ದೇಶ-ವಿದೇಶ

ಗಣರಾಜ್ಯೋತ್ಸವ ಪಂಥಸಂಚಲನದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶವಿಲ್ಲ| ಯಾಕೆ ಗೊತ್ತಾ?

ಸಮಗ್ರ ನ್ಯೂಸ್: ಪ್ರತಿವರ್ಷ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ತನ್ನ ವಿಶಿಷ್ಟ ಕಲೆ ಮತ್ತು ಸಂಸ್ಕೃತಿಯ ಮೂಲಕ ಗಮನ ಸೆಳೆಯುತ್ತಿದ್ದ ಕರ್ನಾಟಕಕ್ಕೆ ಈ ಬಾರಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಸಾಗುವ ಸ್ತಬ್ಧಚಿತ್ರಗಳ ಪಟ್ಟಿಯಿಂದ ಕರ್ನಾಟಕದ ಹೆಸರನ್ನು ಕೈಬಿಟ್ಟಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ರಾಜ್ಯ ಸರ್ಕಾರ ಈ ಬಾರಿ ‘ಮಿಲೆಟ್ಸ್ ಟು ಮೈಕ್ರೋಚಿಪ್’ (ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ) ಎಂಬ ವಿನೂತನ ವಿಷಯದಡಿ ಸ್ತಬ್ಧಚಿತ್ರವನ್ನು ಸಿದ್ಧಪಡಿಸಿತ್ತು. ಕೃಷಿ ಮತ್ತು ತಂತ್ರಜ್ಞಾನ […]

ಗಣರಾಜ್ಯೋತ್ಸವ ಪಂಥಸಂಚಲನದಲ್ಲಿ ಕರ್ನಾಟಕದ ಟ್ಯಾಬ್ಲೋಗೆ ಅವಕಾಶವಿಲ್ಲ| ಯಾಕೆ ಗೊತ್ತಾ? Read More »

ಜಮ್ಮು: ಕಂದಕಕ್ಕೆ ಉರುಳಿದ ಸೇನಾ ವಾಹನ| 10 ಸೈನಿಕರ ದಾರುಣ ಸಾವು

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. 17 ಸವಾರರು ಸಂಚರಿಸುತ್ತಿದ್ದ ಸೇನಾ ವಾಹನವೊಂದು ಬೃಹತ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಘಟನೆಯಲ್ಲಿ 10 ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಸೈನಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸೇನೆ, ‘ಪ್ರತಿಕೂಲ ಹವಾಮಾನ ಮತ್ತು ಕಳಪೆ ಗೋಚರತೆಯ ಪರಿಸ್ಥಿತಿಯಿಂದಾಗಿ ಭಾರತೀಯ ಸೇನೆಯ ವಾಹನವೊಂದು ಸ್ಕಿಡ್ ಆಗಿ ಕಂದಕಕ್ಕೆ

ಜಮ್ಮು: ಕಂದಕಕ್ಕೆ ಉರುಳಿದ ಸೇನಾ ವಾಹನ| 10 ಸೈನಿಕರ ದಾರುಣ ಸಾವು Read More »

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್

ಸಮಗ್ರ ನ್ಯೂಸ್: ಜಾಗತಿಕ ಮಟ್ಟದಲ್ಲಿನ ಬಿಕ್ಕಟ್ಟುಗಳು ತೀವ್ರಗೊಂಡಿರುವುದು ಹಾಗೂ ಜಾಗತಿಕ ಷೇರುಪೇಟೆಗಳಲ್ಲಿನ ಮಂದಗತಿಯ ವಹಿವಾಟು ಮಂಗಳವಾರ ಭಾರತದ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿದವು. ಇದರಿಂದಾಗಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 1,065 ಅಂಶ ಕುಸಿಯಿತು. ಮಂಗಳವಾರದ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹9.86 ಲಕ್ಷ ಕೋಟಿಯಷ್ಟು ಕರಗಿತು. ಅಮೆರಿಕದ ಡಾಲರ್ ಎದುರು ರೂಪಾಯಿ ದುರ್ಬಲವಾಗಿದ್ದುದು, ವಿದೇಶಿ ಹೂಡಿಕೆಯ ಹೊರಹರಿವು ಕೂಡ ಹೂಡಿಕೆದಾರರ ಉತ್ಸಾಹ ತಗ್ಗಿಸಿದವು ಎಂದು ವರ್ತಕರು ಹೇಳಿದ್ದಾರೆ. ರಾಷ್ಟ್ರೀಯ ಷೇರುಪೇಟೆಯ ನಿಫ್ಟಿ ಸೂಚ್ಯಂಕವು 353 ಅಂಶಗಳಷ್ಟು ಕುಸಿದಿದೆ.

