕ್ಷಿಣ ಲೆಬನಾನ್‌ನ ಹೆಜ್ಬುಲ್ಲಾ ಭದ್ರಕೋಟೆಗಳ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸುತ್ತಿದೆ. ಹೆಜ್ಬುಲ್ಲಾದ ಸಂವಹನ ವ್ಯವಸ್ಥೆ ಪೇಜರ್, ವಾಕಿ ಟಾಕಿಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಸ್ಫೋಟಗಳಲ್ಲಿ 37 ಮಂದಿ ಹತ್ಯೆಯಾಗಿದ್ದು ಅಲ್ಲದೆ ನೂರಾರು ಮಂದಿ ಗಂಭೀರ ಗಾಯಗೊಂಡಿದ್ದರು. ಹೆಜ್ಬುಲ್ಲಾದ ಸಂವಹನ ವ್ಯವಸ್ಥೆಗಳ ಮೇಲಿನ ದಾಳಿಗಳ ಮೂಲಕ ಉಗ್ರಗಾಮಿ ಗುಂಪಿನ ಮೇಲೆ ಇಸ್ರೇಲ್ ಒತ್ತಡ

ಪೇಜರ್, ವಾಕಿಟಾಕಿ ಸ್ಪೋಟದ ಬಳಿಕ ಲೆಬನಾನ್ ಮೇಲೆ ಇಸ್ರೇಲ್ ದಾಳಿ| ಹಿಬ್ಜುಲ್ ಕೋಟೆಗಳ ಮೇಲೆ ಬಾಂಬ್ ಮಳೆ Read More »

ಶಾಲಾ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ/ ಶಿಕ್ಷಣ ಸಚಿವಾಲಯ ಸಿದ್ಧತೆ

ಸಮಗ್ರ ನ್ಯೂಸ್‌: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಪರಿಚಯಿಸಲು ಶಾಲಾ ಶಿಕ್ಷಣ ಸಚಿವಾಲಯ ಸಿದ್ಧತೆ ನಡೆಸಿದೆ. ಪ್ರತಿ ಜಿಲ್ಲೆಯ ಒಂದೊಂದು ಶಾಲೆಯಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಿ ಶಾಲಾ ಹಾಜರಾತಿ ಸಾಧಿಸಲಾಗಿದೆ. ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪರಿಶೀಲನೆಗೆ ಅನುವು ಮಾಡಿಕೊಡುವ ಪ್ರಯೋಗ ಯಾವುದೇ ತಾಂತ್ರಿಕ ತೊಂದರೆಗಳಿಲ್ಲದೆ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸುವ ಯೋಜನೆಯ ಕುರಿತು ವರದಿಯನ್ನು ಸಿದ್ಧಪಡಿಸಿದೆ.

ಶಾಲಾ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ/ ಶಿಕ್ಷಣ ಸಚಿವಾಲಯ ಸಿದ್ಧತೆ Read More »

‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟ ಚಂದ್ರನಲ್ಲಿಗೆ ಭಾರತೀಯ ಗಗನಯಾನಿಗಳನ್ನು ಕಳಿಸುವುದು,ಶುಕ್ರ ಗ್ರಹ ಅಧ್ಯಯನ ಹಾಗೂ ಅನಿಮೇಷನ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡುವ ಯೋಜನೆಗಳಿಗೆ ಸೆ.18 ರಂದು ಅನುಮೋದನೆ ನೀಡಿದೆ. ಭಾರತೀಯ ಗಗನಯಾನಿಗಳು ಚಂದಿರನ ಅಂಗಳದಲ್ಲಿ ಇಳಿದು, ಪುನಃ ಭೂಮಿಗೆ ಮರಳಲು ಅಗತ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಪ್ರಾತ್ಯಕ್ಷೀಕೆ ಒಳಗೊಂಡ ‘ಚಂದ್ರಯಾನ-4’ ಬಾಹ್ಯಾಕಾಶ ಕಾರ್ಯಕ್ರಮಕ್ಕೂ ಸಂಪುಟ ಅನುಮೋದನೆ ನೀಡಿದೆ. ಬಾಹ್ಯಾಕಾಶ ಯೋಜನೆಗೆ ಅಗತ್ಯವಿರುವ ಗಗನನೌಕೆ ಅಭಿವೃದ್ಧಿ ಮತ್ತು ಅದರ ಉದಾವಣೆಯ ಹೊಣೆಯನ್ನು ಇಸ್ರೋ ನಿಭಾಯಿಸಲಾಗುವುದು. 2040ರ ವೇಳೆಗೆ ಈ

‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ Read More »

ಅಪ್ರಾಪ್ತರು ಸಿಕ್ಕಾಪಟ್ಟೆ ಇನ್ಸ್ಟಾಗ್ರಾಂ ಖಾತೆ ತೆರೆಯುವಂತಿಲ್ಲ| ಟೀನೇಜ್ ಜನರಿಗೆ ಶಾಕ್ ನೀಡಿದ ಮೆಟಾ