ಜಾಗತಿಕ ಬಿಕ್ಕಟ್ಟಿಗೆ ಹೈರಾಣಾದ ಷೇರುಪೇಟೆ| ಭಾರೀ ಕುಸಿತ ಕಂಡ ನಿಪ್ಟಿ, ಸೆನ್ಸೆಕ್ಸ್ Read More »

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಬಿಹಾರದ ನಿತಿನ್ ನಬಿನ್ ಗೆ ಮಣೆ ಹಾಕಿದ ಕೇಸರಿ ಪಕ್ಷ

ಸಮಗ್ರ ನ್ಯೂಸ್: ಅಚ್ಚರಿಯ ಆಯ್ಕೆಗೆ ಹೆಸರಾಗಿರುವ ಬಿಜೆಪಿ ಈ ಬಾರಿಯೂ ತನ್ನ ರಾಷ್ಟ್ರೀಯ ಅಧ್ಯಕ್ಷರ ಪಟ್ಟಕ್ಕೆ ಯಾರೂ ನಿರೀಕ್ಷಿಸದ ಬಿಹಾರದ ಯುವ ನಾಯಕ ನಿತಿನ್ ನಬೀನ್‌ ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಸಂಘಟನಾ ಚತುರ, ಸಮೂಹ ನಾಯಕನಿಗೆ ಪಕ್ಷದ ಚುಕ್ಕಾಣಿ ನೀಡಿದೆ. ಹಾಗೆಂದು ನಿತಿನ್‌ಗೆ ಇದು ಏಕಾಏಕಿ ಒಲಿದು ಬಂದ ಅದೃಷ್ಟವಲ್ಲ. ನಿತಿನ್‌ರ ರಾಜಕೀಯ ಪ್ರಯಾಣ ಶುರುವಾಗುವುದು ಸರಿಯಾಗಿ 20 ವರ್ಷಗಳ ಹಿಂದೆ. ವಿದ್ಯಾರ್ಥಿಯಾಗಿದ್ದಾಗ ಎಬಿವಿಪಿ ಮೂಲಕ ಬಿಜೆಪಿ ಸಂಪರ್ಕಕ್ಕೆ ಬಂದ ನಿತಿನ್‌, 2000ದಲ್ಲಿ ರಾಜಕೀಯಕ್ಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಅಚ್ಚರಿಯ ಆಯ್ಕೆ| ಬಿಹಾರದ ನಿತಿನ್ ನಬಿನ್ ಗೆ ಮಣೆ ಹಾಕಿದ ಕೇಸರಿ ಪಕ್ಷ Read More »

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಗುಂಪು ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದಿದೆ, 29 ವರ್ಷದ ಹಿಂದೂ ವ್ಯಕ್ತಿಯನ್ನು ಗುಂಪು ಹೊಡೆದು ಕೊಂದಿದೆ. ರಾಜ್‌ ಬರಿ ಜಿಲ್ಲೆಯ ಪಂಗ್ಶಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಗುಂಪು ದಾಳಿಗಳ ಬಗ್ಗೆ ಆತಂಕ ಹೆಚ್ಚಿಸಿದೆ. ಮೃತನನ್ನು ಅಮೃತ್ ಮಂಡಲ್ ಎಂದು ಗುರುತಿಸಲಾಗಿದ್ದು, ಸ್ಥಳೀಯರು ಸುಲಿಗೆಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಅವರನ್ನು ಕೊಲ್ಲಲಾಗಿದೆ. ಪಂಗ್ಶಾ ಉಪಜಿಲ್ಲಾದ ಹೊಸೈನ್‌ಡಂಗಾ ಹಳೆಯ ಮಾರುಕಟ್ಟೆಯಲ್ಲಿ ಬುಧವಾರ ತಡರಾತ್ರಿ 11 ಗಂಟೆ ಸುಮಾರಿಗೆ ಮಂಡಲ್

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹತ್ಯೆ Read More »

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ Read More »