ಸಮಗ್ರ ನ್ಯೂಸ್: ಸಾಮಾಜಿಕ ಮಾಧ್ಯಮವಾಗಿರುವ ಇನ್‌ಸ್ಟಾಗ್ರಾಮ್ ಯುವಜನರ ಮೇಲೆ ಪರಿಣಾಮ ಬೀರುತ್ತಿದೆ. ಪ್ರಮುಖವಾಗಿ ಹದಿಹರೆಯದ ಮಕ್ಕಳು ಹಾಗೂ ಅಪ್ರಾಪ್ತರ ಬದುಕಿನ ಶೈಲಿಯ ಅಡ್ಡ ಪರಿಣಾಮ ಬೀರುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಇನ್‌ಸ್ಟಾಗ್ರಾಮ್‌ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪ್ರತ್ಯೇಕ ಖಾತೆಯನ್ನು ನಿಗದಿ ಮಾಡಿದೆ. ಅಮೆರಿಕ, ಇಂಗ್ಲೆಂಡ್‌ , ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ಮಂಗಳವಾರದಿಂದ ಇದು ಜಾರಿಗೆ ಬಂದಿದೆ. ಇನ್‌ಸ್ಟಾಗ್ರಾಮ್‌ ಸೈನ್ ಅಪ್ ಮಾಡುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇನ್ನೂ ಟೀನೇಜ್ ಅಕೌಂಟ್‌ನಲ್ಲಿ ಉಳಿದುಕೊಳ್ಳಲಿದ್ದಾರೆ. ಅದೇ ರೀತಿ

ಅಪ್ರಾಪ್ತರು ಸಿಕ್ಕಾಪಟ್ಟೆ ಇನ್ಸ್ಟಾಗ್ರಾಂ ಖಾತೆ ತೆರೆಯುವಂತಿಲ್ಲ| ಟೀನೇಜ್ ಜನರಿಗೆ ಶಾಕ್ ನೀಡಿದ ಮೆಟಾ Read More »

ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಬುಲ್ಡೋಜರ್ ಬಳಸಿ ಯಾವುದೇ ನೆಲಸಮಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಆದಾಗ್ಯೂ, ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು, ರೈಲ್ವೆ ಮಾರ್ಗಗಳು, ಜಲಮೂಲಗಳ ಅತಿಕ್ರಮಣಗಳಿಗೆ ಈ ತಡೆಯಾಜ್ಞೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠವು ದಂಡನಾತ್ಮಕ ಕ್ರಮವಾಗಿ ಅಪರಾಧಗಳ ಆರೋಪ ಹೊತ್ತಿರುವ ವ್ಯಕ್ತಿಗಳ ಕಟ್ಟಡಗಳನ್ನು ನೆಲಸಮಗೊಳಿಸುವಲ್ಲಿ ವಿವಿಧ ರಾಜ್ಯ ಸರ್ಕಾರಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯಲ್ಲಿ ಈ ನಿರ್ದೇಶನವನ್ನು ನೀಡಿದೆ. ಅ.1ರವರೆಗೆ

ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂ ತಡೆ Read More »

ಸಹಜ ಸ್ಥಿತಿಯತ್ತ ಮಣಿಪುರ/ ಇಂಟರ್‌ನೆಟ್‌ ನಿಷೇಧ ತೆರವು

ಸಮಗ್ರ ನ್ಯೂಸ್‌: ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ಇಂಫಾಲ್ ಕಣಿವೆ ಜಿಲ್ಲೆಗಳಲ್ಲಿ ವಿಧಿಸಿದ್ದ ಇಂಟರ್ ನೆಟ್ ನಿಷೇಧವನ್ನು ಮಣಿಪುರ ಸರ್ಕಾರ ತೆರವುಗೊಳಿಸಿದ್ದು, ಸೆ.17 ರಿಂದ ಶೈಕ್ಷಣಿಕ ಸಂಸ್ಥೆಗಳು ಪುನಾರಂಭಗೊಳ್ಳಲಿವೆ. ಮಣಿಪುರದ ರಾಜ್ಯಪಾಲರು ತಕ್ಷಣವೇ ಜಾರಿಗೆ ಬರುವಂತೆ ರಾಜ್ಯದ ಪ್ರಾದೇಶಿಕ ನ್ಯಾಯವ್ಯಾಪ್ತಿಯಲ್ಲಿ ಲೀಸ್ ಲೈನ್‌ಗಳು, ವಿಎಸ್‌ಟಿಗಳು, ಬ್ರಾಡ್ ಬ್ಯಾಂಡ್ ಗಳು ಮತ್ತು ವಿಪಿಎನ್ ಸೇವೆಗಳು ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವ ಯಾವುದೇ ಅಸ್ತಿತ್ವದಲ್ಲಿರುವ ಆದೇಶಗಳನ್ನು ಹಿಂಪಡೆಯಲು ಆದೇಶಿಸಲು ಸಂತೋಷಪಡುತ್ತಾರೆ ಎಂದು ಗೃಹ ಇಲಾಖೆ ಹೇಳಿದೆ.

ಸಹಜ ಸ್ಥಿತಿಯತ್ತ ಮಣಿಪುರ/ ಇಂಟರ್‌ನೆಟ್‌ ನಿಷೇಧ ತೆರವು Read More »

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ

ಸಮಗ್ರ ನ್ಯೂಸ್: ದೆಹಲಿಯ ಮುಂದಿನ ಮುಖ್ಯಮಂತ್ರಿಯಾಗಿ ಎಎಪಿ ಶಾಸಕಿ, ಸಚಿವೆ ಅತಿಶಿ ಮರ್ಲೆನಾ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆ ಬಳಿಕ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ದೆಹಲಿಯ ಮುಂದಿನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ Read More »