ದೆಹಲಿ: ದಟ್ಟ ಮಂಜಿನಿಂದ ಭೀಕರ ಅಪಘಾತ| 3 ಕಾರು, 7 ಬಸ್ ಗಳು ಬೆಂಕಿಗಾಹುತಿ; ನಾಲ್ವರು ಸಜೀವ ದಹನ

ಸಮಗ್ರ ನ್ಯೂಸ್: ಎಕ್ಸ್‌ಪ್ರೆಸ್‌ ವೇಯ ಆಗ್ರಾ-ನೋಯ್ಡಾ ಲೇನ್‌ನಲ್ಲಿರುವ ಮೈಲ್‌ಸ್ಟೋನ್ 127 ರಲ್ಲಿ ಅಪಘಾತ ಸಂಭವಿಸಿದೆ. ಮೂರು ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ. ಮೂರು ಕಾರುಗಳು ಡಿಕ್ಕಿ ಹೊಡೆದವು, ನಂತರ ಏಳು ಬಸ್‌ಗಳು ಅವುಗಳಿಗೆ ಡಿಕ್ಕಿ ಹೊಡೆದವು, ಅದರಲ್ಲಿ 1 ರಸ್ತೆಮಾರ್ಗದ ಬಸ್, ಮತ್ತು ಇತರ ಆರು ಸ್ಲೀಪರ್ ಬಸ್‌ಗಳು, 11 ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿವೆ. ಎಲ್ಲಾ ಬಸ್‌ಗಳು ಬೆಂಕಿಗೆ ಆಹುತಿಯಾಗಿದ್ದು, ಬೆಂಕಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ. ಇಲ್ಲಿಯವರೆಗೆ 4

ದೆಹಲಿ: ದಟ್ಟ ಮಂಜಿನಿಂದ ಭೀಕರ ಅಪಘಾತ| 3 ಕಾರು, 7 ಬಸ್ ಗಳು ಬೆಂಕಿಗಾಹುತಿ; ನಾಲ್ವರು ಸಜೀವ ದಹನ Read More »

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 23 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಘಟನೆ ನಡೆದಿದೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನೈಟ್ ಕ್ಲಬ್ ನಲ್ಲಿ ಬೆಂಕಿ ಹೊತ್ತಿಕೊಂಡು 23 ಜನ ಸಚಿವ ದಹನವಾಗಿದ್ದಾರೆ. ಕ್ಲಬ್ ನ ಅಡುಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹರಡಿದ್ದು, ಕ್ಲಬ್ ಸಿಬ್ಬಂದಿ, ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೋರಾದ ನೈಟ್‌ಕ್ಲಬ್ ಬಿರ್ಚ್ ಬೈ ರೋಮಿಯೋ

ಗೋವಾದಲ್ಲಿ ಭೀಕರ ಅಗ್ನಿ ಅವಘಡ| 23 ಮಂದಿ ಸಜೀವ ದಹನ Read More »

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದನ್ನು ಪರಿಶೀಲಿಸಿದಾಗ ಅದು ಎಐ ಬಳಸಿ ಡೀಪ್ ಫೇಲ್ ವಿಡಿಯೋ ರಚಿಸಲಾಗಿದೆ ಎಂಬುದು ತಿಳಿದು ಬಂದಿದೆ. ಅಪರಿಚಿತರ ವಿರುದ್ಧ ಮಲ್ಲೇಶ್ವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ

ಕೇಂದ್ರ ಸಚಿವೆ ಷೇರುಗಳಲ್ಲಿ ಹಣ ಹೂಡುವಂತೆ ಮಾತನಾಡುವ ಡೀಪ್ ಪೇಕ್ ವಿಡಿಯೋ ವೈರಲ್| ಬೆಂಗಳೂರಿನಲ್ಲಿ ಎಪ್ಐಆರ್ ದಾಖಲು Read More »

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 90ಕ್ಕೆ ಇಳಿದ ಮೌಲ್ಯ

ಸಮಗ್ರ ನ್ಯೂಸ್: ರೂಪಾಯಿ ಮೌಲ್ಯ ದಾಖಲೆಯ ಅತ್ಯಂತ ದುರ್ಬಲ ಮಟ್ಟಕ್ಕೆ ಕುಸಿದಿದ್ದು, ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ಗೆ 90 ಕ್ಕಿಂತ ಕುಸಿದಿದೆ. ಜಾಗತಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಗಳಿಂದ ಹಣವನ್ನು ಹಿಂತೆಗೆದುಕೊಂಡಿದ್ದರಿಂದ ಮತ್ತು ಹೆಚ್ಚಿನ ಪ್ರಮುಖ ಕರೆನ್ಸಿಗಳ ವಿರುದ್ಧ ಡಾಲರ್ ಬಲಗೊಳ್ಳುತ್ತಿದ್ದಂತೆ ವಾರಗಳಿಂದಲೂ ಈ ಕ್ರಮ ಮುಂದುವರೆದಿತ್ತು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ, ಅಮೆರಿಕನ್ ಡಾಲರ್ಗೆ ರೂಪಾಯಿ ಮೌಲ್ಯ 90.11 ಕ್ಕೆ ವಹಿವಾಟು ನಡೆಸುತ್ತಿದ್ದು, ಸ್ಥಿರವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ಕುಸಿತ ಅಚ್ಚರಿಯೇನಲ್ಲ ಎಂದು ವ್ಯಾಪಾರಿಗಳು ಹೇಳಿದ್ದಾರೆ,

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಇತಿಹಾಸದಲ್ಲೇ ಮೊದಲ ಬಾರಿಗೆ 90ಕ್ಕೆ ಇಳಿದ ಮೌಲ್ಯ Read More »